crime

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..!

(ನ್ಯೂಸ್ ಕಡಬ)newskadaba.com ರಾಯಚೂರು, ಆ.11. ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೇಗಳಪೇಟೆ ಹೊರ ವಲಯದ ಕೃಷಿ ಜಮೀನಿನ ಬಾವಿಯಲ್ಲಿ ಚೌಡಮ್ಮ(34), ರಾಮಣ್ಣ(4), ಮುತ್ತಣ್ಣ(3) ಮೃತದೇಹ ಪತ್ತೆಯಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಮುದಗಲ್ ‌ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಕೌಟುಂಬಿಕ ಕಲಹದಿಂದ ಆತ್ಮಹತ್ಯೆಗೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಮಕ್ಕಳನ್ನು ಮೊದಲು ಬಾವಿಗೆ ಎಸೆದು ಬಳಿಕ ತಾಯಿ ಬಾವಿಗೆ ಹಾರಿದ ಬಗ್ಗೆ ಸಂಶಯ ವ್ಯಕ್ತವಾಗಿದೆ.

ಮಕ್ಕಳ ಜೊತೆ ಬಾವಿಗೆ ಹಾರಿದ ತಾಯಿ..! Read More »

ಕರಾವಳಿ

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ

(ನ್ಯೂಸ್ ಕಡಬ)newskadaba.com ಕಾಸರಗೋಡು, ಆ.11. ಬೋರ್ ವೆಲ್ ಯಂತ್ರ ಸಾಗಾಟದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಘಟನೆ ನಡೆದಿದೆ. ಚಾಲಕ ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಇವರನ್ನು ಸಮೀಪದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪಾಣತ್ತೂರು ಕಡೆಗೆ ತೆರಳುತ್ತಿದ್ದ ಲಾರಿ ಇಳಿಜಾರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದು ಈ ಅವಘಡ ನಡೆದಿದೆ. ತಕ್ಷಣ ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ತಲುಪಿಸಿದರು.

ಮಗುಚಿ ಬಿದ್ದ ಬೋರ್‌ ವೆಲ್ ಯಂತ್ರ ಸಾಗಾಟದ ಲಾರಿ – ಮೂವರಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು

(ನ್ಯೂಸ್ ಕಡಬ)newskadaba.com ಮೈಸೂರು, ಆ.11. ದೂರವಾಣಿ ಕರೆ ಮಾಡಿ ಬಾಕಿ ವಿದ್ಯುತ್ ಬಿಲ್ ಕಟ್ಟುವಂತೆ ಹೇಳಿ ವ್ಯಕ್ತಿಯೊಬ್ಬರ ಖಾತೆಯಿಂದ​ ಬರೋಬ್ಬರಿ 5.48 ಲಕ್ಷ ರೂ. ದೋಚಿರುವ ಘಟನೆ ಬೆಳಕಿಗೆ ಬಂದಿದೆ. ಕಣ್ಣನ್ ಎಂಬುವರಿಗೆ ವಂಚಕರು ದೂರವಾಣಿ ಕರೆ ವಿದ್ಯುತ್ ಬಿಲ್ ಬಾಕಿ ಇದ್ದು, ಲಿಂಕ್​ ಮೂಲಕ ಪಾವತಿಸುವಂತೆ ಸೂಚಿಸಿದ್ದಾರೆ. ಇನ್ನು ಕರೆ ಕಡಿತಗೊಳಿಸಿದ ಬಳಿಕ ಕಣ್ಣನ್ ಅವರ ಫೋನ್ ​ಗೆ ಲಿಂಕ್ ಕಳುಹಿಸಿ ಹಣ ಪಾವತಿಸುವಂತೆ ಹೇಳಿದ್ದು, ಅದರಂತೆ ಕಣ್ಣನ್ ಅವರು ಸಹ ವಂಚಕರು ಕಳುಹಿಸಿದ್ದ ಲಿಂಕ್​

ಬಾಕಿ ವಿದ್ಯುತ್ ಬಿಲ್​​ ಕಟ್ಟುವಂತೆ ಮೊಬೈಲ್‌ ಗೆ ಲಿಂಕ್‌ ! – 5.48 ಲಕ್ಷ ರೂ. ಡ್ರಾ ಮಾಡಿದ ವಂಚಕರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ನಗರದಲ್ಲಿ ಖಾಸಗಿ ಟ್ಯಾಕ್ಸಿ ಬುಕ್ಕಿಂಗ್ ಆಪ್ ಗಳ ಹಾವಳಿ ಹೆಚ್ಚಾದ ಬೆನ್ನಲ್ಲೇ, ಅಘಾತಕಾರಿ ಘಟನೆಗಳು ನಡೆಯುತ್ತಿವೆ. ಉಬರ್ ಕ್ಯಾಬ್ ಹತ್ತಿದಂತ ಮಹಿಳೆಯ ಮೇಲೆ ಚಾಲಕ ಹಲ್ಲೆ ಮಾಡಿರುವ ಘಟನೆ ಬೆಂಗಳೂರಲ್ಲಿ ನಡೆದಿದೆ. ಬೆಂಗಳೂರಿನ ಮಹಿಳೆಯೊಬ್ಬರು ಆಸ್ಪತ್ರೆಗೆ ತೆರಳಲು ಕ್ಯಾಬ್ ಬುಕ್ ಮಾಡಿದ್ದರು. ಮಹಿಳೆ ಬುಕ್ ಮಾಡಿದ್ದೇ ಬೇರೆ ಕ್ಯಾಬ್, ಸ್ಥಳಕ್ಕೆ ಬಂದಿದ್ದೇ ಬೇರೆಯಾಗಿತ್ತು. ಇದನ್ನು ಆರಂಭದಲ್ಲಿ ಗಮನಿಸದಂತ ಮಹಿಳೆ ಹಾಗೂ ಅವರ ಪುತ್ರ ಹತ್ತಿ ಕುಳಿತ ಮೇಲೆ ಗಮನಿಸಿ ಇಳಿಯೋದಕ್ಕೆ ಪ್ರಯತ್ನಿಸಿದ್ದಾರೆ.

ಮಹಿಳೆಯ ಮೇಲೆ ಉಬರ್ ಚಾಲಕನಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.10. ಫೋನ್‌ ಪೇ ಮಾಡುವುದಾಗಿ ನಂಬಿಸಿ ಅಂಗವಿಕಲ ಆಟೋ ಚಾಲಕನಿಂದ 23,500 ರೂ. ಪಡೆದು ಮಹಿಳಾ ಪ್ರಯಾಣಿಕರೊಬ್ಬರು ವಂಚಿಸಿರುವ ಘಟನೆ ವರದಿಯಾಗಿದೆ. ನಾಗರಭಾವಿ ಸಮೀಪದ ಮಹದೇಶ್ವರ ಲೇಔಟ್‌ ನಿವಾಸಿ ಶಿವಕುಮಾರ್‌ ಮೋಸ ಹೋಗಿದ್ದು, ಶಿವಕುಮಾರ್‌ ಅವರ ಆಟೋದಲ್ಲಿ ಚಂದ್ರಾಲೇಔಟ್‌ ನಿಂದ ಬನಶಂಕರಿಗೆ ತೆರಳುತ್ತಿದ್ದ ಯುವತಿ ವಂಚಿಸಿದ್ದಾಳೆ ಎನ್ನಲಾಗಿದೆ. ಈ ಬಗ್ಗೆ ಸಂತ್ರಸ್ತ ಚಾಲಕ ನೀಡಿದ ದೂರಿನ ಮೇರೆಗೆ ಎಫ್‌ಐಆರ್‌ ದಾಖಲಿಸಿ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆಟೋ ಚಾಲಕ ಶಿವಕುಮಾರ್‌ ಎಂದಿನಂತೆ

ಯುವತಿಯ ಮಾತಿಗೆ ಮರುಳಾಗಿ 23,000ರೂ.ಕಳೆದುಕೊಂಡ ಚಾಲಕ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಮಂಗಳೂರು, ಆ.10. ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ವಿಖ್ಯಾತ್ ವಿಕ್ಕಿ ಬಪ್ಪಲ್ (29) ಎಂಬಾತನನ್ನು ಉರ್ವಾ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ ಎನ್ನಲಾಗಿದೆ. ಪ್ರಕರಣವೊಂದಕ್ಕೆ ಜಾಮೀನು ಸಿಕ್ಕಿದ್ದು, ಈತನ ವಿರುದ್ಧ ಮಂಗಳೂರು ನಗರ, ಇತರ ಠಾಣೆಗಳಲ್ಲಿ ಸುಮಾರು 11 ಪ್ರಕರಣಗಳು ಇದ್ದು, ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು ಎಂದು ತಿಳಿದುಬಂದಿದೆ.

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ, ಆ.09. ಮೊಬೈಲ್ ಚಾರ್ಜ್ ಹಾಕುವ ವೇಳೆ ವಿದ್ಯುತ್ ಶಾಕ್ ತಗುಲಿ 15 ವರ್ಷದ ಬಾಲಕ ಮೃತಪಟ್ಟಿದ್ದು, ಬಾಲಕನನ್ನು ರಕ್ಷಿಸಲು ಯತ್ನಿಸಿದಾಗ ಆತನ ತಾಯಿಗೂ ವಿದ್ಯುತ್ ಸ್ಪರ್ಶವಾಗಿ ಕೊನೆಯುಸಿರೆಳೆದ ಘಟನೆ ವರದಿಯಾಗಿದೆ. ಈ ಬಗ್ಗೆ ಪೊಲೀಸ್ ಅಧಿಕಾರಿ ಮಹೇಶ್ ಪಾಂಡೆ ಮಾತನಾಡಿ ” ವಿದ್ಯುತ್ ಸ್ಪರ್ಶದಿಂದ ತಾಯಿ-ಮಗ ಮೃತಪಟ್ಟಿದ್ದಾರೆ” ಎಂದು ತಿಳಿಸಿದ್ದಾರೆ. ರೋಹಿತ್ ಜೈಸ್ವಾಲ್ (15) ಬಾಲಕ ರಾತ್ರಿ ತನ್ನ ತಾಯಿ ರಾಮ್ ಸಹೇಲಿಯೊಂದಿಗೆ ತಮ್ಮ ಮನೆಯೊಳಗೆ ಮಲಗಿದ್ದರು. ರಾತ್ರಿ ಎಚ್ಚರಗೊಂಡು ಮೊಬೈಲ್ ಚಾರ್ಜ್

ವಿದ್ಯುತ್ ಸ್ಪರ್ಶಗೊಂಡು ತಾಯಿ-ಮಗ ಸ್ಥಳದಲ್ಲೇ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ

(ನ್ಯೂಸ್ ಕಡಬ)newskadaba.com ಜೈಪುರ, ಆ.09. ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಅತ್ಯಾಚಾರ ಹಾಗೂ ಕೊಲೆ ಪ್ರಕರಣಗಳಿಗೆ ಕಡಿವಾಣ ಬೀಳುತ್ತಿಲ್ಲ. ಇದೀಗ ಮತ್ತೊಂದು ಘನ ಘೋರ ಘಟನೆ ವರದಿಯಾಗಿದೆ. ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕರು ವಿಚಾರ ಬಾಯ್ಬಿಟ್ಟರೆ ಇಡೀ ಕುಟುಂಬವನ್ನೇ ಹತ್ಯೆ ಮಾಡೋದಾಗಿ ಬೆದರಿಸಿದ್ದಾರೆ. ಹೀಗಾಗಿ ರೇಪ್ ವಿಚಾರ ರಹಸ್ಯವಾಗಿಟ್ಟ ಬಾಲಕಿ ಗರ್ಭಿಣಿಯಾಗಿದ್ದಾಳೆ. ತೀವ್ರ ಹೊಟ್ಟೆ ನೋವಿನ ಕಾರಣ ಪೋಷಕರು ಆಸ್ಪತ್ರೆ ದಾಖಲಿಸಿದ ಬೆನ್ನಲ್ಲೇ ಮಗುವಿಗೆ ಜನ್ಮ ನೀಡಿದ್ದಾಳೆ ಎನ್ನಲಾಗಿದೆ. ಮಗುವಿಗೆ ಜನ್ಮ

ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮತ್ತೆ ಅಪ್ತಾಪ್ತೆ ಮೇಲೆ ಸಾಮೂಹಿಕ ಅತ್ಯಾಚಾರ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಆ.09. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಇಲ್ಲದ ವೇಳೆ ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಒಂದೂವರೆ ತಿಂಗಳ ಮಗು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮುಳಿಕಾರ್ ನಿವಾಸಿ ಬಾಲಕೃಷ್ಣ ಮತ್ತು ಸವಿತಾ ದಂಪತಿಯ 1.5 ತಿಂಗಳು ಹೆಣ್ಣು ಮಗು ಅಂಶಿಕಾ ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಮಗುವಿನಲ್ಲಿ ಕಫ ಸಮಸ್ಯೆ ಕಾಣಿಸಿಕೊಂಡಿತ್ತು ಎಂದು ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಅಂಶಿಕಾಳನ್ನು ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಡಾಕ್ಟರ್ ಇಲ್ಲದ ವೇಳೆ ನರ್ಸ್ ಇಂಜೆಕ್ಷನ್

ಬೆಳ್ತಂಗಡಿ: ಸಿಬ್ಬಂದಿ ನಿರ್ಲಕ್ಷ್ಯದಿಂದ ಕಂದಮ್ಮ ಮೃತ್ಯು – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಮಂಗಳೂರು, ಆ.09. ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಸುರತ್ಕಲ್ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತನನ್ನು ಮೊಹಮ್ಮದ್ ನೌಷದ್ ಯಾನೆ ಉಲ್ಲಂಜೆ ನೌಷದ್(28) ಎಂದು ಗುರುತಿಸಲಾಗಿದೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ದೀಪಕ್ ರಾವ್ ಕೊಲೆ ಪ್ರಕರಣ ಸೇರಿದಂತೆ 4 ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡು ವಿಚಾರಣೆ ಸಮಯ ನ್ಯಾಯಾಲಯಕ್ಕೆ

ಮಂಗಳೂರು: ಸಿಸಿಬಿ ಕಾರ್ಯಾಚರಣೆ – ಕುಖ್ಯಾತ ಆರೋಪಿ ಅರೆಸ್ಟ್ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top