death

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಆ.07. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಣಿ ಸಮೀಪ ಪಟ್ಲಕೋಡಿ ಎಂಬಲ್ಲಿ ನಡೆದಿದ್ದು, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ತಿಲಕ್‌ ಪೂಜಾರಿ (34) ಎಂದು ಗುರುತಿಸಲಾಗಿದೆ. ತಿಲಕ್‌ ಪೂಜಾರಿ ಅವಿವಾಹಿತರಾಗಿದ್ದು, ಎಲ್ ಎಲ್ ಬಿ ಪದವಿ ಪಡೆದಿದ್ದರು. ಕೆಲವು ಸಮಯಗಳಿಂದ ಚಾಲಕ ವೃತ್ತಿ ನಿರ್ವಹಿಸುತ್ತಿದ್ದರು. ಸರಿಯಾಗಿ ಕೆಲಸ ಸಿಗದ ಹಿನ್ನೆಲೆಯಲ್ಲಿ ಮನನೊಂದಿದ್ದರು ಎನ್ನಲಾಗಿದೆ. ಇದರಿಂದ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಬಂಟ್ವಾಳ: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ

(ನ್ಯೂಸ್ ಕಡಬ)newskadaba.com ಕಾರವಾರ, ಆ.07. ಬಾಲಕಿಯೊಬ್ಬಳ ಕುತ್ತಿಗೆಯನ್ನು ಬಟ್ಟೆಯಿಂದ ಬಿಗಿದು ಹತ್ಯೆ ಮಾಡಿರುವ ಘಟನೆ ಪಣಂಬೂರು ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ನಡೆದಿದೆ ಎಂದು ತಿಳಿದುಬಂದಿದೆ. ಬಾಲಕಿಯು ಕೈ ನೋವಿಗೆ ಚಿಕಿತ್ಸೆ ಪಡೆದು ನಾಲ್ಕು ದಿನಗಳ ಹಿಂದೆಯಷ್ಟೇ ಚಿಕ್ಕಪ್ಪನ ಮನೆಗೆ ಬಂದಿದ್ದಳು. ಇನ್ನು ಬಾಲಕಿಯ ತಾಯಿ ಮಗಳೊಂದಿಗೆ ಮಾತನಾಡಲು ಹನುಮಂತ ಅವರ ಪಕ್ಕದ ಮನೆಯವರಿಗೆ ಕರೆ ಮಾಡಿದ್ದಾರೆ. ಈ ವೇಳೆ ಅವರು ಬಾಲಕಿಗೆ ಕರೆ ನೀಡಿದಲು ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಮಂಗಳೂರು: ಬಟ್ಟೆಯಿಂದ ಕುತ್ತಿಗೆಗೆ ಬಿಗಿದು ಬಾಲಕಿಯ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಆ.06.  ಆಟೋ ಚಾಲಕನೋರ್ವ ಕೆರೆಗೆ ಹಾರಿ ಆತ್ಮಹತ್ಯೆಗೈದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಸಂಪ್ಯದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಮೃತಪಟ್ಟವರನ್ನು ಮಹಮ್ಮದ್(48) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ ಎನ್ನಲಾಗಿದೆ. ಮೃತರು ಪತ್ನಿ ಹಾಗೂ ಮಕ್ಕಳನ್ನು ಅಗಲಿದ್ದಾರೆ ಎಂದು ವರದಿ ತಿಳಿಸಿದೆ.

ಪುತ್ತೂರು: ಕೆರೆಗೆ ಹಾರಿ ಆಟೋ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಂಹಧಾಮದ 18 ವರ್ಷದ ಆರ್ಯ ಹೆಸರಿನ ಸಿಂಹ ಸಾವು

(ನ್ಯೂಸ್ ಕಡಬ)newskadaba.com ಶಿವಮೊಗ್ಗ,ಆ.06. ತ್ಯಾವರೆಕೊಪ್ಪದ ಹುಲಿ ಸಿಂಹಧಾಮದಲ್ಲಿ ಆರ್ಯ ಹೆಸರಿನ ಸಿಂಹ ಮೃತಪಟ್ಟಿದೆ. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 18 ವರ್ಷ ವಯಸ್ಸಿನ ಸಿಂಹ ವಯೋಸಹಜ ಕಾಯಿಲೆಯಿಂದ ಸಾವನ್ನಪ್ಪಿದೆ. ಆರ್ಯ ಕಳೆದ 3 ದಿನಗಳಿಂದ ಆಹಾರ ತ್ಯಜಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಸಿಬಂದಿಗಳು ಹುಲಿ ಸಿಂಹಧಾಮದಲ್ಲೇ ಆರ್ಯ ಅಂತ್ಯ ಸಂಸ್ಕಾರ ನೆರವೇರಿಸಿದ್ದಾರೆ.

ಸಿಂಹಧಾಮದ 18 ವರ್ಷದ ಆರ್ಯ ಹೆಸರಿನ ಸಿಂಹ ಸಾವು Read More »

ಕರ್ನಾಟಕ

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ,ಆ.06. ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರದರ್ಶನದ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ. ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ತೊಡಗಿಸಿಕೊಂಡಿದ್ದರು.ಕಲ್ಮಾಡಿ ಮನೆಯಲ್ಲಿ ಇವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ನಡೆಯಲಿದ್ದು, ಇಂದೇ ಅಂತ್ಯಕ್ರಿಯೆ ನಡೆಯಲಿದೆ.

ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಜಯಕರ ಸುವರ್ಣ ನಿಧನ Read More »

ಕರಾವಳಿ

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಆ.06. ಶಾಲಾ ಬಸ್ ಹರಿದು 5 ವರ್ಷದ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ ದಾರುಣ ಘಟನೆ ನಡೆದಿದೆ ಎನ್ನಲಾಗಿದೆ. ಮನೆಯಿಂದ ಅಂಗನವಾಡಿಗೆ ಹೋಗುತ್ತಿದ್ದ ವೇಳೆ ಶಾಲಾ ಬಸ್ ಹರಿದು ಗ್ರಾಮದ 5 ವರ್ಷದ ಬಾಲಕ ಬಸವರಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಅಪಘಾತದ ಬಳಿಕ ಶಾಲಾ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.    

ಶಾಲಾ ಬಸ್ ಹರಿದು ಬಾಲಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು      

(ನ್ಯೂಸ್ ಕಡಬ) newskadaba.com ಸುಳ್ಯ, ಆ.05. ಬೈಕ್ ಮೋರಿಗೆ ಢಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಪಾಜೆ ಅರಣ್ಯ ಇಲಾಖಾ ಕಛೇರಿ ಬಳಿ ಸಂಭವಿಸಿದೆ ಎಂದು ವರದಿಯಾಗಿದೆ.ಮೃತಪಟ್ಟವರನ್ನು ಮೈಸೂರು ಮೂಲದ ಪವನ್ ಹಾಗೂ ಮನೋಜ್ ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಕೊಯಾನಾಡಿನ ಫಾರೆಸ್ಟ್ ಐ ಬಿ ಬಳಿ ಮುಖ್ಯರಸ್ತೆಯಲ್ಲಿ ಹೋಗುತ್ತಿದ್ದಾಗ ರಸ್ತೆ ಬದಿಯಲ್ಲಿದ್ದ ಮೋರಿಗೆ ಬೈಕ್ ಡಿಕ್ಕಿ ಹೊಡೆದಿದ್ದು, ಇಬ್ಬರು ಪಕ್ಕದ ಚರಂಡಿಗೆ ಎಸೆಯಲ್ಪಟ್ಟು ಸ್ಥಳದಲೇ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಸುಳ್ಯ: ಮೋರಿಗೆ ಢಿಕ್ಕಿ ಹೊಡೆದ ಬೈಕ್…!                       ಸವಾರರಿಬ್ಬರು ಸ್ಥಳದಲ್ಲೇ ಮೃತ್ಯು       Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ.03. ಮನೆಯ ಬಾವಿಗೆ ಜಾರಿ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಬೆಳ್ತಂಗಡಿ ನಗರದ ಗುರುದೇವ ಕಾಲೇಜ್ ರಸ್ತೆಯಲ್ಲಿರುವ ಸೀಡ್ ಫಾರ್ಮ್ ಬಳಿ ಇರುವ ಮನೆಯ ಬಾವಿಗೆ ಬಿದ್ದು ಸುಮಾಲಿನಿ ಜೈನ್ (63) ಎಂದು ಗುರುತಿಸಲಾಗಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಆಂಬುಲೆನ್ಸ್ ಜಲೀಲ್‌ ಹಾಗೂ ಅಲ್ಫಾಸ್ ಲಾಯಿಲ ಸೇರಿ ಬಾವಿಗೆ ಹಗ್ಗ ಹಾಕಿ ಮಹಿಳೆಯನ್ನು ಮೇಲಕ್ಕೆತ್ತಿದ್ದಾರೆ. ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಿದರೂ ಅವರು

ಬೆಳ್ತಂಗಡಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಆ.02. ಮಟನ್ ಊಟ ಮಾಡಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಘಟನೆ ರಾಯಚೂರಿನ ಕಲ್ಲೂರು ಗ್ರಾಮದಲ್ಲಿ ನಡೆದಿದೆ. ವಿಷಾಹಾರ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಗಂಡ ಹೆಂಡತಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಭೀಮಣ್ಣ( 60), ಈರಮ್ಮ ( 57) ಮಲ್ಲೇಶ (21), ಪಾರ್ವತಿ ( 19) ಮೃತರು ಎಂದು ತಿಳಿದುಬಂದಿದೆ. ಮತ್ತೋರ್ವ ಮಗಳು ಮಲ್ಲಮ್ಮ (23) ಸ್ಥಿತಿ ಗಂಭೀರವಾಗಿದೆ. ಮಾಂಸಾಹಾರ ಸೇವನೆ ಮಾಡಿದ್ದು, ಫುಡ್ ಪಾಯಿಸನ್ ನಿಂದ ಸಾವು ಸಂಭವಿಸಿರಬಹುದು

ಮಟನ್ ಊಟ ತಿಂದಿದ್ದ ಒಂದೇ ಕುಟುಂಬದ ನಾಲ್ವರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.02. 21 ವರ್ಷದ ಪತಿಯ ಕಿರುಕುಳ ತಾಳಲಾರದೆ 11 ತಿಂಗಳ ಮಗುವಿನ 17 ವರ್ಷ ವಯಸ್ಸಿನ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ ಹಾಗೂ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಗಂಗಮ್ಮನಗುಡಿ ಪೊಲೀಸರು ಪತಿಯನ್ನು ಬಂಧಿಸಿದ್ದಾರೆ. ಸಂತ್ರಸ್ತೆ ತನ್ನ ಪತಿ ಕೌಶಿಕ್ ನನ್ನು ಮನೆಯಿಂದ ಹೊರಗೆ ಕಳುಹಿಸಿದ ನಂತರ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

ಪತಿಯ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆ ದೂರು ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top