crime

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಆ. 30. ಗಂಧದ ಮರ ಕಳ್ಳತನಕ್ಕೆಂದು ಬಂದಿದ್ದವರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡು ಹಾರಿಸಿದ್ದು, ಪರಿಣಾಮ ಓರ್ವ ಸ್ಥಳದಲ್ಲೇ ಪ್ರಾಣ ಬಿಟ್ಟರೆ, ಮತ್ತೋರ್ವ ಪರಾರಿಯಾಗಿರುವ ಕುರಿತು ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಅರಣ್ಯ ಪ್ರದೇಶದ ಕಲ್ಕೆರೆ ಎಂಬಲ್ಲಿ ನಡೆದಿದೆ. ಬೀಟ್ ಫಾರೆಸ್ಟ್ ಗಾರ್ಡ್ ವಿನಯ್ ಎಂಬವರು ಫೈರಿಂಗ್ ಮಾಡಿದ್ದಾರೆ ಎನ್ನಲಾಗಿದೆ. ಕಳೆದ ಕೆಲ ದಿನಗಳಿಂದ ಇಲ್ಲಿ ಗಂಧದ ಮರಗಳ ಕಳ್ಳತನವಾಗುತ್ತಿದ್ದ ಹಿನ್ನೆಲೆ ಇದನ್ನು ತಡೆಯಲು ಫಾರೆಸ್ಟ್ ಬೀಟ್ ಸಿಬ್ಬಂದಿಯನ್ನ ನಿಯೋಜಿಸಲಾಗಿತ್ತು. ಕಳ್ಳರು ರಾತ್ರಿ […]

ಗಂಧದ ಮರ ಕಳ್ಳತನಕ್ಕೆ ಯತ್ನ- ಗುಂಡೇಟು; ಓರ್ವ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ

(ನ್ಯೂಸ್ ಕಡಬ) newskadaba.com ಮೈಸೂರು, ಆ. 30. ಆಸ್ತಿ ವಿಚಾರವಾಗಿ ಸಹೋದರನೋರ್ವ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಘಟನೆ ಜಿಲ್ಲೆಯ ನರಸೀಪುರ ತಾಲೂಕಿನ ನುಗ್ಗಳ್ಳಿಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕೊಲೆಯಾದವರನ್ನು ಶಿವಲಿಂಗೇಗೌಡ ಹಾಗೂ ಪತ್ನಿ ಭಾರತಿ ಎಂದು ಗುರುತಿಸಲಾಗಿದೆ. ಆರೋಪಿ ಸಹೋದರ ಹನುಮಂತೇಗೌಡ ಎಂಬಾತ ಕೊಲೆ ಕೃತ್ಯವೆಸಗಿದ್ದಾನೆ. ಆಸ್ತಿ ವಿಚಾರಕ್ಕೆ ಸಹೋದರರ ನಡುವೆ ಆಗಾಗ ಗಲಾಟೆ ನಡೆಯುತ್ತಿತ್ತು. ಶಿವಲಿಂಗೇಗೌಡ ಮತ್ತು ಭಾರತಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆರೋಪಿ ಹನುಮಂತೇಗೌಡ, ಅಣ್ಣ ಅತ್ತಿಗೆ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ

ಆಸ್ತಿ ವಿಚಾರಕ್ಕೆ ಅಣ್ಣ- ಅತ್ತಿಗೆಯ ಬರ್ಬರ ಕೊಲೆಗೈದ ಸಹೋದರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಆ. 30. ಕಾರೊಂದು ರಿಕ್ಷಾಕ್ಕೆ ಢಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಚಾಲಕ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಿಸಿರೋಡಿನಲ್ಲಿ ನಡೆದಿದೆ. ಗಾಯಗೊಂಡ ಆಟೋ ಚಾಲಕನನ್ನು ಮಹಮ್ಮದ್ ಸಾದಿಕ್ ಎಂದು ಗುರುತಿಸಲಾಗಿದೆ. ಸಾದಿಕ್ ತನ್ನ ಆಟೋ ರಿಕ್ಷಾದಲ್ಲಿ ಸುರಕ್ಷಾ ಅಧಿಕಾರಿಯೋರ್ವರನ್ನು ಗೂಡಿನಬಳಿಯಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಪಾಣೆಮಂಗಳೂರು ಕಡೆಯಿಂದ ಬಂದ ಕಾರೊಂದು ರಿಕ್ಷಾಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿ, ರಿಕ್ಷಾ ಚಾಲಕನಿಗೆ ಗಂಭೀರವಾಗಿ ಗಾಯವಾಗಿದ್ದು, ಪ್ರಯಾಣಿಕರೊಬ್ಬರು

ಕಾರು ಢಿಕ್ಕಿ- ಆಟೊ ಚಾಲಕ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ನಗರದ ಕೊಣಾಜೆ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದ ಯುವಕನೋರ್ವನ ಕೊಲೆ ಯತ್ನ ಪ್ರಕರಣದಲ್ಲಿ ಭಾಗಿಯಾಗಿದ್ದ ಓರ್ವನನ್ನು ಮಂಗಳೂರು ನಗರ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 12ರಂದು ಕೊಣಾಜೆ ಠಾಣಾ ವ್ಯಾಪ್ತಿಯ ನೆತ್ತಿಲಪದವು ನಿವಾಸಿ ಮನ್ಸೂರ್ ಎಂಬವರ ಜೊತೆ ಮನೆ ಬಾಡಿಗೆ ವಿಚಾರದಲ್ಲಿ ಆರೋಪಿ ನಝೀರ್ ಹಂಸ ಎಂಬಾತನು ಗಲಾಟೆ ಮಾಡಿ ಏಕಾಏಕಿ ತನ್ನಲ್ಲಿದ್ದ ತಲವಾರಿನಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿ, ಬಳಿಕ ತಲೆಮರೆಸಿಕೊಂಡಿದ್ದನು. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ

ಯುವಕನ ಕೊಲೆಯತ್ನ ಪ್ರಕರಣ- ಆರೋಪಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆತ- ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಇಸ್ರೋದ ವಿಜ್ಞಾನಿಯೊಬ್ಬರ ಕಾರನ್ನು ಹಿಂಬಾಲಿಸಿ ಕಲ್ಲೆಸೆದ ಘಟನೆ ಬೆಂಗಳೂರಿನ ರತನಹಳ್ಳಿ ಮುಖ್ಯ ರಸ್ತೆಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಆಗಸ್ಟ್‌ 24ರ ರಾತ್ರಿ ಮನೆಗೆ ತೆರಳುತ್ತಿದ್ದಾಗ ಗೂಂಡಾಗಳು ವಿಜ್ಞಾನಿ ಅಶುತೋಷ್ ಸಿಂಗ್ ಅವರ ಕಾರನ್ನು ಹಿಂಬಾಲಿಸಿ ಕಾರನ್ನು ತಡೆದು ನಿಲ್ಲಿಸಿ ಹಿಂಭಾಗದ ಗಾಜನ್ನು ಒಡೆದು ಹಾಕಿದ್ದಾರೆ. ಈ ಕುರಿತು ದೂರು ನೀಡಲು ಮುಂದಾದಾಗ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ ಎಂದು ಎಕ್ಸ್‌ ಮೂಲಕ ಘಟನೆ ಹಂಚಿಕೊಂಡ ಬಳಿಕ ಮಾದನಾಯಕನಹಳ್ಳಿ ಪೊಲೀಸರು ಪ್ರಕರಣ

ಇಸ್ರೋ ವಿಜ್ಞಾನಿಯ ಕಾರನ್ನು ಹಿಂಬಾಲಿಸಿ ಕಲ್ಲೆಸೆತ- ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಶಂಕಿತ ಉಗ್ರನ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 29. ಬೆಂಗಳೂರಿನ ಶಂಕಿತ ಉಗ್ರನ ಮನೆಯಲ್ಲಿ ಗ್ರೆನೇಡ್‌ ಪತ್ತೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪ್ರಮುಖ ಆರೋಪಿ ಜುನೈದ್ ನ , ಸಹಚರನೋರ್ವನನ್ನು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್‌ ಅರ್ಷದ್‌ ಎಂದು ಗುರುತಿಸಲಾಗಿದೆ. ರಾಜ್ಯ ರಾಜಧಾನಿಯಲ್ಲಿ ಇತ್ತೀಚೆಗೆ ಬಾಂಬ್‌ ಸ್ಫೋಟಕ್ಕೆ ಸಂಚು ರೂಪಿಸಿದ್ದ ಆರೋಪದಡಿ ಐವರು ಶಂಕಿತ ಉಗ್ರರನ್ನು ಬಂಧಿಸಲಾಗಿತ್ತು. ಈ ವೇಳೆ ಜುನೈದ್‌ ಸಹಚರ ಅರ್ಷದ್‌ ಎಂಬಾತ ನಾಪತ್ತೆಯಾಗಿದ್ದ. ನಾಲ್ಕು ವರ್ಷಗಳಿಂದ ತಲೆಮರೆಸಿಕೊಂಡಿರುವ ಅರ್ಷದ್‌ ವಿರುದ್ಧ 17 ಪ್ರಕರಣಗಳು ದಾಖಲಾಗಿದ್ದವು. ಇನ್ನು

ಶಂಕಿತ ಉಗ್ರನ ಸಹಚರನ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಮುದ್ರಪಾಲಾಗಿದ್ದ ಯುವಕರಿಬ್ಬರ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaa.com ಬೈಂದೂರು, ಆ. 28. ಇಲ್ಲಿನ ಶಿರೂರು ಅಳ್ವೆಗದ್ದೆ ಎಂಬಲ್ಲಿ ರವಿವಾರದಂದು ಸಂಜೆ ವೇಳೆ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ. ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್ (22) ಹಾಗೂ ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ದೊರೆತಿದೆ.

ಸಮುದ್ರಪಾಲಾಗಿದ್ದ ಯುವಕರಿಬ್ಬರ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 28. ಆನ್ ಲೈನ್ ಡೇಟಿಂಗ್ ಆ್ಯಪ್ ಮೂಲಕ ಸುಲಿಗೆ ಮಾಡುತಿದ್ದ ಇಬ್ಬರು ಆರೋಪಿಗಳನ್ನು ಹೆಚ್​ಎಸ್​ಆರ್ ಲೇಔಟ್ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತರನ್ನು ನದೀಂ ಪಾಷ ಹಾಗೂ ನಾಗೇಶ್ ಎಂದು ಗುರುತಿಸಲಾಗಿದೆ. ಆರೋಪಿಗಳು ಲೊಕ್ಯಾಂಟೋ ಎಂಬ ಆ್ಯಪ್ ಮೂಲಕ ಹುಡುಗಿಯರ ಹೆಸರಿನಲ್ಲಿ ಕರೆ ಮಾಡಿ ಡೇಟಿಂಗ್ ನೆಪದಲ್ಲಿ ಕರೆಸಿ ಬಳಿಕ ಹಣ ದೋಚಿ ವಂಚಿಸುತ್ತಿದ್ದರು ಎನ್ನಲಾಗಿದೆ. ಇವರಿಬ್ಬರು ಲೊಕ್ಯಾಂಟೋ ಆ್ಯಪ್ ಬಳಸುವವರನ್ನೇ ಟಾರ್ಗೆಟ್ ಮಾಡಿ, ಮೊದಲು ಅಪರಿಚಿತ ಯುವತಿಯರ ಫೋಟೋ

ಡೇಟಿಂಗ್ ಆ್ಯಪ್ ಮೂಲಕ ಹುಡುಗಿ ಹೆಸರಿನಲ್ಲಿ ವಂಚನೆ – ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಹೆದರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನುಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ ಆ್ಯಪ್ ಮೂಲಕ ಸಾಲ ತೆಗೆದುಕೊಂಡಿದ್ದರು. ಅದರಿಂದ ಫೋನ್ ಕರೆಗಳು ಬರುತ್ತಿದ್ದ ಕಾರಣದಿಂದಲೋ ಅಥವಾ ಯಾವ ಕಾರಣಕ್ಕೆ ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 28. ಅಕ್ರಮ ಸರಾಯಿ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ಮಂಗಳೂರಿನ ಬಿಜೈ ಬಳಿ ನಡೆದಿದೆ. ಬಂಧಿತರನ್ನು ಚಿದಾನಂದ ಹಾಗೂ ಸ್ವಾಮಿ ಗೌಡ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 5,750 ರೂ. ಮೌಲ್ಯದ 90 ಎಮ್ ಎಲ್ ನ 128 ಮದ್ಯದ ಪ್ಯಾಕೇಟ್ ಮತ್ತು 2,500 ರೂ. ನಗದನ್ನು ವಶಕ್ಕೆ ಪಡೆಯಲಾಗಿದ್ದು, ಉರ್ವ ಠಾಣೆಯಲ್ಲಿ ಅಬಕಾರಿ ಕಾಯ್ದೆಯನ್ವಯ ಪ್ರಕರಣ ದಾಖಲಿಸಲಾಗಿದೆ.

ಅಕ್ರಮ ಸಾರಾಯಿ ಮಾರಾಟ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top