death

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!            

(ನ್ಯೂಸ್ ಕಡಬ) newskadaba.c0m ತುಮಕೂರು, ಆ. 27.  ಮಧುಗಿರಿ ತಾಲೂಕಿನ ಬುಳ್ಳಸಂದ್ರ ಗ್ರಾಮದಲ್ಲಿ ನಡೆದ ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮಹಿಳೆಯರು ಮೃತಪಟ್ಟು, ಹಲವರು ಅಸ್ವಸ್ಥಗೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಬುಳ್ಳಸಂದ್ರದ ನಿವಾಸಿಗಳಾದ ತಿಮ್ಮಕ್ಕ (80) ಮತ್ತು ಗಿರಿಯಮ್ಮ (86) ಮತ್ತು ಆಂಧ್ರಪ್ರದೇಶದ ಮಡಕಶಿರಾ ತಾಲ್ಲೂಕಿನ ಸಿದ್ಧಗಿರಿ ಗ್ರಾಮದ ಕಾಟಮ್ಮ (45) ಎಂದು ಗುರುತಿಸಲಾಗಿದೆ. ಕರಿಯಮ್ಮ ಮತ್ತು ಮುತ್ತುರಾಯ ಭೂತಪ್ಪ ದೇವರ ವಾರ್ಷಿಕ ಜಾತ್ರೆ ಶನಿವಾರ ಆರಂಭವಾಯಿತು. ಭಾನುವಾರ ಮಾಂಸಾಹಾರಿ ಆಹಾರವನ್ನು ಸೇವಿಸಿದ ನಂತರ, ಹಲವರಲ್ಲಿ ವಾಂತಿ […]

ಜಾತ್ರೆಯಲ್ಲಿ ಊಟ ಸೇವಿಸಿ ಮೂವರು ಮೃತ್ಯು..! ಹಲವರು ಅಸ್ವಸ್ಥ..!             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 27.  ಖ್ಯಾತ ಕೈಗಾರಿಕೋದ್ಯಮಿ ಮತ್ತು ಪ್ರಸಿದ್ಧ ಖೋಡೆ ಕುಟುಂಬದ ಸದಸ್ಯ ಅನಂತ ಪದ್ಮನಾಭ ಖೋಡೆ(85) ಸೋಮವಾರ ನಿಧನರಾದರು. ಅನಂತ ಪದ್ಮನಾಭ ಖೋಡೆ ದಿವಂಗತ ರಾಮಚಂದ್ರ ಖೋಡೆ ಮತ್ತು ಶ್ರೀಹರಿ ಖೋಡೆಯವರ ಸಹೋದರರಾಗಿದ್ದರು, ಅವರಿಬ್ಬರೂ ಕುಟುಂಬದ ವ್ಯವಹಾರಗಳಲ್ಲಿ ಪ್ರಭಾವಿ ವ್ಯಕ್ತಿಗಳಾಗಿದ್ದರು. ತಮ್ಮ ಕೈಗಾರಿಕಾ ಉದ್ಯಮಗಳು ಮತ್ತು ಮದ್ಯದ ವ್ಯಾಪಾರಕ್ಕೆ ಹೆಸರುವಾಸಿಯಾದ ಖೋಡೆಗಳು ಕರ್ನಾಟಕದ ಸಾಮಾಜಿಕ ಮತ್ತು ರಾಜಕೀಯ ವಲಯಗಳಲ್ಲಿ ದೀರ್ಘಕಾಲ ಪ್ರಭಾವ ಬೀರಿದ್ದಾರೆ ಎನ್ನಲಾಗಿದೆ.                                                                                    

ಖ್ಯಾತ ಕೈಗಾರಿಕೋದ್ಯಮಿ ಅನಂತ ಪದ್ಮನಾಭ ಖೋಡೆ ನಿಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 27. ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತೊಡಿಕಾನ ಗ್ರಾಮದ ಹರ್ಲಡ್ಕ ಎಂಬಲ್ಲಿ ಮಂಗಳವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಹರ್ಲಡ್ಕ ನಿವಾಸಿ ವೆಂಕಪ್ಪ ನಾಯ್ಕ್ ಎಂಬವರ ಪುತ್ರ ರುಕ್ಮಯ್ಯ(45) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣವೇ ಇನ್ನಷ್ಟೇ ತಿಳಿದು ಬರಬೇಕಿದೆ. ಮೃತರು ತಂದೆ, ತಾಯಿ, ಹಾಗೂ ಪತ್ನಿ ಮತ್ತು ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ: ನೇಣುಬಿಗಿದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು

(ನ್ಯೂಸ್ ಕಡಬ) newskadaba.com ಕಡಬ, ಆ.26. ಖಾಸಗಿ ಬಸ್ಸನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಬೈಕೊಂದು ಸ್ಕಿಡ್ ಆಗಿ ಬಿದ್ದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಇಚಿಲಂಪಾಡಿ ಸಮೀಪದ ನೂಜಿಬಾಳ್ತಿಲ ಎಂಬಲ್ಲಿ ಸೋಮವಾರದಂದು ನಡೆದಿದೆ. ಮೃತ ಸವಾರನನ್ನು ಶಿವಮೊಗ್ಗ ಜಿಲ್ಲೆಯ ಹಾರನಹಳ್ಳಿ ಗ್ರಾಮದ ಗುತ್ಯಪ್ಪ ಎಂಬವರ ಪುತ್ರ ದೇವರಾಜ್ (22) ಎಂದು ಗುರುತಿಸಲಾಗಿದೆ. ದೇವರಾಜ್ ತನ್ನ ಸ್ನೇಹಿತರೊಂದಿಗೆ ಬೈಕಿನಲ್ಲಿ ಧರ್ಮಸ್ಥಳ ಯಾತ್ರೆ ಮುಗಿಸಿ ಸುಬ್ರಹ್ಮಣ್ಯಕ್ಕೆ‌ ತೆರಳುತ್ತಿದ್ದ ವೇಳೆ ನೂಜಿಬಾಳ್ತಿಲ ಬೆಥನಿ‌

ಕಡಬ: ಓವರ್‌ಟೇಕ್ ಮಾಡುವ ಭರದಲ್ಲಿ ಬೈಕ್ ಸ್ಕಿಡ್ ಆಗಿ ಸವಾರ ಮೃತ್ಯು; ಬೈಕಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಚರಂಡಿಗೆ ಬಿದ್ದ ಇನ್ನೋವಾ ಕಾರು Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉಡುಪಿ, ಆ. 26. ಈಜಲೆಂದು ಕೆರೆಗೆ ಹೋದ ವಿದ್ಯಾರ್ಥಿಯೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ಉಡುಪಿಯ ಕರಂಬಳಿ ಎಂಬಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಇಂದ್ರಾಳಿ ನಿವಾಸಿ ಸಿದ್ದಾರ್ಥ್ ಶೆಟ್ಟಿ (17) ಎಂದು ಗುರುತಿಸಲಾಗಿದೆ. ಮೃತ ಸಿದ್ದಾರ್ಥ್ ಮತ್ತಿಬ್ಬರೊಂದಿಗೆ ಕರಂಬಳಿ ಕೆರೆಗೆ ಈಜಲೆಂದು ತೆರಳಿದ್ದ. ಆದರೆ ಸಿದ್ದಾರ್ಥ್ ಮಾತ್ರ ನೀರಿಗಿಳಿದಿದ್ದು, ಇನ್ನಿಬ್ಬರು ನೀರಿಗೆ ಇಳಿದಿರಲಿಲ್ಲ ಎನ್ನಲಾಗಿದೆ. ಸ್ಥಳೀಯರು ಕೂಡಲೇ ಆತನನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.

ಈಜಲು ಹೋದ ವಿದ್ಯಾರ್ಥಿ ಕೆರೆ ನೀರಿನಲ್ಲಿ ಮುಳುಗಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು

(ನ್ಯೂಸ್ ಕಡಬ) newskadaba.c0m ಕುಂದಾಪುರ, ಆ. 26.  ಭಾನುವಾರ ಸಂಜೆ ಬೀಸಿದ ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ರಸ್ತೆ ಬದಿಯಲ್ಲಿ ಕಟ್ಟಿದ್ದ ದನ ಹಾಗೂ ಅದನ್ನು ಬಿಡಿಸಲು ಹೋಗಿದ್ದ ಮಹಿಳೆ, ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕೆಂಚನೂರು ನೀರಿನ ಟ್ಯಾಂಕಿ ಬಳಿ ನಡೆದಿದೆ. ಮೃತರನ್ನು ಕೆಂಚನೂರು ಗ್ರಾಮದ ಮೈಲಾರಿ ನಿವಾಸಿ ಅಣ್ಣಪ್ಪಯ್ಯ ಆಚಾರಿ ಎಂಬುವರ ಪತ್ನಿ ಸುಜಾತ ಆಚಾರ್ತಿ (53) ಎಂದು ಗುರುತಿಸಲಾಗಿದೆ. ಮರ ಬಿದ್ದ ಪರಿಣಾಮ ದನ ಸ್ಥಳದಲ್ಲಿಯೇ ಸಾವನ್ನಪ್ಪಿದೆ ಹಾಗೂ ಸುಜಾತ

ಭಾರೀ ಗಾಳಿ ಮಳೆಗೆ ಮರ ಬಿದ್ದ ಪರಿಣಾಮ ದನ ಹಾಗೂ ಮಹಿಳೆ ಸಾವು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ

(ನ್ಯೂಸ್ ಕಡಬ) newskadaba.com ಕಾಸರಗೋಡು, ಆ. 26. ಕೆಎಸ್ಸಾರ್ಟಿಸಿ ಬಸ್ಸು ಢಿಕ್ಕಿ ಹೊಡೆದು ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರನ ಮೇಲೆ ಖಾಸಗಿ ಬಸ್ ಹರಿದ ಪರಿಣಾಮ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರವಿವಾರ ರಾತ್ರಿ ಹೊಸದುರ್ಗ ಠಾಣಾ ವ್ಯಾಪ್ತಿಯ ಪಡನ್ನಕ್ಕಾಡ್ ಎಂಬಲ್ಲಿ ನಡೆದಿದೆ. ಮೃತರನ್ನು ಸಾಫ್ಟ್ ವೇರ್ ಇಂಜಿನಿಯರ್ ಬೇಡಡ್ಕ ತೆಕ್ಕೆಕರೆ ನಿವಾಸಿ ಪಿ. ಶ್ರೀನೇಶ್ (39) ಎಂದು ಗುರುತಿಸಲಾಗಿದೆ. ಕಾಞಂಗಾಡ್ ನ ಖಾಸಗಿ ಸಂಸ್ಥೆಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದ ಶ್ರೀನೇಶ್ ಕಣ್ಣೂರಿ ನಿಂದ ಬೇಡಡ್ಕಕ್ಕೆ ಬೈಕಿನಲ್ಲಿ

ರಸ್ತೆ ಅಪಘಾತ- ಸಾಫ್ಟ್ ವೇರ್ ಇಂಜಿನಿಯರ್ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 26.  ಮಗ ಆತ್ಮಹತ್ಯೆಗೆ ಶರಣಾಗಿದ್ದನ್ನು ನೋಡಿದ ತಾಯಿ ಆ ನೋವಿನಲ್ಲೇ ಶವದ ಮುಂದೆ ಕಣ್ಣೀರಿಡುತ್ತಾ ಕೊನೆಯುಸಿರೆಳೆದಿರುವ ಮನಕಲಕುವ ಘಟನೆ ನಡೆದಿದೆ. ಬೆಂಗಳೂರಿನ ಕಾವೇರಿಪುರದಲ್ಲಿ ನೆಲೆಸಿದ್ದ ಕ್ಯಾಬ್ ಚಾಲಕನಾಗಿದ್ದ ಅರುಣ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದನು. ಕೋಣೆಯಲ್ಲಿ ಮಲಗಿದ್ದ ಮಗನಿಗೆ ಕಾಫಿ ಕೊಡಲು ಹೋಗಿದ್ದ ತಾಯಿಗೆ ಮಗು ನೇಣು ಬಿಗಿದುಕೊಂಡಿರುವುದನ್ನು ನೋಡಿ ಬರಸಿಡಿಲು ಬಡಿದಂತಾಗಿತ್ತು. ಮಗನ ಶವ ಮುಂದೆ ಕುಳಿತು ರೋದಿಸುತ್ತಿದ್ದ 78 ವರ್ಷದ ಸರಸ್ವತಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಆತ್ಮಹತ್ಯೆಗೆ ಶರಣಾದ ಮಗ..!  ಶವದ ಮುಂದೆ ಕಣ್ಣೀರಿಡುತ್ತಾ ಮೃತಪಟ್ಟ ತಾಯಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು

(ನ್ಯೂಸ್ ಕಡಬ) newskadaba.c0m ಆಂಧ್ರಪ್ರದೇಶ, ಆ. 26.  ಹೈದರಾಬಾದ್‌ ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ. ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಚವಾಣ್, ಆರಂಭದಲ್ಲಿ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್‌ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು ಮತ್ತು ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.  

ಕಾಂಗ್ರೆಸ್ ನ ಹಿರಿಯ ಸಂಸದ ವಸಂತ್​ ರಾವ್ ಚವಾಣ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಆ. 24. ತೋಟಕ್ಕೆ ತೆಂಗಿನಕಾಯಿ ಹೆಕ್ಕಲು ಹೋಗಿದ್ದ ಕೃಷಿಕರೊಬ್ಬರು ಕೆರೆಗೆ ಜಾರಿ ಬಿದ್ದು ಮೃತಪಟ್ಟ ಘಟನೆ ಮಡಪ್ಪಾಡಿ ಗ್ರಾಮದಲ್ಲಿ ನಡೆದಿದೆ.   ಮೃತಪಟ್ಟವರನ್ನು ಮಡಪ್ಪಾಡಿ ಗ್ರಾಮದ ವಿಶ್ವನಾಥ ಗೋಳ್ಯಾಡಿ (60) ಎಂದು ಗುರುತಿಸಲಾಗಿದೆ. ತೆಂಗಿನಕಾಯಿ ಹೆಕ್ಕಲೆಂದು ತೋಟಕ್ಕೆ ಹೋಗಿದ್ದ ವಿಶ್ವನಾಥರವರು ಮಧ್ಯಾಹ್ನದವರೆಗೆ ಬಾರದೇ ಇದ್ದಾಗ ಮನೆಯವರು ಹುಡುಕಾಡಿದಾಗ ತೆಂಗಿನಕಾಯಿ ತರಲೆಂದು ತೆಗೆದುಕೊಂಡು ಹೋಗಿದ್ದ ಕೈಗಾಡಿ ಕೆರೆಯ ಬಳಿ ಪತ್ತೆಯಾಗಿದೆ. ಪಕ್ಕದ ಕೆರೆಯಲ್ಲಿ ನೋಡಿದಾಗ ವಿಶ್ವನಾಥರ ಮೃತದೇಹ ತೇಲುತ್ತಿರುವುದು ಕಂಡು ಬಂದಿದೆ. ಸ್ಥಳೀಯರು

ಸುಳ್ಯ: ಕೆರೆಗೆ ಬಿದ್ದು ಕೃಷಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top