death

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು

(ನ್ಯೂಸ್ ಕಡಬ) newskadaba.com ಗುವಾಹಾಟಿ, ಅ.6. ಭಾರತೀಯ ವಾಯು ಸೇನೆಯ ವಿಮಾನವೊಂದು ಅರುಣಾಚಲ ಪ್ರದೇಶದ ತವಾಂಗ್ ಪ್ರದೇಶದಲ್ಲಿ ಪತನಗೊಂಡಿದ್ದು 5 ಸೈನಿಕರು ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ ಸಂಭವಿಸಿದೆ. ಚೀನಾ ಹಾಗೂ ಭಾರತದ ಗಡಿಯ 12 ಕಿ.ಮೀ ವ್ಯಾಪ್ತಿ ಭೂ ಪ್ರದೇಶದಲ್ಲಿ ಇಂದು ಮುಂಜಾನೆ 6 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಎಂಐ 17ವಿ5 ವಿಮಾನ ಪತನಗೊಂಡಿದ್ದು ಅವಘಡದಲ್ಲಿ 5 ಸೈನಿಕರು ಸಾವನ್ನಪ್ಪಿದ್ದಾರೆ. ಒಬ್ಬರಿಗೆ ತೀವ್ರ ಗಾಯಗಳಾಗಿವೆ. ವಿಮಾನದಲ್ಲಿ ಒಟ್ಟು 7 ಮಂದಿ ಇದ್ದರು ಎಂದು ವರದಿಯಾಗಿದೆ. […]

ಭಾರತೀಯ ವಾಯು ಸೇನೆಯ ವಿಮಾನ ಪತನ ► 5 ಸೈನಿಕರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ.05. ನೆಂಟಸ್ತಿಕೆ ಕೂಡಿ ಬರದ ಹಿನ್ನೆಲೆಯಲ್ಲಿ ಯುವತಿಯೋರ್ವಳು ಆಸಿಡ್ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಪ್ಪಿನಂಗಡಿ ಸಮೀಪದ ಹಳೆನೇರಂಕಿ ಗ್ರಾಮದಲ್ಲಿ ಬುಧವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ಹಳೆನೇರಂಕಿ ಗ್ರಾಮದ ಅರಜ್ಜಿಗೆ ನಿವಾಸಿ ಕೃಷ್ಣಪ್ಪ ಪೂಜಾರಿ ಎಂಬವರ ಪುತ್ರಿ ಸೌಮ್ಯ ಎಂದು ಗುರುತಿಸಲಾಗಿದೆ. ಈಕೆಗೆ ಹಲವು ನೆಂಟಸ್ಥಿಕೆಗಳು ಬಂದಿದ್ದರೂ ಯಾವುದೂ ಕೂಡಿಬರದ ಹಿನ್ನೆಲೆಯಲ್ಲಿ ಖಿನ್ನತೆಗೊಳಗಾಗಿ ಆಸಿಡ್ ಕುಡಿದಿದ್ದು, ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮಂಗಳೂರಿನ ಇಂಡಿಯಾನಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆಕೆಯ ತಂದೆ

ಕಡಬ: ಆಸಿಡ್ ಸೇವಿಸಿ ಯುವತಿ ಆತ್ಮಹತ್ಯೆ Read More »

ಕರಾವಳಿ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.03. ತಮ್ಮ ತೋಟದಲ್ಲಿನ ಕೆರೆಗೆ ಶಾಲಾ ಬಾಲಕನೋರ್ವ ಕಾಲು ಜಾರಿ ಮೃತಪಟ್ಟ ಘಟನೆ ಕೊಂಬಾರು ಎಂಬಲ್ಲಿ ಸೋಮವಾರ ರಾತ್ರಿ ನಡೆದಿದೆ. ಇಲ್ಲಿನ ಕೊಂಬಾರು ಗ್ರಾಮದ ಕೊಡೆಂಕೀರಿ ನಿವಾಸಿ ನಾಗೇಶ್ ಎಂಬವರ ಪುತ್ರ ರಕ್ಷಿತ್(8) ಮೃತಪಟ್ಟ ದುರ್ದೈವಿ. ತಮ್ಮ ಮಗನನ್ನು ಮನೆಯಲ್ಲಿ ಬಿಟ್ಟು ತಂದೆ ತಾಯಿ ಪೇಟೆ ಕಡೆ ಹೋಗಿದ್ದು, ಮನೆಗೆ ಹಿಂತಿರುಗಿ ಬಂದಾಗ ರಕ್ಷಿತ್ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಪಕ್ಕದಲ್ಲೆಲ್ಲಾ ಹುಡುಕಾಡಿದಾಗ ರಕ್ಷಿತ್ ನ ಮೃತದೇಹ ಕೆರೆಯಲ್ಲಿ ಕಂಡುಬಂದಿದೆ. ಸ್ಥಳಕ್ಕೆ ಕಡಬ

ಕೊಂಬಾರು: ಬಾವಿಗೆ ಬಿದ್ದು ಬಾಲಕ ಮೃತ್ಯು Read More »

ಕರಾವಳಿ

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು

(ನ್ಯೂಸ್ ಕಡಬ) newskadaba.com ಕಾರವಾರ,ಅ.03. ಸಮುದ್ರಕ್ಕೆ ಆಟವಾಡಲು ತೆರಳಿದ್ದ ಬಾಲಕರಿಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರ್ಡೇಶ್ವರದ ಸಣ್ಣಬಾವಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆದಿದೆ. ಗಣೇಶ ನಾಯ್ಕ(10) ಮತ್ತು ವಿನಾಯಕ ನಾಯ್ಕ(09) ಮೃತ ದುರ್ದೈವಿಗಳು. ಸೋಮವಾರ ಸಂಜೆ ನೀರಲ್ಲಿ ಆಟವಾಡುತ್ತಿದ್ದ ವೇಳೆ ಇಬ್ಬರು ಬಾಲಕರು ಸಮುದ್ರದ ಅಲೆಗಳಿಗೆ ಸಿಳುಕಿ ಕೊಚ್ಚಿ ಹೋಗಿದ್ದರು. ತಡರಾತ್ರಿ ಹುಡುಕಾಟ ನಡೆಸಿದರೂ ಇಬ್ಬರು ಬಾಲಕರ ಸುಳಿವು ಸಿಕ್ಕಿರಲಿಲ್ಲ. ಇಂದು ಬೆಳಿಗ್ಗೆ ಗ್ರಾಮದ ಕಡಲತೀರದಲ್ಲಿ ಬಾಲಕರ ಶವ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು

ಸಮುದ್ರದ ಅಲೆಗೆ ಸಿಳುಕಿ ► ಇಬ್ಬರು ಬಾಲಕರು ನೀರುಪಾಲು Read More »

ಕರಾವಳಿ

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಮುಂಬೈ,ಸೆ.29. ಇಲ್ಲಿನ ಎಲ್ಫಿನ್‍ಸ್ಟೋನ್ ರೈಲ್ವೆ ನಿಲ್ದಾಣದಲ್ಲಿ ಉಂಟಾದ ಕಾಲ್ತುಳಿತದಿಂದಾಗಿ 22 ಮಂದಿ ಸಾವಿಗೀಡಾದ ದುರಂತ ಘಟನೆ ಶುಕ್ರವಾರ ಸಂಭವಿಸಿದೆ. ಭಾರಿ ಮಳೆಯಿಂದಾಗಿ ನಂತರ ಮುಂಬೈ ರೈಲು ನಿಲ್ದಾಣದಲ್ಲಿ ರೈಲು ಪ್ರಯಾಣಿಗರ ಸಂಖ್ಯೆ ಜಾಸ್ತಿಯಾಗಿತ್ತು. ಈ ವೇಳೆ ಪರೇಲ್ ಮತ್ತು  ಎಲ್ಫಿನ್‍ಸ್ಟೋನ್ ರೋಡ್ ಸ್ಟೇಷನ್ ನಡುವೆಯಿರುವ ಪಾದಚಾರಿಗಳ ಸಂಚಾರ ಮಾರ್ಗ ಸೇತುವೆ ಮೇಲೆ ನೂಕು ನುಗ್ಗಲು ಉಂಟಾಗಿ ಸಂಭವಿಸಿದೆ. ಈ ದುರಂತದಲ್ಲಿ 22 ಮಂದಿ ಸಾವುಗೀಡಾಗಿದ್ದು ಸುಮಾರು 30ಕ್ಕಿಂತಲೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿವೆ. ನಾಲ್ಕು ರೈಲುಗಳು

ಮುಂಬೈ: ಕಾಲ್ತುಳಿತಕ್ಕೆ 22 ಮಂದಿ ಮೃತ್ಯು ► 30 ಜನರಿಗೆ ಗಂಭೀರ Read More »

ಕರ್ನಾಟಕ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು

(ನ್ಯೂಸ್ ಕಡಬ) newskadaba.com  ಹಾಸನ,ಸೆ.27. ಸ್ವಿಫ್ಟ್ ಡಿಸೈರ್ ಕಾರೊಂದು ಕೆರೆಗೆ ಉರುಳಿದ ಪರಿಣಾಮ ಐವರು ನೀರುಪಾಲಾದ ಘಟನೆ ಹಾಸನದ ಹನುಮನಹಳ್ಳಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಹಾಸನ ತಾಲೂಕಿನ ಹನುಮನಹಳ್ಳಿ ಬಳಿ ಈ ಘಟನೆ ನಡೆದಿದೆ. ಹಂಗ್ರಳ್ಳಿ ಗ್ರಾಮದಿಂದ ಗೊರೂರು ಮಾರ್ಗದಲ್ಲಿರುವ ಹನುಮನಹಳ್ಳಿ ಕೆರೆಯಲ್ಲಿ ಬುಧವಾರ ಬೆಳಿಗ್ಗೆ ವ್ಯಕ್ತಿಯ ಶವ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದರು. ಈ ಬಗ್ಗೆ ಕಾರು ಕೆರೆಗೆ ಉರುಳಿರುವುದು ಬೆಳಕಿಗೆ ಬಂದಿತ್ತು. ನೀರಿನಲ್ಲಿ ತೇಲುತ್ತಿದ್ದ ಓರ್ವ ವ್ಯಕ್ತಿಯ ಶವವನ್ನು ಮೇಲೆತ್ತುವಾಗ ಕಾರು ನೀರೊಳಗೆ

ಕೆರೆಗುರುಳಿದ ಸ್ವಿಫ್ಟ್ ಡಿಸೈರ್ ► ಐವರು ನೀರುಪಾಲು Read More »

ಕರಾವಳಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ

(ನ್ಯೂಸ್ ಕಡಬ) newskadaba.com ಉಡುಪಿ,ಸೆ.26. ರೈಲು ಡಿಕ್ಕಿಯಾಗಿ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಉಡುಪಿ ಜಿಲ್ಲೆಯ ಎರ್ಮಾಳು ಗ್ರಾಮದ ಸಮೀಪ ಸೋಮವಾರ ನಡೆದಿದೆ. ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ಮಾಹಿತಿ ಪ್ರಕಾರ ಅದಮಾರು ಗ್ರಾಮದ ರವಿ ದೇವಾಡಿಗ ಎಂಬ ವ್ಯಕ್ತಿಯ ಶವ ಎಂದು ಗುರುತಿಸಲಾಗಿದೆ. ರವಿ ದೇವಾಡಿಗ ಸೋಮವಾರ ಮಧ್ಯಾಹ್ನ ಮನೆಯಿಂದ ಕೆಲಸಕ್ಕೆಂದು ತೆರಳಿದ್ದರು. ರಾತ್ರಿಯಾದರು ಮನೆಗೆ ವಾಪಸ್ ಬಂದಿರಲಿಲ್ಲ. ಪೊಲೀಸರು ಈ ಬಗ್ಗೆ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಉಡುಪಿಯ ಆರ್‍ಪಿಎಫ್ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆಯನ್ನು ನಡೆಸಿದ್ದಾರೆ. ರವಿ

ಉಡುಪಿ: ರೈಲ್ವೆ ಹಳಿಯಲ್ಲಿ ವ್ಯಕ್ತಿಯ ಶವ ಪತ್ತೆ Read More »

ಕರಾವಳಿ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ

(ನ್ಯೂಸ್ ಕಡಬ) newskadaba.com ಅಬುಧಾಬಿ,ಸೆ.25, ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ಎಂದೇ ಹೆಸರಾಗಿದ್ದ ಈಜಿಪ್ಟ್​ನ ಇಮಾನ್ ಅಹ್ಮದ್ ಸೋಮವಾರ ನಿಧನರಾಗಿದ್ದಾರೆ.   ಇಮಾನ್ ಅಹ್ಮದ್( 37) ನಿಧನ ಕುರಿತಂತೆ ಅಬುಧಾಬಿಯ ಬುರ್ಜೀಲ್ ಆಸ್ಪತ್ರೆಯ ವೈದ್ಯರು ಖಚಿತಪಡಿಸಿದ್ದು, ಹೃದ್ರೋಗ ಹಾಗೂ ಕಿಡ್ನಿಗಳ ವೈಫಲ್ಯವೇ ಸಾವಿಗೆ ಕಾರಣ ಎಂದು ಮಾಹಿತಿ ನೀಡಿದ್ದಾರೆ. ಈಜಿಪ್ಟ್ ನ ಅಲೆಕ್ಸಾಂಡ್ರಿಯಾದ ನಿವಾಸಿಯಾಗಿರುವ ಇಮಾನ್ ಬರೋಬ್ಬರಿ 500 ಕೆಜಿ ತೂಗುತ್ತಿದ್ದ ದೇಹದ ತೂಕ ಕಡಿಮೆ ಮಾಡಲು ಕಳೆದ ಫೆಬ್ರವರಿ ತಿಂಗಳಿನಲ್ಲಿ ಮುಂಬೈಗೆ ಕರೆತರಲಾಗಿತ್ತು. ಮುಂಬೈ ವೈದ್ಯರು ಆಕೆಯ

ಜಗತ್ತಿನ ಅತೀ ಹೆಚ್ಚು ತೂಕದ ಮಹಿಳೆ ► ಇಮಾನ್ ಅಹ್ಮದ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ

 (ನ್ಯೂಸ್ ಕಡಬ) newskadaba.com ಮೆಕ್ಸಿಕೋ, ಸೆ.20, ಮಂಗಳವಾರದಂದು ಸತತ ಎರಡನೇ ಬಾರಿಗೆ ಸಂಭವಿಸಿದ ಭಾರೀ ಭೂಕಂಪದಲ್ಲಿ ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆಯಾಗಿದೆ. ರಿಕ್ಟರ್ ಮಾಪಕದಲ್ಲಿ 7.1ರಷ್ಟು ತೀವ್ರತೆಯ ಕಂಪನ ದಾಖಲಾಗಿದೆ. 51 ಕಿಲೋ ಮೀಟರ್ ಆಳದ ಭೂಗರ್ಭದಲ್ಲಿ ಘಟಿಸಿರುವ ಕಂಪನಕ್ಕೆ ಸುಮಾರು 49 ಗಗನಚುಂಬಿ ಕಟ್ಟಡಗಳು ಧರೆಗೆ ಉರುಳಿವೆ ಎಂದು ವರದಿಯಾಗಿದೆ. ಕಂಪನ ಆಗ್ತಿದಂತೆ ಜನರು ಕಟ್ಟಡಗಳಿಂದ ಹೊರಗೆ ಓಡಿಹೋಗಿದ್ದಾರೆ. ಆದರೆ ಅವರ ಮೇಲೂ ಕಟ್ಟಡಗಳು ಉರುಳಿಬಿದ್ದಿವೆ. ರಸ್ತೆಗಳಲ್ಲಿ ನಿಲ್ಲಿಸಿದ್ದ ಕಾರುಗಳು ಜಖಂ ಆಗಿವೆ. ವಿಚಿತ್ರ ಅಂದ್ರೆ ಇದೇ

ಮೆಕ್ಸಿಕೋ ಭಾರೀ ಭೂಕಂಪ ► ಮೃತಪಟ್ಟವವರ ಸಂಖ್ಯೆ 149ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19 ಜಲ್ಲಿ ಮಿಕ್ಸರ್ ವಾಹನವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಆನೇಕಲ್ ತಾಲೂಕಿನ ಚಂದಾಪುರದಲ್ಲಿ ಮಂಗಳವಾರ ಮುಂಜಾನೆ ನಡೆದಿದೆ. ವೆಂಕಟರಮಣಪ್ಪ(45) ಹಾಗು ವೆಂಕಟಪ್ಪ(43) ಮೃತ ದುರ್ದೈವಿಗಳಾಗಿದ್ದು, ಇವರು ರಾಮಸಾಗರ ನಿವಾಸಿಗಳು ಎಂಬುವುದಾಗಿ ತಿಳಿದುಬಂದಿದೆ. ರೈಲ್ವೆ ಬ್ರಿಡ್ಜ್ ನಿಂದಾಗಿ ಕಿರಿದಾಗಿರುವ ರಾಷ್ಟ್ರೀಯ ಹೆದ್ದಾರಿ-7 ಸರ್ವಿಸ್ ರಸ್ತೆ ಇಲ್ಲದೆ ಇರುವುದೇ ಘಟನೆಗೆ ಕಾರಣ ಎನ್ನಲಾಗುತ್ತಿದೆ. ಸೂರ್ಯ ಸಿಟಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

ಜಲ್ಲಿ ಮಿಕ್ಸರ್ – ಸ್ಕೂಟಿ ಡಿಕ್ಕಿ ►ಇಬ್ಬರು ಮೃತ್ಯು Read More »

ಕರ್ನಾಟಕ
Scroll to Top