death

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 03. ಕಾರು ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿ ನಂತರ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಮೇಲ್ಸೇತುವೆಯಿಂದ ಉರುಳಿಬಿದ್ದ ಪರಿಣಾಮ ಓರ್ವ ಮೃತಪಟ್ಟು ನಾಲ್ವರು ಗಾಯಗೊಂಡ ಘಟನೆ ಯಶವಂತಪುರದಲ್ಲಿ ಮಂಗಳವಾರದಂದು ನಸುಕಿನ ವೇಳೆ ನಡೆದಿದೆ. ಮೃತರನ್ನು ತಮಿಳುನಾಡು ಸೇಲಂ ಮೂಲದ ಶಬರೀಶ್(29) ಎಂದು ಗುರುತಿಸಲಾಗಿದೆ. ಗಾಯಗೊಂಡ ಶಂಕರ್ ರಾಮ್, ಅನುಶ್ರೀ, ಮಿಥುನ್ ಹಾಗೂ ಬೈಕ್ ಸವಾರ ಮಂಜುನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಗೆ ಮುಂದುವರಿಸಲಾಗಿದೆ ಎಂದು ಸಂಚಾರ ಪೊಲೀಸರು […]

ರಸ್ತೆ ಅಪಘಾತ- ಮೇಲ್ಸೇತುವೆಯಿಂದ ಬಿದ್ದ ಕಾರು ಓರ್ವ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ   

(ನ್ಯೂಸ್ ಕಡಬ) newskadaba.com ಶ್ರೀನಗರ, ಸೆ. 03.  ಜಮ್ಮುವಿನ ಸುಂಜ್ವಾನ್ ಸೇನಾ ಶಿಬಿರದಲ್ಲಿ ಯೋಧರೊಬ್ಬರು ನಿಗೂಢವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಗ್ರರ ದಾಳಿಯಿಂದ ಯೋಧ ಹುತಾತ್ಮರಾಗಿರುವ ಸಂಶಯ ವ್ಯಕ್ತವಾಗಿದೆ. ಸುಂಜ್ವಾನ್ ಮಿಲಿಟರಿ ಶಿಬಿರದಲ್ಲಿ ಯೋಧರನ್ನು ಸೆಂಟ್ರಿ ಡ್ಯೂಟಿಗಾಗಿ ನಿಯೋಜನೆ ಮಾಡಲಾಗಿತ್ತು. ಉಗ್ರರ ದಾಳಿಯಿಂದಾಗಿ ಯೋಧ ಸಾವನ್ನಪ್ಪಿರಬಹುದು ಎಂದು ಭಾರತೀಯ ಸೇನೆ ಶಂಕೆ ವ್ಯಕ್ತಪಡಿಸಿದೆ. ಈ ಹಿನ್ನೆಲೆ ಭಾರತೀಯ ಸೇನೆ ಹಾಗೂ ಪೊಲೀಸ್ ತಂಡ ಶೋಧ ಕಾರ್ಯಚರಣೆ ಪ್ರಾರಂಭಿಸಿದೆ. ಇದರೊಂದಿಗೆ ಡ್ರೋನ್ ಮತ್ತು ಹೆಲಿಕಾಪ್ಟರ್ ಮೂಲಕ ವೈಮಾನಿಕ ಕಣ್ಗಾವಲನ್ನು

ಜಮ್ಮುವಿನ ಸೇನಾ ಶಿಬಿರದಲ್ಲಿ ಯೋಧನ ನಿಗೂಢ ಸಾವು..! ಉಗ್ರರ ದಾಳಿಯಿಂದ ಹುತಾತ್ಮರಾಗಿರುವ ಭಾರತೀಯ ಸೇನೆ ಶಂಕೆ    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಯುವಕನೋರ್ವ ಮೃತಪಟ್ಟ ಘಟನೆ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ. ಮೃತ ಯುವಕನನ್ನು ಮೂಡುಪೆರಾರ ಕಾಯರಾಣೆ ನಿವಾಸಿ ದಿ| ಆನಂದ ಪೂಜಾರಿ ಅವರ ಪುತ್ರ ಪ್ರದೀಪ್ ಪೂಜಾರಿ (31) ಎಂದು ಗುರುತಿಸಲಾಗಿದೆ. ಕ್ರಿಕೆಟ್ ಆಡುತ್ತಿದ್ದ ಸಂದರ್ಭ ಪ್ರದೀಪ್ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 30.  ಶಿವಮೊಗ್ಗ ಹಾಗೂ ಸಾಗರ ಕ್ಷೇತ್ರದ ಮಾಜಿ ಶಾಸಕ ಹಾಗೂ ಮಾಜಿ ಸಚಿವ, ಹಿರಿಯ ರಾಜಕಾರಣಿ ಕೆ.ಎಚ್‌ಶ್ರೀನಿವಾಸ್‌ (86) ನಿಧನರಾಗಿದ್ದಾರೆ. ಸಾಗರ ತಾಲ್ಲೂಕು ಕಾನುಗೋಡು ಗ್ರಾಮದವರಾದ ಶ್ರೀನಿವಾಸ್‌ ಜನತಾ ಪರಿವಾರದಲ್ಲಿ ಗುರುತಿಸಿಕೊಂಡಿದ್ದರು. ಆನಂತರ ಕಾಂಗ್ರೆಸ್‌ನಲ್ಲೂ ಇದ್ದರು. ಮಾಜಿ ಸಿಎಂ ರಾಮಕೃಷ್ಣ ಹೆಗಡೆ ಅವರ ಆಪ್ತರಾಗಿದ್ದ ಅವರು ಸಾಂಸ್ಕೃತಿಕ ವಲಯದಲ್ಲೂ ಗುರುತಿಸಿಕೊಂಡಿದ್ದರು. ಕವನ ಸಂಕಲನಗಳನ್ನೂ ರಚಿಸಿದ್ದ ಅವರು ಸಿನಿಮಾದಲ್ಲೂ ಅಭಿನಯಿಸಿದ್ದರು. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಕಾನುಗೋಡು ಗ್ರಾಮದಲ್ಲಿ 1938ರ ಫೆಬ್ರವರಿ

ಹಿರಿಯ ರಾಜಕಾರಣಿ ಮಾಜಿ ಸಚಿವ ಕೆ.ಎಚ್‌ಶ್ರೀನಿವಾಸ್‌ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..! 

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30. ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ. ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.  

ಬಸ್-ಆಟೋ ಡಿಕ್ಕಿ  ಚಿಕಿತ್ಸೆ ಸ್ಪಂದಿಸದೆ ಆಟೋ ಚಾಲಕ ಮೃತ್ಯು..!  Read More »

ಕರಾವಳಿ, ಕ್ರೈಮ್ ನ್ಯೂಸ್

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..!

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಅಲೆವೂರಿನ ನೈಲಪಾದೆ ನದಿಯಲ್ಲಿ ಈಜಲು ತೆರಳಿ ನೀರಿನಲ್ಲಿ ಮುಳುಗಿ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ನಸುಕಿನ ಜಾವ ಮೃತಪಟ್ಟಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತ್ರಿವೆಂಡಮ್‌ ನ ಆರೊನ್ ರೋಜರ್ ಲೀನ್(17) ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಕೋಲ್ಕತ್ತಾದ ಮಾಧವ್(18) ಸ್ಥಿತಿ ಚಿಂತಾಜನಕವಾಗಿದೆ. ಆ. 25ರಂದು ನದಿಗೆ ಈಜಲು ನಾಲ್ವರು ವಿದ್ಯಾರ್ಥಿಗಳು ತೆರಳಿದ್ದರು. ಈ ಪೈಕಿ ಆರೊನ್ ಹಾಗೂ ಮಾಧವ್ ನೀರಿನಲ್ಲಿ

ನೀರಿನಲ್ಲಿ ಮುಳುಗಿ ಆಸ್ಪತ್ರೆಗೆ ದಾಖಲಾಗಿದ್ದ ವಿದ್ಯಾರ್ಥಿಯೋರ್ವ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು..! ಮತ್ತೋರ್ವನ ಸ್ಥಿತಿ ಗಂಭೀರ..! Read More »

ಕರಾವಳಿ, ಕ್ರೈಮ್ ನ್ಯೂಸ್

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಇಟಾನಗರ, ಆ. 28. ಅರುಣಾಚಲ ಪ್ರದೇಶದ ಅಪ್ಪರ್ ಸುಬನ್ಸಿರಿ ಜಿಲ್ಲೆಯಲ್ಲಿ ಟ್ರಕ್ ಆಳವಾದ ಕಂದರಕ್ಕೆ ಬಿದ್ದ ಪರಿಣಾಮ ಮೂವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿದುಬಂದಿದೆ. ಅಪಘಾತದಲ್ಲಿ ಮೂವರು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ ಎಂದು ಇಟಾನಗರದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಪಘಾತದ ಹೆಚ್ಚಿನ ವಿವರಗಳು ಇನ್ನೂ ದೊರೆತಿಲ್ಲ ಎಂದು ಅಧಿಕಾರಿ ತಿಳಿಸಿದ್ದಾರೆ. ಸೇನೆಯ ಈಸ್ಟರ್ನ್ ಕಮಾಂಡ್ ತನ್ನ ಸಿಬ್ಬಂದಿಯ ಸಾವಿಗೆ ಸಂತಾಪ ಸೂಚಿಸಿದ್ದು, ಮೃತಪಟ್ಟವರನ್ನು ಹವಾಲ್ದಾರ್ ನಖತ್ ಸಿಂಗ್,

ಟ್ರಕ್ ಕಂದರಕ್ಕೆ ಬಿದ್ದು 3 ಸೇನಾ ಸಿಬ್ಬಂದಿ ಮೃತ್ಯು 4 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..!

(ನ್ಯೂಸ್ ಕಡಬ) newskadaba.c0m ಲಖನೌ, ಆ. 27.  ಉತ್ತರ ಪ್ರದೇಶದ ಇಂಡೋ-ನೇಪಾಳ ಗಡಿ ಜಿಲ್ಲೆ ಬಹ್ರೈಚ್‌ ನ ಮಹಾಸಿ ಬ್ಲಾಕ್‌ನ 30 ಗ್ರಾಮಗಳಲ್ಲಿ ತೋಳಗಳ ಗುಂಪು ದಾಳಿ ನಡೆಸಿದ್ದು, ಘಟನೆಯಲ್ಲಿ ಆರು ಮಕ್ಕಳು ಸೇರಿದಂತೆ ಏಳು ಜನ ಸಾವನ್ನಪ್ಪಿದ್ದಾರೆ ಮತ್ತು 26 ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅರಣ್ಯ ಇಲಾಖೆಯು ತೋಳಗಳನ್ನು ಸೆರೆ ಹಿಡಿಯಲು ಒಂಬತ್ತು ಜನರ ತಂಡವನ್ನು ನಿಯೋಜಿಸಿದೆ. ತೋಳಗಳ ಗ್ರಾಮಗಳಿಗೆ ನುಗ್ಗಿ ದಾಳಿ ನಡೆಸುತ್ತಿದ್ದು, ಕಳೆದ ಒಂದು ತಿಂಗಳಿಂದ ಈ ಪ್ರದೇಶದ ಗ್ರಾಮಸ್ಥರಲ್ಲಿ ಭೀತಿಯನ್ನು ಸೃಷ್ಟಿಸಿವೆ.

ತೋಳಗಳ ದಾಳಿಗೆ ಆರು ಮಕ್ಕಳು ಸೇರಿದಂತೆ ಏಳು ಜನ ಸಾವು..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.   ಇಬ್ಬರು ಬಾಲಕಿಯರನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದ ಮಲತಂದೆಯನ್ನು ಅಮೃತಹಳ್ಳಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಆರೋಪಿಯನ್ನು ಕಾವೇರಿ ಲೇಔಟ್ ನಿವಾಸಿ ಕ್ಯಾಬ್ ಡ್ರೈವರ್ ಸುಮಿತ್ ಮೋಹನ್ (45) ಎಂದು ಗುರುತಿಸಲಾಗಿದೆ. ಹತ್ಯೆಯಾದ ಬಾಲಕಿಯನ್ನು ಸೃಷ್ಟಿ (14) ಹಾಗೂ ಸೋನಿಯಾ (16) ಎಂದು ಗುರುತಿಸಲಾಗಿದೆ. ಬಾಲಕಿಯರು ಕ್ರಮವಾಗಿ 8 ಮತ್ತು 9ನೇ ತರಗತಿ ಓದುತ್ತಿದ್ದರು. ಹಿರಿಯ ಮಗಳು ಫೋನ್ ನಲ್ಲಿ ಮಾತನಾಡುತ್ತಿದ್ದು, ಊಟ ಬಡಿಸುವಂತೆ ಪದೇ ಪದೇ ಕೇಳಿದರೂ ಕಿವಿಗೊಡದ

ಇಬ್ಬರು ಬಾಲಕಿಯರನ್ನು ಕೊಲೆಗೈದ ಮಲತಂದೆ ಆರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                        

(ನ್ಯೂಸ್ ಕಡಬ) newskadaba.c0m ಸುಡಾನ್, ಆ. 27.  ಯುದ್ಧ ಪೀಡಿತ ಸುಡಾನ್‌ ನಲ್ಲಿ ಭಾರೀ ಮಳೆಗೆ ಅಣೆಕಟ್ಟು ಒಡೆದು ಕನಿಷ್ಠ 60 ಜನರು ಸಾವನ್ನಪ್ಪಿದ್ದು, ಹಲವು ಮಂದಿ ನಾಪತ್ತೆಯಾದ ಘಟನೆ ಸಂಭವಿಸಿದೆ. ವ್ಯಾಪಕ ಮಳೆಗೆ ಕೆಂಪು ಸಮುದ್ರದ ಸಮೀಪದಲ್ಲಿದ್ದ ಅರ್ಬತ್ ಅಣೆಕಟ್ಟು ಕೊಚ್ಚಿಹೋಗಿದ್ದು, 20 ಕ್ಕೂ ಹೆಚ್ಚು ಹಳ್ಳಿಗಳಿಗೆ ನೀರು ನುಗ್ಗಿದ್ದು 50 ಸಾವಿರು ಮನೆಗಳು ಕೊಚ್ಚಿ ಹೋಗಿದೆ ಎಂದು ವರದಿಯಾಗಿದೆ. ಅರ್ಬತ್ ಅಣೆಕಟ್ಟು 25 ಮಿಲಿಯನ್ ಕ್ಯೂಬಿಕ್ ಮೀಟರ್ ಸಾಮರ್ಥ್ಯವನ್ನು ಹೊಂದಿತ್ತು. ಪೋರ್ಟ್ ಸುಡಾನ್‌ ನ

ಮಳೆಯ ಆರ್ಭಟಕ್ಕೆ ಅಣೆಕಟ್ಟು ಒಡೆದು 60 ಜನರ ಸಾವು..!  ಹಲವು ಮಂದಿ ನಾಪತ್ತೆ..!                         Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top