death

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ […]

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10:ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ ಮತ್ತೊಂದು ಬಲಿಯಾಗಿದ್ದು, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.ಕೊರೊನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಂಗಳೂರು ಹೊರವಲಯದ ಹೊಸಬೆಟ್ಟು ನಿವಾಸಿ 35 ವರ್ಷದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಗುರುವಾರದಂದು 167 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಪ್ರಾಥಮಿಕ ಸಂಪರ್ಕದಿಂದಲೇ 64 ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು. ಗುರುವಾರದಂದು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1709ಕ್ಕೆ ಏರಿಕೆಯಾಗಿತ್ತು.  

ಕೊರೊನಾಗೆ 35 ವರ್ಷದ ಯುವಕ ಬಲಿ ➤ 31ಕ್ಕೆ ಏರಿದ ಸಾವಿನ ಸಂಖ್ಯೆ Read More »

ಕರಾವಳಿ, ಕರ್ನಾಟಕ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!!

(ನ್ಯೂಸ್ ಕಡಬ) newskadaba.com ಉಡುಪಿ,ಜು 08. ಲಕ್ಷ್ಮೀನಗರದಲ್ಲಿ ಸೋಮವಾರ ತಡ ರಾತ್ರಿ ಹತ್ಯೆಗೈದಿದ್ದ ಯೋಗಿಶ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲ್ಪೆ ಪೊಲೀಸರು ನಾಲ್ಕು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸುಜಿತ್ ಪಿಂಟೊ,ರೊಹೀತ್ ಪಿಂಟೊ, ಅನ್ನು ಯಾನೆ ಪ್ರದೀಪ ಮತ್ತು ವಿನಯ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಕ್ಷುಲ್ಲಕ ಕಾರಣಕ್ಕಾಗಿ ಯೋಗಿಶ್ ಮತ್ತು ಆರೋಪಿಗಳೊಂದಿಗೆ ಮಾತಿನ ಚಕಮಕಿ ನಡೆದಿದ್ದು, ಗಲಾಟೆ ತಾರಕಕ್ಕೇರಿ ಆರೋಪಿಗಳು ಯೋಗೀಶ್ ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಘಟನೆಯ ಬಗ್ಗೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಮಲ್ಪೆ

ಲಕ್ಷ್ಮೀನಗರ ಯೋಗಿಶ್ ಕೊಲೆ ➤ನಾಲ್ವರು ಆರೋಪಿಗಳು ಪೊಲೀಸ್ ವಶಕ್ಕೆ…!!! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.25: ಸ್ವಿಪ್ಟ್ ಕಾರೊಂದು ಅತಿವೇಗ ಮತ್ತು ಅಜಾರೂಗತೆಯಿಂದ ಚಲಿಸಿ ಆಕ್ಟಿವಾ ಸ್ಕೂಟರ್ ಮತ್ತು ಪಾದಚಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ನಲ್ಲಿದ್ದ ಯುವತಿ ಗಂಭೀರ ಗಾಯಗೊಂಡು ಮೃತ ಪಟ್ಟ ಗಟನೆ ನಗರದ ಹೊರ ವಲಯದ ಬೆಂಜನಪದವು ದಿವ್ಯ ಜ್ಯೋತಿ ಅಂಗಡಿ ಎದುರು ಬುಧವಾರ ನಡೆದಿದೆ.     ಸ್ಕೂಟರ್ ನಲ್ಲಿ ಸಂಚರಿಸುತ್ತಿದ್ದ 23 ವರ್ಷದ ಶ್ಯಾಮಲಾ ಎಂಬ ಯುವತಿ ಗಂಭೀರಾ ಗಾಯಗೊಂಡು ಸಾವನ್ನಪ್ಪಿದ್ದಾರೆ. ಮೃತ ಪಟ್ಟ ಶ್ಯಾಮಲಾ ಎಂಬುವವರು ಬಂಟ್ವಾಳದ ಕ್ಷೇತ್ರ ಶಿಕ್ಷಣ

ಕಾರು ಮತ್ತು ಸ್ಕೂಟಿ ನಡುವೆ ಅಪಘಾತ ➤ ಯುವತಿ ಸ್ಥಳದಲ್ಲೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.23:  ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿಯಾಗಿದ್ದು, 70 ವರ್ಷದ ವೃದ್ಧ ಸಾವನ್ನಪ್ಪಿದ್ದಾರೆ.  ರಾಜ್ಯದಲ್ಲಿ ಕೊರೋನಾ ಕೇಸ್‌ ಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ದಕ್ಷಿಣ ಕನ್ನಡದಲ್ಲಿ ‌ನಿನ್ನೆ 12 ಮಂದಿಯಲ್ಲಿ ಕೊರೊನಾ ಸೋಂಕು ಧೃಡಪಟ್ಟಿದೆ.ಕೃಷ್ಣನಗರಿ ಉಡುಪಿ ಜಿಲ್ಲೆಯಲ್ಲಿ ಮತ್ತೆ 14 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಪ್ರಕರಣಗಳ ಸಂಖ್ಯೆ 1077ಕ್ಕೆ ಏರಿದಂತಾಗಿದೆ. ಈವರೆಗೆ ಒಟ್ಟು 969 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಸದ್ಯ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ 108 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಲ್ಲಿ ಕೊರೊನಾಗೆ 9ನೇ ಬಲಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ

(ನ್ಯೂಸ್ ಕಡಬ) newskadaba.com  ಕುಂದಾಪುರ,ಜೂ.23: ಜೂನ್ 21ರಂದು ಬ್ರಹ್ಮವರದ, ಬಾರ್ಕೂರು ಚೌಳಿಕೆರೆಗೆ, ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಉರುಳಿ ಬಿದ್ದಿತ್ತು. ಘಟನೆಯಲ್ಲಿ ಚಾಲಕ ಉದ್ಯಮಿ ಸಂತೋಷ್ ಶೆಟ್ಟು ಎಂಬುವವರು ಮೃತಪಟ್ಟಿದ್ದಾರೆ. ಘಟನೆ ನಡೆದ ತಕ್ಷಣ ಸ್ಥಳೀಯ ಯುವಕರು, ತಮ್ಮ ಪ್ರಾಣದ ಹಂಗು ತೊರೆದು ಚೌಳಿಕೆರೆಗೆ ಧುಮುಕಿ ಕಾರಿನಲ್ಲಿದ್ದ ಇಬ್ಬರನ್ನು ಮೇಲಕ್ಕೆತ್ತಿದ್ದಾರೆ.   ಸ್ಥಳೀಯ ಯುವಕರಾದ ಪ್ರದೀಪ್ ದೇವಾಡಿಗ ಮತ್ತು ಪ್ರವೀನ್ ಪೂಜಾರಿ ಹಿಂದೆ ಮುಂದೆ ನೋಡದೆ, ಕೆರೆಗೆ ಜಿಗಿದಿದ್ದಾರೆ. ಯುವತಿಗೆ ಮರು ಜೀವ ನೀಡಿದ್ದಾರೆ. ಆದರೆ, ಅದಾಗಲೇ ಉದ್ಯಮಿಯ

ಚೌಳಿಕೆರೆಗೆ ಬಿದ್ದ ಯುವತಿಯನ್ನ ರಕ್ಷಿಸಿದ ಯುವಕರು ➤ ಮರು ಜೀವ ನೀಡಿದ 15ರ ಬಾಲಕಿ Read More »

ಕರಾವಳಿ, ಕರ್ನಾಟಕ

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ:,ಜೂ.22:  ಭಾರತದ ಮಾಜಿ ಶೂಟರ್ ಮತ್ತು ತರಬೇತುದಾರೆ ಪೂರ್ಣಿಮಾ ಜಾನಾನೆ  ಇಂದು, ತಮ್ಮ  42 ನೇ ವಯಸ್ಸಿನಲ್ಲಿ ನಿಧನ ಹೊಂದಿದ್ದಾರೆ. ಭಾರತೀಯ ರೈಫಲ್ ಶೂಟರ್ ಕಳೆದ ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದರು, ಪೂರ್ಣಿಮಾ ಪುಣೆಯಲ್ಲಿ ಕೊನೆಯುಸಿರೆಳೆದರು.   ಪೂರ್ಣಿಮಾ ವಿಶ್ವಕಪ್, ಏಷ್ಯನ್ ಚಾಂಪಿಯನ್‌ಶಿಪ್‌ನಲ್ಲಿ ದೇಶವನ್ನು ಪ್ರತಿನಿಧಿಸಿದ್ದಾರೆ. ಅವರು 10 ಮೀಟರ್ ಏರ್ ರೈಫಲ್‌ನಲ್ಲಿ ದೀರ್ಘಕಾಲದವರೆಗೆ ರಾಷ್ಟ್ರೀಯ ದಾಖಲೆ ಹೊಂದಿದ್ದರು. ಅವರ ಯಶಸ್ಸಿಗೆ ಮಹಾರಾಷ್ಟ್ರ ಸರ್ಕಾರ ಅವರಿಗೆ ಶಿವ ಛತ್ರಪತಿ ಕ್ರೀಡಾ ಪ್ರಶಸ್ತಿಯನ್ನು

ಎರಡು ವರ್ಷಗಳಿಂದ ಕ್ಯಾನ್ಸರ್ ವಿರುದ್ಧ ಹೋರಾಟ ➤ ಭಾರತದ ಮಾಜಿ ಶೂಟರ್ ಪೂರ್ಣಿಮಾ ನಿಧನ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.22: ಬೈಕ್ ಗೆ ಟ್ರ್ಯಾಕ್ಟರ್‍ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆಸೆಯಲ್ಪಟ್ಟ ಪರಿಣಾಮ ಬೈಕ್ ಸವಾರ ಟ್ರ್ಯಾಕ್ಟರ್ ನಡಿಗೆ ಸಿಲುಕಿ ದಾರುಣವಾಗಿ ಮೃತ ಪಟ್ಟ ಘಟನೆ ಕೊಣಾಜೆ ಪೊಲೀಸ್ ಠಾಣೇ ವ್ಯಾಪ್ತಿಯ ಹೂ ಹಾಕುವ ಕಲ್ಲು ಪುಣ್ಯಕೋಟಿ ನಗರದ ಬಳಿ ಸೋಮವಾರ ಮಧ್ಯಾಹ್ನ ನಡೆದಿದೆ.   ಮೃತ ಬೈಕ್ ಸವಾರ ಅಧೇ ಟ್ರ್ಯಾಕ್ಟರ್ ಚಾಲಕನಾಗಿದ್ದು, ಸೋಮವಾರ ರಜೆ ತೆಗೆದುಕೊಂಡಿದ್ದು, ಬದಲಿ ಚಾಲಕನನ್ನು, ಕರೆಸಿಕೊಂಡಿದ್ದರು. ಮನೆಯೊಂದರ ರಸ್ತೆ ಅಗೆಯುವ ಕೆಲಸ ನಿರ್ವಹಿಸಿದ ಬದಲಿ ಚಾಲಕ ಒಳರಸ್ತೆಯಿಂದ ಮುಡಿಪು

ಹೂಹಾಕುವಕಲ್ಲು: ಟ್ರ್ಯಾಕ್ಟರ್ ನಡಿಗೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ

(ನ್ಯೂಸ್ ಕಡಬ) newskadaba.com ಕೋಲ್ಕತ್ತಾ ,ಜೂ.22: ಭಾರತದ ಮಾಜಿ ಕ್ರಿಕೆಟಿಗ, ಎಡಗೈ ಸ್ಪಿನ್ನರ್, ರಣಜಿ ಕ್ರಿಕೆಟ್ ನ ದಿಗ್ಗಜ ರಾಜಿಂದರ್ ಗೋಯೆಲ್ ರವಿವಾರ ನಿಧನರಾದರು. 77 ವರ್ಷದ ರಾಜಿಂದರ್ ಬಹಳ ಸಮಯದ ಅನಾರೋಗ್ಯದ ಬಳಿಕ ರವಿವಾರ ಕೋಲ್ಕತ್ತಾದ ನಿವಾಸದಲ್ಲಿ ನಿಧನರಾದರು.   ರಾಜಿಂದರ್ ಗೋಯೆಲ್ ಟೀಂ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ ಆಡದೇ ಇದ್ದರೂ, ದೇಶೀಯ ವಲಯದಲ್ಲಿ ಉತ್ತಮ ಸ್ಪಿನ್ನರ್ ಆಗಿ ಮೂಡಿಬಂದಿದ್ದರು. ಭಾರತದ ದಿಗ್ಗಜ ಬಿಷನ್ ಸಿಂಗ್ ಬೇಡಿ ಸಮಕಾಲೀನ ಸ್ಪಿನ್ನರ್ ಆಗಿದ್ದ ರಾಜಿಂದರ್ 157

ವಿಕೆಟ್ ದಾಖಲೆ ವೀರ ರಾಜಿಂದರ್ ಗೋಯೆಲ್ ವಿಧಿವಶ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು

(ನ್ಯೂಸ್ ಕಡಬ) newskadaba.com ಬ್ರಹ್ಮಾವರ,ಜೂ.21:  ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕೆರೆಗೆ ಬಿದ್ದು ಓರ್ವ ಸಾವನ್ನಪ್ಪಿ ಇನ್ನೋರ್ವ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದ ಘಟನೆ ಬಾರಕೂರು ಚೌಳಿಕೆರೆ ಬಳಿ ರವಿವಾರ ನಡೆದಿದೆ. ಮೃತ ದುರ್ದೈವಿಯನ್ನು ಉದ್ಯಮಿ ವಕ್ವಾಡಿಯ ಸಂತೋಷ ಶೆಟ್ಟಿ ಎಂದು ಗುರುತಿಸಲಾಗಿದ್ದು ಇವರು ಕೋಟೇಶ್ವರ ಸಮೀಪದ ಬೀಜಾಡಿಯಲ್ಲಿ ಶ್ರೀ ಲಕ್ಷ್ಮೀ ಗ್ಲಾಸ್ ಮತ್ತು ಫ್ಲೈ ವುಡ್ ಶಾಪ್ ನಡೆಸುತ್ತಿದ್ದರು ಎಂದು ಹೇಳಲಾಗಿದೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.    

ಬ್ರಹ್ಮಾವರ; ಬಾರಕೂರು ಚೌಳಿಕೆರೆಗೆ ಬಿದ್ದ ಕಾರು ಓರ್ವ ಸಾವು Read More »

ಕರಾವಳಿ, ಕರ್ನಾಟಕ
Scroll to Top