Dailyhunt

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು

(ನ್ಯೂಸ್ ಕಡಬ) newskadaba.com ಕೇರಳ, ಫೆ.25. ಬಸ್ ಕ್ಷೇತ್ರದಲ್ಲಿ ಯುವ ಜನತೆಯಲ್ಲಿ ಕ್ರಾಂತಿಯನ್ನೇ ಸೃಷ್ಟಿಸಿದ್ದ ಕೇರಳದ ‘ಕೊಂಬನ್’ ಟ್ರಾವೆಲ್ಸ್ ಇನ್ಮುಂದೆ ಕರ್ನಾಟಕದಲ್ಲಿ ತನ್ನ ಸೇವೆಯನ್ನು ಮುಂದುವರಿಸಲಿದ್ದು, ಇದು ಕರ್ನಾಟಕದ ಬಸ್ ಪ್ರೇಮಿಗಳಲ್ಲಿ ಸಂತಸವನ್ನು ಉಂಟುಮಾಡಿದೆ. ಬಸ್ಸಿನ ಮೂಲ ದರಕ್ಕಿಂತಲೂ ಹೆಚ್ಚಿನ ಹಣ ವ್ಯಯಿಸಿ ಸೌಂಡ್ಸ್ & ಲೈಟಿಂಗ್ಸ್ ನೊಂದಿಗೆ ತನ್ನದೇ ವಿಶಿಷ್ಟ ಶೈಲಿಯ ಪೈಂಟಿಂಗ್ ಮೂಲಕ ಯುವ ಜನತೆಯಲ್ಲಿ ಬಸ್ ಬಗ್ಗೆ ಹೊಸ ಕಲ್ಪನೆಯನ್ನು ಮೂಡಿಸಿದ್ದ ಕೊಂಬನ್ ಟ್ರಾವೆಲ್ಸ್ ಹುಟ್ಟಿಕೊಂಡಿರುವುದೇ ಒಂದು ರೋಚಕ ಕಥೆ. ಆನೆಯನ್ನು ಖರೀದಿಸಲೆಂದು […]

ಕೇರಳದ ‘ಕೊಂಬನ್ ಟ್ರಾವೆಲ್ಸ್’ ಆಟ ಇನ್ಮುಂದೆ ಕರ್ನಾಟಕದಲ್ಲಿ ಶುರು Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಎ.20. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಕೆಲವು ರಾಜ್ಯಗಳಲ್ಲಿ ಭಾಗಗಳಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು, ಮುಂದಿನ ಐದು ದಿನಗಳ ಕಾಲ ಮುಂದುವರಿಯಲಿದೆ. ಇದರ ಜೊತೆಗೆ ಏಪ್ರಿಲ್ 21ರ ವರೆಗೆ ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಲಿ ಕಲ್ಲು ಸಹಿತ ಮಳೆಯಾಗಲಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಸೇರಿದಂತೆ ದಕ್ಷಿಣ ಭಾರತದಲ್ಲಿ ಮುಂದಿನ 5

ಕರ್ನಾಟಕ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಮುಂದಿನ 5 ದಿನಗಳ ಭಾರೀ ಮಳೆ ➤ ಹವಾಮಾನ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು

ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ

(ನ್ಯೂಸ್ ಕಡಬ) newskadaba.com ನವದೆಹಲಿ, ಆ.13. ನಿಮ್ಮ ಮೊಬೈಲ್ ಫೋನ್ ಗೆ ಕೆಲವೊಮ್ಮೆ ವಿವಿಧ ವಂಚಕರಿಂದ ಸಂದೇಶ ಬರುವುದು ಸಾಮಾನ್ಯವಾಗಿದ್ದು, ಈ ವಂಚನಾ ಜಾಲದಲ್ಲಿ ನೀವು ಸಿಲುಕಿಕೊಂಡರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್ ಖಾಲಿ ಆಗೋದು ಮಾತ್ರ ಗ್ಯಾರಂಟಿ. ನಿಮ್ಮ ಮೊಬೈಲ್ ಗೆ ‘ಆತ್ಮೀಯ ಗ್ರಾಹಕರೇ, ನಿಮ್ಮ xxxxxx ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗುವುದು’ ಅಥವಾ ಯಾವುದೋ ಖಾತೆ ಸಂಖ್ಯೆಯನ್ನು ನಮೂದಿಸಿ ವಿವಿಧ ರೀತಿಯ ಮೆಸೇಜ್ ಬರುವ ಸಾಧ್ಯತೆಗಳಿರುತ್ತವೆ. ನೀವು ಈ ಲಿಂಕ್ ಅನ್ನು ಕ್ಲಿಕ್ ಮಾಡಿದ ತಕ್ಷಣವೇ ನಿಮ್ಮ

ಯಾವುದೇ ಕಾರಣಕ್ಕೂ ಈ ರೀತಿಯ ಲಿಂಕನ್ನು ಕ್ಲಿಕ್ ಮಾಡಬೇಡಿ ➤ ಸೈಬರ್ ವಂಚಕರಿದ್ದಾರೆ ಎಚ್ಚರ Read More »

ಕರಾವಳಿ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.12. ರಾಜ್ಯದಲ್ಲಿ ಕಳೆದ ಐದು ದಿನಗಳಲ್ಲಿ ಕನಿಷ್ಠ 242 ಮಕ್ಕಳು ಕೊರೊನಾವೈರಸ್ ಸೋಂಕಿಗೆ ಒಳಗಾಗಿದ್ದು, ಕೊರೋನಾ ಮೂರನೇ ಅಲೆ ಆರಂಭವಾಗಿದೆಯಾ ಎನ್ನುವ ಅನುಮಾನ ಮೂಡಿಬಂದಿದೆ. ಸರ್ಕಾರದ ಅಂಕಿ ಅಂಶಗಳ ಪ್ರಕಾರ ಕಳೆದ 5 ದಿನಗಳಲ್ಲಿ 19 ವರ್ಷಕ್ಕಿಂತ ಕಡಿಮೆ ವಯಸ್ಸಿನ 242 ಮಂದಿಯಲ್ಲಿ ಕೊರೋನಾ ದೃಢಪಟ್ಟಿದ್ದು, ಇದರಲ್ಲಿ 9 ವರ್ಷಕ್ಕಿಂತ ಕಡಿಮೆ ವಯಸ್ಸಿನ 106 ಮಕ್ಕಳು ಹಾಗೂ 9 ರಿಂದ 19 ವರ್ಷದ ಒಳಗಿನ 136 ಮಂದಿ ಸೇರಿದ್ದಾರೆ. ಈ ಹಿಂದೆಯೇ

Big Shocking News ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? ➤ 5 ದಿನಗಳಲ್ಲಿ 242 ಮಕ್ಕಳಿಗೆ ಕೊರೋನಾ ದೃಢ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.09. ಈ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸುಬ್ರಹ್ಮಣ್ಯ ಕುಮಾರಸ್ವಾಮಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿನಿಯರು 625 ರಲ್ಲಿ 625 ಅಂಕ ಪಡೆಯುವ ಮೂಲಕ ರಾಜ್ಯದಲ್ಲಿ ಟಾಪರ್ ಎನಿಸಿಕೊಂಡಿದ್ದಾರೆ. ಸುಳ್ಯ ತಾಲೂಕಿನ ಗುತ್ತಿಗಾರು ನಿವಾಸಿ ದುರ್ಗೇಶ್ ಮತ್ತು ವೇದಾವತಿ ದಂಪತಿಗಳ ಪುತ್ರಿ ಅನನ್ಯ ಹಾಗೂ ಸುಬ್ರಹ್ಮಣ್ಯದ ವೆಲೇರಿಯನ್ ಡಿಸೋಜಾ ಮತ್ತು ತೆರೆಸಾ ಡಿಸೋಜಾ ದಂಪತಿಗಳ ಪುತ್ರಿ ವೆನೆಸಾ ಶರಿನಾ ಡಿಸೋಜಾ 625 ಅಂಕ ಪಡೆದ ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿನಿಗಳಾಗಿದ್ದಾರೆ. ಕಳೆದ ವರ್ಷ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯ ಈ ಬಾರಿಯೂ ಟಾಪ್ ➤ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಇಬ್ಬರಿಗೆ 625 ರಲ್ಲಿ 625 ಅಂಕ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಆ.06. ಮೊಬೈಲ್ ಮೂಲಕ ಹುಟ್ಟಿಕೊಂಡ ಪ್ರೀತಿಯಿಂದ ಅಪ್ರಾಪ್ತ ಯುವತಿಯು ಸ್ಥಳೀಯ ಯುವಕನ ಜೊತೆ ನಾಪತ್ತೆಯಾಗಿರುವ ಘಟನೆ ಕಡಬ ಸಮೀಪದ ಕಳಾರದಿಂದ ವರದಿಯಾಗಿದೆ. ಕಳಾರ ನಿವಾಸಿ ಹದಿನೇಳು ವರ್ಷದ ಯುವತಿಯು ಗುರುವಾರದಂದು ಕಾಲೇಜಿಗೆಂದು ಮನೆಯಿಂದ ತೆರಳಿದ್ದು, ಸಂಜೆಯವರೆಗೂ ಮನೆಗೆ ಬಾರದೆ ನಾಪತ್ತೆಯಾಗಿದ್ದಾಳೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡಿಕಾಡಿದ ಆಕೆಯ ಮನೆಯವರು ಯಾವುದೇ ಸುಳಿವು ಸಿಗದ ಹಿನ್ನೆಲೆಯಲ್ಲಿ ಇಂದು ಕಡಬ ಠಾಣೆಗೆ ದೂರು ನೀಡಿದ್ದಾರೆ. ಇದೇ ವೇಳೆ ಸ್ಥಳೀಯ ನಿವಾಸಿ 24 ವರ್ಷದ ಹನೀಫ್ ಎಂಬಾತ

ಆನ್‌ಲೈನ್ ತರಗತಿಯ ಅವಾಂತರ ➤ ಕಾಲೇಜಿಗೆಂದು ತೆರಳಿದ ಅಪ್ರಾಪ್ತ ಯುವತಿ ನಾಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..?

(ನ್ಯೂಸ್ ಕಡಬ) newskadaba.com ನವದೆಹಲಿ, ಆ.01. ದೇಶದಲ್ಲಿ ಕೊರೋನಾ ಎರಡನೇ ಅಲೆಯ ತೀವ್ರತೆ ಕಡಿಮೆಯಾಗುತ್ತಿರುವುದರ ನಡುವೆಯೇ ಇದೀಗ ಕೊರೋನಾ ಸೋಂಕಿನಲ್ಲಿ ದಿಢೀರ್ ಏರಿಕೆ ಕಂಡುಬಂದಿದ್ದು, ಮೂರನೇ ಅಲೆಯ ಆರಂಭವೇ ಎನ್ನುವ ಪ್ರಶ್ನೆ ಹುಟ್ಟಿದೆ‌. ಆಗಸ್ಟ್ ಎರಡನೇ ವಾರದಲ್ಲಿ ಕೊರೋನಾ ಮೂರನೇ ಅಲೆ ಆರಂಭಗೊಂಡು ಅಕ್ಟೋಬರ್ ವೇಳೆಗೆ ತನ್ನ ಪಾರಮ್ಯ ಮೆರೆಯಲಿದೆ ಎಂದು ಈ ಹಿಂದೆಯೇ ತಜ್ಞರು ಎಚ್ಚರಿಕೆ ನೀಡಿದ್ದರು. ಅದಕ್ಕೆ ಪುರಾವೆ ಎಂಬಂತೆ ಇದೀಗ ಕೇರಳ, ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಏರಿಕೆಯಾಗಿದೆ. ತಮಿಳುನಾಡು, ಕರ್ನಾಟಕದಲ್ಲೂ ಕೊರೋನಾ

BIG NEWS: ದೇಶದಲ್ಲಿ ಕೊರೋನಾ ಮೂರನೇ ಅಲೆ ಆರಂಭ..? Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜು.15. ವಿಪರೀತ ರಕ್ತಸ್ರಾವದಿಂದಾಗಿ ಕಡಬದ ಬಾಣಂತಿ ಮಹಿಳೆಯೋರ್ವರು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬುಧವಾರದಂದು ನಡೆದಿದೆ. ಮೃತ ಮಹಿಳೆಯನ್ನು ಕಡಬ ತಾಲೂಕು ಕೊಂಬಾರು ಗ್ರಾಮದ ಇಡ್ಯಡ್ಕ ಕಟ್ಟೆ ನಿವಾಸಿ ಚೇತನ್ ಎಂಬವರ ಪತ್ನಿ ವಿದ್ಯಾ(30) ಎಂದು ಗುರುತಿಸಲಾಗಿದೆ. ಮೃತರನ್ನು ಹೆರಿಗೆಗಾಗಿ ಮಂಗಳೂರಿನ ಲೇಡಿಗೋಷನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಬುಧವಾರ ಬೆಳಗಿನ ಜಾವ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ ಎನ್ನಲಾಗಿದೆ. ಬಳಿಕ ತೀವ್ರ ರಕ್ತಸ್ರಾವದಿಂದಾಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ‌.      

ಕಡಬ: ಅವಳಿ ಮಕ್ಕಳಿಗೆ ಜನ್ಮ ನೀಡಿದ ಬಾಣಂತಿ ➤ ತೀವ್ರ ರಕ್ತಸ್ರಾವದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್
Scroll to Top