crime

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬಜಪೆ, ನ. 29. ಹೆಜ್ಜೇನು ಕಡಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ದಿನಪತ್ರಿಕೆ ವಿತರಕರೊಬ್ಬರು ಮಂಗಳೂರಿನ ಆಸ್ಪತ್ರೆಯಲ್ಲಿ ನ. 28ರಂದು ಕೊನೆಯುಸಿರೆಳೆದಿದ್ದಾರೆ. ಮೃತ ದುರ್ದೈವಿಯನ್ನು ಪೇಜಾವರ ಪಡ್ಡೋಡಿಯ ನಿವಾಸಿ, ದಿನಪತ್ರಿಕೆ ವಿತರಕ ಪುಷ್ಪಾರಾಜ ಶೆಟ್ಟಿ (45) ಎಂದು ಗುರುತಿಸಲಾಗಿದೆ.  ಪುಷ್ಪಾರಾಜ ಅವರು ಬಜಪೆ ಪಟ್ಟಣ ಪಂಚಾಯತ್‌ ವ್ಯಾಪ್ತಿಯ ಕೆಂಜಾರು ತಾಂಗಡಿಯಲ್ಲಿ ನ. 27ರ ಬೆಳಗ್ಗೆ ನಡೆದುಕೊಂಡು ಹೋಗುತ್ತಿದ್ದಾಗ ಅವರ ಮೇಲೆ ಹೆಜ್ಜೇನಿನ ಹಿಂಡು ದಾಳಿ ನಡೆಸಿತ್ತು. ಇದರಿಂದಾಗಿ ತೀವ್ರ ಅಸ್ವಸ್ಥರಾಗಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. […]

ಹೆಜ್ಜೇನು ಕಡಿತ: ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ

(ನ್ಯೂಸ್ ಕಡಬ) newskadaba.com ಪುತ್ತೂರು, ನ. 29. ರಸ್ತೆ ಬದಿಯಲ್ಲಿ ನಿಂತಿದ್ದ ಮಹಿಳೆಗೆ ಬೈಕ್‌ ಢಿಕ್ಕಿ ಹೊಡೆದು ಆಕೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಲನಾ ಪರವಾನಿಗೆ ಇಲ್ಲದ ಬೈಕ್‌ ಸವಾರನಿಗೆ ಕೋರ್ಟ್ ದಂಡ ವಿಧಿಸಿದ್ದು, ಬೈಕ್ ಮಾಲಿಕನಿಗೆ 2 ವರ್ಷ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022ರ ಫೆ.27ರಂದು ನೆಟ್ಟಣಿಗೆ ಮುಟ್ನೂರು ಕೊಟ್ಯಾಡಿಯಲ್ಲಿ ಈ ಅಪಘಾತ ಸಂಭವಿಸಿತ್ತು. ಅಪಘಾತದ ವೇಳೆ ಮುಳಿಯೂರು ನಿವಾಸಿ ಶಾಹೀದ್‌ ಕೇರಳ ರಾಜ್ಯದ ನೋಂದಣಿಯ ಬೈಕ್ ಚಲಾಯಿಸುತ್ತಿದ್ದ. ಈತ ಚಲಾಯಿಸುತ್ತಿದ್ದ ಬೈಕ್

ಬೈಕ್‌ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಪ್ರಕರಣ:  ಸವಾರನಿಗೆ 2 ವರ್ಷ ಶಿಕ್ಷೆ ಪ್ರಕಟ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ನ. 28. ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿಯೊಬ್ಬಳು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲ್ಲೂಕಿನ ತಿತಿಮತಿ ಸಮೀಪದ ಮಜ್ಜಿಗೆಹಳ್ಳ ನರ್ಸರಿ ಬಳಿ ನಡೆದಿದೆ. ಮೃತ ದುರ್ದೈವಿಯನ್ನು ಸ್ಥಳೀಯ ನಿವಾಸಿ ರವಿ ಹಾಗೂ ಸಿಂಧು ದಂಪತಿ ಪುತ್ರಿ ಗಾನವಿ(6) ಎಂದು ಗುರುತಿಸಲಾಗಿದೆ. ಈಕೆ ಮಜ್ಜಿಗೆಹಳ್ಳ ಪರಂಬು ಶಾಲೆಯ 1ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಗೋಣಿಕೊಪ್ಪ ಕಡೆಯಿಂದ ಹುಣಸೂರು ಕಡೆಗೆ ತೆರಳುತ್ತಿದ್ದ ಲಾರಿ ರಸ್ತೆಯಲ್ಲಿ ನಡೆದುಕೊಂಡು ಮನೆಗೆ ಹೋಗುತ್ತಿದ್ದ ಗಾನವಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ರಸ್ತೆ ಅಪಘಾತ: 6 ವರ್ಷದ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 26. ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣದಲ್ಲಿ 8 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಕೆಪಿಟಿಸಿಎಲ್ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದ್ದು, ಕಲ್ಯಾಣ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿಕೊಂಡು ಹೋಗುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಫೋಟೋಗ್ರಾಫರ್ ಉಮೇಶ್ ಹೊಸೂರು ಅಪಹರಣವಾಗಿ ಹಲ್ಲೆಗೊಳಗಾಗಿ ವ್ಯಕ್ತಿ. ಇವರು ಬೈಲಹೊಂಗಲ ಪಟ್ಟಣದಲ್ಲಿ ನೆಲೆಸಿದ್ದಾರೆ. ನಾಲ್ಕು ದಿನಗಳ ಹಿಂದೆ ಮದುವೆ ಆರ್ಡರ್ ಅಂತಾ ಬೆಳಗಾವಿ ನಗರಕ್ಕೆ ಬಂದಿದ್ದರು. ಈ

ಮದುವೆ ಮಂಟಪದಿಂದ ಫೋಟೊಗ್ರಾಫರ್ ಕಿಡ್ನ್ಯಾಪ್ ಮಾಡಿ ಹಲ್ಲೆ: 8 ಮಂದಿ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಬೈಕ್- ಕಾರು ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ನ. 26. ಬೈಕ್-ಕಾರು ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಸವಾರ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತರನ್ನು ಹೇರಾಡಿ ಗ್ರಾಮದ ಅರುಣ (24) ಎಂದು ಗುರುತಿಸಲಾಗಿದೆ. ಮೋಟಾರು ಸೈಕಲ್‌ನಲ್ಲಿ ಬಾರ್ಕೂರಿನಿಂದ ರಂಗನಕೆರೆಗೆ ಹೋಗುತ್ತಾ ಸಮಯ ಸುಮಾರು ರಾತ್ರಿ 8:30 ಗಂಟೆಗೆ ಹನೇಹಳ್ಳಿ ಗ್ರಾಮದ ಬಾರ್ಕೂರು ಸರಕಾರಿ ಆಸ್ಪತ್ರೆ ಸಮೀಪ ತಲುಪುವಾಗ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮ ಹರೀಶ್ ರವರು ಮೋಟಾರು ಸೈಕಲ್ ಸಮೇತ ರಸ್ತೆಗೆ ಬಿದ್ದು, ಅವರ ತಲೆಗೆ ಗಂಭೀರ ಸ್ವರೂಪದ ಗಾಯವಾಗಿದ್ದು

ಬೈಕ್- ಕಾರು ಅಪಘಾತ: ಸವಾರ ಮೃತ್ಯು..! Read More »

ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com  ಹಾಸನ, ನ.25. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ ಚಾಲಕ ಸಾವನ್ನಪ್ಪಿದ ಘಟನೆ ಬೇಲೂರು ತಾಲೂಕಿನ ಕೊರಟಗೆರೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಚಿಕ್ಕಮಗಳೂರು ಮೂಲದ ದಯಾನಂದ (46) ಎಂದು ಗುರುತಿಸಲಾಗಿದೆ. ಇನ್ನೂ ಅಪಘಾತದಲ್ಲಿ ದಯಾನಂದ್ ಅವರ ಮಗಳು ನಿಶ್ಮಿತಾ (16) ಗಂಭೀರವಾಗಿ ಗಾಯಗೊಂಡಿದ್ದಾಳೆ. ಆಕೆಯನ್ನು ಬೇಲೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದಯಾನಂದ್ ಅವರು ಬೇಲೂರಿನಲ್ಲಿ ಬಟ್ಟೆ ಅಂಗಡಿ ಇಟ್ಟುಕೊಂಡಿದ್ದು ಅಲ್ಲೇ ವಾಸವಿದ್ದರು. ಇನ್ನೂ ಭಾನುವಾರ ಚಿಕ್ಕಮಗಳೂರಿಗೆ ತೆರಳಿದ್ದ ಅವರು ಇಂದು

ನಿಯಂತ್ರಣ ತಪ್ಪಿ ಕಾರು ಪಲ್ಟಿ: ತಂದೆ ಮೃತ್ಯು, ಮಗಳಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 23. ಉಳ್ಳಾಲ ತಾಲೂಕಿನ ಬಾಳೆ ಪುನಿ ಗ್ರಾಮದಲ್ಲಿ 3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ನ.21ರಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಗುವಿನ ತಾಯಿ ನೀಡಿರುವ ದೂರಿನ ಪ್ರಕಾರ ಬಾಲಕಿ ಆಟವಾಡುತ್ತಿದ್ದಾಗ ಅಡಿಕೆ ಅಂಗಡಿಯೊಂದರ ಬಳಿ ಈ ಘಟನೆ ನಡೆದಿದೆ. ಅಂಗಡಿಯವನು ಮುಡಂಗಾರುಕಟ್ಟೆ ನಿವಾಸಿ ಅಹ್ಮದ್ ಕುಂಞಿ ಎಂಬವರ ಪುತ್ರ ಅಬ್ದುಲ್ಲ (70) ಎಂದು ಗುರುತಿಸಲಾಗಿದ್ದು, ಮಗುವಿನೊಂದಿಗೆ ಅನುಚಿತ ದೈಹಿಕ ಸಂಪರ್ಕ ಹೊಂದಿದ್ದ ಆರೋಪವಿದೆ. ಕೊಣಾಜೆ ಪೊಲೀಸರು

3 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ವೃದ್ದನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ನ. 23. ಖಾಸಗಿ ಬಸ್, ಕೆಎಸ್ಸಾರ್ಟಿಸಿ ಬಸ್ ಹಾಗೂ ಕಾರಿನ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಇಪ್ಪತ್ತಕ್ಕೂ ಹೆಚ್ಚುಮಂದಿ ಗಾಯಗೊಂಡ ಘಟನೆ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಶನಿವಾರದಂದು ನಸುಕಿನ ಜಾವ ನಡೆದಿದೆ. ಬೆಂಗಳೂರು ಮೂಲದ ಕಾಲೇಜು ವಿದ್ಯಾರ್ಥಿಗಳು ಕುಂದಾಪುರಕ್ಕೆ ಪ್ರವಾಸಕ್ಕೆಂದು ತೆರಳಿ ಹಿಂತಿರುಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಪಲ್ಟಿಯಾಗಿ ಕೆಎಸ್ಸಾರ್ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ. ಈ ವೇಳೆ ಹಿಂದಿನಿಂದ

ಗುಂಡ್ಯ: ಬೆಳ್ಳಂಬೆಳಗ್ಗೆ ಸರಣಿ ಅಪಘಾತ- ಇಪ್ಪತ್ತಕ್ಕೂ ಹೆಚ್ಚು ಮಂದಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಲಕ್ನೋ, ನ. 21. ಟ್ರಕ್‌ಗೆ ಹಿಂಬದಿಯಿಂದ ಡಬಲ್ ಡೆಕ್ಕರ್ ಬಸ್ ಡಿಕ್ಕಿ ಹೊಡೆದ ಪರಿಣಾಮ 5 ತಿಂಗಳ ಮಗು ಸೇರಿ ಐವರು ಮೃತಪಟ್ಟಿದ್ದು, 15 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಅಲಿಘರ್‌ನ ಯಮುನಾ ಎಕ್ಸ್‌ ಪ್ರೆಸ್‌ ವೇಯಲ್ಲಿ ನಡೆದಿದೆ. ದೆಹಲಿಯಿಂದ ಅಜಂಗಢಕ್ಕೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಟ್ರಕ್‌ಗೆ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆ. ಗುದ್ದಿದ ರಭಸಕ್ಕೆ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು ಪ್ರಯಾಣಿಕರು ಬಸ್ ಒಳಗೆ ಸಿಲುಕಿಕೊಂಡಿದ್ದಾರೆ. ಸ್ಥಳೀಯರು ಬಸ್ಸಿನ ಗಾಜುಗಳನ್ನು

ಟ್ರಕ್‌- ಬಸ್ ಡಿಕ್ಕಿ : 5 ಮಂದಿ ಮೃತ್ಯು, 15 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ನ. 21. ವ್ಯಕ್ತಿಯೋರ್ವರ ಶವ ಮನೆಯಲ್ಲಿ ಪತ್ತೆಯಾದ ಘಟನೆ ವಿಟ್ಲದ ಕನ್ಯಾನದ ಪಂಜಿಗದ್ದೆ ದೇಲಂತಬೆಟ್ಟು ಎಂಬಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಮನೆಯಲ್ಲಿ ಒಬ್ಬರೇ ವಾಸವಾಗಿದ್ದ ಮೌರಿಸ್ ಡಿಸೋಜಾ(61) ಎಂದು ಗುರುತಿಸಲಾಗಿದೆ. ಮೌರಿಸ್ ರವರು ಮನೆಯಲ್ಲಿ ಒಬ್ಬರೇ ವಾಸವಿದ್ದು ಕೆಲಸದವರು ಮೃತಪಟ್ಟಿರುವುದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆಯೇ ಮೃತಪಟ್ಟಿದ್ದು ವಿಟ್ಲ ಪೊಲೀಸರು ಸ್ಥಳಕ್ಕೆ ಆಗಮಿಸಿ ಸಾವಿನ ಕಾರಣದ ಬಗ್ಗೆ ತನಿಖೆ ನಡೆಸುತ್ತಿದ್ದು ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ

ಮನೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top