death

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ   

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.01. ಕೌಟುಂಬಿಕ ಕಲಹ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಿ-ಸಂಧಾನಕ್ಕೆಂದು ಸ್ನೇಹಿತನೊಂದಿಗೆ ಹೋಗಿದ್ದ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆಯೊಂದು ರಾಮನಗರ ಟೌನ್ ನಲ್ಲಿ ನಡೆದಿದೆ. ರಾಮನಗರದ ರೆಹಮಾನಿಯಾ ನಗರದ ನಿವಾಸಿ ಸೈಯದ್ ಅಫ್ಸಾನ್ (28) ಎಂದು ಗುರುತಿಸಲಾಗಿದೆ.    

 ಕೌಟುಂಬಿಕ ಕಲಹ      ಯುವಕನ ಬರ್ಬರ ಹತ್ಯೆ    Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ    

(ನ್ಯೂಸ್ ಕಡಬ)newskadaba.com ಕೇರಳ, ಜು.31. ವಯನಾಡಿನಲ್ಲಿ ನಡೆದ ಭೂಕುಸಿತ ದುರಂತದಲ್ಲಿ ಈವರೆಗೆ ಅನೇಕ ಮಂದಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇದೇ ಅಂತಿಮ ಅಂಕಿ-ಅಂಶವಲ್ಲ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಕೇರಳ ಸಿಎಂ ಪಿಣರಾಯಿ ವಿಜಯನ್ ಆತಂಕ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ವಯನಾಡಲ್ಲಿ ಪ್ರಕೃತಿ ಪ್ರಕೋಪ ಆಗಿದ್ದು, ನಸುಕಿನ ಜಾವ 2 ಗಂಟೆ ಸುಮಾರಿಗೆ ಮೊದಲ ಜಲ ಸ್ಫೋಟ ಸಂಭವಿಸಿತ್ತು. 4.10ಕ್ಕೆ ಎರಡನೇ ಸ್ಫೋಟ ಉಂಟಾಗಿತ್ತು. ಐವರು ಸಚಿವರು ಸತತವಾಗಿ ಕೆಲಸ ಮಾಡುತ್ತಿದ್ದಾರೆ. 18 ಮೃತದೇಹಗಳನ್ನು ಕುಟುಂಬದವರಿಗೆ

ವಯನಾಡು ಭೂಕುಸಿತ ; ಅನೇಕ ಮಂದಿ ಮೃತ್ಯು…!     ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು -ಕೇರಳ ಸಿಎಂ ಪಿಣರಾಯಿ     Read More »

ಕರಾವಳಿ

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…!

(ನ್ಯೂಸ್ ಕಡಬ)newskadaba.com ಬೀಜಾಡಿ, ಜು.31. ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹವೊಂದು ಪತ್ತೆಯಾಗಿದ್ದು, ಈ ಕುರಿತು ಪೋಲಿಸ್ ಇಲಾಖೆಗೆ ಇನ್ನೂ ಮಾಹಿತಿ ನೀಡಿಲ್ಲ ಎಂದು ವರದಿ ತಿಳಿಸಿದೆ. ಸ್ಥಳೀಯರು ಈ ವಿಚಾರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಮೃತದೇಹದ ಗುರುತು ಪತ್ತೆ ಹಚ್ಚಲು ಅಧಿಕಾರಿಗಳು ಹಾಗೂ ಸಾರ್ವಜನಿಕರು ಮುಂದಾಗಬೇಕೆಂದು ಕೋರಲಾಗಿದೆ. ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದ್ದು, ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡುವ ನಿರೀಕ್ಷೆಯಿದೆ.

ಸಮುದ್ರ ತೀರದಲ್ಲಿ ಅಪರಿಚಿತ ಮೃತದೇಹ ಪತ್ತೆ…! Read More »

ಕ್ರೈಮ್ ನ್ಯೂಸ್

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.29. ಸ್ನಾನದ ಕೋಣೆಯ ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ ಆಗಿ ಯುವಕನೋರ್ವ ಉಸಿರುಗಟ್ಟಿ ಮೃತಪಟ್ಟ ಘಟನೆ ಮೂಡುಬಿದಿರೆಯ ಕೋಟೆಬಾಗಿಲಿನ ವಸತಿ ಸಂಕೀರ್ಣವೊಂದರಲ್ಲಿ ನಡೆದಿದೆ. ಮೃತಪಟ್ಟವರನ್ನು ಶಾರಿಕ್ (18) ಎಂದು ಗುರುತಿಸಲಾಗಿದೆ. ಶಾರಿಕ್ ಸ್ನಾನಕ್ಕೆಂದು ತೆರಳಿದಾತ ಬಹಳ ಹೊತ್ತಾದರೂ ಹೊರ ಬಂದಿರುವುದಿಲ್ಲ. ಇದನ್ನು ಗಮನಿಸಿದ ಆತನ ಸಹೋದರ ಹೋಗಿ ನೋಡಿದಾಗ ಶಾರಿಕ್ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಗೀಸರ್ ನ ರಾಸಾಯನಿಕ ಹರಡಿದಾಗ ಶಾರಿಕ್ ಗೆ ಹೊರಬರಲು ಸಾಧ್ಯವಾಗಲಿಲ್ಲ ಎಂದು ಹೇಳಲಾಗಿದೆ.

ಗ್ಯಾಸ್ ಗೀಸರ್ ನ ರಾಸಾಯನಿಕ ಲೀಕ್ !! ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ವಿಟ್ಲ, ಜು.29. ವಿದ್ಯಾರ್ಥಿನಿ ಅನಾರೋಗ್ಯದಿಂದ ಮೃತಪಟ್ಟ ಘಟನೆ ವಿಟ್ಲದ ಪರ್ತಿಪ್ಪಾಡಿಯಲ್ಲಿ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತಪಟ್ಟ ಬಾಲಕಿಯನ್ನು ಗ್ಲೀನಾ ಡಿಸೋಜಾ(14) ಎಂದು ಗುರುತಿಸಲಾಗಿದೆ. ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಈಕೆಯನ್ನು ಕೆಲ ದಿನಗಳ ಹಿಂದೆ ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ

ವಿಟ್ಲ: ಅನಾರೋಗ್ಯದಿಂದ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು

(ನ್ಯೂಸ್ ಕಡಬ)newskadaba.com ಬೈಂದೂರು, ಜು.27. ಲಾರಿ ಚಾಸಿಸ್ ಪೇಂಟ್ ಮಾಡುವ ವೇಳೆ ವಿದ್ಯುತ್ ಆಘಾತದಿಂದ ಪೈಂಟರೊಬ್ಬರು ಮೃತಪಟ್ಟ ಘಟನೆ ಬೈಂದೂರಿನಲ್ಲಿ ನಡೆದಿದೆ. ಮೃತರನ್ನು ಗಂಗೊಳ್ಳಿ ನಿವಾಸಿ ಸಂದೀಪ್( 40 ) ಎಂದು ಗುರುತಿಸಲಾಗಿದೆ. ಇವರು ಟ್ರಾನ್ಸ್ಪೋರ್ಟ್ ಸಂಸ್ಥೆಯೊಂದರ ಲಾರಿಗಳ ಪೇಂಟಿಂಗ್ ಮಾಡಲು ಆಗಮಿಸಿದ್ದು, ಈ ವೇಳೆ ಪೇಂಟಿಂಗ್ ಕಂಪ್ರೆಸರ್ ಯಂತ್ರದಲ್ಲಿ ವಿದ್ಯುತ್ ಹರಿದ ಪರಿಣಾಮ ವಿದ್ಯುತ್ ಶಾಕ್‌ಗೆ ಒಳಗಾದ ಇವರು ತೀವ್ರವಾಗಿ ಅಸ್ವಸ್ಥಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ

ವಿದ್ಯುತ್ ಪ್ರವಹಿಸಿ ಪೈಂಟರ್ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ

(ನ್ಯೂಸ್ ಕಡಬ)newskadaba.com ಮಂಗಳೂರು, ಜು.25. ಪಿಲಿಕುಳದಲ್ಲಿರುವ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕರಾದ ಯುಜಿನ್ ವಿಲ್ಫ್ರೆಡ್ ಪಿಂಟೋ ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಕೆಲ ದಿನಗಳ ಹಿಂದೆ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿದ್ದರು. 2020 ರಲ್ಲಿ ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳುವ ಮೊದಲು GM ಅಮ್ಯೂಸ್‌ಮೆಂಟ್ ಪಾರ್ಕ್ ಸೇರಿದಂತೆ ಹಲವಾರು ರೀತಿಯ ಕಂಪನಿಗಳಲ್ಲಿ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿದ ಪಿಂಟೊ ಅವರು ಮನೋರಂಜನಾ ಉದ್ಯಮದಲ್ಲಿ ವಿಶಿಷ್ಟವಾದ ವೃತ್ತಿಜೀವನವನ್ನು ಹೊಂದಿದ್ದರು ಎನ್ನಲಾಗಿದೆ. ಮಂಗಳೂರಿನ

ಮಂಗಳೂರು: ಮಾನಸ ಅಮ್ಯೂಸ್‌ಮೆಂಟ್ ವಾಟರ್ ಪಾರ್ಕ್‌ ನ ನಿದೇರ್ಶಕ ವಿಲ್ಫ್ರೆಡ್ ಪಿಂಟೋ ವಿಧಿವಶ Read More »

ಕರಾವಳಿ

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು !

(ನ್ಯೂಸ್ ಕಡಬ)newskadaba.com ಸುರತ್ಕಲ್, ಜು.25. ಭಾರೀ ಮಳೆಯಿಂದಾಗಿ ಮತ್ತೊಂದು ಅವಘಡ ಸಂಭವಿಸಿದ್ದು, ಗಾಳಿ-ಮಳೆಗೆ ಮಂಗಳೂರು ಹೊರವಲಯದ ಸುರತ್ಕಲ್‌ ಸಮೀಪವಿರುವ ಜೋಕಟ್ಟೆಯಲ್ಲಿ ಮನೆಯೊಂದರ ಮೇಲೆ ತಡೆಗೋಡೆ ಕುಸಿದು ಬಿದ್ದು ಅಪ್ರಾಪ್ತ ಬಾಲಕ‌ನೊಬ್ಬ ದಾರುಣವಾಗಿ ಮೃತಪಟ್ಟಿರುವ ಘಟನೆ ಸುರತ್ಕಲ್ ನಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಶೈಲೇಶ್ (17) ಎಂದು ಗುರುತಿಸಲಾಗಿದೆ. ಬಾಲಕ ಆ ಮನೆಗೆ ಅತಿಥಿಯಾಗಿ ಬಂದಿದ್ದ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ತಡೆಗೋಡೆ ಕುಸಿದು ಬಿದ್ದು ಬಾಲಕ‌ ಮೃತ್ಯು ! Read More »

ಕರಾವಳಿ, ಕ್ರೈಮ್ ನ್ಯೂಸ್

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಮಾಣಿ ಸಮೀಪದ ಬುಡೋಳಿ ಮಡಲ ಎಂಬಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ . ಮೃತರನ್ನು ಬುಡೋಳಿ ಮಡಲ ನಿವಾಸಿ ಸುಶಾಂತ್ (25) ಎಂದು ಗುರುತಿಸಲಾಗಿದೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸುಶಾಂತ್ ಅವರು ಮಿನಿ ಬಸ್ ಖರೀದಿಸಿ ಸ್ವಂತ ವಾಹನದಲ್ಲಿ ಚಾಲಕನಾಗಿ ದುಡಿಯುತ್ತಿದ್ದ. ಸಾಮಾಜಿಕವಾಗಿ ಸೇವಾಕಾರ್ಯಗಳನ್ನು ಸಂಘಟನೆಯ ಜೊತೆಗೆ ‌ಮಾಡಿಕೊಂಡಿದ್ದು, ಗ್ರಾಮದಲ್ಲಿ ಉತ್ತಮ ಯುವಕನಾಗಿ ಗುರುತಿಸಿಕೊಂಡಿದ್ದ.ಆದರೆ ಆತ್ಮಹತ್ಯೆ ಮಾಡಿಕೊಳ್ಳಲು ಸ್ಪಷ್ಟವಾದ ಕಾರಣ

ಪುತ್ತೂರು: ನೇಣು ಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಪುತ್ತೂರು, ಜು.24. ಲಾರಿಯೊಂದು ಸ್ಕೂಟರ್‌ ಗೆ ಢಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ವಿಕಲಚೇತನ ವ್ಯಕ್ತಿ ಮೃತಪಟ್ಟ ಘಟನೆ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಂಜಲ್ಪಡ್ಪು ಎಂಬಲ್ಲಿ ಸಂಭವಿಸಿದೆ. ಮೃತರನ್ನು ಬಂಟ್ವಾಳ ತಾಲೂಕಿನ ಮಿತ್ತೂರು ಏಮಾಜೆ ಶಿವರಾಮ ನಾಯ್ಕ (50) ಎಂದು ಗುರುತಿಸಲಾಗಿದೆ. ಮಂಗಳೂರು ಕಡೆಗೆ ತೆರಳುತ್ತಿದ್ದ ಲಾರಿಯು ಮೂರು ಚಕ್ರದ ಸ್ಕೂಟರ್ ಗೆ ಢಿಕ್ಕಿಯಾಗಿತ್ತು. ಢಿಕ್ಕಿಯ ರಭಸಕ್ಕೆ ಶಿವರಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಪುತ್ತೂರು ಸಂಚಾರ ಠಾಣೆಯ

ಪುತ್ತೂರು: ಸ್ಕೂಟರ್‌ ಗೆ ಲಾರಿ ಢಿಕ್ಕಿ   ವಿಕಲಚೇತನ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top