death

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಬೆಳಗಾವಿ, ನ. 05. ಬೆಳಗಾವಿಯ ತಹಶೀಲ್ದಾರ್‌ ಕಚೇರಿಯಲ್ಲೇ ಸಿಬ್ಬಂದಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಆತ್ಮಹತ್ಯೆಗೆ ಶರಣಾದ ಸಿಬ್ಬಂದಿಯನ್ನು ಬೆಳಗಾವಿಯ ಮೂಡಲಗಿ ಪಟ್ಟಣದ ರುದ್ರಣ್ಣ ಯಡವಣ್ಣವರ ಎಂದು ಗುರುತಿಸಲಾಗಿದೆ. ಕಳೆದ 12 ವರ್ಷಗಳಿಂದ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿ ಎಸ್‌ಡಿಸಿ ಆಗಿ ಕೆಲಸ ಮಾಡುತ್ತಿದ್ದರು. ನಿನ್ನೆಯಷ್ಟೇ ಸವದತ್ತಿ ತಹಶೀಲ್ದಾರ್ ಕಚೇರಿಗೆ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಆದರೆ, ಈಗ ಬೆಳಗಾವಿ ತಹಶೀಲ್ದಾರ್ ಕಚೇರಿಯಲ್ಲಿಯೇ ರುದ್ರಣ್ಣ ನೇಣಿಗೆ ಶರಣಾಗಿರುವುದು ತಿಳಿದುಬಂದಿದೆ.  

ತಹಶೀಲ್ದಾರ್‌ ಕಚೇರಿಯಲ್ಲಿ ಸಿಬ್ಬಂದಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..!

(ನ್ಯೂಸ್ ಕಡಬ) newskadaba.com ಹಾಸನ, ನ. 05. ಕಾನ್ ಸ್ಟೇಬಲ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ ತಾಲೂಕಿನ ದುದ್ದ ಗ್ರಾಮದ ಹೊರವಲಯದಲ್ಲಿರುವ ಡಾಬಾ ಸರ್ಕಲ್ನಲ್ಲಿ ರವಿವಾರ ರಾತ್ರಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಬಾಗೇಶಪುರ ಗ್ರಾಮದ ಪೊಲೀಸ್ ಕಾನ್ ಸ್ಟೇಬಲ್ ಹರೀಶ್ ವಿ.(32) ಎಂದು ಗುರುತಿಸಲಾಗಿದೆ. ಇವರು ಕರ್ನಾಟಕ ಕೈಗಾರಿಕಾ ಭದ್ರತಾ ಪಡೆಯ ಕಾನ್ಸ್ಟೇಬಲ್ ಆಗಿದ್ದರು. ಹರೀಶ್ ಅವರ ವಿವಾಹವು ನ.11ರಂದು ನಿಗದಿಯಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ವಿವಾಹ ಆಮಂತ್ರಣ ಪತ್ರಿಕೆಗಳನ್ನು

ಪೊಲೀಸ್ ಕಾನ್ ಸ್ಟೇಬಲ್ ನ ಬರ್ಬರ ಕೊಲೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ರಾಯಚೂರು, ನ. 05. ಕಾರು ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಗರದ ಹೊರವಲಯದ ಪವರ್ ಗ್ರಿಡ್ ಸಮೀಪ ಸೋಮವಾರ ರಾತ್ರಿ ನಡೆದಿದೆ. ಮೃತಪಟ್ಟವರನ್ನು ಕಲ್ಲೂರು ಗ್ರಾಮದ ನಿವಾಸಿಗಳಾದ ಶರಣಬಸವ (20) ಮತ್ತು ಶಿವು (20) ಎಂದು ಗುರುತಿಸಲಾಗಿದೆ. ಗರೀಬ್ ಹಾಗೂ ಇರ್ಫಾನ್ ಗೆ ಗಂಭೀರ ಗಾಯಳಾಗಿವೆ ಎಂದು ತಿಳಿದುಬಂದಿದೆ. ಸಿರವಾರ ತಾಲೂಕಿನ ಕಲ್ಲೂರು ಗ್ರಾಮದ ಯುವಕರು ರಾಯಚೂರು ನಗರಕ್ಕೆ ಸೆಂಟ್ರಿಂಗ್

ಕಾರು- ದ್ವಿಚಕ್ರ ವಾಹನ ಡಿಕ್ಕಿ: ಇಬ್ಬರು ಮೃತ್ಯು, 2 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ. 04. ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಓರ್ವ ಮೃತಪಟ್ಟಿದ್ದು ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಸಂಭವಿಸಿದೆ. ಮೃತರನ್ನು ಕಡೆಗೋಳಿ ನಿವಾಸಿ ಪ್ರವೀಣ (30) ಎಂದು ಗುರುತಿಸಲಾಗಿದೆ. ಸಂದೀಪ ಗಂಭೀರವಾಗಿ ಗಾಯಗೊಂಡ ವ್ಯಕ್ತಿ. ಇಬ್ಬರು ಸೇಲ್ಸ್ ಮ್ಯಾನ್ ಕೆಲಸಗಾರರಾಗಿದ್ದು, ತನ್ನ ಖಾಸಗಿ ಕೆಲಸವನ್ನು ಮುಗಿಸಿ ಮನೆಗೆ ಜೊತೆಯಾಗಿ ಪ್ರಯಾಣಿಸುತ್ತಿದ್ದ ವೇಳೆ ಬಸ್ ಡಿಕ್ಕಿಯಾಗಿದೆ. ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ತುಂಬೆ ಸಮೀಪದ ಕಡೆಗೋಳಿ ಎಂಬಲ್ಲಿ ಮಂಗಳೂರಿನಿಂದ

ಬೈಕ್‌- ಖಾಸಗಿ ಬಸ್ ಡಿಕ್ಕಿ: ಓರ್ವ ಮೃತ್ಯು, ಇನ್ನೋರ್ವ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..!

(ನ್ಯೂಸ್ ಕಡಬ)newskadaba.com ಚಿಕ್ಕಬಳ್ಳಾಪುರ, ಅ. 30. ಬುಲೆಟ್ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ದೇವನಹಳ್ಳಿ ಬಳಿಯ ಬೆಂಗಳೂರು-ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ ಏರ್‌ಪೋರ್ಟ್‌ ರಸ್ತೆಯಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಚಿಕ್ಕಬಳ್ಳಾಪುರ ನಗರದ ರಾಹುಲ್ (18)ಎಂದು ಗುರುತಿಸಲಾಗಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಆಗಮಿಸುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಪಕ್ಕದಲ್ಲೇ ಬರುತ್ತಿದ್ದ ವಾಹನವೊಂದಕ್ಕೆ ಬುಲೆಟ್ ಬೈಕ್‌ ಟಚ್ ಆಗಿ ಡಿವೈಡರ್‌ಗೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಕೇಂಪೇಗೌಡ ಏರ್‌ಪೋರ್ಟ್‌ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬುಲೆಟ್ ಬೈಕ್‌- ಡಿವೈಡರ್‌ ಡಿಕ್ಕಿ: ಬೈಕ್ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಅ. 30. ನೋಯ್ಡಾ ಸೆಕ್ಟರ್-74ರ ಲೋಟಸ್ ಗ್ರ್ಯಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಎಲೆಕ್ಟ್ರಿಷಿಯನ್ ಮೃತಪಟ್ಟ ಘಟನೆ ವರದಿಯಾಗಿದೆ. ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಲ್ಲಿ ಸಹಕರಿಸಿದ್ದಾರೆ. ಮುಂಜಾನೆ 3:30 ರ ಸುಮಾರಿಗೆ, ನೋಯ್ಡಾ ಸೆಕ್ಟರ್ 74 ರ ಲೋಟಸ್ ಗ್ರಾಂಡ್ಯೂರ್ ಬ್ಯಾಂಕ್ವೆಟ್ ಹಾಲ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.  

ನೋಯ್ಡಾ ಬ್ಯಾಂಕ್ವೆಟ್ ಹಾಲ್ ನವೀಕರಣದ ವೇಳೆ ಬೆಂಕಿ – ಎಲೆಕ್ಟ್ರಿಷಿಯನ್ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.29.  ಅಪರಿಚಿತ ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತಪಟ್ಟ ಘಟನೆ ಬನ್ನೇರುಘಟ್ಟ ತಟ್ಟೆಕೆರೆ ಅರಣ್ಯ ವ್ಯಾಪ್ತಿಯಲ್ಲಿ ಬರುವ ಹುರುಗನ ದೊಡ್ಡಿಯಲ್ಲಿ ನಡೆದಿದೆ. ಬೆಳಗ್ಗೆ ಕಾಡಾನೆ ರಸ್ತೆ ದಾಟುತ್ತಿದ್ದಾಗ ವಾಹನ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದು, ರಸ್ತೆಯಲ್ಲೇ ಮೃತಪಟ್ಟಿದೆ. ಸ್ಥಳಕ್ಕೆ ಬನ್ನೇರುಘಟ್ಟ ವೈದ್ಯರ ತಂಡ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದಾರೆ.  

ವಾಹನ ಡಿಕ್ಕಿ ಹೊಡೆದು ಕಾಡಾನೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ

(ನ್ಯೂಸ್ ಕಡಬ) newskadaba.com ಹೈದರಾಬಾದ್, ಅ.29. ನಗರದ ಬಂಜಾರಾ ಹಿಲ್ ಪ್ರದೇಶದ ರಸ್ತೆ ಬದಿ ಮಳಿಗೆಯಲ್ಲಿ ಮೊಮೋಸ್ ಸೇವಿಸಿದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವರದಿಯಾಗಿದೆ. ಮೃತಪಟ್ಟ ಮಹಿಳೆಯ ಇಬ್ಬರು ಪುತ್ರಿಯರು ಹಾಗೂ ಇತರ 20 ಮಂದಿ ಅಸ್ವಸ್ಥಗೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ. ರೇಷ್ಮಾ ಬೇಗಂ (31) ಮತ್ತು 14 ಹಾಗೂ 12 ವರ್ಷ ವಯಸ್ಸಿನ ಆಕೆಯ ಇಬ್ಬರು ಹೆಣ್ಣುಮಕ್ಕಳು ಅಕ್ಟೊಬರ್ 25ರಂದು ಬೀದಿಬದಿ ಮೊಮೋಸ್ ಸೇವಿಸಿದ್ದರು. ತಕ್ಷಣವೇ ಮೂವರಿಗೂ ವಿಷಪ್ರಾಶನದ ಲಕ್ಷಣಗಳು ಕಂಡುಬಂದವು. ವಾಂತಿ ಬೇಧಿ ಮತ್ತು

ರಸ್ತೆ ಬದಿ ಮೊಮೋಸ್ ಸೇವಿಸಿ ಮಹಿಳೆ ಮೃತ್ಯು: 22 ಮಂದಿ ಅಸ್ವಸ್ಥ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ

(ನ್ಯೂಸ್ ಕಡಬ) newskadaba.com ಅ.26, ಭಟ್ಕಳ: ಭಟ್ಕಳದ ಹಿರಿಯ ಸಾಮಾಜಿಕ ಹೋರಾಟಗಾರ, ಎಸ್.ಜೆ. ಸೈಯದ್ ಖಾಲಿದ್ ರವರು ಶನಿವಾರ ಪೂರ್ವಾಹ್ನ 11 ಗಂಟೆ ಸುಮಾರಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಸುಮಾರು 28 ವರ್ಷಗಳ ಕಾಲ ಅಬುಧಾಬಿಯಲ್ಲಿ ಉದ್ಯೋಗಿಯಾಗಿದ್ದ ಸೈಯದ್ ಖಾಲಿದ್ ಅಲ್ಲಿ ನವಾಯತ್ ಸಮುದಾಯದ ಮರ್ಕಝಿ ಅನ್ ನವಾಯತ್ ಸಂಘಟನೆ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಭಟ್ಕಳ ಮುಸ್ಲಿಮ್ ಜಮಾಅತೆ ಅಬುಧಾಬಿಯ ಎರಡು ಅವಧಿಯ ಕಾರ್ಯದರ್ಶಿಯಾಗಿ ಹಾಗೂ ಒಂದು ಅವಧಿಗೆ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಅಂಜುಮನ್,

ಭಟ್ಕಳ: ಹಿರಿಯ ಸಾಮಾಜಿಕ ಹೋರಾಟಗಾರ ನಿಧನ Read More »

ಕರಾವಳಿ
Crime

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ

(ನ್ಯೂಸ್ ಕಡಬ) newskadaba.com ಕೋಲಾರ, ಅ.26. ಪದೇಪದೆ ಪತ್ನಿಯನ್ನು ಚುಡಾಯಿಸುತ್ತಿದ್ದ ಯುವಕನನ್ನು ಪತಿಯೊಬ್ಬ ಚಾಕುವಿನಿಂದ ಇರಿದು ಕೊಲೆಗೈದಿರುವುದು ಘಟನೆ ನಡೆದಿದೆ. ಕೊಲೆಯಾದ ಯುವಕನನ್ನು ರೋಹಿದ್ ಅಲಿಯಾಸ್ ಅರ್ಬಾಜ್ (25) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಅಮ್ಜದ್ ಎಂದು ಗುರುತಿಸಲಾಗಿದೆ. ರೋಹಿದ್ ಕೆಲ ದಿನಗಳಿಂದ ಅಮ್ಜದ್ ಪತ್ನಿಯ ಮೇಲೆ ಕಣ್ಣು ಹಾಕಿದ್ದ. ಇದೇ ವಿಚಾರವಾಗಿ ರೋಹಿದ್‌ಗೆ ಅಮ್ಜಾದ್ ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದ. ಆದರೆ ತನ್ನ ಹಳೇ ಚಾಳಿ ಮುಂದುವರಿಸಿದ್ದ ರೋಹಿದ್‌ನನ್ನು ಚಾಕುವಿನಿಂದ ಇರಿದು ಕೊಂದಿದ್ದಾನೆ. ರೋಹಿಸ್‌ನ ಎದೆಗೆ

ಪತ್ನಿಯನ್ನು ಚುಡಾಯಿಸಿದ್ದಕ್ಕೆ ಯುವಕನ ಎದೆಗೆ ಚಾಕುವಿನಿಂದ ಇರಿದು ಕೊಲೆಗೈದ ಪತಿ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top