dakshina kannada

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಚಿರತೆ ದಾಳಿಗೆ ದನವೊಂದು ಬಲಿಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕುದ್ಯಾರು ಗ್ರಾಮದಲ್ಲಿ ಸಂಭವಿಸಿದೆ. ಕುದ್ಯಾಡಿ ಗ್ರಾಮದ ಕೆಳಗಿನಬೆಟ್ಟು ಮನೆಯ ಶೀನ ಪೂಜಾರಿ ಎಂಬವರು ದನವನ್ನು ತೋಟದಲ್ಲಿ ಮೇಯಲು ಬಿಟ್ಟಿದ್ದ ವೇಳೆ, ಚಿರತೆಯೊಂದು ಏಕಾಏಕಿ ದಾಳಿ ಮಾಡಿದೆ ಎನ್ನಲಾಗಿದೆ. ಚಿರತೆ ದಾಳಿಗೆ ದನ ಮೃತಪಟ್ಟಿದ್ದು, ಕೂಡಲೇ ಸ್ಥಳೀಯ ಪಂಚಾಯತ್ ಸದಸ್ಯರೊಬ್ಬರಿಗೆ ಕರೆ ಮಾಡಿ ವಿಷಯ ತಿಳಿಸಿದ್ದು ಅವರು ಅರಣ್ಯ ಇಲಾಖೆಗೆ ಮಾಹಿತಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.  

ಬೆಳ್ತಂಗಡಿ: ಚಿರತೆ ದಾಳಿಗೆ ಜಾನುವಾರು ಬಲಿ ➤ ಬೋನ್ ಅಳವಡಿಸಿದ ಅರಣ್ಯ ಇಲಾಖೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಮಂಗಳೂರು, ಜ. 02. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‍ ರಾಜ್ ಇಲಾಖೆಯ ಸಹಯೋಗದಲ್ಲಿ 2023ರ ಜನವರಿ 6ರ ಶುಕ್ರವಾರ ಬೆಳಿಗ್ಗೆ 10ಕ್ಕೆ ನಗರದ ಕರಾವಳಿ ಉತ್ಸವ ಮೈದಾನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿದೆ. ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೀನುಗಾರಿಕೆ, ಬಂದರು ಹಾಗೂ ಒಳನಾಡು

ಮಂಗಳೂರು: ಜ. 06ರಂದು ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾಕೂಟ Read More »

ಕರಾವಳಿ, ಕರ್ನಾಟಕ

ಡಿ. 31ರಿಂದ ಕೈಮಗ್ಗ ಸಚಿವರ ಜಿಲ್ಲಾ ಪ್ರವಾಸ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಕೈಮಗ್ಗ, ಜವಳಿ, ಸಕ್ಕರೆ ಮತ್ತು ಕಬ್ಬು ಅಭಿವೃದ್ಧಿ ಸಚಿವರಾದ ಶಂಕರ ಬಿ. ಪಾಟೀಲ ಮುನೇನಕೊಪ್ಪ ಅವರು ಡಿ.31ರಿಂದ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ಡಿ.31ರ ಶನಿವಾರ ಮಧ್ಯಾಹ್ನ 2.30ಕ್ಕೆ ಉಡುಪಿಯಿಂದ ಧರ್ಮಸ್ಥಳ ಆಗಮಿಸುಸಿ, ಸಂಜೆ 5 ಗಂಟೆಗೆ ಧರ್ಮಸ್ಥಳದಿಂದ ಹೊರಟು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ತಲುಪುವರು. ರಾತ್ರಿ 7 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯದಿಂದ ಹೊರಟು 8ಗಂಟೆಗೆ  ಧರ್ಮಸ್ಥಳ ತಲುಪಲಿದ್ದಾರೆ. ನಂತರ ಅಲ್ಲಿ ವಾಸ್ತವ್ಯ ಹೂಡುವರು. 2023ರ ಜನವರಿ 1ರಂದು ಬೆಳಿಗ್ಗೆ

ಡಿ. 31ರಿಂದ ಕೈಮಗ್ಗ ಸಚಿವರ ಜಿಲ್ಲಾ ಪ್ರವಾಸ Read More »

ಕರ್ನಾಟಕ

ದ.ಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪತ್ತೆ…!! ➤ ವಿದೇಶದಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 28. ಸೌದಿ ಅರೇಬಿಯದಿಂದ ಆಗಮಿಸಿದ ಮಂಗಳೂರು ಮೂಲದ ವ್ಯಕ್ತಿಗೆ ಕೋವಿಡ್‌ ದೃಢಪಟ್ಟಿದ್ದು, ಈ ಮೂಲಕ ದ.ಕ ಜಿಲ್ಲೆಯಲ್ಲಿ ಮೊದಲ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮಂಗಳೂರಿನ ವ್ಯಕ್ತಿಯನ್ನು ಅಲ್ಲಿ ಕೋವಿಡ್‌ ತಪಾಸಣೆಗೆ ಒಳಪಡಿಸಿದಾಗ ಕೋವಿಡ್‌ ದೃಢಪಟ್ಟಿತ್ತು. ಅವರ ಗಂಟಲ ದ್ರವ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಯಾವುದೇ ಗುಣಲಕ್ಷಣ ಹೊಂದಿರದ ಕಾರಣ ಅವರನ್ನು ಮಂಗಳೂರಿನ ಅವರ ಮನೆಯಲ್ಲಿ ಗೃಹ ನಿಗಾವಣೆಯಲ್ಲಿರಿಸಲಾಗಿದೆ ಎಂದು ಮೂಲಗಳು

ದ.ಕ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಪತ್ತೆ…!! ➤ ವಿದೇಶದಿಂದ ಬಂದ ವ್ಯಕ್ತಿಗೆ ಕೋವಿಡ್ ದೃಢ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                               

(ನ್ಯೂಸ್ ಕಡಬ) newskadaba.com  ದಕ್ಷಿಣ ಕನ್ನಡ, ಡಿ.23.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡುರು ವ್ಯವಸಾಯ ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ ಕೇಳಿಬಂದಿದೆ. ಸಹಕಾರಿ ಸಂಘದ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯೆ ಹೈಡ್ರಾಮ ನಡೆದಿದೆ ಎಂದು ತಿಳಿದುಬಂದಿದೆ. ಗ್ರಾಹಕರ ಹೆಸರಿನಲ್ಲಿ ಸಂಘದ ಕೆಲ ಪದಾಧಿಕಾರಿಗಳು ಸಾಲ ಪಡೆದ ಆರೋಪ ಮಾಡಲಾಗಿದೆ. ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬ್ಯಾಂಕ್​ಗೆ ಬಂದು ಸಿಬ್ಬಂದಿಯನ್ನು

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 07. ಮಂಗಳೂರಿನ ಯುವ ವಕೀಲರಾದ ಕುಲದೀಪ್ ಶೆಟ್ಟಿ ಅವರ ಮೇಲೆ ಬಂಟ್ವಾಳದ ಪುಂಜಾಲಕಟ್ಟೆ ಠಾಣಾ ಪೊಲೀಸರು ನಡೆಸಿದ ದೌರ್ಜನ್ಯವನ್ನು ವಿರೋಧಿಸಿ ದ‌.ಕ ಜಿಲ್ಲಾ ವಕೀಲರ ಸಂಘದ ವತಿಯಿಂದ ಮಂಗಳೂರು ಕೋರ್ಟ್ ಎದುರು ಬುಧವಾರದಂದು ಪ್ರತಿಭಟನೆ ನಡೆಸಲಾಯಿತು.   ಸಿವಿಲ್ ವ್ಯಾಜ್ಯ ನ್ಯಾಯಾಲಯದಲ್ಲಿ ಇದ್ದು ಎದುರುದಾರರ ವಿರುದ್ದ ಪ್ರತಿಬಂಧಕಾಜ್ಞೆ ಇದ್ದರೂ ಕೂಡಾ ಎದುರುದಾರರ ಸುಳ್ಳು ಫಿರ್ಯಾದಿಯ ಆಧಾರದ ಮೇಲೆ ಯುವ ವಕೀಲ ಕುಲದೀಪ್ ಶೆಟ್ಟಿ ಅವರ ಮೇಲೆ ಎಫ್ ಐ ಆರ್

ಯುವ ವಕೀಲರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ ➤ ದ.ಕ ಜಿಲ್ಲಾ ವಕೀಲರಿಂದ ಪ್ರತಿಭಟನೆ Read More »

ಕರಾವಳಿ, ಕರ್ನಾಟಕ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…?

(ನ್ಯೂಸ್ ಕಡಬ) newskadaba.com ಮ0ಗಳೂರು, ಆ.05. ಬಾಲ್ಯವಿವಾಹ ಒಂದು ಸಾಮಾಜಿಕ ಪಿಡುಗಾಗಿದ್ದು ಈ ಪದ್ಧತಿಯನ್ನು ಸಂಪೂರ್ಣವಾಗಿ ತೊಡೆದು ಹಾಕಲು ಸಮಾಜದಲ್ಲಿನ ಸರ್ವರ ಸಹಕಾರ ಅತ್ಯಗತ್ಯವಾಗಿದೆ. ಬಾಲ್ಯವಿವಾಹ ನಿಷೇಧ ಕಾಯಿದೆಯನ್ನು ಜಾರಿಗೆ ತಂದಿದ್ದರೂ ಕೂಡ ಇನ್ನೂ ಕೂಡ ಬೆರಳಿಣಿಕೆಯಷ್ಟು ಪ್ರಕರಣಗಳು ವರದಿಯಾಗುತ್ತಿರುವುದು ತೀರ ವಿಷಾಧನೀಯವಾಗಿದೆ. ಈ ಕಾಯಿದೆಯಲ್ಲಿರುವ ತೀವ್ರ ಮತ್ತು  ಕಠಿಣ ಸ್ವರೂಪವಾದ  ದಂಡನೆ ಇದ್ದರೂ ಸಹ ಇದರ ಅರಿವು ಕೆಲವರಿಗೆ ತಿಳಿಯದ ಹಿನ್ನೆಲೆಯಲ್ಲಿ ಈ ರೀತಿ ಮರುಕಳಿಸುತ್ತಿದ್ದು, ಈ ಕಾಯಿದೆಯಂತೆ ಬಾಲ್ಯವಿವಾಹ ಪ್ರಕರಣಗಳು ಸಾಬೀತಾದಲ್ಲಿ ಒಂದು ವರ್ಷಕ್ಕಿಂತ ಕಡಿಮೆ

ಬಾಲ್ಯ ವಿವಾಹ ನಡೆಯುತ್ತಿದೆಯೇ…?? ► ನೀವು ಏನು ಮಾಡಬೇಕೆಂದು ಗೊತ್ತೇ…? Read More »

ಕರಾವಳಿ
Scroll to Top