crime

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್

(ನ್ಯೂಸ್ ಕಡಬ) newskadaba.com ಸಿದ್ದಾಪುರ, ಆ. 07.  ವ್ಯಕ್ತಿಯೋರ್ವ ತನ್ನ ಮನೆಯ ಹಿಂಭಾಗದ ತೋಟದಲ್ಲಿ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆಸಿರುವುದನ್ನು ಪತ್ತೆ ಹಚ್ಚಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತನನ್ನು ಸಿದ್ದಾಪುರ ಸಮೀಪದ ಗುಡ್ಲೂರು ಚನ್ನಮಗಿ ನಿವಾಸಿ ಕೆ.ಆರ. ಕಿರಣ್ ಅಲಿಯಾಸ್ ಐರಿ ಕಿರಣ್ ಎಂದು ಗುರುತಿಸಲಾಗಿದೆ. ಆರೋಪಿಯು ತನ್ನ ಮನೆಯ ಹಿಂಭಾಗದಲ್ಲಿನ ಕಾಫಿ ತೋಟದಲ್ಲಿ ಅಕ್ರಮವಾಘಿ ಗಾಂಜಾ  ಬೆಳೆಸಿರುವ ಕುರಿತು ಖಚಿತ ಮಾಹಿತಿ ಮೇರೆಗೆ ಮಡಿಕೇರಿ ಪೊಲೀಸರು ದಾಳಿ ನಡೆಸಿ, ಗಾಂಜಾ ಸಹಿತ ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಕಾಫಿ ತೋಟದಲ್ಲಿ ಗಾಂಜಾ ಬೆಳೆ- ಆರೋಪಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..!

(ನ್ಯೂಸ್ ಕಡಬ)newskadaba.com ಲಕ್ನೋ, ಆ.07. ಅತ್ತೆ-ಮಾವ ತವರು ಮನೆಗೆ ಹೋಗಲು ಬಿಡಲಿಲ್ಲವೆಂದು ಬೇಸರಗೊಂಡು ನವ ವಿವಾಹಿತೆಯೊಬ್ಬಳು ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ . ಮೃತ ನಿಶಾ ಅವರ ಪತಿ ನೌಕಾಪಡೆಯ ಉದ್ಯೋಗಿಯಾಗಿದ್ದರು. ಅವರು ಕರ್ತವ್ಯಕ್ಕೆ ಸೇರಲು ಹೋದ ನಂತರ ನಿಶಾ ತವರು ಮನೆಗೆ ಹೋಗಲು ಬಯಸಿದ್ದಳು. ಆದರೆ ಅತ್ತೆ ಮಾವ ನಿರಾಕಸಿದರು ಎಂದು ವರದಿ ತಿಳಿಸಿದೆ.

ಕ್ಷುಲ್ಲಕ ಕಾರಣಕ್ಕೆ ನವವಿವಾಹಿತೆ ಆತ್ಮಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಅಲಹಾಬಾದ್‌, ಆ. 07. ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿ ನಂತರ ಆತನನ್ನೇ ಮದ್ವೆಯಾದ ಯುವತಿಗೆ ಅಲಾಹಾಬಾದ್ ಹೈಕೋರ್ಟ್ 10 ಸಾವಿರ ರೂ. ದಂಡ ವಿಧಿಸಿದ ಘಟನೆ ವರದಿಯಾಗಿದೆ. ಮಹಿಳೆಯೊಬ್ಬರು ದಾಖಲಿಸಿದ ಎಫ್‌ಐಆರ್ ಸುಳ್ಳು ಹಾಗೂ ಅದರಲ್ಲಿರುವ ಆರೋಪಿ ಹಾಗೂ ಸಂತ್ರಸ್ತೆ ಇಬ್ಬರೂ ಪರಸ್ಪರ ಮದ್ವೆಯಾಗಿ ಸಂತೋಷದ ಜೀವನವನ್ನು ನಡೆಸುತ್ತಿದ್ದಾರೆ ಎಂಬುದನ್ನು ಗಮನಿಸಿದ ಕೋರ್ಟ್, ಆರೋಪಿತ ವ್ಯಕ್ತಿ ವಿರುದ್ಧ ದಾಖಲಾಗಿದ್ದ ಅತ್ಯಾಚಾರ ಪ್ರಕರಣವನ್ನು ರದ್ದುಗೊಳಿಸಿದೆ. ಅಲ್ಲದೇ ಈ ವೇಳೆ ನ್ಯಾಯಾಧೀಶರು, ಸುಳ್ಳು

ಯುವಕನೋರ್ವನ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ – ಯುವತಿಗೆ ದಂಡ ವಿಧಿಸಿದ ಹೈಕೋರ್ಟ್..! Read More »

ರಾಷ್ಟ್ರೀಯ ನ್ಯೂಸ್

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ

(ನ್ಯೂಸ್ ಕಡಬ)newskadaba.com ನವದೆಹಲಿ, ಆ.07. ರಾಷ್ಟ್ರ ರಾಜಧಾನಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ವಾರ್ಡ್‌ನಿಂದ ರೋಗಿಗಳನ್ನು ಶಿಫ್ಟ್ ಮಾಡಲಾಗಿದೆ ಎಂದು ವರದಿ ತಿಳಿದುಬಂದಿದೆ. ಮಧ್ಯಾಹ್ನ 11.45ಕ್ಕೆ ಈ ಘಟನೆ ಸಂಭವಿಸಿದ್ದು, ಕೂಡಲೇ ಸ್ಥಳಕ್ಕಾಗಮಿಸಿದ ಆರು ಅಗ್ನಿಶಾಮಕ ವಾಹನಗಳು ಆಗಮಿಸಿ ಬೆಂಕಿ ನಂದಿಸಿವೆ. ಎಂಡೋಸ್ಕೋಪಿ ನಡೆಸುವ ಕೊಠಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಈ ಸ್ಥಳ ಕಟ್ಟಡದ ಎರಡನೇ ಮಹಡಿಯಲ್ಲಿ ಎಮರ್ಜೆನ್ಸಿ ವಾರ್ಡ್ ಸಮೀಪದಲ್ಲೇ ಇತ್ತು. ಹೀಗಾಗಿ ಭಾರಿ ಆತಂಕದ ಸ್ಥಿತಿ ನಿರ್ಮಾಣವಾಗಿತ್ತು. ಕೂಡಲೇ ಅಲ್ಲಿದ್ದ ರೋಗಿಗಳನ್ನು ಬೇರೆಡೆ ಸ್ಥಳಾಂತರಿಸಲಾಯಿತು.

ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ – ರೋಗಿಗಳ ಸ್ಥಳಾಂತರ Read More »

ರಾಷ್ಟ್ರೀಯ ನ್ಯೂಸ್

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಆ.07. ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ನೀಡಿದ್ದ ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1.50 ಲಕ್ಷ ರೂ. ದಂಡ ವಿಧಿಸಿ ಶಿವಮೊಗ್ಗದ ಹೆಚ್ಚುವರಿ ಜಿಲ್ಲಾ ಮತ್ತು ಪ್ರಧಾನ ನ್ಯಾಯಾಲಯದ ಎಫ್‌ಟಿಎಸ್‌ಸಿ(ತ್ವರಿತ ವಿಶೇಷ ನ್ಯಾಯಾಲಯ)-2(ಪೋಕ್ಸ)ರ ನ್ಯಾಯಾಧೀಶರ ತೀರ್ಪು ನೀಡಿದೆ. ಶಿವಮೊಗ್ಗ ನಗರದ 27 ವರ್ಷದ ವ್ಯಕ್ತಿ ಶಿಕ್ಷೆಗೆ ಒಳಗಾದ ಆರೋಪಿ ಎಂದು ತಿಳಿದುಬಂದಿದೆ. ಕಳೆದ ವರ್ಷ 2022ರಲ್ಲಿ 14 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ . ಈ ಬಗ್ಗೆ

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಲಬುರಗಿ, ಆ.07. ಇಲ್ಲೊಬ್ಬ ವಿದ್ಯಾರ್ಥಿ ಆನ್ಲೈ್ನ್‍ ಗೇಮ್ಗೆಳಲ್ಲಿ ಲೀನನಾಗಿ ಹಣ ಕಟ್ಟಿ ಪಬ್ಜಿ್ ಆಟವಾಡುತ್ತಿದ್ದ. ಕೊನೆಗೆ ಈತ ಸಾಲ ತೀರಿಸಲಾಗದೇ ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೂಲತಃ ಬೆಟ್ಟಿಂಗ್‍ ಆಟವಲ್ಲ. ಈ ಆಟದಲ್ಲಿ ಕೆಲ ವಿಶಿಷ್ಟ ವರ್ಚ್ಯುವಲ್ ವಸ್ತುಗಳನ್ನು ಖರೀದಿ ಮಾಡಬಹುದಾಗಿದೆ. ಇದರಿಂದ ಆಟಗಾರ ಬಹಳ ಶಕ್ತಿಶಾಲಿ ಎಂಬ ಸಂದೇಶ ಇತರ ಆಟಗಾರರಿಗೆ ಸಿಗುತ್ತದೆ. ಅಂತಹ ವಸ್ತುಗಳನ್ನು ಖರೀದಿಸಲು ಈ ಯುವಕ ಸಾಲವನ್ನು ಮಾಡಿದ್ದು, ಮೃತ ಯುವಕನನ್ನು ಪ್ರವೀಣ್ ಪಾಟೀಲ್(20) ಎಂದು ಗುರುತಿಸಲಾಗಿದೆ. ಈತ ನೇಣು

’ಪಬ್ ಜಿ’ ಹಣ ಕಳೆದುಕೊಂಡ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಮನೆಯ ಕೋಣೆಯಲ್ಲಿ ಕಿಟಕಿಯ ಬಳಿ ಕುಳಿತು ಓದುತ್ತಿರುವಾಗ ವೇಳೆ ಆರೋಪಿಯೋರ್ವ ಮನೆಯ ಹೊರಗೆ ನಿಂತು ಕಿಟಕಿಯ ಮೂಲಕ ಮೈಗೆ ಕೈ ಹಾಕಿ ಅನುಚಿತವಾಗಿ ವರ್ತಿಸಿದ ಘಟನೆ ವರದಿಯಾಗಿದೆ. ಆರೋಪಿಯು ಕೆಲವು ಸಮಯಗಳಿಂದ ದೂರದಾರರನ್ನು ಪ್ರೀತಿಸುವುದಾಗಿ ಹೇಳುತ್ತಾ ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದು, ಕಿಟಕಿಯ ಮೂಲಕ ಮೈಗೆ ಕೈಹಾಕಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ. ಈ ಕುರಿತು ಬಂಟ್ವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯುವಕನಿಂದ ಅನುಚಿತ ವರ್ತನೆ – ದೂರು ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾವಲ್ಪಿಂಡಿ, ಆ. 07. ಹಜಾರಾ ಎಕ್ಸ್‌ ಪ್ರೆಸ್ ರೈಲಿನ ಹಲವು ಬೋಗಿಗಳು ಹಳಿತಪ್ಪಿದ ಪರಿಣಾಮ ಕನಿಷ್ಠ 15 ಜನರು ಮೃತಪಟ್ಟು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಪಾಕಿಸ್ತಾನದ ಶೆಹಜಾದ್ ಪುರ ಮತ್ತು ನವಾಬ್ ಶಾ ನಡುವಿನ ಸರ್ಹರಿ ರೈಲು ನಿಲ್ದಾಣದ ಬಳಿ ನಡೆದಿದೆ. ಸ್ಥಳೀಯ ಮಾಧ್ಯಮಗಳ ವರದಿಗಳ ಪ್ರಕಾರ, ಹಲವು ಪ್ರಯಾಣಿಕರು ಬೋಗಿಗಳಲ್ಲಿ ಸಿಲುಕಿದ್ದಾರೆ. ಅಪಘಾತವಾದ ರೈಲು ಕರಾಚಿಯಿಂದ ಪಾಕಿಸ್ತಾನದ ಪಂಜಾಬ್‌ ಗೆ ಹೊರಟಿತ್ತು. ಗಾಯಗೊಂಡವರನ್ನು ಕೂಡಲೇ ನವಾಬ್ ಶಾದಲ್ಲಿರುವ ಮೆಡಿಕಲ್

ಹಳಿ ತಪ್ಪಿದ ರೈಲು – 15 ಮಂದಿ ಮೃತ್ಯು, 40ಕ್ಕೂ ಅಧಿಕ ಮಂದಿಗೆ ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..!

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಆ. 07. ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ಕಳೆದ 16 ತಿಂಗಳಲ್ಲಿ 60ಕ್ಕೂ ಹೆಚ್ಚು ಗರ್ಭಿಣಿಯರಿಗೆ ಎಚ್‌ಐವಿ ಪಾಸಿಟಿವ್ ಕಂಡುಬಂದಿದೆ ಎಂದು ಆರೋಗ್ಯ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿರುವುದಾಗಿ ವರದಿ ತಿಳಿಸಿದೆ. ಮೀರತ್ ನ ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನ ಎ.ಆರ್.ಟಿ. ಕೇಂದ್ರದ ವರದಿಯ ನಂತರ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ಬೆಳಕಿಗೆ ಬಂದಿವೆ. ಲಾಲಾ ಲಜಪತ್ ರಾಯ್ ವೈದ್ಯಕೀಯ ಕಾಲೇಜಿನಲ್ಲಿ ಮಕ್ಕಳ ಹೆರಿಗೆಗಾಗಿ ಬಂದ 81 ಗರ್ಭಿಣಿ ಮಹಿಳೆಯರಲ್ಲಿ ಎಚ್‌ಐವಿ ದೃಢಪಟ್ಟಿದ್ದು,

‘ಸರ್ಕಾರಿ ಆಸ್ಪತ್ರೆ’ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗರ್ಭಿಣಿಯರಿಗೆ AIDS ಸೋಂಕು..! Read More »

ರಾಷ್ಟ್ರೀಯ ನ್ಯೂಸ್

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 07. ಫೋನ್‌-ಇನ್‌ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಕೇಳಿಬಂದ ದೂರಿನ ಪ್ರಕಾರ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದಡಿ ಇಬ್ಬರು ತಳ್ಳುಗಾಡಿ ವ್ಯಾಪಾರಿಗಳನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಅಮರ್‌ ಮತ್ತು ಸೂರಜ್‌ ಎಂದು ಗುರುತಿಸಲಾಗಿದೆ. ಇವರು ನಡೆದುಕೊಂಡು ಹೋಗುವ ಮಕ್ಕಳ ಜತೆ ಅಸಭ್ಯವಾಗಿ ವರ್ತಿಸುತ್ತಿದ್ದುದಲ್ಲದೇ ಮಕ್ಕಳು ಹೋಗುವಾಗ ಅವರನ್ನು ಹಿಂಬಾಲಿಸಿ, ಕೆಟ್ಟ ದೃಷ್ಠಿಯಿಂದ ನೋಡುವ ಆರೋಪ ಕೇಳಿಬಂದಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿದ ಕಮಿಷನರ್‌ ಕುಲದೀಪ್‌

ಮಕ್ಕಳ ಮೇಲೆ ವಕ್ರದೃಷ್ಟಿ – ತಳ್ಳುಗಾಡಿ ವ್ಯಾಪಾರಿಗಳಿಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top