dakshina kannda

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 04. ನೇತ್ರಾವತಿ ನದಿ ಸೇತುವೆಯ ಬದಿಯಲ್ಲಿ ಮಂಗಳವಾರದಂದು ಸಂಜೆ ಮೊಸಳೆಯೊಂದು ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇಳಂತಿಲ ಗ್ರಾ.ಪಂ. ವ್ಯಾಪ್ತಿಯ ನದಿಯ ಮತ್ತೊಂದು ಬದಿಯಲ್ಲಿ ಮೊಸಳೆಯೊಂದು ಮರಳ ದಿಬ್ಬದಲ್ಲಿ ವಿರಮಿಸುತ್ತಿರುವುದನ್ನು ಇಳಂತಿಲ ಗ್ರಾ.ಪಂ. ಮಾಜಿ ಸದಸ್ಯ, ಸಾಮಾಜಿಕ ಕಾರ್ಯಕರ್ತ ಫಯಾಜ್ ಯು.ಟಿ. ಅವರು ಗಮನಿಸಿದ್ದು, ಇದರ ಪೋಟೋವನ್ನು ಕ್ಲಿಕ್ಕಿಸಿದ್ದಾರೆ. ಇದು ದೊಡ್ಡ ಗಾತ್ರದ ಮೊಸಳೆಯಾಗಿದ್ದು, ಕಳೆದ 2022ರ ಸೆಪ್ಟೆಂಬರ್ ತಿಂಗಳಲ್ಲಿ ಪಂಜಳದ ಪೆಟ್ರೋಲ್ ಪಂಪ್ ಸಮೀಪ ನೇತ್ರಾವತಿ ನದಿಯಲ್ಲಿ […]

ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ..! Read More »

ಕರಾವಳಿ, ಕರ್ನಾಟಕ

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಫೆ. 24. ದ್ವಿಚಕ್ರ ವಾಹನವೊಂದು ನಿಯಂತ್ರಣ ತಪ್ಪಿ ಮಗುಚಿ ಬಿದ್ದ ಪರಿಣಾಮ ಮಹಿಳೆಯೊಬ್ಬರು ಗಂಭೀರ ಗಾಯಗೊಂಡ ಘಟನೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಮಹಿಳೆಯನ್ನು ನಾವೂರು ಗ್ರಾಮದ ನಿವಾಸಿ ಸಂಜೀವ ಎಂಬವರ ಪತ್ನಿ ಕಮಲ(45) ಎಂದು ಗುರುತಿಸಲಾಗಿದೆ. ಇವರು ಸಂತೋಷ್ ಎಂಬವರು ಚಲಾಯಿಸುತ್ತಿದ್ದ ಸ್ಕೂಟರ್ ನಲ್ಲಿ ಸಹ ಸವಾರರಾಗಿ ಪ್ರಯಾಣಿಸುತ್ತಿದ್ದ ವೇಳೆ ತೋಟತ್ತಾಡಿ ಗ್ರಾಮದ ಮೂರ್ಜೆ ಎಂಬಲ್ಲಿಗೆ ತಲುಪಿದಾಗ ಚಾಲಕನ ನಿಯಂತ್ರಣ ಕಳೆದುಕೊಂಡ ವಾಹನ ಮಗುಚಿ ಬಿದ್ದಿದ್ದು, ರಸ್ತೆಗೆಸೆಯಲ್ಪಟ್ಟ

ದ್ವಿಚಕ್ರ ವಾಹನ ಪಲ್ಟಿ- ಮಹಿಳೆ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 07. ಕರಾವಳಿ ನಿಯಂತ್ರಣ ವಲಯ ಉಲ್ಲಂಘನೆ ಕುರಿತಂತೆ ವರದಿ ಸಿದ್ಧಪಡಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅರಣ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅವರು ಮಂಗಳವಾರದಂದು ಮಂಗಳೂರಿನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯವರ ಕಚೇರಿಯಲ್ಲಿ ಪರಿಸರ ಮತ್ತು ಅರಣ್ಯ ಇಲಾಖೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು. ಕರ್ನಾಟಕದ ಕರಾವಳಿ ತೀರದಲ್ಲಿ ನಿರ್ಮಾಣ ಮಾಡಲಾಗಿರುವ ಕಟ್ಟಡಗಳ ಪಟ್ಟಿಯನ್ನು ಸಿದ್ಧಪಡಿಸಿ ಇವುಗಳಲ್ಲಿ ನಿಯಮ ಉಲ್ಲಂಘಿಸಿರುವವರ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡುವಂತೆ

ಸಿ.ಆರ್.ಝಡ್. ಉಲ್ಲಂಘನೆ ವಿರುದ್ಧ ಕ್ರಮ- ಸಚಿವ ಈಶ್ವರ ಖಂಡ್ರೆ Read More »

ಕರಾವಳಿ, ಕರ್ನಾಟಕ

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 19. ಈಗಾಗಲೇ ಗೃಹಲಕ್ಷ್ಮೀ ಯೋಜನೆಯಡಿ ಫಲಾನುಭವಿಯ ಹೆಸರು ನೋಂದಣಿ ಕಾರ್ಯ ಆರಂಭಗೊಂಡಿದ್ದು, ಜಿಲ್ಲೆಯ ಎಲ್ಲಾ ಅರ್ಹರು ಈ ಯೋಜನೆಯಡಿ ನೋಂದಾಯಿಸಿಕೊಳ್ಳುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ ಅವರು ಕರೆ ನೀಡಿದ್ದಾರೆ. ಈಗಾಗಲೇ ತಿಳಿಸಿರುವಂತೆ ಪಡಿತರ ಚೀಟಿಯಲ್ಲಿ “ಯಜಮಾನಿ ಮಹಿಳೆ” ಎಂದು ಗುರುತಿಸಿರುವ ಮಹಿಳೆಯು ಈ ಯೋಜನೆಯ ಫಲಾನುಭವಿಯಾಗುತ್ತಾರೆ. ಆದರೆ ಫಲಾನುಭವಿ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ.ಎಸ್.ಟಿ. ಪಾವತಿದಾರರಾಗಿರಬಾರದು ಫಲಾನುಭವಿಯು ನೋಂದಣಿಯನ್ನು

ಗೃಹಲಕ್ಷ್ಮೀ ಯೋಜನೆಯಡಿ ಹೆಸರು ನೋಂದಣಿಗೆ ಜಿಲ್ಲಾಧಿಕಾರಿ ಕರೆ Read More »

ಕರಾವಳಿ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಬೆಳ್ಳಾರೆ, ಜು. 15. ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಆರೋಪಿಗಳು ಶರಣಾಗಬೇಕು ಎಂಬ ಎಚ್ಚರಿಕೆಯ ಸಂದೇಶವನ್ನು ಸುಳ್ಯದಲ್ಲಿ ಎರಡನೇ ಬಾರಿಗೆ ಎನ್‌ಐಎ ಹೊರಡಿಸಿದೆ.   ಇದು ತಲೆಮರೆಸಿಕೊಂಡಿರುವ ಕೊಲೆಗಟುಕರಿಗೆ ಎರಡನೇ ಎಚ್ಚರಿಕೆಯ ಸಂದೇಶವಾಗಿದ್ದು, ಈ ಎಚ್ಚರಿಕೆಗೂ ಬಗ್ಗದಿದ್ದಲ್ಲಿ ಮೂರನೇಯ ಎಚ್ಚರಿಕೆಯ ಸಂದೇಶವನ್ನು ಹೊರಡಿಸಲಾಗುತ್ತದೆ. ಅದರಲ್ಲೂ ಶರಣಾಗದೇ ಹೋದರೆ ತಲೆಮರೆಸಿಕೊಂಡಿರುವ ಆರೋಪಿಗಳ ಆಸ್ತಿಪಾಸ್ತಿಗಳನ್ನು ಎನ್‌ಐಎ ಮುಟ್ಟುಗೋಲು ಹಾಕಿಕೊಳ್ಳಲಿದೆ ಎಂಬ ಸುಳಿವು ಲಭ್ಯವಾಗಿದೆ. ಅಲ್ಲದೇ ಆಗಸ್ಟ್ 18ರೊಳಗೆ ಶರಣಾಗಲೇಬೇಕು. ಈ ಹಿಂದೆ ಜೂ.30ರೊಳಗೆ

ಪ್ರವೀಣ್ ನೆಟ್ಟಾರು ಹತ್ಯೆಗೆ ಒಂದು ವರುಷ- ಕೊಲೆ ಹಂತಕರಿಗೆ 2ನೇ ಬಾರಿಗೆ ಶರಣಾಗುವಂತೆ ಎನ್ಐಎ ಎಚ್ಚರಿಕೆ Read More »

ಕರಾವಳಿ

ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 09. ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ದಕ್ಷಿಣ ಕನ್ನಡಕ್ಕೆ ದಿನೇಶ್ ಗುಂಡೂರಾವ್ ಹಾಗೂ ಉಡುಪಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದೆ.

ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾಗಿ ದಿನೇಶ್ ಗುಂಡೂರಾವ್ ನೇಮಕ Read More »

ಕರ್ನಾಟಕ

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 30. ಪ್ರಸ್ತುತ ರಾಜ್ಯದಲ್ಲಿ ಕೋವಿಡ್-19ರ ಸನ್ನಿವೇಶವನ್ನು ಪರಿಗಣಿಸಿ ಮತ್ತು ಕೆಲವು ದೇಶಗಳಲ್ಲಿ ಜಾಗತಿಕವಾಗಿ ಹೆಚ್ಚುತ್ತಿರುವ ಪ್ರಕರಣಗಳಿಂದ ಆಗುವ ಅಪಾಯದ ಮೌಲ್ಯಮಾನವನ್ನು ಅನುಸರಿಸಿ, ಸರ್ಕಾರದಿಂದ ಈಗಾಗಲೇ ಮಾರ್ಗಸೂಚಿಗಳನ್ನು ಹೊರಡಿಸಲಾಗಿರುತ್ತದೆ. ಈ ಬಗ್ಗೆ ರಾಜ್ಯ ಕೋವಿಡ್-19 ಟಿಎಸಿ ಮತ್ತು ಕಂದಾಯ ಹಾಗೂ ಆರೋಗ್ಯ ಸಚಿವರು ವಿವರವಾದ ಚರ್ಚೆಗಳನ್ನು ನಡೆಸಿದ್ದು, ಅದರನ್ವಯ ಕೋವಿಡ್-19ರ ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಕೆಳಗಿನ ಮಾರ್ಗಸೂಚಿಗಳನ್ನು ಹೊರಡಿಸಿರುತ್ತಾರೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಂದರ್ಭ: ರೋಗ

ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸುವಂತೆ ಜಿಲ್ಲಾಧಿಕಾರಿ ಕರೆ Read More »

ಕರ್ನಾಟಕ
Scroll to Top