death

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                            

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಪ್ರೀತಿ ವಿಚಾರಕ್ಕೆ ಪ್ರೇಮಿಯೋರ್ವ ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದು ಹಾಕಿರುವ ಘಟನೆ ಬೆಂಗಳೂರಿನ ರಾಜಾನುಕುಂಟೆಯಲ್ಲಿರುವ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಸಂಭವಿಸಿದೆ. ಚಾಕುವಿನೊಂದಿಗೆ ಕಾಲೇಜು ಪ್ರವೇಶಿಸಿದ್ದ ಕೋಲಾರ ಮೂಲದ ಯುವಕ ಕಾಲೇಜು ಅವರಣದಲ್ಲೇ ಯುವತಿಗೆ ಇರಿದು, ಬಳಿಕ ತಾನೂ ಕೂಡ ಚಾಕುವಿನಿಂದ ಇರಿದುಕೊಂಡಿದ್ದಾನೆ ಎನ್ನಲಾಗಿದೆ. ಕೂಡಲೇ ಇತರ ವಿದ್ಯಾರ್ಥಿಗಳು ಮತ್ತು ಭದ್ರತಾ ಸಿಬ್ಬಂದಿ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗ ಮಧ್ಯೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. […]

ಕಾಲೇಜಿನಲ್ಲೇ ಯುವತಿಗೆ ಚಾಕು ಇರಿದು ಕೊಂದ ‘ಭಗ್ನಪ್ರೇಮಿ’…!!                             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಅಹಮದಾಬಾದ್‌, ಜ. 02. ಮನೆಯೊಂದರ ಮೊದಲ ಮಹಡಿಯಲ್ಲಿ ಬೆಂಕಿ ಅವಘಡ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಅಹಮದಾಬಾದ್‌ನಲ್ಲಿ ವರದಿಯಾಗಿದೆ. ಮೃತರನ್ನು ಜಯೇಶ್ ವಘೇಲಾ (40), ಮತ್ತು ಅವರ ಪತ್ನಿ ಹಂಸಾ (35) ಹಾಗೂ ಅವರು ಮಗ ರೆಹಾನ್ (8) ಎಂದು ಗುರುತಿಸಲಾಗಿದೆ.

ಮನೆಗೆ ಬೆಂಕಿ ➤ ಒಂದೇ ಕುಟುಂಬದ ಮೂವರು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!! 

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಜ. 02. ಪ್ರೇಮ ವಿವಾಹ ನಿರಾಕರಿಸಿದ್ದಕ್ಕೆ ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಅಪ್ರಾಪ್ತ ಮಗಳೊಬ್ಬಳು ಹತ್ಯೆ ಮಾಡಿರುವ ಘಟನೆ ಮಧ್ಯ ಪ್ರದೇಶದ ಗ್ವಾಲಿಯರ್ ನಲ್ಲಿ ವರದಿಯಾಗಿದೆ. ಮೃತ ಮಹಿಳೆಯನ್ನು ಮಮತಾ ಕುಶ್ವಾಹಾ ಎಂದು ಗುರುತಿಸಲಾಗಿದೆ. ಮಮತಾ ಅವರ ಮಗಳು ಕಳೆದ ಕೆಲ ಸಮಯದಿಂದ ಯುವಕನೊಬ್ಬನನ್ನು ಪ್ರೀತಿಸುತ್ತಿದ್ದು, ಈ ಸಂಬಂಧಕ್ಕೆ ತಾಯಿ ವಿರೋಧ ವ್ಯಕ್ತಪಡಿಸಿದ್ದರಿಂದ ಆಕೆ ಈ ಕೃತ್ಯವನ್ನು ಎಸಗಿದ್ದಾಳೆ ಎನ್ನಲಾಗಿದೆ. ಅಲ್ಲದೇ ಮಮತಾಳ ಮಗಳನ್ನು ಆಕೆಯ ಪ್ರಿಯಕರ ಕೆಲ ಸಮಯದ ಹಿಂದೆ

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯನ್ನೇ ಇರಿದು ಕೊಂದ ಪಾಪಿ ಮಗಳು…!!  Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                              

(ನ್ಯೂಸ್ ಕಡಬ) newskadaba.com ರಾಮನಗರ, ಜ. 02. ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಮಾವತ್ತೂರಿನಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಪ್ರಸನ್ನ ಭಟ್(26) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಸ್ನೇಹಿತರ ಜೊತೆ ಬಂದಿದ್ದ ಪ್ರಸನ್ನ ಭಟ್, ಮಾವತ್ತೂರು‌ ಕೆರೆಯಲ್ಲಿ ಈಜಾಡಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ವಿಷಯ ತಿಳಿದು ಕನಕಪುರ ಗಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಮೃತದೇಹವನ್ನು ಮರಣೋತ್ತರ ‌ಪರೀಕ್ಷೆಗೆ ದಯಾನಂದ

ಸಂಸದ ಬಿ.ವೈ.ರಾಘವೇಂದ್ರ ಅವರ ಫೋಟೋ ಗ್ರಾಫರ್ ಕೆರೆಯಲ್ಲಿ ಮುಳುಗಿ ಮೃತ್ಯು                                               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 02. ಬಂದೂಕುಧಾರಿಗಳು ಜೈಲಿನ ಮೇಲೆ ಗುಂಡಿನ ದಾಳಿ ಮಾಡಿ 14 ಜನರನ್ನು ಹತ್ಯೆಗೈದಿರುವ ಘಟನೆ ಮೆಕ್ಸಿಕೋದ ಜುವಾರೆಜ್ ನಲ್ಲಿ ವರದಿಯಾಗಿದೆ. ಶಸ್ತ್ರಾಸ್ತ್ರಗಳನ್ನು ಹೊತ್ತುಕೊಂಡು ವಾಹನದಲ್ಲಿ ಬಂದ ವ್ಯಕ್ತಿಗಳು ಜೈಲಿನ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಕೈದಿಗಳು ಹಾಗೂ ಭದ್ರತಾ ಸಿಬ್ಬಂದಿಗಳು ದಾಳಿಯಿಂದ ತಪ್ಪಿಸಿಕೊಳ್ಳಲು ಓಡುವ ಭರದಲ್ಲಿ 10 ಮಂದಿ ಸಿಬ್ಬಂದಿಗಳು ಹಾಗೂ ನಾಲ್ವರು ಕೈದಿಗಳು ಮೃತಪಟ್ಟಿದ್ದು, 24 ಮಂದಿ ಗುಂಡಿನ ದಾಳಿಯಿಂದ ತಪ್ಪಿಸಿಕೊಂಡಿದ್ದಾರೆ ಎನ್ನಲಾಗಿದೆ. ಈ ಸಂಬಂಧ ನಾಲ್ವರನ್ನು

ಬಂದೂಕುಧಾರಿಗಳಿಂದ ಜೈಲಿನ ಮೇಲೆ ಗುಂಡಿನ ದಾಳಿ ➤ ಸಿಬ್ಬಂದಿಗಳು ಸೇರಿ 14 ಜನರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!               

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಮಾಜಿ ಸಚಿವ, ಶಾಸಕ ಅರವಿಂದ ಲಿಂಬಾವಳಿ ಸೇರಿ ಪ್ರಭಾವಿ ರಾಜಕಾರಣಿಗಳ ಹೆಸರು ಬರೆದಿಟ್ಟು ಓರ್ವ ವ್ಯಕ್ತಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರದೀಪ್ (47) ಎಂದು ಗುರುತಿಸಲಾಗಿದೆ. ಡೆತ್ ನೋಟ್ ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಕಾರಿನಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!           

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 02. ನಡೆದುಕೊಂಡು ಹೋಗುತ್ತಿದ್ದ ವೇಳೆ ಖಾಸಗಿ ಬಸ್ ಡಿಕ್ಕಿಯಾದ ಪರಿಣಾಮ ಬಾಲಕ ಮೃತಪಟ್ಟ ಘಟನೆ ಕಾಸರಗೋಡಿನ ಚೆರ್ಕಳದಲ್ಲಿ ನಡೆದಿದೆ. ಮೃತ ಬಾಲಕನನ್ನು ಆಶಿಕ್ ಮತ್ತು ಝುಬೈದಾ ದಂಪತಿ ಪುತ್ರ ಅಬ್ದುಲ್ ವಾಹಿದ್ (3) ಎಂದು ಗುರುತಿಸಲಾಗಿದೆ. ಚೆರ್ಕಳ ಬಸ್ ನಿಲ್ದಾಣದಲ್ಲಿ ಬಸ್ ಹಿಂದಕ್ಕೆ ಚಲಿಸುವಾಗ ಈ ಘಟನೆ ಸಂಭವಿಸಿದೆನ್ನಲಾಗಿದೆ. ಬಸ್ ಡಿಕ್ಕಿಯಾದ ವೇಳೆ ಮಗುವಿನ ಜೊತೆಗಿದ್ದ ತಾಯಿಯು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಖಾಸಗಿ ಬಸ್ ಡಿಕ್ಕಿಯಾಗಿ ಬಾಲಕ ಮೃತ್ಯು..!            Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಗೆಳೆಯನ ಮನೆಯಿಂದ ಬೇರೊಂದು ಕಟ್ಟಡಕ್ಕೆ ಜಿಗಿಯುವ ವೇಳೆ ಕೆಳಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಕಾಮಾಕ್ಷಿಪಾಳ್ಯದ ಕೊಟ್ಟಿಗೆಪಾಳ್ಯದಲ್ಲಿ ವರದಿಯಾಗಿದೆ. ಮೃತ ವ್ಯಕ್ತಿಯನ್ನು ಚಂದ್ರಕಾಂತ್ ಪಾತ್ರಾ (37) ಎಂದು ಗುರುತಿಸಲಾಗಿದೆ. ಇವರು ಬ್ಯಾಗ್ ತಯಾರಿಕಾ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ತನ್ನ ಸ್ನೇಹಿತರೊಂದಿಗೆ ಕೊಟ್ಟಿಗೆಪಾಳ್ಯದ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದ  ಪಾತ್ರಾ, ತನ್ನ ಸ್ನೇಹಿತರೊಂದಿಗೆ ಟೆರೇಸ್ ಮೇಲೆ ಹೊಸ ವರ್ಷಾಚರಣೆ ಪಾರ್ಟಿ ಮಾಡುತ್ತಿದ್ದರು. ಈ ವೇಳೆ

ಪಕ್ಕದ ಕಟ್ಟಡಕ್ಕೆ ಜಿಗಿಯುವಾಗ ಬಿದ್ದು ವ್ಯಕ್ತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 01. ತೆಂಗಿನಕಾಯಿ ಕೀಳುವ ವೇಳೆ ವ್ಯಕ್ತಿಯೋರ್ವ ಆಯತಪ್ಪಿ ಮರದಿಂದ ಬಿದ್ದು ಮೃತಪಟ್ಟ ಘಟನೆ ನಾವೂರ ಎಂಬಲ್ಲಿ ನಡೆದಿದೆ. ನಾವೂರ ಸೂರ ನಿವಾಸಿ ಸುರೇಶ್ (40) ಎಂದು ಗುರುತಿಸಲಾಗಿದೆ. ಇವರು, ಕಳೆದ ಹಲವಾರು ವರ್ಷಗಳಿಂದ ತೆಂಗಿನಕಾಯಿ ಹಾಗೂ ಅಡಿಕೆ ಕೀಳುವ ಕಾಯಕ ಮಾಡುತ್ತಿದ್ದು, ಎಂದಿನಂತೆ ತೆಂಗಿನಕಾಯಿ ಕೀಳುವ ಕೆಲಸಕ್ಕೆಂದು ಹೋಗಿದ್ದರು. ಈ ಸಂದರ್ಭ ಆಕಸ್ಮಿಕವಾಗಿ ಮರದಿಂದ ಕೆಳಗೆ ಬಿದ್ದಿದ್ದು, ಗಂಭೀರ ಗಾಯಗೊಂಡ ಅವರನ್ನು ಕೂಡಲೇ ಬಂಟ್ವಾಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ, ಅಲ್ಲಿಂದ

ಬಂಟ್ವಾಳ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.!

(ನ್ಯೂಸ್ ಕಡಬ) newskadaba.com ಹುಣಸಗಿ, ಡಿ. 31. ಬ್ರಿಜ್‍ಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಹುಣಸಗಿ ಸಮೀಪದ ರಾಜನ್ ಕೊಳ್ಳೂರ್ ಬಳಿ ವರದಿಯಾಗಿದೆ. ಮೃತರನ್ನು ಕಾಮನಟಗಿ ಗ್ರಾಮದ ಮಲ್ಲಿಕಾರ್ಜುನ ಚೆನ್ನಪ್ಪ ಮಡಿವಾಳ (35) ಹಾಗೂ ಬಲಶೆಟ್ಟಿಹಾಳ್ ಗ್ರಾಮದ ಪರಶುರಾಮ ಅಂಬರೀಶ ಚಲವಾದಿ (32) ಎಂದು ಗುರುತಿಸಲಾಗಿದೆ. ಈ ಸಂಬಂಧ ಹುಣಸಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬ್ರಿಜ್ ಗೆ ಕಾರು ಢಿಕ್ಕಿ ➤ ಇಬ್ಬರು ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top