death

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!!

 (ನ್ಯೂಸ್ ಕಡಬ) newskadaba.com ಮಂಡ್ಯ, ಜ.08. ರಂಗಸ್ಥಳದಲ್ಲೇ ಕುಸಿದುಬಿದ್ದು ಕಲಾವಿದಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯದಲ್ಲಿ ವರದಿಯಾಗಿದೆ. ಮೃತರನ್ನು ನಂಜಯ್ಯ(46) ಎಂದು ಗುರುತಿಸಲಾಗಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಗ್ರಾಮದ ಬಸವನಗುಡಿಯಲ್ಲಿ ನಡೆದ ನಾಟಕದ ವೇಳೆ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರುಕ್ಷೇತ್ರದ ಕೃಷ್ಣ ಸಂಧಾನ ನಾಟಕ ಪ್ರದರ್ಶನದಲ್ಲಿ ಸಾರ್ಥಕಿ ಪಾತ್ರ ನಿರ್ವಹಿಸುತ್ತಿದ್ದ ಕಲಾವಿದ ನಂಜಯ್ಯ ವೇದಿಕೆಯ ಮೇಲೆಯೇ ಉಸಿರುಚೆಲ್ಲಿದ್ದಾರೆ. ಘಟನೆ ಬಳಿಕ ಸಹಕಲಾವಿದರು ಕಾರ್ಯಕ್ರಮ ಅರ್ಧಕ್ಕೆ ಮೊಟಕುಗೊಳಿಸಿದರು. ಮಳವಳ್ಳಿ ತಾಲೂಕಿನ ವಿವಿಧ ಗ್ರಾಮಗಳ ಕಲಾವಿದರು […]

ರಂಗಸ್ಥಳದಲ್ಲೇ ಕುಸಿದುಬಿದ್ದು ಪ್ರಾಣಬಿಟ್ಟ ಕಲಾವಿದ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!!

(ನ್ಯೂಸ್ ಕಡಬ) newskadaba.com ಶ್ರೀ ನಗರ, ಜ.08. ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಎನ್ಕೌಂಟರ್ ನಲ್ಲಿ ಭಾರತೀಯ ಸೇನೆ ಇಬ್ಬರು ಶಂಕಿತ ಉಗ್ರರನ್ನು ಹೊಡೆದುರುಳಿಸಿದೆ ಎಂದು ತಿಳಿದುಬಂದಿದೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಗಡಿದಾಟಲು ಯತ್ನಿಸುತ್ತಿದ್ದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಬಾಲಕೋಟ್ ಸೆಕ್ಟರ್‌ನಲ್ಲಿ ಶಂಕಿತ ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿತ್ತು. ಮುಂದಿರುವ ಹಳ್ಳಿಯೊಂದರಲ್ಲಿ ಅನುಮಾನಾಸ್ಪದ ಚಲನವಲನವನ್ನು ಗಮನಿಸಿದ ಸೇನಾ ಸಿಬ್ಬಂದಿ

ಉಗ್ರರ ಎನ್ಕೌಂಟರ್ ಮಾಡಿದ ಭಾರತೀಯ ಸೇನೆ ➤ ಇಬ್ಬರು ಶಂಕಿತ ಉಗ್ರರ ಹತ್ಯೆ..!! Read More »

ರಾಷ್ಟ್ರೀಯ ನ್ಯೂಸ್

ಹಿರಿಯ ಪತ್ರಕರ್ತ ಕೆ.ಸತ್ಯಸಾರಾಯಣ ನಿಧನ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿರಿಯ ಪತ್ರಕರ್ತ ಕೆ.ಸತ್ಯನಾರಾಯಣ ಅವರು ಭಾನುವಾರದಂದು ನಿಧನರಾಗಿದ್ದಾರೆ ಎಂದು ತಿಳಿದು ಬಂದಿದೆ. ಕನ್ನಡಪ್ರಭ ಸಂಪಾದಕರಾಗಿ ಸೇವೆ ಸಲ್ಲಿಸಿದ್ದ ಇವರು, ವ್ಯಕ್ತಿ ವಿಚಾರ, ಸಮಕಾಲೀನ .ರಾಜಕೀಯ ವಿಶ್ಲೇಷಣೆ, ಷೇರುಪೇಟೆ ಸಮಾಚಾರ ಅಂಕಣ ಮೂಲಕ ಗಮನ ಸೆಳೆದಿದ್ದರು. ಖಾದ್ರಿ ಶಾನಣ್ಣ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗೂ ಭಾಜನರಾಗಿದ್ದರು ಎಂದು ತಿಳಿದುಬಂದಿದೆ.ಬೆಂಗಳೂರು ಎಲ್ ಐಸಿ ಕಾಲನಿಯ ತಮ್ಮ ಸ್ವಗೃಹದಲ್ಲಿ ವಯೋಸಹಜ ಕಾರಣದಿಂದ ಅವರು ನಿಧನರಾದರೆಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಹಿರಿಯ ಪತ್ರಕರ್ತ ಕೆ.ಸತ್ಯಸಾರಾಯಣ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಬಿಜೆಪಿ ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ರವಿವಾರ 5 ಗಂಟೆಗೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಿಧರಾದರು ಎಂದು ತಿಳಿದುಬಂದಿದೆ. ಇವರಿಗೆ 88 ವರ್ಷ ವಯಸ್ಸಾಗಿತ್ತು. ಮೂರು ಬಾರಿ ಉತ್ತರಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಡಿಸೆಂಬರ್ ನಲ್ಲಿ ಕೈ ಮುರಿತ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.08. ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು

(ನ್ಯೂಸ್ ಕಡಬ) newskadaba.com ಗುಜರಾತ್, ಜ.07.  ತೆರೆದ ಬಾವಿಗೆ 5 ವರ್ಷ ಗಂಡು ಸಿಂಹ ಮತ್ತು 9 ವರ್ಷದ ಹೆಣ್ಣು ಸಿಂಹ ಬಿದ್ದು ಮೃತಪಟ್ಟ ಘಟನೆ ಗುಜರಾತ್ ನ ಅಮ್ರೇಲಿ ಜಿಲ್ಲೆಯಲ್ಲಿ  ವರದಿಯಾಗಿದೆ ಎಂದು ಅರಣ್ಯ ಇಲಾಖೆ ತಿಳಿಸಿದೆ. ಖಂಭ  ತಾಲೂಕಿನ ಕೊಟ್ಟಾ ಗ್ರಾಮದ ರೈತರೊಬ್ಬರಿಗೆ ಸೇರಿದ ಬಾವಿಗೆ ಸಿಂಹಗಳೆರಡು ಆಕಸ್ಮಿಕವಾಗಿ ಬಿದ್ದು ಮುಳುಗಿ ಮೃತಪಟ್ಟಿವೆ ಎಂದು ಗಿರ್ ಅರಣ್ಯ ಸಂರಕ್ಷಣಾಧಿಕಾರಿ ರಾಜ್ ದೀಪ್ ಸಿಂಗ್ ಜಾಲಾ ಹೇಳಿದರು .

ತೆರೆದ ಬಾವಿಗೆ ಬಿದ್ದು ಎರಡು ಸಿಂಹಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ)newskadaba.com  ಹುಬ್ಬಳ್ಳಿ, ಜ.07.  ಕೆರೆಯಲ್ಲಿ ತಾಯಿ ಮಕ್ತುಂಬಿ (38),ಮಗಳು ಸೈನಾಜ್ ( 16) ಎಂಬುವವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಶವ ನೋಡಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದು, ಇನ್ನು ಪ್ರಾಥಮಿಕ ಆರೋಗ್ಯ ಕೇಂದ್ರದ ಮುಂದೆ ತಾಯಿ ಮಗಳನ್ನ ಕಳೆದುಕೊಂಡು‌ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿತ್ತು. ಇಬ್ಬರ ಸಾವಿಗೆ ಮಕ್ತುಂಬಿ ಗಂಡನೇ ಕಾರಣ, ಯಾವಾಗಲೂ ಅನುಮಾನ ಪಡುತ್ತಿದ್ದ, ಅವನೇ ಕೊಲೆ ಮಾಡಿ ಕೆರೆಗೆ ಬೀಸಾಕಿದ್ದಾನೆ ಎಂದು ಮಕ್ತುಂಬಿ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಮಾಬುಸಾಬ್ ಹಾಗೂ

 ಅನುಮಾನದ ಭೂತ…!!!! ➤  ಬೇಸತ್ತ ಹೆಂಡತಿ, ಮಗಳು  ಆತ್ಮಹತ್ಯೆಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು

 (ನ್ಯೂಸ್ ಕಡಬ) newskadaba.com ಹಾವೇರಿ, ಜ.07.   86 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆಂದು ಬಂದ ಶಿಕ್ಷಕ ಹೃದಯಾಘಾತದಿಂದಾಗಿ ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಯಲ್ಲಿ ವರದಿಯಾಗಿದೆ. ಮೃತ ಶಿಕ್ಷಕನನ್ನು ಸಂಗನಗೌಡರ (34) ಎಂದು ಗುರುತಿಸಲಾಗಿದೆ. ಹಾವೇರಿಯ ಅಶ್ವಿನಿ ನಗರದ ಗೆಳಯರ ಬಳಗ ಶಾಲೆಯಲ್ಲಿ ಶಿಕ್ಷಕ  ಸಂಗನಗೌಡರ ವಾಸ್ತವ್ಯ ಹೂಡಿದ್ದರು, ಹೃದಯಾಘಾತವಾದ  ತಕ್ಷಣ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಅದ್ರೆ ಚಿಕಿತ್ಸೆ ಫಲಿಸದೆ ಶಿಕ್ಷಕ ಮೃತ ಪಟ್ಟಿದ್ದಾರೆ ಎನ್ನಲಾಗಿದೆ. ಮೃತ ಶಿಕ್ಷಕ ಸಂಗನಗೌಡರವರು ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯ ಮತ್ತಿಕೇರಿ

ಸಾಹಿತ್ಯ ಸಮ್ಮೇಳನಕ್ಕೆಂದು ಬಂದಿದ್ದ ಶಿಕ್ಷಕ ಹೃದಯಾಘಾತದಿಂದಾಗಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಉಡುಪಿ, ಜ.07. ಕಾಂತಾರ ಸಿನಿಮಾ ಎಲ್ಲರನ್ನೂ ನಿಬ್ಬೆರಗುಗೊಳಿಸಿದ್ದು ಮಾತ್ರವಲ್ಲದೆ, ಕರ್ನಾಟಕದ ಕರಾವಳಿಯ ಸಂಸ್ಕೃತಿಯನ್ನು ದೇಶ ವಿದೇಶಗಳಲ್ಲಿ ಪಸರಿಸುವಂತೆ ಮಾಡಿದ್ದು ಸುಳ್ಳಲ್ಲ. ಇದರಲ್ಲಿ ಕಂಡು ಬಂದ ಅದೆಷ್ಟೋ ದೃಶ್ಯಗಳು ನೈಜತೆಗೆ ಹಿಡಿದ ಕೈಗನ್ನಡಿ ಎನ್ನಬಹುದು. ದೈವ-ದೇವರ ಮೇಲಿನ ನಂಬಿಕೆ ಇಲ್ಲಿನ ಜನರನ್ನು ಯಾವ ರೀತಿ ಕಾಪಾಡಿಕೊಂಡು ಬಂದಿದೆ ಎಂಬುದನ್ನು ಸಿನಿಮಾದಲ್ಲಿ ಅಚ್ಚುಕಟ್ಟಾಗಿ ಬಿಂಬಿಸಲಾಗಿದೆ ಎನ್ನಲಾಗಿದೆ. ಇದೀಗ ಕಾಂತಾರ ಸಿನಿಮಾದಲ್ಲಿ ಕಂಡುಬಂದ ದೃಶ್ಯವೊಂದು ನಿಜವಾಗಿದ್ದು, ಈ ಸುದ್ದಿ ಭಾರೀ ವೈರಲ್ ಆಗುತ್ತಿದೆ. ಕಾಂತಾರ ಸಿನಿಮಾದಲ್ಲಿ ಅನಾವರಣಗೊಂಡ ದೈವ

ಕಾಂತಾರ ಹೋಲುವ ಘಟನೆ ➤  ಕೋರ್ಟ್ ಮೆಟ್ಟಿಲೇರಿದ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ.07. ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿಯೊಬ್ಬಳು ಮೃತಪಟ್ಟ ಘಟನೆ ಕಾಸರಗೋಡಿನಲ್ಲಿ ವರದಿಯಾಗಿದೆ.   ಮೃತಪಟ್ಟ ಯುವತಿಯನ್ನು ಪೆರುಂಬಳಾದ ಅಂಜು ಶ್ರೀಪಾರ್ವತಿ (20)  ಎಂದು ಗುರುತಿಸಲಾಗಿದೆ. ಆನ್ ಲೈನ್ ಮೂಲಕ ಬಿರಿಯಾನಿ ತರಿಸಿಕೊಂಡು ಅಸ್ವಸ್ತಗೊಂಡ ಯುವತಿಯನ್ನು ಕಾಸರಗೋಡಿನ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ತದನಂತರ ಮಂಗಳೂರಿನ ಮತ್ತೊಂದು ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಮೃತ ಯುವತಿಯ ಪೋಷಕರು ನೀಡಿರುವ ದೂರಿನ

ಆನ್ ಲೈನ್ ನಲ್ಲಿ ಆರ್ಡರ್ ಮಾಡಿದ ಬಿರಿಯಾನಿ ತಿಂದು ಯುವತಿ ಮೃತ್ಯು..! ➤ ತನಿಖೆಗೆ ಸಚಿವರಿಂದ ಆದೇಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top