death

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ. 13.  ಉಜಿರೆ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ, ಯುವ ಪ್ರತಿಭೆ ಚಿನ್ಮಯ ಗೌಡ ಪಿ.ಕೆ. (18) ಅವರು ಅನಾರೋಗ್ಯದಿಂದ ನ.12ರಂದು ಕೊನೆಯುಸಿರೆಳೆದಿದ್ದಾರೆ. ಮೂಲತಃ ಮಂಡ್ಯದವರಾದ ಚಿನ್ಮಯ ಗೌಡ ಹಾಸ್ಟೆಲ್‌ನಲ್ಲಿದ್ದು, ಉಜಿರೆ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಉತ್ತಮ ಕಬಡ್ಡಿ ಪಟುವಾಗಿದ್ದ ಅವರು ಕಾಲೇಜಿಗೆ ಹಲವಾರು ಪ್ರಶಸ್ತಿಗಳನ್ನು ಗೆದ್ದುಕೊಟ್ಟಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ದುರಾದೃಷ್ಟವಶಾತ್ ಚಿಕಿತ್ಸೆ […]

ಅನಾರೋಗ್ಯಕ್ಕೆ ತುತ್ತಾಗಿ ಯುವ ಕಬ್ಬಡ್ಡಿ ಆಟಗಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಮೈಸೂರು, ನ. 13. ಮೈಸೂರು ಮೂಲದ ಖ್ಯಾತ ಅಂತಾರಾಷ್ಟ್ರೀಯ ಯೋಗ ಗುರು ಶರತ್‌ ಜೋಯಿಸ್‌ (53) ಅವರು ಅಮೆರಿಕದಲ್ಲಿ ಕೊನೆಯುಸಿರೆಳೆದಿದ್ದಾರೆ. ಶರತ್‌ ಜೋಯಿಸ್‌ ಅವರು ಯೋಗಾಭ್ಯಾಸ ಮತ್ತು ಯೋಗಪಾಠಕ್ಕೆ ತಮ್ಮ ಬದುಕನ್ನು ಮೀಸಲಾಗಿಟ್ಟಿದ್ದರು. ಖ್ಯಾತ ಪಾಪ್‌ ಗಾಯಕಿ ಮಡೋನಾ ಸೇರಿದಂತೆ ಹಲವರಿಗೆ ಯೋಗ ಕಲಿಸಿದ ಖ್ಯಾತಿಯೂ ಅವರಿಗಿದೆ. ಅವರು ಹೆಸರಾಂತ ಯೋಗ ಗುರು ಮೈಸೂರು ಮೂಲದ ಕೆ. ಪಟ್ಟಾಭಿ ಜೋಯಿಸ್‌ ಅವರ ಮೊಮ್ಮಗರಾಗಿದ್ದಾರೆ. ಅಮೆರಿಕದಲ್ಲಿ ನೆಲೆಸಿದ್ದ ಅವರು ಯೋಗಗುರುವಾಗಿ ತಾತನ ಹಾದಿಯಲ್ಲೇ ಸಾಗಿದ್ದರು.

ಅಂತಾರಾಷ್ಟ್ರೀಯ ಯೋಗ ಗುರು ಹೃದಯಾಘಾತದಿಂದ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಉಳ್ಳಾಲ, ನ. 12. ಜ್ವರದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಉಳ್ಳಾಲ ನಗರಸಭಾ ವ್ಯಾಪ್ತಿಯ ಅಕ್ಕರೆಕೆರೆ ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟ ಯುವಕನನ್ನು ಅಕ್ಕರೆಕೆರೆ ನಿವಾಸಿ ಅಬ್ದುಲ್ ಅಝೀಝ್ ಉಸ್ತಾದ್ ಹಾಗೂ ಜಮೀಲಾ ದಂಪತಿಯ ಪುತ್ರ ಮುಝೈನ್(22) ಎಂದು ಗುರುತಿಸಲಾಗಿದೆ. ಜ್ವರದಿಂದ ಬಳಲುತ್ತಿದ್ದ ಮುಝೈನ್ ರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದಿದ್ದಾರೆ.  

ಜ್ವರದಿಂದ ಬಳಲುತ್ತಿದ್ದ ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಬೀದರ್, ನ. 12. ಟ್ರಾಕ್ಟರ್ ಮತ್ತು ಬೈಕ್ ಮಧ್ಯೆ ಸಂಭವಿಸಿದ ಮುಖಾಮುಖಿ ಢಿಕ್ಕಿಯಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಮ್ನಾಬಾದ್ ತಾಲೂಕಿನ ಘಾಟಬೋರಾಳ ಹೊರವಲಯದಲ್ಲಿ ಸೋಮವಾರ ಮುಸ್ಸಂಜೆ ವೇಳೆ ನಡೆದಿದೆ. ಮೃತಪಟ್ಟವರು ಘಾಟಬೋರಳ ಗ್ರಾಮದ ನಿವಾಸಿ ಶತ್ರುಘ್ನ ಮಾರುತಿ ರಾವು ಹುಣಸನಾಳೆ (27) ಎಂದು ಗುರುತಿಸಲಾಗಿದೆ. ಶತ್ರುಘ್ನ ಸೋಮವಾರ ಸಂಜೆ ಗ್ರಾಮದಿಂದ ಹೊಲಕ್ಕೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಎದುರಿನಿಂದ ಬರುತ್ತಿದ್ದ ಟ್ರಾಕ್ಟರ್ ಢಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಟ್ರಾಕ್ಟರ್ – ಬೈಕ್ ಢಿಕ್ಕಿ: ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಕಾರವಾರ, ನ. 12. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕೈಗಾ ಅಣು ವಿದ್ಯುತ್ ಸ್ಥಾವರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿಹಾರ ಮೂಲದ ಸಿಐಎಸ್‌ಎಫ್ ಅಧಿಕಾರಿ ತಮ್ಮ ಪಿಸ್ತೂಲಿನಿಂದ ಶೂಟ್‌ ಮಾಡಿಕೊಂಡು ಮೃತಪಟ್ಟಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದು ಖಾಸಗಿ ಕಾರಣದಿಂದಲೋ ಅಥವಾ ಅಧಿಕಾರಿಗಳ ಕಿರುಕುಳ ಕಾರಣದಿಂದಲೋ ಎಂಬುದು ಇನ್ನೂ ತಿಳಿದಿಲ್ಲ. ಸದ್ಯ ಯಾವುದೇ ಡೆತ್‌ ನೋಟ್‌ ದೊರೆತಿಲ್ಲ. ರಕ್ಷಣಾ ಸಿಬ್ಬಂದಿಯ ಆತ್ಮಹತ್ಯೆಯಿಂದ ಕೈಗಾದಲ್ಲಿ ಆತಂಕ‌ ಸೃಷ್ಠಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.  

ಸಿಐಎಸ್‌ಎಫ್ ಅಧಿಕಾರಿ ಪಿಸ್ತೂಲಿನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೀದರ್, ನ. 07. ಮ‌ದ್ಯದ ಅಮಲಿನಲ್ಲಿದ್ದ ಕಾರ್ಮಿಕನೊಬ್ಬ ಪಾಲಕರಿಗೆ ವಿಡಿಯೋ ಕಾಲ್ ಮಾಡಿ ಲೈವ್’ನಲ್ಲೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಸವಕಲ್ಯಾಣ ತಾಲೂಕಿನ ಸದಲಾಪೂರ ಗ್ರಾಮದಲ್ಲಿ ಜರುಗಿದೆ. ಆತ್ಮಹತ್ಯೆಗೈದ ಯುವಕನನ್ನು ಮಹಾರಾಷ್ಟ್ರದ ನಿಲಂಗಾ ತಾಲೂಕಿನ ಡೋಬಲೆವಾಡಿ ಗ್ರಾಮದ‌ ನಿವಾಸಿ ಸಚಿನ ರಾಜಕುಮಾರ ಚವ್ಹಾಣ (32) ಎಂದು ಗುರುತಿಸಲಾಗಿದೆ. ಸುದ್ದಿ ತಿಳಿದ ಮುಡಬಿ ಠಾಣೆ ಪಿಎಸ್ಐ ಜಯಶ್ರೀ ಹೋಡಲ್ ನೇತೃತ್ವದ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಈ ಕುರಿತು ಮುಡಬಿ ಪೊಲೀಸ

ಪೋಷಕರಿಗೆ ವಿಡಿಯೋ ಕಾಲ್ ಮಾಡಿ ಯುವಕ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 07. ನಿಲ್ಲಿಸಿದ್ದ ವಾಹನ ಹಿಮ್ಮುಖವಾಗಿ ಚಲಿಸಿ ಹಿಂಬದಿ ಆಟವಾಡುತ್ತಿದ್ದ ಮಗು ವಾಹನದಡಿ ಸಿಲುಕಿ ಮೃತಪಟ್ಟ ಘಟನೆ ಲೊರೆಟ್ಟೊಪದವಿನಲ್ಲಿ ಬುಧವಾರ ನಡೆದಿದೆ. ಮೃತಪಟ್ಟ ಬಾಲಕಿಯನ್ನು ಫರಂಗಿಪೇಟೆ ಸಮೀಪದ ಪತ್ತನಬೈಲ್ ನಿವಾಸಿಯಾಗಿದ್ದ ಉನೈಸ್ ಮತ್ತು ಆಶೂರಾ ದಂಪತಿ ಪುತ್ರಿ ಮೂರುವರೆ ವರ್ಷದ ಆಶೀಕಾ ಎಂದು ಗುರುತಿಸಲಾಗಿದೆ. ಟಿಪ್ಪುನಗರದ ಮನೆಯಲ್ಲಿ ಆಟವಾಡುತ್ತಿದ್ದ ವೇಳೆ ನಿಲ್ಲಿಸಿದ್ದ ಟೆಂಪೋ ವಾಹನ ರಿವರ್ಸ್ ಬಂದಿದೆ. ಈ ವೇಳೆ ಮಗುವಿನ ಮೇಲೆ ವಾಹನ ಹಾದು ಹೋಗಿದ್ದು, ಮಗುವನ್ನು ಆಸ್ಪತ್ರೆಗೆ ಕೊಂಡೊಯ್ದರೂ

ನಿಲ್ಲಿಸಿದ್ದ ವಾಹನ ಹಿಮ್ಮುಖ ಚಲಿಸಿ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಗದಗ, ನ. 06.  ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ದೇವರ ದರ್ಶನ ಮಾಡಿಕೊಂಡು ಕಾರಿನಲ್ಲಿ ಮರಳುತ್ತಿದ್ದ ದಂಪತಿ ಭೀಕರ ಅಪಘಾತದಲ್ಲಿ ಸ್ಥಳದಲ್ಲೇ ಮೃತಪಟ್ಟ ಘಟನೆ ವರದಿಯಾಗಿದೆ. ಅಪಘಾತ ಗದಗ ಜಿಲ್ಲೆ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಮೂಲದ ಸಿದ್ದರಾಮ ಹಾಗೂ ಹೇಮಾ ಎಂಬ ದಂಪತಿ ಮೃತಪಟ್ಟವರು. ಮಕ್ಕಳಾದ ಮಲ್ಲಿಕಾರ್ಜುನ ಹಾಗೂ ಸಹನಾಗೆ ಗಾಯಗಳಾಗಿವೆ. ಗಾಯಾಳು ಮಕ್ಕಳನ್ನು ನರಗುಂದ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತರ ಕುಟುಂಬ ಕುಕ್ಕೆ ಸುಬ್ರಹ್ಮಣ್ಯ

ಕುಕ್ಕೆ ಸುಬ್ರಹ್ಮಣ್ಯದಿಂದ ಮರಳುತ್ತಿದ್ದ ದಂಪತಿ ಅಪಘಾತದಲ್ಲಿ ಮೃತ್ಯು: ಮಕ್ಕಳಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ನ. 06. ಮಹಿಂದ್ರಾ ಪಿಕಪ್ ಹಾಗೂ ಕಾರಿನ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಸಂಭವಿಸಿದೆ. ಮೃತರನ್ನು ರಟಕಲ್ ಗ್ರಾಮ ಕಲಬುರಗಿಯ ಜನತಾ ಲೇಔಟ್ ನಿವಾಸಿ ಮುರಗೇಶ್ ಚಂದ್ರಶೇಖರ ಉಪ್ಪಿನ್ (42) ಹಾಗೂ ಶಹಾಬಾದ್ ನಿವಾಸಿ ಧೂಳಮ್ಮ ಯಮುನಪ್ಪ (60) ಎಂದು ಗುರುತಿಸಲಾಗಿದೆ. ಮರುಗೇಶ್ ಕಲಬುರಗಿಯ ಎಚ್‌ಡಿಎಫ್‌ಸಿ ಗೋಲ್ಡ್ ಬ್ಯಾಂಕ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದು, ಮಂಗಳವಾರ ಮಧ್ಯರಾತ್ರಿ ಕಾರಿನಲ್ಲಿ ಮುರುಗೇಶ್

ಕಾರು- ಪಿಕಪ್ ಡಿಕ್ಕಿ- ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಕ್ಕಡ, ನ. 05. ಎಂಟು ದಿನಗಳ ಹಿಂದೆ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಕಾಲೇಜು ವಿದ್ಯಾರ್ಥಿನಿ ಚಿಕಿತ್ಸೆಗೆ ಸ್ಪಂದಿಸದೆ ಮಂಗಳೂರಿನ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ನ.5ರಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ. ಕೊಕ್ಕಡ ಹಳ್ಳಿಂಗೇರಿ ನಿವಾಸಿ ಪೌಲೋ ಡಿಸೋಜ- ಗ್ರೇಸಿ ಡಿಸೋಜ ದಂಪತಿ ಪುತ್ರಿ ಪ್ರಿಯಾಂಕಾ ಡಿ’ ಸೋಜ(19) ಮೃತಪಟ್ಟವಳು. ಈಕೆ ಉಪ್ಪಿನಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಬಿಎಸ್ಸಿ ವಿದ್ಯಾರ್ಥಿನಿ.  

ಆತ್ಮಹತ್ಯೆಗೆ ಯತ್ನಿಸಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top