death

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.26. ಗೂಡ್ಸ್ ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿಯಲ್ಲಿ ನಿಂತುಕೊಂಡಿದ್ದ ವ್ಯಕ್ತಿಯೋರ್ವ ದಾರುಣವಾಗಿ ಮೃತಪಟ್ಟ ಘಟನೆ ಅಜೆಕಾರು ಸಮೀಪದ ಗುಡ್ಡೆಯಂಗಡಿ ಬಳಿಯ ಓಟೆಹಳ್ಳ ಸೇತುವೆಯ ಬಳಿ ಶನಿವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಆಸೈ ತಂಬಿ(21) ಎಂದು ಗುರುತಿಸಲಾಗಿದೆ. ಕಾರ್ಕಳ ಕಡೆಯಿಂದ ಹೆಬ್ರಿ ಕಡೆಗೆ ಅತಿವೇಗವಾಗಿ ಹೋಗುತ್ತಿದ್ದ ಕೊರಿಯರ್ ಕಂಪೆನಿಯ ಗೂಡ್ಸ್ ವಾಹನವೊಂದು ರಸ್ತೆ ಬಲಭಾಗಕ್ಕೆ ಬಂದು ನಿಂತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿ ಈ ದುರ್ಘಟನೆ […]

ಗೂಡ್ಸ್ ವಾಹನ ಡಿಕ್ಕಿ- ರಸ್ತೆ ಬದಿ ನಿಂತಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..!

(ನ್ಯೂಸ್ ಕಡಬ) newskadaba.com ಧಾರವಾಡ, ಅ.26. ಕಲುಷಿತ ನೀರು ಕುಡಿದು 70ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಮುಟಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಗ್ರಾಮದಲ್ಲಿ ಕಲುಷಿತ ನೀರು ಕುಡಿದ ಬಳಿಕ ಹಲವರಲ್ಲಿ ವಾಂತಿ ಹಾಗೂ ಅತಿಸಾರ ಕಾಣಿಸಿಕೊಂಡಿದೆ. ಅಸ್ವಸ್ಥಗೊಂಡ 70 ಮಂದಿಯ ಪೈಕಿ 10 ಮಂದಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಹಾಗೂ 36 ಮಂದಿ ಕಲಘಟಗಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಳಿದವರು ಔಷಧಿ ಪಡೆದುಕೊಂಡ ಪರಿಣಾಮ ಚೇತರಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕಲುಷಿತ ನೀರು ಕುಡಿದು 70 ಮಂದಿ ಅಸ್ವಸ್ಥ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ವಿಜಯನಗರ, ಅ.26. ವ್ಯಕ್ತಿಯೋರ್ವ ಏಳು ವರ್ಷದ ಬಾಲಕನನ್ನು ಹರಿಯುವ ನೀರಿನ ಅಡವಿ (ಎಚ್.ಎಲ್.ಸಿ.) ಕಾಲುವೆಗೆ ಎಸೆದು ಕೊಲೆಗೈದಿರುವ ಘಟನೆ ಕಮಲಾಪುರ ಪಟ್ಟಣ ವ್ಯಾಪ್ತಿಯಲ್ಲಿ ನಡೆದಿದೆ. ಕೊಲೆಯಾದ ಬಾಲಕನನ್ನು ಕಮಲಾಪುರದ ರಾಜಮ್ಮ ಮತ್ತು ಬಾಬು ದಂಪತಿಯ ಪುತ್ರ ಅಭಿ(7) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಕಮಲಾಪುರ ನಿವಾಸಿ ಓಬಳೇಶ್ (24) ಎಂದು ಗುರುತಿಸಲಾಗಿದೆ. ಪರಿಚಯಸ್ಥನಾಗಿದ್ದ ಓಬಳೇಶ ಅ.22ರಂದು ಬೆಳಗ್ಗೆ ಅಭಿಯನ್ನು ತನ್ನ ಸ್ಕೂಟರ್ ನಲ್ಲಿ ಶಾಲೆಗೆ ಕರೆದುಕೊಂಡು ಹೋಗಿದ್ದಾನೆ. ಶಾಲೆಯಲ್ಲಿ ಬ್ಯಾಗ್ ಇರಿಸಿ ಅಭಿಯನ್ನು

7 ವರ್ಷದ ಬಾಲಕನನ್ನು ಕಾಲುವೆಗೆ ಎಸೆದು ಕೊಲೆಗೈದ ಆರೋಪಿಯ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಲಕ್ನೋ, ಅ.25. ಅಯೋಧ್ಯೆಯ ಹೆಚ್ಚುವರಿ ಜಿಲ್ಲಾ ಮ್ಯಾಜಿಸ್ಟ್ರೇಟ್(ಎಂಡಿಎಂ) ತಮ್ಮ ಅಧಿಕೃತ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸುರ್ಜಿತ್ ಸಿಂಗ್ (58) ಕೊತ್ವಾಲಿ ನಗರದ ಸಿವಿಲ್ ಲೈನ್ಸ್ ಪ್ರದೇಶದ ಸುರ್ಸಾರಿ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ಅ.24ರಂದು ನಿಗೂಢವಾಗಿ ಮೃತಪಟ್ಟಿದ್ದಾರೆ. ಮೂಲಗಳ ಪ್ರಕಾರ ಸಿಂಗ್ ಮೃತದೇಹ ಪತ್ತೆಯಾದ ಕೋಣೆಯ ಸುತ್ತ ನೆಲದ ಮೇಲೆ ರಕ್ತ ಕಂಡುಬಂದಿದೆ. ಘಟನಾ ಸ್ಥಳಕ್ಕೆ ವಿಧಿವಿಜ್ಞಾನ ತಂಡವೂ ಆಗಮಿಸಿದೆ. ಅವರ ಸಾವು ಆತ್ಮಹತ್ಯೆಯೋ ಅಥವಾ ಕೊಲೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ತನಿಖೆ ಹಾಗೂ

ಅಧಿಕೃತ ನಿವಾಸದಲ್ಲಿ ಅಯೋಧ್ಯೆ ಎಂಡಿಎಂ ಮೃತದೇಹ ಪತ್ತೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.25. ವ್ಯಕ್ತಿಯೋರ್ವ ತನ್ನ ತಮ್ಮನ ಪತ್ನಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಕುರಿತು ಸುಳ್ಯ ತಾಲೂಕಿನ ಕೊಡಿಯಾಲ ಗ್ರಾಮದಿಂದ ವರದಿಯಾಗಿದೆ. ಮೃತಪಟ್ಟವರನ್ನು ಜಯಭಾರತಿ ಎಂದು ಗುರುತಿಸಲಾಗಿದೆ. ಅ.12ರಂದು ರಾತ್ರಿ ಮನೆಯ ಕೋಣೆಯಲ್ಲಿ ಮಲಗಿದ್ದ ಜಯಭಾರತಿ ಎಂಬವರ ಪತಿಯ ಅಣ್ಣ ಶಂಕರ ನಾಯಕ್ ಎಂಬಾತ ಕಿಟಕಿಯ ಮೂಲಕ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ ಎನ್ನಲಾಗಿದ್ದು, ಘಟನೆಯಲ್ಲಿ ಇಬ್ಬರೂ ಗಾಯಗೊಂಡಿದ್ದರು. ಶೇ. 80 ರಷ್ಟು ಗಾಯಗೊಂಡಿದ್ದ ಮಹಿಳೆ ಜಯಭಾರತಿ

ಬೆಳ್ಳಾರೆ: ಪಟ್ರೋಲ್ ಸುರಿದು ಬೆಂಕಿ ಹಚ್ಚಿದ ಪ್ರಕರಣ – ಗಾಯಗೊಂಡಿದ್ದ ಮಹಿಳೆ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಾವು ಕಚ್ಚಿ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಅ.24.  ಹಾವು ಕಡಿದು ವ್ಯಕ್ತಿಯೋರ್ವ ಮೃತಪಟ್ಟ ದಾರುಣ ಘಟನೆ ಮಂಜೇಶ್ವರದ ಮೀಯಪದವು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮೀಯಪದವು ಪಳ್ಳತ್ತಡ್ಕ ನಿವಾಸಿ ಅಶೋಕ್ ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಗಾರೆ ಕೆಲಸ ಮಾಡಿಕೊಂಡಿದ್ದ ಅಶೋಕ್ ಅವರಿಗೆ ಮನೆಯ ಸಿಟೌಟ್ ನಲ್ಲಿದ್ದ ಸಂದರ್ಭ ಹಾವು ಕಡಿತಕ್ಕೊಳಗಾಗಿ ಗಾಯಗೊಂಡಿದ್ದರು. ಬಳಿಕ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಇಂದು ಬೆಳಗ್ಗೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಹಾವು ಕಚ್ಚಿ ವ್ಯಕ್ತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..!

(ನ್ಯೂಸ್ ಕಡಬ) newskadaba.com ಅ. 24. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಮೃತಪಟ್ಡ ಘಟನೆ ಕಬಕ- ಪುತ್ತೂರು ರೈಲ್ವೇ ನಿಲ್ದಾಣ ಸಮೀಪ ನಡೆದಿದೆ. ಅಪಘಾತದಿಂದಾಗಿ ವ್ಯಕ್ತಿಯ ಕಾಲು ತುಂಡಾಗಿದೆ. ಪೆರ್ಲ ಮೂಲದ ವ್ಯಕ್ತಿ ಎಂಬ ಮಾಹಿತಿ ಲಭಿಸಿದ್ದು ಅಪಘಾತವೋ ಆತ್ಮಹತ್ಯೆಯ ಎಂದು ಇನ್ನಷ್ಟೇ ತಿಳಿದು ಬರಬೇಕಾಗಿದೆ. ಘಟನಾ ಸ್ಥಳದಲ್ಲಿ ರೈಲ್ವೇ ಪೊಲೀಸರು ಮಹಜರು ನಡೆಸಿ ಮೃತದೇಹವನ್ನು ಶವಗಾರಕ್ಕೆ ಸಾಗಿಸಿದ್ದಾರೆ.

ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು ಮೃತದೇಹ ಛಿದ್ರಛಿದ್ರ..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..!

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಅ. 24. ಜಮೀನಿಗೆ ತೆರಳುವಾಗ ಹಠತ್ತಾಗಿ ತುಂಡಾಗಿ ಬಿದ್ದ ವಿದ್ಯುತ್ ತಂತಿ ತಗುಲಿ ಇಬ್ಬರು ಮೃತಪಟ್ಟಿರುವ ಘಟನೆ ಚಾಮರಾಜನಗರ ತಾಲ್ಲೂಕಿನ ಅಯ್ಯನಪುರ ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಚಂದಕವಾಡಿ ಹೋಬಳಿಯ ಅಯ್ಯನಪುರ ಗ್ರಾಮದ ಹೊರ ವಲಯದಲ್ಲಿರುವ ಜಮೀನಿಗೆ ನಾಗೇಂದ್ರ ಮತ್ತು ಮಲ್ಲೇಶ್ ರವರು ಬೈಕ್ ನಲ್ಲಿ ಬುಧವಾರ ರಾತ್ರಿ ತೆರಳುವಾಗ ಹಠತ್ತಾಗಿ ವಿದ್ಯುತ್ ತಂತಿ ತುಂಡಾಗಿ ಬಿದ್ದ ಪರಿಣಾಮ ವಿದ್ಯುತ್ ಹರಿದು ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚೆಸ್ಕಾಂ ಸಿಬ್ಬಂದಿಗಳು ಸಹ ಸ್ಥಳಕ್ಕೆ ಆಗಮಿಸಿದ್ದು,

ವಿದ್ಯುತ್ ತಂತಿ ತಗುಲಿ ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com ವಿಜಯಪುರ, ಅ.23. ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿಯೊಬ್ಬಳು ಮೃತಪಟ್ಟ ಘಟನೆ ನಗರ ಹೂರವಲಯದ ಇಲ್ಲಿನ ಎ ಪಿ ಜೆ ಕಲಾಂ ರಸ್ತೆಯಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ನಿಖಿತಾ ಅರವಿಂದ ಬಿರಾದಾರ (21) ಎಂದು ಗುರುತಿಸಲಾಗಿದೆ. ಎಪಿಜೆ ಕಲಾಂ ರಸ್ತೆಯಲ್ಲಿರುವ ಫಿಶ್ ಟನಲ್ ಎಕ್ಸ್ಪೋದಲ್ಲಿ ಅ.20ರಂದು ಈ ಅವಘಡ ಸಂಭವಿಸಿದೆ. ಅಂದು ಸಂಜೆ ನಿಖಿತಾ ಇನ್ನಿಬ್ಬರು ಗೆಳೆಯತಿಯರ ಜೊತೆ ತಲೆ ಕೆಳಗಾಗಿ ತೂಗಾಡಿಸುವ ರೇಂಜರ್ ಸ್ವಿಂಗ್ ತೊಟ್ಟಿಲಿನಲ್ಲಿ ಕುಳಿತಿದ್ದರು. ತೊಟ್ಟಿಲು ತಲೆ ಕೆಳಗಾಗಿ

ರೇಂಜರ್ ಸ್ವಿಂಗ್ ತೊಟ್ಟಿಲಿನಿಂದ ಬಿದ್ದು ಯುವತಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..!

(ನ್ಯೂಸ್ ಕಡಬ) newskadaba.com ಅ.23. ನೀರಿನಲ್ಲಿ ಆಡುತ್ತಿದ್ದ ಯುವಕನೋರ್ವ ಸಮುದ್ರ ಪಾಲಾಗಿರುವ ಘಟನೆ ಸುರತ್ಕಲ್  ಮುಕ್ಕ ರೆಡ್‌ ರಾಕ್ ಕಡಲ ಕಿನಾರೆಯಲ್ಲಿ ನಡೆದಿದೆ. ನೀರುಪಾಲಾದ ಯುವಕನನ್ನು ಬಂಟ್ವಾಳ ತಾಲೂಕಿನ ಬಿಸಿ ರೋಡ್ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ. ಪ್ರಜ್ವಲ್ ಸುಮಾರು 8 ಮಂದಿ ಸ್ನೇಹಿತರ ಜೊತೆ ನಿನ್ನೆ ಸಂಜೆ ಮುಕ್ಕ ರೆಡ್ ರಾಕ್ ಬಳಿಯ ಸಮುದ್ರ ಕಿನಾರೆಯಲ್ಲಿ ಆಟವಾಡುತ್ತಿದ್ದರು ಎನ್ನಲಾಗಿದೆ. ಈ ಸಂದರ್ಭ ಸಮುದ್ರದ ಅಲೆಗೆ ಸಿಲುಕಿ ಪ್ರಜ್ವಲ್ ಸಮುದ್ರ ಪಾಲಾಗಿದ್ದು, ಉಳಿದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು

ಬೀಚ್ ನಲ್ಲಿ ಆಟವಾಡುತ್ತಿದ್ದ ಯುವಕ ಸಮುದ್ರಪಾಲು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top