death

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು

(ನ್ಯೂಸ್‌ ಕಡಬ) newskadaba.com,  ಸೆ.26 ಬಳ್ಳಾರಿ:  ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ. ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ […]

ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಸಾವು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು

(ನ್ಯೂಸ್‌ ಕಡಬ) newskadaba.com,  ಸೆ.26 ಉಡುಪಿ: ಟಿಪ್ಪರ್ ಲಾರಿಯೊಂದು ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಡಿಕ್ಕಿ ಹೊಡೆದು, ಬಳಿಕ ಪಾದಚಾರಿಯೊಬ್ಬರಿಗೆ ಗುದ್ದಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಉಡುಪಿಯ ಕಾಮತ್ ಪೆಟ್ರೋಲ್ ಪಂಪ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೆಪ್ಟೆಂಬರ್ 25ರಂದು ಸಂಭವಿಸಿದೆ. ಮೃತರನ್ನು ಬಿಹಾರ ಮೂಲದ ರಾಜಕುಮಾರ್ ಶರ್ಮಾ (23) ಎಂದು ಗುರುತಿಸಲಾಗಿದೆ. ಮೃತರು ಎರ್ಮಾಳ್‌ನಲ್ಲಿರುವ ಪ್ಲೈವುಡ್ ಕಾರ್ಖಾನೆಯಲ್ಲಿ ವಲಸೆ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದರು. ಅಪಘಾತ ಸಂಭವಿಸುವಾಗ ಅವರು ತಮ್ಮ ಸಹೋದ್ಯೋಗಿಗಳೊಂದಿಗೆ ಪಡುಬಿದ್ರಿಯ ಕಡೆಗೆ

ಉಡುಪಿ: ನಿಂತಿದ್ದ ಪಿಕ್ ಅಪ್ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ; ಪಾದಚಾರಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ

(ನ್ಯೂಸ್‌ ಕಡಬ) newskadaba.com,  ಸೆ. 19 ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಭಾಸ್ಕರ ಶೆಟ್ಟಿಯವರು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 74ವರ್ಷ ವಯಸ್ಸಾಗಿತ್ತು. ಬಜ್ಪೆಯ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳದಲ್ಲಿ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಇವರು ಕಂಬಳ ಕ್ಶೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದರು. ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಗೊಂಡಿದ್ದು, ಕಂಬಳ ಓಟಗಾರರಾಗಿ ಹಲವಾರು ಪ್ರಶಸ್ತಿಯನ್ನು ಶೆಟ್ಟಿಯವರು ಪಡೆದಿದ್ದಾರೆ. ಇತ್ತೀಚೆಗೆ ನಡೆದ ಕಂಬಳದಲ್ಲಿ ಹಿರಿಯ ಕಂಬಳ ಓಟಗಾರ ಎಂಬ ಗೌರವಕ್ಕೂ ಪಾತ್ರದಾಗಿದ್ದರು. ಭಾಸ್ಕರ ಶೆಟ್ಟಿಯವರು ಇದೀಗ

ಕಂಬಳದ ಹಿರಿಯ ಅನುಭವಿ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ಯವರು ಅಸೌಖ್ಯದಿಂದ ನಿಧನ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು

(ನ್ಯೂಸ್‌ ಕಡಬ) newskadaba.com ಸೆ.06 ದಾವಣಗೆರೆ: ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ನಿಂದ ಪಡೆದಿದ್ದ ಸಾಲದ 2 ತಿಂಗಳ ಕಂತು ಕಟ್ಟಲಿಲ್ಲವೆಂಬ ಕಾರಣಕ್ಕೆ ಬ್ಯಾಂಕ್‌, ಫೈನಾನ್ಸ್‌ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿ, ಕಿರುಕುಳ ನೀಡಿದ್ದರಿಂದ ನೊಂದ ವ್ಯಕ್ತಿಯೊಬ್ಬ ಡೆತ್‌ನೋಟ್‌ ಬರೆದಿಟ್ಟು ಆತ್ಮ೧ಹತ್ಯೆ ಮಾಡಿಕೊಂಡಿರುವ ಘಟನೆ ದಾವಣಗೆರೆ ತಾಲೂಕಿನ ಶಿರಮಗೊಂಡನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಶಿರಮಗೊಂಡನಹಳ್ಳಿಯ ಚಿತ್ರಲಿಂಗ (31) ಮೃತ. ಈತ ಖಾಸಗಿ ಫೈನಾನ್ಸ್‌ನಲ್ಲಿ ಸಾಲ ಮಾಡಿಕೊಂಡಿದ್ದು, 2 ತಿಂಗಳ ಸಾಲದ ಕಂತು ಕಟ್ಟುವಂತೆ ಸಾಲ ವಸೂಲಾತಿ ಸಿಬ್ಬಂದಿ ಅವಾಚ್ಯವಾಗಿ ನಿಂದಿಸಿದ್ದರು.

ಮೈಕ್ರೋ ಫೈನಾನ್ಸ್ ಕಿರುಕುಳ: ಡೆತ್‌ನೋಟ್‌ ಬರೆದಿಟ್ಟು ರೈತ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ಬಿದ್ದು 18 ತಿಂಗಳ ಮಗು ಸಜೀವ ದಹನವಾಗಿರುವ ಘಟನೆ ನಗರದ ಸ್ಯಾಂಕಿ ರಸ್ತೆಯ ಸಮ್ಮಿಟ್ ಅಪಾರ್ಟ್ಮೆಂಟ್ ನಲ್ಲಿ ಬುಧವಾರ ನಡೆದಿದೆ. ದುರ್ಘಟನೆಯಲ್ಲಿ ನೇಪಾಳ ಮೂಲದ ಪುಷ್ಕರ ಕುಮಾರ್, ಜ್ಯೋತಿ ಕುಮಾರಿ ದಂಪತಿಯ 18 ತಿಂಗಳ ಪುತ್ರಿ ಅನು ಮೃತ ದುರ್ದೈವಿ. ಕಳೆದ 8 ವರ್ಷಗಳಿಂದ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. 30 ಫ್ಲಾಟ್‌ಗಳನ್ನು ಹೊಂದಿರುವ ಅಪಾರ್ಟ್‌ಮೆಂಟ್‌ನ ರೂಮ್ ವೊಂದರಲ್ಲಿ ದಂಪತಿಗಳು ಮಗುವಿನೊಂದಿಗೆ ವಾಸವಿದ್ದರು. ಅಪಾರ್ಟ್

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: 18 ತಿಂಗಳ ಮಗು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು

(ನ್ಯೂಸ್‌ ಕಡಬ) newskadaba.com,  ಸೆ.02: ನೂತನವಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್‌ ಮೇಲೆ ಲ್ಯಾಂಡಿಂಗ್‌ ಟೆಸ್ಟ್‌ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್‌ ಪತನಗೊಂಡು ಐವರು ಸಾವನ್ನಪ್ಪಿರುವ ಘಟನೆ ಗಿಲ್ಗಿಟ್‌-ಬಾಲ್ಟಿಸ್ತಾನ್‌ನಲ್ಲಿ ನಡೆದಿದೆ. ಡೈಮರ್‌ ಜಿಲ್ಲೆಯ ಚಿಲಾಸ್‌‍ನ ಥೋರ್‌ ಪ್ರದೇಶದ ಬಳಿ ಈ ಅವಘಡ ಸಂಭವಿಸಿದ್ದು,ದುರಂತದಲ್ಲಿ ಪರಿಣಾಮ ಇಬ್ಬರು ಪೈಲಟ್‌ ಸೇರಿ ಮೂವರು ತಂತ್ರಜ್ಞರು ಸಾವನ್ನಪ್ಪಿದ್ದಾರೆ.ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್‌‍ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇತ್ತೀಚಿಗೆ ಖೈಬರ್‌ ಪ್ರಾಂತ್ಯದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಕಾರ್ಯಾಚರಣೆ ನಡೆಸುತ್ತಿದ್ದ ಇದೇ ಮಾದರಿಯ ಎಂಐ-17

ಪಾಕಿಸ್ತಾನ: ಹೆಲಿಕಾಪ್ಟರ್ ಪತನ-ಐವರು ಸಾವು Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ

(ನ್ಯೂಸ್‌ ಕಡಬ) newskadaba.com,  ಸೆ.02: ಪೂರ್ವ ಅಫ್ಘಾನಿಸ್ತಾನದಲ್ಲಿ ಸಂಭವಿಸಿದ 6.3 ತೀವ್ರತೆಯ ಭೂಕಂಪಕ್ಕೆ ಇದುವರೆಗೆ ಸುಮಾರು 800 ಮಂದಿ ಸಾವನ್ನಪ್ಪಿದ್ದಾರೆ. ಈ ಅವಘಡಕ್ಕೆ ವಿಷಾದ ವ್ಯಕ್ತಪಡಿಸಿರುವ ಭಾರತ ಅಫ್ಘಾನಿಸ್ತಾನದ ನೆರವಿಗೆ ನಿಂತಿದ್ದು, 15 ಟನ್ ಆಹಾರ ಸಾಮಾಗ್ರಿಗಳನ್ನು ರವಾನೆ ಮಾಡಿದೆ. ಭೂಕಂಪದಿಂದಾಗಿ ಮನೆಗಳು ನೆಲಸಮವಾಗಿದ್ದು, ಅವಶೇಷಗಳ ಕೆಳಗೆ ಹೂತುಹೋಗಿರುವವರನ್ನು ರಕ್ಷಿಸಲು ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ಮುಂದುವರಿಸಿದ್ದಾರೆ. ಭೂಕಂಪದ ತೀವ್ರತೆಗೆ ಸುಮಾರು 2,500 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ. ಅಫ್ಘಾನಿಸ್ತಾನದಲ್ಲಿ ಭೂಕಂಪ ಸಂಭವಿಸುತ್ತಿದ್ದಂತೆ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು

ಅಫ್ಘಾನಿಸ್ತಾನದಲ್ಲಿ ಭೂಕಂಪಕ್ಕೆ 800 ಮಂದಿ ಮೃತ್ಯು: ಭಾರತದಿಂದ 15 ಟನ್ ಆಹಾರ ಸಾಮಗ್ರಿ ರವಾನೆ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..!

(ನ್ಯೂಸ್‌ ಕಡಬ) newskadaba.com ಸೆ. 01. ಕ್ರೋಕ್ಸ್ ಚಪ್ಪಲಿಯಲ್ಲಿ ಅಡಗಿದ್ದ ವಿಷಕಾರಿ ಹಾವು ಕಚ್ಚಿ ಟೆಕ್ಕಿಯೊಬ್ಬರು ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ರಂಗನಾಥ ಬಡಾವಣೆಯಲ್ಲಿ ನಡೆದಿದೆ. ಮಂಜು ಪ್ರಕಾಶ್ (41) ಮೃತ ದುರ್ವೈವಿ. ಅಪಘಾತದಲ್ಲಿ ಕಾಲಿನ ಸ್ಪರ್ಶ ಶಕ್ತಿ ಕಳೆದುಕೊಂಡಿದ್ದರಿಂದ ಹಾವು ಕಚ್ಚಿದ್ದನ್ನು ಗಮನಿಸಲಾಗದೆ ಮಂಜು ಪ್ರಕಾಶ್ ಅವರು ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಚಪ್ಪಲಿಯ ಒಳಗಿದ್ದ ವಿಷಕಾರಿ ಹಾವು ಕಚ್ಚಿ ವ್ಯಕ್ತಿ ದುರಂತ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ಸವಾರ ಸ್ಥಳದಲ್ಲೇ ಮೃತಪಟ್ಟು, ಮತ್ತೋರ್ವ ಗಾಯಗೊಂಡಿರುವ ಘಟನೆ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಮೃತಪಟ್ಟವರನ್ನು ಚೇಳಾಯರು ನಿವಾಸಿ ಕರುಣಾಕರ ಶೆಟ್ಟಿ ಎಂದು ಗುರುತಿಸಲಾಗಿದೆ. ಗಾಯಗೊಂಡ ವಿಶ್ವನಾಥ (16) ಎಂಬವರು ಮುಕ್ಕದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಪಘಾತ ನಡೆಸಿದ್ದ ಕಾರು ಚಾಲಕ ಹಳೆಯಂಗಡಿ ನಿವಾಸಿ ಮುಹಮ್ಮದ್ ತೌಫೀಕ್ ಎಂಬಾತನನ್ನು ಸಂಚಾರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ಕಾರು ಢಿಕ್ಕಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top