crime

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಡ್ರಿಂಕ್ಸ್ ಬಿಲ್ ನ ಮೊತ್ತ ಕೇಳಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಫೋಲ್ಡಿಂಗ್ ಬ್ಲೇಡ್ ನಿಂದ ಇರಿದು ಕೊಲೆಗೆ ಯತ್ನಿಸಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೈಸೂರು ಮೂಲದ ಆರೋಪಿ ಮೊಹಮ್ಮದ್ ಹನೀಫ್ ಅಲಿಯಾಸ್ ಚಾಕು(30) ಎಂದು ಗುರುತಿಸಲಾಗಿದೆ. ಆಗಸ್ಟ್ 18ರಂದು ರಾತ್ರಿ ನಗರದ ಸರ್ವಿಸ್ ಬಸ್ ನಿಲ್ದಾಣದ ಗೂಡಂಗಡಿ ಎದುರು ಈರಪ್ಪ ಕುರಿ ಎಂಬಾತ ಆರೋಪಿ ಹನೀಫ್ ನೊಂದಿಗೆ ಡ್ರಿಂಕ್ಸ್ ಮಾಡಿರುವ ಬಿಲ್ ಮೊತ್ತ ಕೊಡುವಂತೆ ಕೇಳಿದ್ದು, ಆಗ ಆರೋಪಿ […]

ಬಿಲ್ ಮೊತ್ತ ಕೇಳಿದ್ದಕ್ಕೆ ಬ್ಲೇಡ್ ನಿಂದ ಇರಿದು ಕೊಲೆಯತ್ನ – ಆರೋಪಿ ಅಂದರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ

(ನ್ಯೂಸ್ ಕಡಬ) newskadaba.com ನೀಲೇಶ್ವರಂ, ಆ. 18. ಮಹಿಳೆಯೋರ್ವರಿಗೆ ದೈಹಿಕವಾಗಿ ಹಲ್ಲೆ ನಡೆಸಿ ನಗ್ನ ವೀಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಆರೋಪದಡಿ ಮಹಿಳೆಯೊಬ್ಬರು ಪತಿ ವಿರುದ್ಧ ಪೊಲೀಸರಿಗೆ ದೂರು ನೀಡಿರುವ ಕುರಿತು ನೀಲೇಶ್ವರಂ ನಿಂದ ವರದಿಯಾಗಿದೆ. ಮಹಿಳೆಯ ದೂರಿನ ಪ್ರಕಾರ, ವ್ಯಕ್ತಿಯು ಕೆಲವು ವ್ಯಕ್ತಿಗಳಿಂದ ಹಣ ಪಡೆದು ಮಹಿಳೆಯನ್ನು ನಗ್ನವಾಗಿ ಕಾಣಿಸಿಕೊಳ್ಳಲು ಮತ್ತು ವೀಡಿಯೊ ಕರೆ ಮಾಡಲು ಒತ್ತಾಯಿಸಿದ್ದಾನೆ. ಅಲ್ಲದೇ ಇದೇ ಕಾರಣಕ್ಕೆ ಮಹಿಳೆಗೆ ಬೆದರಿಕೆ ಮತ್ತು ಹಲ್ಲೆ ನಡೆಸಿದ ಆರೋಪವೂ ಕೇಳಿಬಂದಿತ್ತು. ಈ ಕುರಿತು ನೀಲೇಶ್ವರಂ

ಮಹಿಳೆಗೆ ನಗ್ನ ವಿಡಿಯೋ ಕಾಲ್ ಮಾಡುವಂತೆ ಒತ್ತಾಯಿಸಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಬೈಕ್ ಹಾಗೂ ಮಿನಿ ಲಾರಿ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಮೊಗ್ರಾಲ್ ಪುತ್ತೂರಿನ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಇಂದು ಮುಂಜಾನೆ ಕಣ್ಣೂರು ಬಳಿ ನಡೆದಿದೆ. ಮೃತ ಯುವಕರನ್ನು ಮೊಗ್ರಾಲ್ ಪುತ್ತೂರು ಕಂಬಾರ್ ಬೆದ್ರಡ್ಕದ ಮನಾಫ್ (24) ಮತ್ತು ಸ್ನೇಹಿತ ಲತೀಫ್ (23) ಎಂದು ಗುರುತಿಸಲಾಗಿದೆ. ಇವರು ಕಣ್ಣೂರಿನಿಂದ ಕಾಸರಗೋಡು ಕಡೆಗೆ ತೆರಳುತ್ತಿದ್ದ ಬೈಕ್ ಮತ್ತು ಮಂಗಳೂರಿನಿಂದ ಕಣ್ಣೂರು ಕಡೆಗೆ ತೆರಳುತ್ತಿದ್ದ ಮಿನಿ ಲಾರಿ ನಡುವೆ ಕಣ್ಣೂರು

ಬೈಕ್ ಹಾಗೂ ಲಾರಿ ನಡುವೆ ಅಪಘಾತ – ಇಬ್ಬರು ಯುವಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪದವಿ ವಿದ್ಯಾರ್ಥಿ ಸಹಿತ ಮೂವರನ್ನು ಮಂಗಳೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ಬಂಧಿಸಿರುವ ಘಟನೆ ನಗರದ ಜೆಪ್ಪು ಮಜಿಲ ಎಂಬಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಮಂಗಳೂರು ತಲಪಾಡಿಯ ಗುಡ್ಡೆ ಹೌಸ್ ನಿವಾಸಿ ಅಬ್ದುಲ್ ರವೂಫ್(29), ಕೇರಳದ ತಲಶ್ಶೇರಿ ಪಾನೂರು ನಿವಾಸಿ ಉಬೈದ್ ಕುನ್ಮಾಲ್(21) ಮತ್ತು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮೂಡಿಗೆರೆ ಮಾವಿನಕೆರೆ ನಿವಾಸಿ ಮುಹಮ್ಮದ್ ಇರ್ಷಾದ್(21) ಎಂದು

ನಿಷೇಧಿತ ಎಂಡಿಎಂಎ ಮಾದಕ ವಸ್ತು ಮಾರಾಟ – ಬಿಕಾಂ ವಿದ್ಯಾರ್ಥಿ ಸಹಿತ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಕುಂದಾಪುರ, ಆ. 20. ಜ್ವರಕ್ಕೆಂದು ವೈದ್ಯರು ನೀಡಿದ ಇಂಜೆಕ್ಷನ್ ನಿಂದ ಅಡ್ಡ ಪರಿಣಾಮ ಉಂಟಾಗಿ ಕುಂದಾಪುರ ಮೂಲದ ಯುವಕನೊಬ್ಬ ಬೆಂಗಳೂರಿನ ಕೆ.ಪಿ. ಅಗ್ರಹಾರದಲ್ಲಿ ಮೃತಪಟ್ಟ ಘಟನೆ ಶುಕ್ರವಾರದಂದು ನಡೆದಿದೆ. ಮೃತ ಯುವಕನನ್ನು ಕುಂದಾಪುರ ತಾಲೂಕಿನ ಹೊಸಂಗಡಿ ಗ್ರಾಮದ ಬೆದ್ರಳ್ಳಿಯ ದಿ. ಚಂದ್ರಶೆಟ್ಟಿ ಎಂಬವರ ಮಗ ಅಮರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ಹೋಟೆಲ್ ವ್ಯವಹಾರ ಮಾಡಿಕೊಂಡಿದ್ದ ಅಮರ್ ಶೆಟ್ಟಿ, ಆಗಸ್ಟ್ 13ರಂದು ಕೆ.ಪಿ. ಅಗ್ರಹಾರದ ಸಂಬಂಧಿಕರ ಮನೆಗೆ ಹೋಗಿದ್ದ ಸಂದರ್ಭ ಮೈಬಿಸಿ ಇರುವುದನ್ನು

ಇಂಜೆಕ್ಷನ್ ಅಡ್ಡ ಪರಿಣಾಮ- ಚಿಕಿತ್ಸೆ ಫಲಿಸದೇ ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಾನುವಾರು ಕಳ್ಳತನ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.‌ 20. ದನ ಕಳ್ಳತನ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಜ್ಪೆ ಠಾಣಾ ವ್ಯಾಪ್ತಿಯ ಬಡಗ ಎಡಪದವು ದಡ್ಡಿ ಎಂಬಲ್ಲಿ ಬಂಧಿಸಿದ್ದಾರೆ. ಬಂಧಿತರನ್ನು ಉಳ್ಳಾಲದ ಮಲಾರ್, ಪಾವೂರು ಗ್ರಾಮದ ಬದ್ರಿಯಾ ನಗರದ ನಿವಾಸಿ ಇರ್ಫಾನ್ (30) ಮತ್ತು ಬಂಟ್ವಾಳದ ಸಿದ್ದಕಟ್ಟೆ ಗ್ರಾಮದ ಸಂಗಬೆಟ್ಟು ಗ್ರಾಮದ ಮೊಹಮ್ಮದ್ ಆರಿಫ್ ಅಲಿಯಾಸ್ ಪುಚ್ಚೇರಿ ಆರಿಫ್ (32) ಎಂದು ಗುರುತಿಸಲಾಗಿದೆ. ಆ. 14ರಂದು ರಾತ್ರಿ ಬಡಗ ಎಡಪದವು ಎಂಬಲ್ಲಿ ಮೂರು ಹಸುಗಳನ್ನು ಕಳವು ಮಾಡಿರುವ ಬಗ್ಗೆ

ಜಾನುವಾರು ಕಳ್ಳತನ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಹೆಬ್ರಿ, ಆ. 20. ಓವರ್ ಟೆಕ್ ಮಾಡುವ ಭರದಲ್ಲಿ ಸರಣಿ ಅಪಘಾತ ಸಂಭವಿಸಿ, ನಾಲ್ವರು ಗಾಯಗೊಂಡ ಘಟನೆ ನಾಡ್ಪಾಲ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಕ್ಕನಮಕ್ಕಿ ಬಳಿ ನಡೆದಿದೆ. ವರದಿಯ ಪ್ರಕಾರ, ಬೈಕ್ ನ್ನು ಕಾರೊಂದು ಓವರ್ ಟೇಕ್ ಮಾಡುತ್ತಿದ್ದ ಸಂದರ್ಭ ಮುಂದಿನಿಂದ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಅಪಘಾತದ ರಭಸಕ್ಕೆ ಕಾರುಗಳು ಹಾಗೂ ಬೈಕ್ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ. ಈ ಬಗ್ಗೆ

ಓವರ್ ಟೇಕ್ ಭರದಲ್ಲಿ ಸರಣಿ ಅಪಘಾತ – ನಾಲ್ವರಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾದಕ ವಸ್ತುವಾದ ಎಂಡಿಎಂಎ ಅನ್ನು ಮಾರಾಟ ಮಾಡುತ್ತಿದ್ದ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಹಸನ್ ಸಾಧಿಕ್ ಯಾನೆ ಬ್ಲೇಡ್ ಸಾಧಿಕ್(35) ಎಂದು ಗುರುತಿಸಲಾಗಿದೆ. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡ ಆರೋಪಿಯಾಗಿರುವ ಈತ, ಬೆಂಗಳೂರಿನಿಂದ ಎಂಡಿಎಂಎ ಮಾದಕ ವಸ್ತುವನ್ನು ಖರೀದಿಸಿ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಮಾರುತಿ 800 ಕಾರಿನಲ್ಲಿ ತಂದು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದನು.

ಎಂಡಿಎಂಎ ಮಾದಕ ವಸ್ತು ಸಹಿತ ಆರೋಪಿಯ ಸೆರೆ – ಸಿಸಿಬಿ ಪೊಲೀಸರ ಕಾರ್ಯಾಚರಣೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ವಾರ್ಟರ್ಸ್ ಮೇಲೆ ಮಲಗಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 20. ಕ್ವಾರ್ಟರ್ಸ್‌ನ ಮೇಲಿನಿಂದ ಬಿದ್ದು ವಲಸೆ ಕಾರ್ಮಿಕನೋರ್ವ ಮೃತಪಟ್ಟ ಘಟನೆ ಸೀತಾಂಗೋಳಿಯಲ್ಲಿ ನಡೆದಿದೆ. ಮೃತ ಕಾರ್ಮಿಕನನ್ನು ರಾಜಸ್ತಾನ ಬೋಡಗಾನ್ ನಿವಾಸಿ ಕೇಮ್ರಾಜ್ ಗುಜ್ಜರ್ (43) ಎಂದು ಗುರುತಿಸಲಾಗಿದೆ. ಕಳೆದ 20 ವರ್ಷಗಳಿಂದ ಸೀತಾಂಗೋಳಿಯಲ್ಲಿ ಗ್ರಾನೈಟ್ ಹಾಗೂ ಮಾರ್ಬಲ್ ಕೆಲಸ ನಿರ್ವಹಿಸುತ್ತಿದ್ದ ಇವರು ಸೀತಾಂಗೋಳಿ ಪೇಟೆಯಲ್ಲಿರುವ ಕ್ವಾರ್ಟರ್ಸ್‌ನಲ್ಲಿ ವಾಸಿಸುತ್ತಿದ್ದರು. ಶುಕ್ರವಾರ ರಾತ್ರಿ ಕ್ವಾರ್ಟರ್ಸ್‌ನ ಮೇಲಿನ ಮಹಡಿಯಲ್ಲಿ ನಿದ್ರಿಸುತ್ತಿದ್ದ ಇವರನ್ನು ಜೊತೆಗಿದ್ದವರು ಶನಿವಾರ ಮುಂಜಾನೆ ಎದ್ದು ನೋಡಿದಾಗ ಕೇಮ್ರಾಜ್ ಗುಜ್ಜರ್ ಕ್ವಾರ್ಟರ್ಸ್‌ನ ಕೆಳಗೆ

ಕ್ವಾರ್ಟರ್ಸ್ ಮೇಲೆ ಮಲಗಿದ್ದ ಕಾರ್ಮಿಕ ಕೆಳಗೆ ಬಿದ್ದು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಟ್ಕಾ ದಂಧೆ- ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 20. ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಉರ್ವ ಪೊಲೀಸರು ಬಂಧಿಸಿದ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ನಗರದ ಚಿಲಿಂಬಿಯ ಗೋಕುಲದಾಸ ಶೆಣೈ ಮತ್ತು ಕೋಡಿಕಲ್ ನಿವಾಸಿ ದೀಪಕ್ ಶೆಟ್ಟಿ ಎಂದು ಗುರುತಿಸಲಾಗಿದೆ. ಆರೋಪಿಗಳ ಜೊತೆಗೆ ಮಟ್ಕಾ ದಂಧೆಗೆ ಬಳಸಿದ್ದ 4,24,490 ರೂ. ನಗದು, ಮೊಬೈಲ್ ಫೋನ್ ಹಾಗೂ ಮಟ್ಕಾ ಬರೆದಿದ್ದ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮಟ್ಕಾ ದಂಧೆ- ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top