death

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ. ಸೆ.02:  ಕುಕ್ಕೆ ಸುಬ್ರಹ್ಮಣ್ಯದ ಉದ್ಯಮಿ ಆರ್ಯಭಟ ಪ್ರಶಸ್ತಿ ಪುರಸ್ಕøತ ರವಿ ಕಕ್ಕೆಪದವುರವರ ತಾಯಿ ಚಂದು ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ಕಮಲರವರು ಇಂದು ಮುಂಜಾನೆ ಕಕ್ಕೆಪದವುವಿನಲ್ಲಿ ನಿಧನರಾಗಿದ್ದಾರೆ.   ಇವರಿಗೆ 71 ವರುಷ ವಯಸ್ಸಾಗಿತ್ತು. ಮೃತರು ತಮ್ಮ ಹಿರಿಯ ಪುತ್ರ ರವಿ ಕಕ್ಕೆಪದವುರವರೊಂದಿಗೆ ಸುಬ್ರಹ್ಮನ್ಯದಲ್ಲಿಯೇ ವಾಸವಾಗಿದ್ದರು. ಆದರೆ ಮೃತ ಕಮಲರವರು ಪತಿಯ ಮನೆ ಕಕ್ಕೆಪದವುಗೆ ಹೋಗಬೇಕೆಂದು ಕೇಳಿಕೊಂಡ ಮೇರೆಗೆ ಆ. 31 ರಂದು ಸುಬ್ರಹ್ಮಣ್ಯದಿಂದ ಕಕ್ಕೆಪದವುಗೆ ತೆರಳಿದ್ದರು. ಪತಿಯ ಮನೆಯಲ್ಲೆ ವಿಧಿವಶರಾಗಿದ್ದಾರೆ. ಮೃತರು […]

ಸುಬ್ರಹ್ಮಣ್ಯ : ರವಿ ಕಕ್ಕೆಪದವುರವರಿಗೆ ಮಾತೃವಿಯೋಗ Read More »

ಕರ್ನಾಟಕ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್

(ನ್ಯೂಸ್ ಕಡಬ) newskadaba.com  ನವದೆಹಲಿ. ಸೆ.01: ಕಳೆದ ದಿನ ಮಾಜಿ ರಾಷ್ಟ್ರಪತಿ, ಭಾರತ ರತ್ನ ಪ್ರಣಬ್ ಮುಖರ್ಜಿ ಅವರ ನಿಧನದಿಂದಾಗಿ ಇಡೀ ದೇಶ ದುಃಖದಲ್ಲಿ ಮುಳುಗಿ ಹೋಗಿದೆ. ಪ್ರಣಬ್ ಮುಖರ್ಜಿ ನಿಧನಕ್ಕೆ ನಾನಾ ವಲಯಗಳ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ. ತಂದೆಯ ಮರಣದಿಂದ ಶೋಕಸಾಗರದಲ್ಲಿ ಮುಳುಗಿರುವ ಅವರ ಪುತ್ರಿ ಶರ್ಮಿಷ್ಟ ಮುಖರ್ಜಿ ಭಾವೋದ್ವೇಗದಿಂದ ಟ್ವೀಟ್ ಮಾಡಿದ್ದಾರೆ.ಎಲ್ಲರಿಗೂ ಧನ್ಯವಾದ ಎಂದು ಟ್ವೀಟ್ ಆರಂಭಿಸಿರುವ ಶರ್ಮಿಷ್ಟ ಅಪ್ಪ ಎಲ್ಲರೂ ನಿಮಗೆ ಅಂತಿಮ ವಿದಾಯ ಸಲ್ಲಿಸಲು ನಿಮ್ಮ ಅಚ್ಚುಮೆಚ್ಚಿನ ಕವಿಯ ಸಾಲುಗಳನ್ನು ಉಲ್ಲೇಖಿಸುವ

ಮಾಜಿ ರಾಷ್ಟ್ರಪತಿ ಪ್ರಣಬ್ ಪುತ್ರಿಯಿಂದ ಭಾವೋದ್ವೇಗದ ಟ್ವೀಟ್ Read More »

ರಾಷ್ಟ್ರೀಯ ನ್ಯೂಸ್

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ,. ಆ,31:  ದೇಶದಲ್ಲಿ ಕೊರೊನಾ ವೈರಸ್ ಅಬ್ಬರ ಮುಂದುವರೆದಿದ್ದು, ದೇಶದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಡಾ. ಎಸ್. ಪದ್ಮಾವತಿ (103) ಅವರು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. ಎಸ್.ಪದ್ಮಾವತಿ ಅವರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.     ಹನ್ನೊಂದು ದಿನಗಳ ಹಿಂದೆ ಕೋವಿಡ್-19 ಸೋಂಕು ಕಂಡುಬಂದ ಇವರನ್ನು ನ್ಯಾಷನಲ್ ಹಾರ್ಟ್ ಇನ್‌ಸ್ಟಿಟ್ಯೂಟ್ (ಎನ್‌ಎಚ್‌ಐ)ಗೆ ದಾಖಲಿಸಲಾಗಿತ್ತು. 1981ರಲ್ಲಿ ಈ ಸಂಸ್ಥೆಯನ್ನು

ಭಾರತದ ಮೊದಲ ಮಹಿಳಾ ಹೃದ್ರೋಗ ತಜ್ಞೆ ಕೊರೊನಾ ಸೋಂಕಿಗೆ ಮೃತ್ಯು Read More »

ಕರಾವಳಿ

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೇರಳ . ಆ,31:  ವಿದೇಶದಿಂದ ತವರು ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿಯೊಬ್ಬರು ವಿಮಾನ ನಿಲ್ದಾಣದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಇಡುಕ್ಕಿ ಜಿಲ್ಲೆಯ ಚೆರುಥೋನಿ ಮೂಲದ 28 ವರ್ಷದ ಲೀಜಾ ಜೋಸ್ ಮೃತ ವಿದ್ಯಾರ್ಥಿನಿ. ಲೀಸಾ ಕಳೆದ ನಾಲ್ಕು ವರ್ಷಗಳಿಂದ ದಕ್ಷಿಣ ಕೊರಿಯದ ಪುಸಾನ್ ವಿಶ್ವವಿದ್ಯಾಲಯದಲ್ಲಿ ಸಂಶೋಧನಾ ವಿದ್ಯಾರ್ಥಿನಿಯಾಗಿದ್ದರು.   ಕೇರಳಕ್ಕೆ ವಾಪಸ್ ಬರಲೆಂದು ಲೀಸಾ, ಇಂಚಿಯಾನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಾರೆ. ವಿಮಾನ ನಿಲ್ದಾಣಕ್ಕೆ ಬಂದ ಲೀಸಾ ಏಕಾಏಕಿ ಕುಸಿದು

ರಾಜ್ಯಕ್ಕೆ ವಾಪಸ್ ಆಗುತ್ತಿದ್ದ ಸಂಶೋಧನಾ ವಿದ್ಯಾರ್ಥಿನಿ ವಿಮಾನ ನಿಲ್ದಾಣದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮುಲ್ಕಿ. ಆ,31: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮುಲ್ಕಿ ಸಮೀಪದ ಕೊಲಕಾಡಿ ಎಂಬಲ್ಲಿ ನಡೆದಿದೆ. ಕೊಲಕಾಡಿ ನಿವಾಸಿ ರತ್ನಾಕರ್ ಆಚಾರ್ಯ ಎಂಬುವವರ ಪತ್ನಿ ಶಶಿ ಆರ್ ಆಚಾರ್ಯ (55) ಎಂಬುವವರು ಮೃತ ಮಹಿಳೆಯಾಗಿದ್ದಾರೆ.       ಭಾನುವಾರ ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಮಹಿಳೆಯನ್ನು ಸ್ಥಳೀಯರು ಹುಡುಕಾಟ ನಡೆಸಿದಾಗ ಅವರ ಮೃತ ದೇಹ ಬಾವಿಯಲ್ಲಿ ಪತ್ತೆಯಾಗಿದೆ. ಆಪದ್ಬಾಂಧವ ಆಸಿಫ್ ನೇತೃತ್ವದ ಕಾರ್ನಾಡು ಮೈಮುನಾ ಫೌಂಡೇಶನ್ ಸಿಬ್ಬಂದಿ ಮುಸ್ತಕ್

ಮುಲ್ಕಿ : ಮಾನಸಿಕ ಖಿನ್ನತೆ, ಬಾವಿಗೆ ಹಾರಿ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ,30: ಅಡಿಕೆ ಪತ್ರಿಕೆ ಪ್ರಕಾಶಕ, ಪತ್ರಿಕೆಯನ್ನು ನಡೆಸುತ್ತಿದ್ದ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸಿ ಆಚಾರ್ ಕಳೆದ ದಿನ ಬೆಳಿಗ್ಗೆ ನಿಧನರಾಗಿದ್ದಾರೆ.   ಕಳೆದ ಮೂರು ದಶಕಗಳಿಂದ ಬೇರೆ ಬೇರೆ ಪದಾಧಿಕಾರಿಯಾಗಿದ್ದು, ಅವರು ಅಡಿಕೆ ಕೃಷಿ ಸಮುದಾಯದ ಹಿತಾಸಕ್ತಿ ರಕ್ಷಣೆಯಾಗಿ ಅಡಿಕೆ ಪತ್ರಿಕೆಯ ನಿರ್ವಾಹಣೆಗಾಗಿ ತಮ್ಮ ಗಣನೀಯ ಕೊಡುಗೆ ನೀಡಿದ್ದರು. ಮೃತರು ಪತ್ನಿ , ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ Read More »

ಕರಾವಳಿ, ಕರ್ನಾಟಕ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,28:  ನಗರದ ಬಿಜೈ KSRTC  ಬಳಿ ಬುಧವಾರ ಸಂಜೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ನ್ಯಾಯವಾದಿ ಬಿಎಂ ದುಗ್ಗಪ್ಪ ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ‌ ನಿಧನರಾಗಿದ್ದಾರೆ.   ಸುಳ್ಯ ಮೂಲದ ಇವರು ನಗರದ ಆಕಾಶಭವನ ಬಳಿ ನೆಲೆಸಿದ್ದರು. ಬುಧವಾರ ಸಂಜೆ  ತನ್ನ ಮನೆಯಿಂದ ಬೆಸೆಂಟ್ ಶಿಕ್ಷಣ ಸಂಸ್ಥೆಯ ಬಳಿ ಇರುವ ಕಚೇರಿಗೆ ತೆರಳುತ್ತಿದ್ದಾಗ ಇವರು ಹೋಗುತ್ತಿದ್ದ ಸ್ಕೂಟರ್‌ಗೆ ಹಿಂದಿನಿಂದ ಕಾರು ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಇವರನ್ನು ಖಾಸಗಿ

ಮಂಗಳೂರು : ಅಪಘಾತದಲ್ಲಿ ಗಾಯಗೊಂಡಿದ್ದ ಸುಳ್ಯ ಮೂಲದ ನ್ಯಾಯವಾದಿ ಮೃತ್ಯು Read More »

ಕರಾವಳಿ, ಕರ್ನಾಟಕ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..!

(ನ್ಯೂಸ್ ಕಡಬ) newskadaba.com ಬ್ರಹ್ಮಾವರ. ಆ,27:  ಪ್ರೀತಿಸಿ ಕೈಕೊಟ್ಟ ಯುವಕನ ಮನೆಯ ಪರಿಸರದಲ್ಲೇ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಅನಿಷಾ ಮೃತ ದುರ್ದೈವಿ. ಕುಂದಾಪುರದ ಸಾಯಿಬ್ರಕಟ್ಟೆ ಸಮೀಪ ಇರುವ ಕಾಜರಹಳ್ಳಿ ಎಂಬ ಕುಗ್ರಾಮದಲ್ಲಿನ ಪ್ರತಿಭಾವಂತೆ ಯುವತಿ ಅನಿಷಾ. ಬಾಲ್ಯದಿಂದಲೂ ಕಲಿಕೆಯಲ್ಲಿ ಮುಂದಿದ್ದ ಅನಿಷಾ ಎಲ್ಲಾ ಸವಾಲುಗಳನ್ನು ಮೆಟ್ಟಿ ಎಂಬಿಎ ಮಾಡಿ ಊರಿಗೆ ಮಾದರಿಯಾಗಿದ್ದಳು. ಮನೆಯಲ್ಲಿ ಕಿತ್ತು ತಿನ್ನುವ ಬಡತನವಿದ್ದರೂ ಕೂಡ ಈಕೆಯ ತಾಯಿ ತನ್ನ ಐವರು ಮಕ್ಕಳಿಗೂ ಉತ್ತಮ ವಿದ್ಯಾಭ್ಯಾಸ

ಪ್ರಿಯಕರನ ಮನೆಯ ಹತ್ತಿರ ಪ್ರಿಯತಮೆ ಆತ್ಮಹತ್ಯೆಗೆ ಶರಣು ➤ ಡೆತ್ ನೋಟ್‍ನಲ್ಲಿತ್ತು ಪ್ರಿಯಕರನ ಅಸಲಿ ಮುಖವಾಡ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ

(ನ್ಯೂಸ್ ಕಡಬ) newskadaba.com ಬಾಳಿಲ. ಆ,27:  ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ದಿನೇಶ್ವಂದ್ರ ಬಾಳಿಲ ರವರು ದೈವಾನಿಧನರಾಗಿದ್ದಾರೆ. ಅನಾರೋಗ್ಯ ಹಿನ್ನಲೆಯಲ್ಲಿ ಅವರು ಕೆಲ ದಿನಗಳ ಹಿಂದೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.     ಆದ್ರೆ ಚಿಕಿತ್ಸೆ ಫಲಿಸದೆ ಇಂದು ಮುಂಜಾನೆ ಅವರು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳಿದಿದ್ದಾರೆ. ವಿದ್ಯಾರ್ಥಿಗಳ ಅಚ್ಚು ಮೆಚ್ಚಿನ ಶಿಕ್ಷರಾಗಿದ್ದ ಡಿ.ಸಿ ಸರ್ ಎಂದೇ ವಿದ್ಯಾರ್ಥಿ ವಲಯದಲ್ಲಿ ಗುರುತಿಸಿಕೊಂಡಿದ್ದ ದಿನೇಶ್ಚಂದ್ರರವರ ನಿಧನ ಅವರ ಕುಟುಂಬ ಹಾಗೂ ಆಪ್ತವಲಯದಲ್ಲಿ ದಿಗ್ಬ್ರಮೆ ಮೂಡಿಸಿದೆ. ಇನ್ನು ಇವೆ

ವಿದ್ಯಾಬೋಧಿನಿ ಪ್ರೌಢಶಾಲೆ ಬಾಳಿಲದ ಶಿಕ್ಷಕ ದಿನೇಶ್ವಂದ್ರ ವಿಧಿವಶ Read More »

ಕರ್ನಾಟಕ

ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ

ಸ್ನಾನ ಮಾಡುತ್ತಿದ್ದಾಗ ಹೊಳೆ ಪಾಲಾಗಿ ಮಂಗಳೂರು ನಿವಾಸಿಯೋರ್ವ ಮೃತಪಟ್ಟ ಘಟನೆ ಮಧೂರು ಬಳಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ಎಕ್ಕೂರಿನ ವಿನೋದ್ ( 35 ) ಎಂದು ಗುರುತಿಸಲಾಗಿದೆ.ಆದಿತ್ಯವಾರ ಸಂಜೆ ಘಟನೆ ನಡೆದಿತ್ತು.     ಮಧೂರಿನ ತೋಟವೊಂದರಲ್ಲಿ ಕೆಲಸ ನಿರ್ವಹಿಸಿ ಮಧೂರು ಸೇತುವೆ ಬಳಿಯ ಹೊಳೆ ಯಲ್ಲಿ ಸ್ನಾನಕ್ಕಿಳಿದ ಸಂದರ್ಭದಲ್ಲಿ ಕೊಚ್ಚಿಕೊಂಡು ಹೋಗಿದ್ದು, ಇದನ್ನು ಗಮನಿಸಿದ ಪ್ರತ್ಯಕ್ಷದರ್ಶಿಗಳು ಪೊಲೀಸ್, ಅಗ್ನಿಶಾಮಕ ದಳದ ಸಿಬಂದಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿ ಶೋಧ ನಡೆಸಿದರೂ ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ಎರಡು ದಿನಗಳ

ಸ್ನಾನಕ್ಕಿಳಿದು ನೀರು ಪಾಲಾದ ಯುವಕನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ
Scroll to Top