death

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಡಿ.12 ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟು, ಓರ್ವ ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ತಾಲೂಕಿನ ಕಲ್ಲಾಪುರ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ವಿವೇಕ್ (21), ಕಾರ್ತಿಕ್ (21) ಹಾಗೂ ಮೋಹನ್ (21) ಎಂದು ಗುರುತಿಸಲಾಗಿದೆ. ದಾವಣಗೆರೆಯ ರುದ್ರೇಶ್ ಪಾಟೀಲ್ (20) ಎಂಬಾತ ಗಂಭೀರ ಗಾಯಗೊಂಡಿದ್ದು, ಶಿವಮೊಗ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ವಿದ್ಯಾರ್ಥಿಗಳೆಲ್ಲ ಶಿವಮೊಗ್ಗದಿಂದ ದಾವಣಗೆರೆಗೆ ಬಲೆನೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬರುತ್ತಿದ್ದ […]

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ➤ ಮೂವರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ, ಡಿ.12. ಗುಡ್ಡಗಾಡು ಪ್ರದೇಶದಲ್ಲಿ ಶಾಲಾ ಪ್ರವಾಸದ ಬಸ್ಸೊಂದು ಪಲ್ಟಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, 47 ಮಂದಿ ಗಾಯಗೊಂಡ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಪರ್ವತ ಪ್ರದೇಶದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಪಿಕ್ ನಿಕ್ ಮುಗಿಸಿಕೊಂಡು ಹಿಂದಿರುಗುವಾಗ ಈ ಘಟನೆ ನಡೆದಿದ್ದು, ಬ್ರೇಕ್ ವೈಫಲ್ಯದಿಂದ ಚಾಲಕನ ನಿಯಂತ್ರಣ ತಪ್ಪಿ ಅವಘಢ ನಡೆದಿದೆ ಎಂದು ತಿಳಿದುಬಂದಿದೆ. ಮುಂಬೈ ಸಬ್-ಅರ್ಬನ್ ಪ್ರದೇಶದ ಚೆಂಬೂರಿನ ಕೋಚಿಂಗ್ ಕ್ಲಾಸ್ ಒಂದರ ಸುಮಾರು 49 ವಿದ್ಯಾರ್ಥಿಗಳು ಖಾಸಗಿ

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ ➤ಇಬ್ಬರು ಮೃತ, 47 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಧಾರಾಕಾರ ಮಳೆ ➤ನಾಲ್ವರು ಮೃತ್ಯು

(ನ್ಯೂಸ್ ಕಡಬ) newskadaba.com ಚೆನ್ನೈ, ಡಿ. 10. ಮಾಂಡೌಸ್ ಚಂಡಮಾರುತದ ಹೊಡೆತಕ್ಕೆ ಸಿಲುಕಿರುವ ತಮಿಳುನಾಡಿನಲ್ಲಿ ತೀವ್ರ ರೀತಿಯ ಹಾನಿಯಾಗಿದೆ. ಚೆನ್ನೈ ಮತ್ತು ಚೆಂಗಲಪಟ್ಟು ಜಿಲ್ಲೆಯ ಹಲವೆಡೆ ಜಲಾವೃತವಾಗಿದ್ದು, ಮರಗಳು ಧರೆಗುರುಳಿ ಬಿದ್ದಿವೆ ಎಂದು ವರದಿ ತಿಳಿಸಿದೆ. ರಸ್ತೆಗಳು ನೀರಿನಿಂದ ತುಂಬಿ ವಾಹನ ಸವಾರರು ಪರದಾಡುವಂತಾಗಿದೆ.   ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದ ಪರಿಣಾಮ ಸಮೀಪದಲ್ಲಿದ್ದ ಪೆಟ್ರೋಲ್ ಬಂಕ್ ವೊಂದು ಹಾನಿಯಾಗಿದೆ ಎನ್ನಲಾಗಿದೆ. ಚೆನ್ನೈ ನಗರದಲ್ಲಿ ಹಲವು ಮರಗಳು ಉರುಳಿ ಬಿದ್ದಿದೆ ಎಂದು ತಿಳಿದುಬಂದಿದೆ. ಗೋಡೆಯೊಂದು ಕುಸಿದು

ಧಾರಾಕಾರ ಮಳೆ ➤ನಾಲ್ವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 10. ಬಸ್ ಚಾಲಕನ ನಿರ್ಲಕ್ಷದಿಂದಾಗಿ ಓರ್ವ ಮಹಿಳೆ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ.     ಮೃತ ಮಹಿಳೆಯನ್ನು ಮೇಘ ರಂಜಿತ್(34) ಎಂದು ಗುರುತಿಸಲಾಗಿದೆ. ಚಾಲಕನ ಅತಿವೇಗದ ಚಾಲನೆಯೇ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದು, ಸಮೀಪದ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.      

ಬಸ್ ಅಪಘಾತ ➤ಓರ್ವ ಮಹಿಳೆ ಬಲಿ …!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!!

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ. 10. ಶಾಲಾ ವಾಹನ ಡಿಕ್ಕಿಯಾಗಿ ಮಹಿಳೆಯೋರ್ವರು ಮೃತಪಟ್ಟ ಘಟನೆ ಪಡುಬಿದ್ರೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಸಂಭವಿಸಿದೆ.   ಮೃತರನ್ನು ಕಾಪು ಮಲ್ಲಾರು ನಿವಾಸಿ ರವೀಂದ್ರನಾಥ ಶೆಟ್ಟಿರವರ ಪತ್ನಿ ಸಪ್ನ(54) ಎಂದು ಗುರುತಿಸಲಾಗಿದೆ. ಇವರು ದಿನಸಿ ಅಂಗಡಿಗೆ ತೆರಳಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಮಂಗಳೂರಿನಿಂದ ಉಡುಪಿಗೆ ಚಲಿಸುತ್ತಿದ್ದ ಖಾಸಗಿ ವಿದ್ಯಾಸಂಸ್ಥೆಯ ವಾಹನ ಡಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.    

ಶಾಲಾ ವಾಹನ ಢಿಕ್ಕಿ ➤ ಪಾದಾಚಾರಿ ಸ್ಥಳದಲ್ಲೇ ಮೃತ್ಯು…!!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಡಿ. 10.  ಕೊಳವೆಬಾವಿಗೆ ಬಿದ್ದಿದ್ದ ಎಂಟು ವರ್ಷದ ಬಾಲಕ ಮೃತಪಟ್ಟ ಘಟನೆ ಶನಿವಾರದಂದು ಮಧ್ಯಪ್ರದೇಶದ ಬೇತುಲ್ ನಲ್ಲಿ ನಡೆದಿದೆ.     ಮೃತ ಬಾಲಕನನ್ನು ತನ್ಮಯ್ ಎಂದು ಗುರುತಿಸಲಾಗಿದೆ. ಈತ ಡಿ. 06ರಂದು ಸಂಜೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ತೆರೆದಿಟ್ಟಿದ್ದ ಕೊಳವೆಬಾವಿಗೆ ಬಿದ್ದಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸಿ ಹೊರತೆಗೆದರೂ ಪ್ರಯೋಜನವಾಗಲಿಲ್ಲ ಎನ್ನಲಾಗಿದೆ. ಬಾಲಕನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.  

ಆಕಸ್ಮಿಕವಾಗಿ ಕೊಳವೆಬಾವಿಗೆ ಬಿದ್ದಿದ್ದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ

(ನ್ಯೂಸ್ ಕಡಬ) newskadaba.com ಆಂಧ್ರಪ್ರದೇಶ ಡಿ.09. ವಿಶಾಖಪಟ್ಟಣಂ ವ್ಯಾಪ್ತಿಯ ರೈಲು ನಿಲ್ದಾಣದಲ್ಲಿ ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಎಂ.ಶಶಿಕಲಾ (22) ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.   ಎಂಸಿಎ ಓದುತ್ತಿದ್ದ ಆಕೆ ಬುಧವಾರ ಬೆಳಗ್ಗೆ ಅಣ್ಣಾವರಂನಿಂದ ಗುಂಟೂರು – ರಾಯಗಡ ರೈಲಿನಲ್ಲಿ ರೈಲು ನಿಲ್ದಾಣದಲ್ಲಿ ಇಳಿಯುತ್ತಿದ್ದಾಗ ಅಪಘಾತಕ್ಕೆ ಗುರಿಯಾಗಿದ್ದು, ರೈಲ್ವೆ ರಕ್ಷಣಾ ತಂಡವು ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿಯನ್ನು ರಕ್ಷಿಸಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದರು. ಮಾಹಿತಿ ಪಡೆದ ಕುಟುಂಬ ಸದಸ್ಯರು ಆಸ್ಪತ್ರೆಗೆ ಧಾವಿಸಿದ್ದು,

ಬೋಗಿ ಮತ್ತು ಪ್ಲಾಟ್‌ಫಾರ್ಮ್ ನಡುವೆ ಸಿಲುಕಿದ್ದ ಯುವತಿ ಮೃತ್ಯು ➤ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಕಲಬುರಗಿ, ಡಿ.09 ಬಟ್ಟೆ ಒಗೆಯಲು ಹೋಗಿದ್ದ ವೇಳೆ ಇಬ್ಬರು ಯುವತಿಯರು ನೀರಿನ ಹೊಂಡದಲ್ಲಿ ಕಾಲು ಜಾರಿ ಮೃತಪಟ್ಟಿರುವ ಘಟನೆ ಶಹಬಾದ ನಗರದ ರಾಮಘಡ ಆಶ್ರಯ ಕಾಲೋನಿಯಲ್ಲಿ ಸಂಭವಿಸಿದೆ. ಮೃತರನ್ನು ರಾಮಘಡ ನಿವಾಸಿ ಮಾಣಿಕಮ್ಮ ಸಾಯಪ್ಪ ದಾಸರ(20) ಮತ್ತು ಕೀರ್ತಿಕಾ ರಾಜೇಶ(12) ಎಂದು ಗುರುತಿಸಲಾಗಿದೆ. ಬಟ್ಟೆ ಒಗೆಯಲು ಹೋಗಿದ್ದ ಇವರು ಆಕಸ್ಮಿಕವಾಗಿ ಹೊಂಡಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ಬಾಲಕಿಯರು ಕಾಣದೇ ಇರುವುದರಿಂದ ತಕ್ಷಣವೇ ಪೊಲೀಸರಿಗೆ ತಿಳಿಸಿದ್ದು, ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು ಈಜುಗಾರರ ನೆರವಿನಿಂದ ಮೃತದೇಹಗಳನ್ನು

ಹೊಂಡಕ್ಕೆ ಬಿದ್ದು ಯುವತಿಯರಿಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಡಿ.07  ಕಾಡು ಹಂದಿಗೆ  ಹಾರಿಸಿದ ಗುಂಡು ವ್ಯಕ್ತಿಯೋರ್ವರಿಗೆ ತಗುಲಿ ಮೃತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಬಸವರಾಜಪುರ ಗ್ರಾಮದಲ್ಲಿ ಸಂಭವಿಸಿದೆ.   ಮೃತಪಟ್ಟ ವ್ಯಕ್ತಿಯನ್ನು ಸುರೇಶ್ (44) ಎಂದು ಗುರುತಿಸಲಾಗಿದೆ. ಚಿಕ್ಕೂರು ತಾಂಡ್ಯದ ಗಂಗನಾಯ್ಕ ಹಾಗೂ ನಂದೀಶ್ ಎಂಬವರು ಕಾಡು ಹಂದಿಯ ಬೇಟೆಗೆ ತೆರಳಿದ್ದ ವೇಳೆ ಹೊಡೆದ ಗುಂಡು ಮಿಸ್ ಫೈರ್ ಆಗಿ ಸುರೇಶ್ ಎಂಬವರಿಗೆ ತಗುಲಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಗಂಡನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆಂದು

ಕಾಡು ಹಂದಿಗೆ ಹಾರಿಸಿದ ಗುಂಡು ತಗುಲಿ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಡಿ.07. ನಾಪತ್ತೆಯಾಗಿದ್ದ  ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ  ಪತ್ತೆಯಾದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ  ನಡೆದಿದೆ.   16 ವರ್ಷದ ಬಾಲಕನನ್ನು  ಆತನ ನಿವಾಸದಿಂದ ಅಪಹರಿಸಿದ ನಂತರ ಹತ್ಯೆ ಮಾಡಲಾಗಿದ್ದು, ಈ ಕೃತ್ಯವನ್ನು ನರಬಲಿಗಾಗಿ ಬಾಲಕನ ನೆರೆಮನೆಯಾತ ಮಾಡಿದ್ದಾನೆಂದು ಶಂಕಿಸಲಾಗಿದೆ.  ಈ ಕುರಿತು ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ, ಆರೋಪಿಯು ಬಾಲಕನನ್ನು ಕೊಲೆ ಮಾಡಿ ಮೀರತ್ನ ಕಬ್ಬಿನ ಗದ್ದೆಯಲ್ಲಿ ಬಿಟ್ಟಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಘಟನಾ ಸ್ಥಳಕ್ಕೆ ತೆರಳಿದ

ನಾಪತ್ತೆಯಾಗಿದ್ದ ಬಾಲಕನ ಮೃತದೇಹ ವಿರೂಪಗೊಂಡ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top