death

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.!

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 07: ಕೊರೊನಾದಿಂದ ಬಳಲುತ್ತಿದ್ದ ಕಿರುತೆರೆ ನಟಿ ದಿವ್ಯಾ ಭಟ್ನಾಗರ್ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಯೇ ರಿಶ್ತಾ ಕ್ಯಾ ಕೆಹಲಾತಾ ಹೈ, ಉಡಾನ್, ಜೀತ್ ಗಯಿ ತೋ ಪಿಯಾ ಮೋ ಸೇರಿದಂತೆ ಹಲವು ಧಾರಾವಾಹಿಗಳು ಹಾಗೂ ಕೆಲವು ಸಿನಿಮಾಗಳಲ್ಲಿ ದಿವ್ಯಾ ನಟಿಸಿದ್ದರು.ನಟಿ ಶಿಲ್ಪಾ ಶಿರೋಡ್ಕರ್ ಇನ್ಸ್ಟಾಗ್ರಾಮ್ ಮೂಲಕ ಸಂತಾಪ ಸೂಚಿಸಿದ್ದು, ಭಟ್ನಾಗರ್ ಅವರು ನನ್ನ ಪ್ರೀತಿಯ ಗೆಳತಿಯಾಗಿದ್ದಳು, ಆಕೆಯ ನಿಧನದಿಂದ ನನಗೆ ತುಂಬಾ ದುಃಖವಾಗಿದೆ ಎಂದು ಬರೆದಿದ್ದಾರೆ. ನಟಿ ದೇವಲೋನಾ ಸೇರಿದಂತೆ […]

ಕೊವೀಡ್ ಗೆ ಬಲಿಯಾದ ಕಿರುತೆರೆ ನಟಿ.! Read More »

ಕರಾವಳಿ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮುಲ್ಕಿ, ಡಿ. 07: ರಾಷ್ಟ್ರೀಯ ಹೆದ್ದಾರಿ 66ರ ಹಳೆಯಂಗಡಿ ಕೆನರಾ ಬ್ಯಾಂಕ್ ಬಳಿ ಕಳೆದ ದಿನ ಬೆಳಿಗ್ಗೆ ಟೆಂಪೋ ಡಿಕ್ಕಿ ಹೊಡೆದು ನಡೆದ ಅಪಘಾತದಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಹಳೆಯಂಗಡಿ ಬಸ್ ನಿಲ್ದಾಣ ಬಳಿಯ ನಿವಾಸಿಗಳಾದ ತಾಯಿ ಸುಖಲತಾ(44) ಅವರ ಮಗ ಚಿರಾಗ್(10) ರಸ್ತೆ ಬದಿ ನಡೆದುಕೊಂಡು ಹೋಗುತ್ತಿರುವಾಗ ಉಡುಪಿ ಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಟೆಂಪೋ ಹಳೆಯಂಗಡಿ ಸಮೀಪಿಸುತ್ತಿದಂತೆಯೇ ಚಾಲಕನ ನಿಯಂತ್ರಣ ತಪ್ಪಿ ನಡೆದುಕೊಂಡು ಹೋಗುತ್ತಿದ್ದ ತಾಯಿ ಮತ್ತು ಮಗನಿಗೆ ಡಿಕ್ಕಿ ಹೊಡೆದು ಬಳಿಕ

ಹಳೆಯಂಗಡಿ ಬಳಿ ಟೆಂಪೋ ಡಿಕ್ಕಿ ಪ್ರಕರಣ ➤ ಚಿಕಿತ್ಸೆ ಫಲಕಾರಿಯಾಗದೆ ಗಾಯಾಳು ಮಹಿಳೆ ಮೃತ್ಯು Read More »

ಕರಾವಳಿ

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ

(ನ್ಯೂಸ್ ಕಡಬ) newskadaba.com ಚಿಕ್ಕಬಳ್ಳಾಪುರ, ಡಿ. 05: ಕೊರೊನಾದಿಂದಾಗಿ ವೇತನವಿಲ್ಲದೆ ಜೀವನ ನಿರ್ವಹಣೆಗೆ ಆರ್ಥಿಕ ಸಂಕಷ್ಟಕ್ಕೆ ನಲುಗಿದ ಖಾಸಗಿ ಶಾಲಾ ಶಿಕ್ಷಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವುದು ಶಿಕ್ಷಕ ವೃಂದದಲ್ಲಿ ಆಘಾತ ಉಂಟುಮಾಡಿದೆ.ಮಂಚೇನಹಳ್ಳಿಯ ಕನಗಾನಕೊಪ್ಪದ ಕೃಷ್ಣಪ್ಪ ಎಂಬುವವರ ಏಕೈಕ ಪುತ್ರ ಚಂದ್ರಶೇಖರ್ (35) ಆತ್ಮಹತ್ಯೆಗೆ ಶರಣಾದ ದುರ್ದೈವಿ. ಎಂಎ ಇಂಗ್ಲಿಷ್ ಪದವಿ ವ್ಯಾಸಂಗ ಮಾಡಿದ್ದ ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಖಾಸಗಿ ಶಾಲೆಯಲ್ಲಿ ಶಿಕ್ಷಕ ವೃತ್ತಿ ಮಾಡುತ್ತಿದ್ದರು. ಜತೆಗೆ ಟ್ಯುಟೋರಿಯಲ್ ನಡೆಸುತ್ತ ಜೀವನಕ್ಕೆ ಆಸರೆಯಾಗಿ ಮಾಡಿಕೊಂಡು ನೆಮ್ಮದಿ ಬದುಕು ಸಾಗಿಸುತ್ತಿದ್ದರು. ಒಂದೆಡೆ ಹಲವು

ಸಂಬಳ ಸಿಗದೇ ಸಾವಿಗೆ ಶರಣಾದ ಶಿಕ್ಷಕ ➤ “ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಿರಲಿ” ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕ Read More »

ಕರ್ನಾಟಕ

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 05: ಅತ್ತಾವರ ಶ್ರೀ ಉಮಾಮಹೇಶ್ವರ ದೇವಳದ ಮಜಿ ಮೊಕ್ತೇಸರರಾಗಿ, ದಕ್ಷಿಣ ಕನ್ನಡ ಜಿಲ್ಲಾ ಗಣಿಗಾರ ಯಾನೆ ಸಫಲಿಗರ ಮಾತೃ ಸಂಘದ ಮಾಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್(89) ರವರು ಅಸೌಖ್ಯದಿಂದ ಕಳೆದ ದಿನ ವಿಧಿವಶರಾಗಿದ್ದಾರೆ.     ಮೃತರು ಇಬ್ಬರು ಪತ್ನಿ, ಇಬ್ಬರು ಅಕ್ಕಂದಿರು, ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಕುಟುಂಬಸ್ಥರು ಸಂತಾಪ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೃಷ್ಣಪ್ಪ ಮೆಂಡನ್ ನಿಧನ Read More »

ಕರಾವಳಿ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.04: ಮುಖಂಡನೊಬ್ಬ ವ್ಯಕ್ತಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ವಿಟ್ಲ ಕಲಾಶೀಪಾಳ್ಯದಲ್ಲಿ ವರದಿಯಾಗಿದೆ.ವಿಟ್ಲ ಪಡ್ನೂರು ಗ್ರಾಮದ ಕಡಂಬು ಸುರಂಗದಮೂಲೆ ನಿವಾಸಿ ಚಿದಾನಂದ ಹಲ್ಲೆಗೊಳಗಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ಇನ್ನು ದಾಳಿಗೊಳಗಾದ ವ್ಯಕ್ತಿ ಚಿದಾನಂದ ಹಾಗೂ ಹಲ್ಲೆ ನಡೆಸಿರುವ ಜಯಕೊಟ್ಟಾರಿ ಒಬ್ಬರಿಗೊಬ್ಬರು ಪರಿಚಯಸ್ಥರಾಗಿದ್ದು, ಕಳೆದ ದಿನ ಚಿದಾನಂದ ಎಂಬುವರು ಸಂಜೆ ಮನೆಗೆ ತೆರಳುತ್ತಿದ್ದಾಗ ಏಕಾಏಕಿಯಾಗಿ ಬಂದ ಜಯಕೊಟ್ಟಾರಿ ಅವಾಚ್ಯ ಶಬ್ದಗಳಿಂದ ನಿಂಧಿಸಿ, ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ

ವಿಟ್ಲದಲ್ಲಿ ಪರಿಚಯಸ್ಥನಿಂದಲೇ ನಡೆಯಿತು ಹಲ್ಲೆ ➤ ಆರೋಪಿ ಜಯ ಕೊಟ್ಟಾರಿ ವಿರುದ್ಧ ಕೇಸ್ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ವಿತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 03: ಪರ್ಸೀನ್ ಬೋಟ್ ದುರಂತದಲ್ಲಿ ಮೃತರಾದ ಆರು ಮಂದಿ ಮೀನುಗಾರರ ಕುಟುಂಬಕ್ಕೆ ಮೀನುಗಾರಿಕೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಚೇರಿಯಲ್ಲಿ ಇಂದು (ಗುರುವಾರ) ಪರಿಹಾರದ ಚೆಕ್ ವಿತರಿಸಿದರು. ಒಂದು ಕುಟುಂಬಕ್ಕೆ ತಲಾ 6 ಲಕ್ಷ ರೂ.ನಂತೆ ಒಟ್ಟು 36 ಲಕ್ಷ ರೂ.ನ ಚೆಕ್ ವಿತರಿಸಲಾಯಿತು. ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ ಕಾಮತ್, ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಉಪಸ್ಥಿತರಿದ್ದರು.  

ಮಂಗಳೂರು: ಮೃತ ಮೀನುಗಾರರ ಕುಟುಂಬಕ್ಕೆ ಪರಿಹಾರ ವಿತರಣೆ Read More »

ಕರಾವಳಿ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು

(ನ್ಯೂಸ್ ಕಡಬ) newskadaba.com ಬದಿಯಡ್ಕ ಡಿ. 03: ಡಿಸೆಂಬರ್ 23ರಂದು ವಿವಾಹ ನಿಗದಿಯಾಗಿದ್ದ ಬದಿಯಡ್ಕ ನಿವಾಸಿಯೋರ್ವರು ಬೆಂಗಳೂರಿನಲ್ಲಿ ಅಪಘಾತ ಸಂಭವಿಸಿ ಮೃತಪಟ್ಟ ಘಟನೆ ನಡೆದಿದೆ. ಬದಿಯಡ್ಕ ಕರಿಂಬಿಲ ನಿವಾಸಿ ಪ್ರವೀಣ್ ಕುಮಾರ್ ಪ್ರಭು (29) ಮೃತ ದುರ್ದೈವಿ. ಪ್ರವೀಣ್ ಕಳೆದ ಹತ್ತು ವರ್ಷಗಳಿಂದ ಬೆಂಗಳೂರಿನಲ್ಲಿ ಇಲೆಕ್ಟ್ರಿಕಲ್ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ಸಂದರ್ಭ ಲಾರಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು ಎಂದು ತಿಳಿದು ಬಂದಿದೆ. ಬಳಿಕ ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ

ಬದಿಯಡ್ಕ: ಡಿ.23ಕ್ಕೆ ವಿವಾಹ ನಿಗದಿಯಾಗಿದ್ದ ಯುವಕ ಅಪಘಾತದಲ್ಲಿ ಮೃತ್ಯು Read More »

ಕರಾವಳಿ

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ ನ. 24: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನರಾಗಿದ್ದಾರೆ. ಅರೆಭಾಷೆ ಕುಂದಾಪುರದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ಪಣ್ಕ್ ಮಕ್ಕಳ್ ಆಲ್ಬಮ್ ಸಾಂಗ್ ಮೂಲಕ ಹೊಸ ಅಧ್ಯಾಯ ಬರೆದಿದ್ದರು. ಸಂಗೀತ ನಿರ್ದೇಶಕ ರವಿ ಬಸ್ರೂರ್ ಗರಡಿಯಲ್ಲಿ ಹಲವು ಕುಂದಗನ್ನಡದ ಸಾಹಿತ್ಯ ಉಣಬಡಿಸಿದ ಒಬ್ಬ ಅದ್ಭುತ ಬರಹಗಾರರಾಗಿದ್ದರು.     ನಂತರ ಕನ್ನಡದ ಕಮರ್ಷಿಯಲ್ ಸಿನಿಮಾಗಳತ್ತ ಮುಖಮಾಡಿದ ಅಶೋಕ್ ನೀಲಾವರ, ನಿರ್ಮಾಪಕ ಪಿ. ಆರ್. ಅಮೀನ್ ನಿರ್ಮಾಣದ ಕತ್ತಲೆ ಕೋಣೆ ಕನ್ನಡ ಚಿತ್ರಕ್ಕೆ ಎರಡು

ಉಡುಪಿ: ಕುಂದಗನ್ನಡ ಸಾಹಿತ್ಯಲೋಕ ಬ್ರಹ್ಮ ಅಶೋಕ್ ನೀಲಾವರ ನಿಧನ Read More »

ಕರಾವಳಿ

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ

(ನ್ಯೂಸ್ ಕಡಬ) newskadaba.com ಜೋಹಾನ್ಸಬರ್ಗ್ ನ. 23: ಮಹಾತ್ಮ ಗಾಂಧೀಜಿ ಅವರ ಮರಿಮೊಮ್ಮಗ ಸತೀಶ್ ಧುಪೆಲಿಯಾ ಕೊರೊನಾ ವೈರಸ್ ಗೆ ಸೌಥ್ ಆಫ್ರಿಕಾದಲ್ಲಿ ಬಲಿಯಾಗಿದ್ದಾರೆ. ಮೂರು ದಿನಗಳ ನಂತರ ಸತೀಶ್ ಧುಪೆಲಿಯಾ ತಮ್ಮ 66ನೇ ಹುಟ್ಟುಹಬ್ಬ ಆಚರಿಸಿಕೊಳ್ಳುವರಿದ್ದರು. ಸತೀಶ್ ಅವರ ಸೋದರಿ ಉಮಾ ಧುಪೆಲಿಯಾ ಸೋದರನ ಸಾವನ್ನು ಖಚಿತಪಡಿಸಿದ್ದಾರೆ. ಕಳೆದ ಒಂದು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ನನ್ನ ಪ್ರೀತಿಯ ಅಣ್ಣ ನಮ್ಮನ್ನು ಅಗಲಿದ್ದಾನೆ. ನ್ಯೂಮೇನಿಯಾ ಆಗಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೇ ವೇಳೆ ಅವರಿಗೆ ಕೋವಿಡ್-19 ಸೋಂಕು ಸಹ ತಗುಲಿತ್ತು.

ಮಹಾತ್ಮ ಗಾಂಧೀಜಿ ಮರಿಮೊಮ್ಮಗ ಕೊರೊನಾಗೆ ಬಲಿ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 23: ಹೆರಿಗೆಗೆಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಬಂಟ್ವಾಳ ಕಾಲೇಜು ರೋಡ್ ನಿವಾಸಿ ಭವಾನಿಶಂಕರ್ ಅವರ ಪತ್ನಿ ಕಾಜಲ್ ಶೆಟ್ಟಿ (25) ಮೃತಪಟ್ಟವರು. ಶನಿವಾರ ರಾತ್ರಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಹೆರಿಗೆಗೆಂದು ದಾಖಲಿಸಲಾಗಿತ್ತು. ಭಾನುವಾರ ಸಿಸೇರಿಯನ್ ಮೂಲಕ ಹೆರಿಗೆ ಮಾಡಲಾಗಿತ್ತು. ಈ ವೇಳೆ ಮಗು ಸಾವನ್ನಪ್ಪಿದ್ದಾಗಿ ವೈದ್ಯರು ತಿಳಿಸಿದ್ದಾರೆ. ಬಳಿಕ ತೀವ್ರ ರಕ್ತಸ್ರಾವದ ಹಿನ್ನೆಲೆಯಲ್ಲಿ ಮಹಿಳೆಯೂ ಗಂಭೀರ ಸ್ಥಿತಿಯಲ್ಲಿದ್ದರು. ರಾತ್ರಿ ವೇಳೆ ಮಹಿಳೆಯೂ ಮೃತಪಟ್ಟಿದ್ದಾರೆ.

ಬಂಟ್ವಾಳ: ಹೆರಿಗೆ ಬಳಿಕ ತಾಯಿ, ಮಗು ಮೃತ್ಯು Read More »

ಕರಾವಳಿ
Scroll to Top