death

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕಲಬುರಗಿ, ಸೆ. 12.  ಶಾಲಾ ವಾಹನ ಹರಿದು ನಾಲ್ಕು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಅಫಜಲಪುರ ಪೊಲೀಸ್ ಠಾಣೆ ವ್ಯಾಪ್ತಿಯ ಶಿವಪುರ ಗ್ರಾಮದಲ್ಲಿ ಬುಧವಾರ ನಡೆದಿದೆ. ಮೃತ ಮಗು ಶಿವಪುರ ಗ್ರಾಮದ ರಾಜಶೇಖರ್ ಎಂಬವರ ಪುತ್ರಿ ಖುಷಿ ಬನ್ನಟ್ಟಿ (4) ಎಂದು ಗುರುತಿಸಲಾಗಿದೆ. ಶಾಲಾ ವಾಹನ ಚಾಲಕ ಶ್ರೀಶೈಲ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಶಾಲಾ ವಾಹನದಲ್ಲಿ ಬಂದಿಳಿದ ಮಗು ತನ್ನ ತಂದೆಯನ್ನು ಕಂಡು ವಾಹನದ ಹಿಂಬದಿಯಾಗಿ ಓಡಿತ್ತು. ಇದನ್ನು ಗಮನಿಸದ ಚಾಲಕ […]

ಶಾಲಾ ವಾಹನ ಹರಿದು 4 ವರ್ಷದ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!     

(ನ್ಯೂಸ್ ಕಡಬ) newskadaba.com ಮೈಸೂರು, ಸೆ. 11.  ಕಲುಷಿತ ನೀರು ಸೇವನೆಯಿಂದ ಓರ್ವ ಸಾವನ್ನಪ್ಪಿದ್ದು, 12 ಜನ ವಾಂತಿಭೇದಿಯಿಂದ ಅಸ್ವಸ್ಥಗೊಂಡಿರುವ ಘಟನೆ ಸಾಲಿಗ್ರಾಮ ತಾಲೂಕಿನ ಗಡಿ ಗ್ರಾಮ ಬೆಟ್ಟಹಳ್ಳಿಯಲ್ಲಿ ನಡೆದಿದೆ. ಗೋವಿಂದೇಗೌಡ (65) ಮೃತಪಟ್ಟ ವ್ಯಕ್ತಿ. ಗ್ರಾಮದ ಟ್ಯಾಂಕ್‌ನಿಂದ ಸರಬರಾಜಾಗಿದ್ದ ನೀರನ್ನು ಸೇವಿಸಿ ಕೆಲವರಿಗೆ ವಾಂತಿ ಭೇದಿ ಆಗಿದೆ ಎಂದು ಶಂಕಿಸಲಾಗಿದೆ. ಅಸ್ವಸ್ಥರನ್ನು ತಕ್ಷಣವೇ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಗೋವಿಂದೇಗೌಡ ಎಂಬುವವರು ತೀವ್ರ ಅಸ್ವಸ್ಥಗೊಂಡ ಹಿನ್ನೆಲೆ ಹಾಸನ ಜಿಲ್ಲೆಯ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ

ಕಲುಷಿತ ನೀರು ಸೇವನೆ: ಓರ್ವ ಮೃತ್ಯು..! 12 ಮಂದಿ ಅಸ್ವಸ್ಥ..!      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 11. ಲೋ ಬಿಪಿ ಉಂಟಾಗಿ ಕುಸಿದುಬಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಯಚೂರಿನಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ತರುಣಕುಮಾರ್ ಎಂದು ಗುರುತಿಸಲಾಗಿದೆ. ಶಾಲೆಯಲ್ಲಿ ಕುಸಿದುಬಿದ್ದ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿಯವರು ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ದಾರಿಮಧ್ಯೆ ಬಾಲಕ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಲೋ ಬಿಪಿ- ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕೊಪ್ಪಳ, ಸೆ. 11.  ಸ್ನೇಹಿತರೊಂದಿಗೆ ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ಜಿಲ್ಲೆಯ ಅಳವಂಡಿ ಪೊಲೀಸ್ ಠಾಣಾ ವ್ಯಾಪ್ತಿಯ ಮೈನಹಳ್ಳಿ ಗ್ರಾಮದಲ್ಲಿ ನಡೆದಿದೆ.          ಮೃತಪಟ್ಟ ವಿದ್ಯಾರ್ಥಿಯನ್ನು ಹಂದ್ರಾಳ ಗ್ರಾಮದ ಫಕೀರ ಗೌಡ ಎಂದು ಗುರುತಿಸಲಾಗಿದೆ. ಮೈನಹಳ್ಳಿಯ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ಕಲಿಯುತ್ತಿದ್ದ ವಿದ್ಯಾರ್ಥಿ ಫಕೀರ ಗೌಡ ಮಂಗಳವಾರ ಸಂಜೆ ನಾಲ್ಕು ಗಂಟೆಯ ಸುಮಾರಿಗೆ ಈಜಲು ಕೆರೆಗೆ ಹೋಗಿದ್ದ. ಆದರೆ ನೀರಿಗಿಳಿದ ವಿದ್ಯಾರ್ಥಿ ಮತ್ತೆ ಮೇಲೆ ಬಂದಿಲ್ಲ, ಇದನ್ನು ನೋಡಿದ ಇಬ್ಬರೂ

ಕೆರೆಗೆ ಈಜಲು ಹೋದ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ

(ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಸೆ. 10.  ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ (93) ಅವರು ನಿಧನರಾಗಿದ್ದಾರೆ. ದೀರ್ಘಕಾಲದ ಮಧುಮೇಹದಿಂದ ಬಳಲುತ್ತಿದ್ದ ಜೋನ್ಸ್ ಅವರು ಸೋಮವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ಸಹಾಯಕ ಬ್ಯಾರಿ ಮ್ಯಾಕ್ಫರ್ಸನ್ ಹೇಳಿದ್ದಾರೆ ಎಂದು ವರದಿಯಾಗಿದೆ. ಜೇಮ್ಸ್ ಎರ್ಲ್ ಜೋನ್ಸ್ ಅವರು ‘ದಿ ಲಯನ್ ಕಿಂಗ್’ ಕಾರ್ಟೂನ್ ಚಿತ್ರಕ್ಕೆ ಧ್ವನಿ ನೀಡಿದ್ದಾರೆ. ‘ಸ್ಟಾರ್ ವಾರ್ಸ್ ’ ಸೇರಿದಂತೆ ಹಲವು ಖ್ಯಾತ ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಟಿವಿ ಕಾರ್ಯಕ್ರಮಗಳನ್ನು ನಡೆಸಿಕೊಡುವುದರ ಜತೆಗೆ ರಂಗಭೂಮಿ ಕಲಾವಿದರಾಗಿಯೂ

ಅಮೆರಿಕದ ಖ್ಯಾತ ನಟ ಜೇಮ್ಸ್ ಎರ್ಲ್ ಜೋನ್ಸ್ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                 

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಸೆ. 10.  ಕಂಟೈನರ್ ಲಾರಿಯೊಂದು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ವ್ಯಕ್ತಿಯೋರ್ವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸೆ.9ರಂದು ಸಂಜೆ ಶಿರಾಡಿ ಘಾಟಿಯ ಕೆಂಪುಹೊಳೆ ಬಳಿ ನಡೆದಿದೆ. ಮೃತರನ್ನು ಹಾಸನಿವಾಸಿ ಚಂದ್ರೇಗೌಡ (50) ಎಂದು ಗುರುತಿಸಲಾಗಿದೆ. ಅದೇ ಕಾರಿನಲ್ಲಿದ್ದ ಚಿನ್ನೇಗೌಡ (31) ಹಾಗೂ ಶೀಲಾ (40) ಎಂಬವರು ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ಕಡೆಯಿಂದ ಹಾಸನ ಕಡೆಗೆ ಹೋಗುತ್ತಿದ್ದ ಕಾರು ಎದುರಿನಿಂದ ಬರುತ್ತಿದ್ದ ಕಂಟೈನರ್‌ಗೆ ಡಿಕ್ಕಿ ಹೊಡೆದಿದ್ದು,

ಕಂಟೈನರ್ ಲಾರಿ- ಕಾರು ಢಿಕ್ಕಿ: ಓರ್ವ ಮೃತ್ಯು..!  ಇಬ್ಬರು ಗಂಭೀರ ಗಾಯ                  Read More »

ಕರಾವಳಿ, ಕ್ರೈಮ್ ನ್ಯೂಸ್

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ

(ನ್ಯೂಸ್ ಕಡಬ) newskadaba.com  ಖರ್ಟೋಮ್, ಸೆ. 09.  ಸುಡಾನ್‌ ನ ಸೆನ್ನಾರ್ ನಗರದ ಜನನಿಬಿಡ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ ನಡೆಸಿದ ಪರಿಣಾಮ ಕನಿಷ್ಠ 21 ಮಂದಿ ಸಾವನ್ನಪ್ಪಿದ್ದು, 70ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೂನ್ ಅಂತ್ಯದಲ್ಲಿ ಆರ್‌ಎಸ್‌ಎಫ್ ಸೆನ್ನಾರ್ ರಾಜ್ಯದ ರಾಜಧಾನಿಯಾಗಿರುವ ಸಿಂಗಾವನ್ನು ವಶಪಡಿಸಿಕೊಂಡಿತು. ಆದರೆ ಸೆನ್ನಾರ್ ನಗರದ ನಿಯಂತ್ರಣಕ್ಕಾಗಿ ಸೈನ್ಯದೊಂದಿಗೆ ಹೋರಾಡುತ್ತಿದೆ. ಸುಡಾನೀಸ್ ಡಾಕ್ಟರ್ಸ್ ನೆಟ್‌ವರ್ಕ್ ತನ್ನ ಹೇಳಿಕೆಯಲ್ಲಿ, ಶೆಲ್ ದಾಳಿಯು ನಗರದ ಮುಖ್ಯ ಮಾರುಕಟ್ಟೆಯನ್ನು ಗುರಿಯಾಗಿಸಿಕೊಂಡಿದೆ. ಇದನ್ನು ನಾಗರಿಕರ

ಸುಡಾನ್‌ ಮಾರುಕಟ್ಟೆಯಲ್ಲಿ ರಾಪಿಡ್ ಸಪೋರ್ಟ್ ಫೋರ್ಸ್ ಶೆಲ್ ದಾಳಿ  21 ಮಂದಿ ಸಾವು- 70ಕ್ಕೂ ಹೆಚ್ಚು ಜನರು ಗಾಯ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!          

(ನ್ಯೂಸ್ ಕಡಬ) newskadaba.com  ತುಮಕೂರು, ಸೆ. 09.  ಬಸ್ ಢಿಕ್ಕಿ ಹೊಡೆದ ಪರಿಣಾಮ ನಡೆದುಕೊಂಡು ಹೋಗುತ್ತಿದ್ದ ತಾಯಿ ಹಾಗೂ ಮಗಳು ಸ್ಥಳದಲ್ಲೇ ಮೃತಪಟ್ಟು, ಇತರ ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ಹುಚ್ಚನಹಟ್ಟಿ ರಾಮಶೆಟ್ಟಿಹಟ್ಟಿ ಬಳಿಯ ರಾಷ್ಠಿಯ ಹೆದ್ದಾರಿಯ ಬೈಪಾಸ್ ಬಳಿ ಬೆಳಗ್ಗೆ ನಡೆದಿದೆ. ಮೃತಪಟ್ಟವರನ್ನು ರಾಮಶೆಟ್ಟಿಹಳ್ಳಿ ಗ್ರಾಮದ ಕಮಲಮ್ಮ (45), ಅವರ ಪುತ್ರಿ, ಹಳೇಪಾಳ್ಯ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ವೀಣಾ (13)ಎಂದು ಗುರುತಿಸಲಾಗಿದೆ. ಮೂವರು ಗಾಯಾಳುಗಳನ್ನು ಸಾರ್ವಜನಿಕ ಆಸ್ಪತ್ರೆಗೆ ದಾಖಾಲು ಮಾಡಲಾಗಿದೆ. ಘಟನೆ ಬಗ್ಗೆ ತಿಪಟೂರು

ರಸ್ತೆ ಅಪಘಾತ: ತಾಯಿ-ಮಗಳು ಮೃತ್ಯು..! ಮೂವರಿಗೆ ಗಂಭೀರ ಗಾಯ..!           Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 09.  ಕನ್ನಡದ ಹಿರಿಯ ಪತ್ರಕರ್ತ ಹಾಗೂ ಸಂಯುಕ್ತ ಕರ್ನಾಟಕ ಪತ್ರಿಕೆ ಸಂಪಾದಕ ವಸಂತ ನಾಡಿಗೇರ (59) ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. ವಸಂತ್​ ನಾಡಿಗೇರ ಅವರು ಕಳೆದ ಮೂರುವರೆ ದಶಕದಿಂದ ಕನ್ನಡ ಪತ್ರಿಕೋದ್ಯಮದಲ್ಲಿ ಕೆಲಸ ಮಾಡಿದ್ದಾರೆ. ವಸಂತ ನಾಡಿಗೇರ ಅವರು ಕನ್ನಡ ಪ್ರಭ, ವಿಜಯಕರ್ನಾಟಕ, ವಿಶ್ವವಾಣಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ಇವರು ಕಳೆದ ಎರಡು ವರ್ಷಗಳಿಂದ ಸಂಯುಕ್ತ ಕರ್ನಾಟಕ ಸಂಪಾದಕರಾಗಿದ್ದರು. ವಸಂತ ನಾಡಿಗೇರ ಅವರು ಮೂಲತಃ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನವರು. ಇವರಿಗೆ

ಕನ್ನಡದ ಹಿರಿಯ ಪತ್ರಕರ್ತ ವಸಂತ ನಾಡಿಗೇರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು

(ನ್ಯೂಸ್ ಕಡಬ) newskadaba.com  ಬೆಂಗಳೂರು, ಸೆ. 6. 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಮೃತರನ್ನು ಲೈಟ್ ಮ್ಯಾನ್ ಮೋಹನ್ ಕುಮಾರ್ ಎಂದು ಗುರುತಿಸಲಾಗಿದೆ. ಯೋಗರಾಜ್ ಭಟ್ ನಿರ್ದೇಶನದ ಸಿನಿಮಾವೊಂದರ ಶೂಟಿಂಗ್ ಸೆಟ್‌ ನಲ್ಲಿ ಲೈಟ್ ಬಿಚ್ಚುವಾಗ ಆಯಾ ತಪ್ಪಿ ಮೋಹನ್ ಕುಮಾರ್ 30 ಅಡಿ ಎತ್ತರದಿಂದ ಬಿದ್ದಿದ್ದರು. ಕೆಳಗೆ ಬಿದ್ದ ರಭಸಕ್ಕೆ ಅವರ ತಲೆಗೆ ಗಂಭೀರ ಪೆಟ್ಟಾಗಿ ರಕ್ತಸ್ರಾವವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೂ ಚಿಕಿತ್ಸೆ

ಸಿನಿಮಾ ಶೂಟಿಂಗ್ ಸೆಟ್ ನಲ್ಲಿ 30 ಅಡಿ ಎತ್ತರದಿಂದ ಬಿದ್ದು ಲೈಟ್ ಮ್ಯಾನ್ ಮೃತ್ಯು ನಿರ್ದೇಶಕ ಯೋಗರಾಜ್ ಭಟ್ ವಿರುದ್ಧ ಎಫ್ಐಆರ್ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top