ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ➤ ಓರ್ವ ಮೃತ್ಯು
(ನ್ಯೂಸ್ ಕಡಬ) newskadaba.com ವಿರಾಜಪೇಟೆ, ಡಿ. 27. ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ವಿರಾಜಪೇಟೆಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಚಿನ್ ಮುತ್ತಣ್ಣ (26) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಆರ್ಮುಗ ಎಂದು ಗುರುತಿಸಲಾಗಿದೆ. ಇವರನ್ನು ವಿರಾಜಪೇಟೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ➤ ಓರ್ವ ಮೃತ್ಯು Read More »
ಕರ್ನಾಟಕ, ಕ್ರೈಮ್ ನ್ಯೂಸ್




