ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳ ಆಕ್ರೋಶ
(ನ್ಯೂಸ್ ಕಡಬ) newskadaba.com ಮಂಗಳೂರು, ಅ. 05. ಮಂಗಳೂರು ನಗರದ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಎಂದಿನಂತೆ ಈ ವರ್ಷ ವಾಡಿಕೆಯ ಮಳೆಯಾಗದೇ ಬೇಸಿಗೆಯಲ್ಲಿ ನೀರಿಗೆ ಹಾಹಾಕಾರ ಸೃಷ್ಟಿಯಾಗುವುದು ಖಂಡಿತ. ಇದನ್ನು ಸರಿಪಡಿಸಲು ಹೆಣಗಾಡುತ್ತಿರುವ ವೇಳೆ ಅಭಿವೃದ್ಧಿಯ ಹೆಸರಿನಲ್ಲಿ ಪರಿಸರಕ್ಕೆ ಮಾರಕವಾಗುವ ಕಾರ್ಯವಾಗುತ್ತಿದೆ. ಮಂಗಳೂರು ನಗರದ ನಂತೂರಿನಿಂದ ಕೆಪಿಟಿವರೆಗೆ ಉಂಟಾಗುವ ಟ್ರಾಫಿಕ್ ಜಾಮ್ ಕಡಿಮೆ ಮಾಡುವ ಉದ್ದೇಶದಿಂದ ಹೆದ್ದಾರಿ ಪ್ರಾಧಿಕಾರವು ಫ್ಲೈಓವರ್ ನಿರ್ಮಾಣಕ್ಕೆ ಸಿದ್ಧತೆ ನಡೆಸುತ್ತಿದ್ದು, ಇದಕ್ಕಾಗಿ ರಸ್ತೆಯ ಎರಡೂ ಬದಿಗಳಲ್ಲಿರುವ ಮರಗಳನ್ನು ತೆರವು ಮಾಡಲು ಗುರುತಿಸಲಾಗಿತ್ತು. […]
ಮಂಗಳೂರು: ಅಭಿವೃದ್ಧಿ ಹೆಸರಲ್ಲಿ ಮರಗಳ ಮಾರಣಹೋಮ – ಪರಿಸರ ಪ್ರೇಮಿಗಳ ಆಕ್ರೋಶ Read More »
ಕರಾವಳಿ

