death

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ಹಾಗೂ ಮೂವರು ಗಾಯಗೊಂಡ ಘಟನೆ ಬೆಂಗಳೂರಿನ ಕೆ.ಆರ್.ಪುರಂನ  ಬಳಿ ವರದಿಯಾಗಿದೆ. ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಮೃತರನ್ನು ಫಾಜಿಲಾ ಮತ್ತು ತಸೀನಾ ಹಾಗೂ ಗಾಯಗೊಂಡವರನ್ನು ತಸೀನಾ ಮತ್ತು ಅವರ ಪತಿ ಖಲೀದ್  ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ಈ ಬಗ್ಗೆ ಕೆ.ಆರ್. ಪುರಂ ಸಂಚಾರ […]

ಆಟೋಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು , ಮೂವರಿಗೆ ಗಾಯ Read More »

ಕರ್ನಾಟಕ, ಕ್ರೀಡಾ ನ್ಯೂಸ್

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು!

(ನ್ಯೂಸ್ ಕಡಬ) newskadaba.com ಕುಣಿಗಲ್, ಜ.07.  ಹೆಜ್ಜೇನು ದಾಳಿಗೆ ಸಿಲುಕಿ ಸ್ಟಡ್ ಫಾರಂನಲ್ಲಿ ವಂಶಭಿವೃದ್ಧಿಗೆಂದು ಬಳಸುತ್ತಿದ್ದ ತಲಾ  1 ಕೋಟಿಗೂ ಹೆಚ್ಚು ಮೌಲ್ಯದ 2 ಕುದುರೆಗಳು ಮೃತಪಟ್ಟ ಘಟನೆ ಕುಣಿಗಲ್ ನಲ್ಲಿ ವರದಿಯಾಗಿದೆ. ಮೃತ ಕುದುರೆಗಳನ್ನು ಅಮೆರಿಕ ಮೂಲದ ಏರ್ ಸಪೋರ್ಟ್ (15) ಮತ್ತು ಐರ್ಲೆಂಡ್ ಮೂಲದ ಸನಸ್ ಪರ್ ಅಕ್ಷಮ್ (10) ಎಂದು ಗುರುತಿಸಲಾಗಿದೆ. ಬಯಲಿನಲ್ಲಿ ಮೇಯಲುವಾಗ ಏಕಾಏಕಿಯಾಗಿ ಹೆಜ್ಜೇನು ದಾಳಿ ಮಾಡಿವೆ ಎನ್ನಲಾಗಿದೆ. ಸ್ಟಡ್ ಫಾರಂ ವ್ಯವಸ್ಥಾಪಕ ಡಾ. ದಿನೇಶ್ ಮತ್ತು ಮನೋಜ್ ನೇತೃತ್ವದ

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!    

(ನ್ಯೂಸ್ ಕಡಬ)newskadaba.com  ಹಾಸನ, ಜ.07. ಬೆಳಗಿ ಹಳ್ಳಿ ಗೇಟ್ ಬಳಿ ಬೈಕ್‌ ಮತ್ತು ಕಾರು ನಡುವೆ ನಡೆದ ಅಪಘಾತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ  ಎಂದು ವರದಿಯಾಗಿದೆ. ಅಪಘಾತದಲ್ಲಿ ಸುನಿಲ್‌ (23) ಮತ್ತು ಪತ್ನಿ ದಿವ್ಯಾ (23) ಸ್ಥಳದಲ್ಲೇ ಮೃತಪಟ್ಟಿದ್ದರು ಎನ್ನಲಾಗಿದ್ದು, ಎಂಟು ವರ್ಷದ ಮಗ ಅಜಿತ್‌ ಮತ್ತು ಪುಟ್ಟ ಮಗಳು ಗಾಯಗೊಂಡಿದ್ದರು. ಇಬ್ಬರು ಮಕ್ಕಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗಾಯಗೊಂಡಿದ್ದ ಎಂಟು ವರ್ಷದ ಬಾಲಕ ಅಜಿತ್ ಚಿಕಿತ್ಸೆ ಫಲಿಸದೆ

ಹಾಸನ : ಬೈಕ್ ಮತ್ತು ಕಾರಿನ ನಡುವೆ ಅಪಘಾತ ಪ್ರಕರಣ ➤ ಚಿಕಿತ್ಸೆ ಫಲಿಸದೆ ಬಾಲಕ ಮೃತ್ಯು ..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಾಪು, ಜ. 06. ಮೀನುಗಾರಿಕೆ ನಡೆಸಿ ಹಿಂತಿರುಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ವಿಟ್ಲ ಮೂಲದ ಮೀನುಗಾರನ ಮೃತದೇಹವು ಕಾಪು ಸಮುದ್ರ ತೀರದಲ್ಲಿ ಪತ್ತೆಯಾಗಿದೆ. ಮೃತರನ್ನು ವಿಟ್ಲ ಪೆರುವಾಯಿ ಮೂಲದ ಆನಂದ ಎಂದು ಗುರುತಿಸಲಾಗಿದೆ. ಇವರು ಜ. 04 ರಂದು ಮಂಗಳೂರು ಬಂದರಿನಿಂದ ಮೀನುಗಾರಿಕೆಗೆ ಹೋಗಿ ವಾಪಸ್ಸಾಗುತ್ತಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಸಮುದ್ರದ ನೀರಿಗೆ ಬಿದ್ದು ನಾಪತ್ತೆಯಾಗಿದ್ದರು. ಇದೀಗ ಅವರ ಮೃತದೇಹ ಪತ್ತೆಯಾಗಿದ್ದು, ಈ ಬಗ್ಗೆ ಮಾಹಿತಿ

ಮೀನುಗಾರಿಕೆಯ ವೇಳೆ ಸಮುದ್ರ ನೀರಿಗೆ ಬಿದ್ದು ವಿಟ್ಲ ಮೂಲದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ. 06. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರಂ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ (48), ಪತ್ನಿ ಸುಲಜಾ ಕುಮಾರಿ (46) ಮತ್ತು ಪುತ್ರಿ ರೇಷ್ಮಾ (23) ಎಂದು ಗುರುತಿಸಲಾಗಿದೆ. ರಮೇಶನ್ ಎಂಬವರು ವಿವಿಧ ಉದ್ದೇಶಗಳಿಗಾಗಿ ಖಾಸಗಿ ವ್ಯಕ್ತಿಗಳಿಂದ 12 ಲಕ್ಷ ರೂ. ಸಾಲ ಮಾಡಿದ್ದು, ಬಡ್ಡಿ ಸೇರಿ 40 ಲಕ್ಷ ರೂಪಾಯಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಆಸ್ತಿ, ಮನೆ ಮಾರಿ ಸಾಲ ತೀರಿಸಲು ಯತ್ನಿಸಿದರೂ 

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಲಾರ, ಜ. 06. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಮನೆಯವರು ಈತನಿಗೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡುವಂತೆ ಬುದ್ದಿವಾದ ಹೇಳಿದ್ದರಿಂದ ಮನನೊಂದು ಬಾಲಕ ವಿಷ ಸೇವಿಸಿದ್ದು, ಕೂಡಲೇ ಉದಯ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಇಂದೋರ್‌, ಜ. 06. ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ಇಂದೋರ್ ಎಂಬಲ್ಲಿ ವರದಿಯಾಗಿದೆ. ಈ ಕುರಿತು ಆಘಾತಕಾರಿ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಜಿಮ್‌ನಲ್ಲಿ ವೃಂದಾವನದ ಮಾಲೀಕ ಪ್ರದೀಪ್ ರಘುವಂಶಿ ಕಸರತ್ತು ನಡೆಸುತ್ತಿದ್ದಾಗ ಹೃದಯಾಘಾತಗೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆಂದು ಮೂಲಗಳು ತಿಳಿಸಿವೆ.

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 06. ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಬಂಟ್ವಾಳ ತಾಲೂಕಿನ ಕೇಪು ಗ್ರಾಮದ ಸಾರಡ್ಕ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೆಳ್ತಂಗಡಿ ತಾಲೂಕು ಮಚ್ಚಿನ ನಿವಾಸಿ ಕೇಶವ ನಾಯ್ಕ್ (56) ಎಂದು ಗುರುತಿಸಲಾಗಿದೆ. ಸಾರಡ್ಕದ ಕೃಷಿಕರೊಬ್ಬರ ಮನೆಯಲ್ಲಿ ಉಳಿದುಕೊಂಡು ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಕೇಶವರವರು ಹಲಸಿನ ಮರ ಏರಿ ಕಾಳು ಮೆಣಸು ಕೊಯ್ಯುವ ಸಂದರ್ಭ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕೂಡಲೇ ಅವರನ್ನು ವಿಟ್ಲ ಸಮುದಾಯ ಆರೋಗ್ಯ

ವಿಟ್ಲ: ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 06. ಕಾಟನ್ ಪೇಟೆ ಠಾಣೆಯಲ್ಲಿ ಬಂಧಿತನಾಗಿದ್ದ ಆರೋಪಿಯೋರ್ವ ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ಪೊಲೀಸರ ಹಲ್ಲೆಯಿಂದ ಲಾಕಪ್‌ನಲ್ಲಿಯೇ ಯುವಕ ಮೃತಪಟ್ಟಿದ್ದಾನೆಂದು ಕುಟುಂಬ ಮೂಲಗಳು ಆರೋಪಿಸಿದೆ.   ಹಳೆಯ ದರೋಡೆ ಸಂಚು ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದೇ ಇದ್ದ ಕಾರಣಕ್ಕೆ ನ್ಯಾಯಾಲಯದ ವಾರೆಂಟ್‌ ಹಿನ್ನೆಲೆ ಬಂಧಿತನಾಗಿದ್ದ ಭಕ್ಷಿ ಗಾರ್ಡನ್‌ ನಿವಾಸಿ ವಿನೋದ್‌ (23) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಆರು ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿ ಈತನಿಗೆ ಬಂಧಿಸಲಾಗಿತ್ತು. ಈತ ಸೆಲ್ ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ

ಪೊಲೀಸರ ವಶದಲ್ಲಿದ್ದ ಯುವಕ ಅನುಮಾನಾಸ್ಪದವಾಗಿ ಮೃತ್ಯು ➤ ಪೊಲೀಸರ ಹಲ್ಲೆಯಿಂದ ಮೃತಪಟ್ಟಿರುವ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…!

(ನ್ಯೂಸ್ ಕಡಬ) newskadaba.com ಕಲಬುರಗಿ, ಜ. 05. ಹಳೆ ವೈಷಮ್ಯದ ಹಿನ್ನೆಲೆ ಯುವಕನೋರ್ವನನ್ನು ಕೊಲೆ ಮಾಡಿರುವ ಘಟನೆ ಕಲಬುರಗಿಯ ಭವಾನಿ ನಗರದಲ್ಲಿ ವರದಿಯಾಗಿದೆ. ಕೊಲೆಯಾಗಿರುವ ಯುವಕನನ್ನು ಪ್ರಶಾಂತ್ ಕುಂಬಾರ (30) ಎಂದು ಗುರುತಿಸಲಾಗಿದೆ. ಹಲ್ಲೆ ಆರೋಪಿಯನ್ನು  ಮಂಜುನಾಥ ಸ್ವಾಮಿ ಎಂದು ಗುರುತಿಸಲಾಗಿದೆ. ಆರೋಪಿ ಪರಾರಿಯಾಗಿದ್ದು, ಪತ್ತೆಗಾಗಿ ಶೋಧಕಾರ್ಯ ಮುಂದುವರಿದಿದ್ದು, ಈ ಬಗ್ಗೆ ಚೌಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆ ವೈಷಮ್ಯ- ಯುವಕನ ಕೊಲೆಯಲ್ಲಿ ಅಂತ್ಯ…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top