crime

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್ […]

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 27. ಬೆಳ್ತಂಗಡಿ ತಾಲೂಕು ಸೇರಿದಂತೆ ಹಲವೆಡೆ ಸರಣಿ ಕಳ್ಳತನಗೈದಿದ್ದ ಅಂತರ್ ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸಿದ ಘಟನೆ ಬೆಳ್ತಂಗಡಿಯಲ್ಲಿ ವರದಿಯಾಗಿದೆ. ಬಂಧಿತನನ್ನು ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ (50) ಎಂದು ಗುರುತಿಸಲಾಗಿದೆ. ಈತನ ಬಂಧನದೊಂದಿಗೆ ಇತ್ತೀಚೆಗೆ ಮುಂಡಾಜೆ, ಕಕ್ಕಿಂಜೆ, ಉಜಿರೆ, ಸೋಮಂತಡ್ಕ, ಕಲ್ಮಂಜ, ಕನ್ಯಾಡಿ, ಗುರುವಾಯನಕೆರೆ ನೆರಿಯ, ವೇಣೂರು ಮೊದಲಾದೆಡೆ ಸರಣಿ ಕಳ್ಳತನಗೈದಿದ್ದ ಅಂತರ್ಜಿಲ್ಲಾ ಕಳ್ಳನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈತ ಬೆಳ್ತಂಗಡಿ

ಸರಣಿ ಕಳ್ಳತನ- ಅಂತರ್ಜಿಲ್ಲಾ ಕಳ್ಳನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ಟಿಪ್ಪರ್ ಹಾಗೂ ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಅಡ್ಯಾರ್ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ವಿದ್ಯಾರ್ಥಿಯಾಗಿರುವ ಈತ ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಢಿಕ್ಕಿಯ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತ ಸ್ರಾವವಾಗಿದ್ದು, ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ರಸ್ತೆ ಅಪಘಾತ- ಸಹಸವಾರ SSLC ವಿದ್ಯಾರ್ಥಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಆ. 25. ಮನೆಯ ಎದುರಿಗಿದ್ದ ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗುವೊಂದು ಪ್ರಾಣ ಕಳೆದುಕೊಂಡ ದಾರುಣ ಘಟನೆ ಕಲಬುರಗಿ ನಗರದ ಮುಜಾಹಿರ್ ಬಡಾವಣೆಯಲ್ಲಿ ನಡೆದಿದೆ. ಮೃತ ಮಗುವನ್ನು ಸೋನಿಯಾ ಗಾಂಧಿ ಆಶ್ರಯ ಕಾಲನಿಯ ಮಹಮ್ಮದ್ ಬುರ್‌ಹಾನುದ್ದೀನ್ ಎಂಬವರ ಪುತ್ರ ಅಬ್ದುಲ್ ರಹಿಮಾನ್ (2) ಎಂದು ಗುರುತಿಸಲಾಗಿದೆ. ಗುರುವಾರದಂದು ಮಧ್ಯಾಹ್ನ ಮಗು ಆಟ ಆಡಿಕೊಂಡು ಮನೆಯ ಮುಂಭಾಗದಲ್ಲಿನ ಒಳಚರಂಡಿ ಕಡೆಗೆ ಹೋಗಿದ್ದು, ಈ ವೇಳೆ ತಿಳಿಯದೇ ಚರಂಡಿಯಲ್ಲಿ ಬಿದ್ದು, ಉಸಿರುಗಟ್ಟಿ ಕೊನೆಯುಸಿರಳೆದಿದೆ

ತೆರೆದ ಚರಂಡಿಗೆ ಬಿದ್ದು ಎರಡು ವರ್ಷದ ಮಗು ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 25. ಲೋನ್ ಆ್ಯಪ್ ಮೂಲಕ ಸಾಲ ಪಡೆದ ಯುವತಿಯಿಂದ ಹೆಚ್ಚಿನ ಹಣಕ್ಕೆ ಬೇಡಿಕೆಯಿಟ್ಟು, ನಗ್ನ ಚಿತ್ರ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿರುವ ಬಗ್ಗೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಯುವತಿರೋರ್ವಳು ಗೂಗಲ್ ಪ್ಲೇ ಸ್ಟೋರ್‌ನ ‘ಕ್ವಿಕ್ ಮನಿ’ ಎಂಬ ಲೋನ್ ಆ್ಯಪ್ ಮೂಲಕ 10,000 ರೂ. ಸಾಲಕ್ಕೆ ಅರ್ಜಿ ಹಾಕಿದ್ದಳು. ತಕ್ಷಣ ಆಕೆಯ ಖಾತೆಗೆ 7,500 ರೂ. ಜಮೆಯಾಗಿತ್ತು. ಕೆಲವು ದಿನಗಳ ಬಳಿಕ ಸಾಲ ಮರುಪಾವತಿ ಮಾಡಿದ್ದಳು.

ಲೋನ್ ಆ್ಯಪ್ ಮೂಲಕ ಸಾಲ ಪಡೆಯುವಂತೆ ಕಿರಿಕ್ – ನಗ್ನ ಚಿತ್ರ ವೈರಲ್ ಮಾಡೋದಾಗಿ ಬ್ಲಾಕ್ ಮೇಲ್ Read More »

ಕರಾವಳಿ, ಕ್ರೈಮ್ ನ್ಯೂಸ್

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 24. ಪುತ್ತೂರು ಮಹಿಳಾ ಪೊಲೀಸ್ ಸ್ಟೇಷನ್ ಬಳಿ ಹಾಡಹಗಲೇ ಯುವಕನೊಬ್ಬನ ಚೂರಿಯಿರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಯುವತಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತಪಟ್ಟ ಯುವತಿಯನ್ನು ವಿಟ್ಲ ಮೂಲದ ಗೌರಿ (20) ಎಂದು ಗುರುತಿಸಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ತಾಲೂಕಿನ ಮಾವಿನಕಟ್ಟೆ ಬಳಿ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಆರೋಪಿಯು ಮಣಿನಾಲ್ಕೂರು ಗ್ರಾಮದ ನೈಬೇಳು ನಿವಾಸಿ ಪದ್ಮರಾಜ್ ಎಂದು ತಿಳಿದು ಬಂದಿದೆ. ಈತ ಜೆಸಿಬಿ ಆಪರೇಟರ್‌ ಆಗಿ ಕೆಲಸ ನಿರ್ವಹಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಹೆಚ್ಚಿನ

ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಮೃತ್ಯು- ಪರಾರಿಯಾಗಿದ್ದ ಆರೋಪಿ ಪೊಲೀಸ್ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 24. ಪಟ್ರಮೆ ಗ್ರಾಮದ ದಡಂತಮಲೆ ಮೀಸಲು ಅರಣ್ಯದ ಒಳಭಾಗದ ಬಟ್ಟಾಡಿ ಬಳಿಯ ಕಪಿಲಾ ನದಿ ತೀರದಲ್ಲಿ ಅಕ್ರಮವಾಗಿ ಕಡವೆ ಭೇಟೆಯಾಡಿದ ಮೂವರನ್ನು ಬಂದೂಕು ಸಹಿತ ಉಪ್ಪಿನಂಗಡಿ ಅರಣ್ಯ ಇಲಾಖೆಯ ಅಧಿಕಾರಿಗಳು ಬಂಧಿಸಿದ ಘಟನೆ ವರದಿಯಾಗಿದೆ. ಡಿಆರ್.ಎಫ್‌ಒ ಸಿ.ಎನ್. ಲೋಕೇಶ್ ಅಶೋಕ್, ರಾವುತಪ್ಪ, ಅರಣ್ಯ ಪಾಲಕರಾದ ವಿನಯಚಂದ್ರ ಹಾಗೂ ಕಿಶೋರ್ ಗಸ್ತು ನಿರತರಾಗಿ ಖಚಿತ ಮಾಹಿತಿ ಮೇರೆಗೆ ಕಾದು ಕುಳಿತಿದ್ದರು. ಇದೇ ವೇಳೆ ಬೇಟೆಯಾಡಿದ ಶಬ್ದ ಕೇಳಿದ ಬೆನ್ನಲ್ಲೇ ಕಾಡಿನಲ್ಲಿ ಸುತ್ತುವರಿದು

ಕಡವೆ ಭೇಟೆ- ಕೋವಿ ಸಹಿತ ನಾಲ್ವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಆ. 23. ನಗರದಲ್ಲಿ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಯುವಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ವರದಿಯಾಗಿದೆ. ಪೊಲೀಸರು ಮಂಗಳೂರು ನಗರದ ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕಂಕನಾಡಿ ಮತ್ತು ಬೆಂದೂರ್ ವೆಲ್ ಪ್ರದೇಶಗಳಲ್ಲಿ ಕಳವಾಗಿದ್ದ ದ್ವಿಚಕ್ರ ವಾಹನಗಳ ಪತ್ತೆ ಬಗ್ಗೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಆರೋಪಿ ತಾನು ಕಳವು ಮಾಡಿದ್ದ ಸ್ಕೂಟರ್ನಲ್ಲಿ ನಂಬರ್ ಪ್ಲೇಟ್ ಇಲ್ಲದೆ ತಿರುಗಾಡುತ್ತಿದ್ದನು. ಈ ಸಂದರ್ಭ ನಗರದ ಪಂಪ್ ವೆಲ್ ಬ್ರಿಡ್ಜ್ ಬಳಿ ಆತನನ್ನು ದಸ್ತಗಿರಿ ಮಾಡಿ ಆತನ

ದ್ವಿಚಕ್ರ ವಾಹನ ಕಳವು- ಆರೋಪಿ ಯುವಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 22. ತಮಿಳುನಾಡು ಮೂಲದ ದಂಪತಿ ಎಲಿಮಲೆಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಾಜನ್ ಎಂದು ಗುರುತಿಸಲಾಗಿದೆ. ಎಲಿಮಲೆಯ ಪರಿಸರದಲ್ಲಿ ಕಳೆದ ಅನೇಕ ವರ್ಷಗಳಿಂದ ಟ್ಯಾಪಿಂಗ್ ಮಾಡುತ್ತಿದ್ದ ರಾಜನ್ ಮತ್ತು ಅವರ ಪತ್ನಿ ಕಳೆದ ಕೆಲ ಸಮಯಗಳಿಂದ ರಬ್ಬರ್ ತೋಟವನ್ನು ಸ್ವತಃ ಖರೀದಿಸಿ ಟ್ಯಾಪಿಂಗ್ ಮಾಡಿ ಜೀವನ ಸಾಗಿಸುತ್ತಿದ್ದರೆನ್ನಲಾಗಿದೆ. ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯಕ್ಕೂ ತುತ್ತಾಗಿದ್ದರು. ಮನೆಯಲ್ಲಿ ದಂಪತಿಗಳು ಮಾತ್ರ ಇದ್ದು ಇಂದು

ತಮಿಳುನಾಡು ಮೂಲದ ದಂಪತಿ ಸುಳ್ಯದಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top