death

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24.  ಲೇಡಿಸ್‌ ಪಿಜಿಯೊಂದಕ್ಕೆ ನುಗ್ಗಿದ ದುಷ್ಕರ್ಮಿ ಯುವತಿಯ ಕತ್ತು ಕೊಯ್ದು ಕೊಲೆ ಮಾಡಿ ಪರಾರಿಯಾಗಿದ್ದು, ಮೃತ ಯುವತಿಯನ್ನು ಬಿಹಾರ ಮೂಲದ ಕೃತಿ ಕುಮಾರಿ‌ (24) ಎಂದು ಗುರುತಿಸಲಾಗಿದೆ. ಕೃತಿ ಕುಮಾರಿ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಸುಮಾರು 11.10ಕ್ಕೆ ಯುವಕನೋರ್ವ ಚಾಕು ಇಟ್ಟುಕೊಂಡು ಯುವತಿ ಇದ್ದ ಲೇಡಿಸ್ ಪಿಜಿಯೊಳಗೆ ನುಗ್ಗಿದ್ದು 3ನೇ ಮಹಡಿಯಲ್ಲಿರುವ ಕೃತಿ ಕುಮಾರಿ ಅವರ ಕೊಠಡಿ ಬಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ. ಬಳಿಕ ಕತ್ತು ಕೊಯ್ದು ಹತ್ಯೆ ಮಾಡಿದ್ದಾನೆ […]

ಲೇಡಿಸ್ ಪಿಜಿಗೆ ನುಗ್ಗಿ ಕತ್ತು ಕೊಯ್ದು ಯುವತಿಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.24. ಅಪರಿಚಿತ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಮೃತಪಟ್ಟಿರುವ ಘಟನೆ ವರದಿಯಾಗಿದೆ. ಮೃತಪಟ್ಟವರನ್ನು ಆಯುಷ್ ಅಯ್ಯಪ್ಪ(21) ಎಂದು ಗುರುತಿಸಲಾಗಿದೆ. ಈತ ಖಾಸಗಿ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದರು ಎಂದು ತಿಳಿದುಬಂದಿದೆ.

ಅಪರಿಚಿತ ಕಾರು ಢಿಕ್ಕಿ.!   ಯುವಕನೋರ್ವ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಜು.23. ಬಾತ್‌ರೂಮ್‌ ಗೆ ಹೋಗಿದ್ದಾಗ ಗೀಸರ್‌ನ ಗ್ಯಾಸ್‌ ಸೋರಿಕೆಯಾಗಿ ಉಸಿರುಗಟ್ಟಿ ತಾಯಿ-ಮಗ ಇಬ್ಬರು ಮೃತಪಟ್ಟಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಶೋಭಾ ಮತ್ತು 16 ವರ್ಷದ ದಿಲೀಪ್ ಎಂದು ಗುರುತಿಸಲಾಗಿದೆ. ಸ್ನಾನಕ್ಕೆಂದು ತೆರಳಿದ್ದ ಬಾಲಕ ಮೊದಲು ವಿಷಕಾರಿ ಅನಿಲವನ್ನು ಸೇವಿಸಿ ಕುಸಿದು ಬಿದ್ದಿದ್ದಾನೆ. ಎಷ್ಟೋ ಹೊತ್ತಾದರೂ ಹೊರಗೆ ಬಾರದೇ ಇದ್ದುದರಿಂದ ತಾಯಿ ನೋಡಲು ಹೋಗಿದ್ದಾರೆ. ನಂತರ ಆಕೆಯೂ ವಿಷಕಾರಿ ಕಾರ್ಬನ್ ಮಾನಾಕ್ಸೈಡ್ ಸೇವಿಸಿ ಪ್ರಜ್ಞೆ ತಪ್ಪಿ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಗಾಳಿಯಾಡಲು ಸ್ಥಳಾವಕಾಶವಿಲ್ಲದ ಕಾರಣ

ಗೀಸರ್‌ ಗ್ಯಾಸ್‌ ಸೋರಿಕೆ ತಾಯಿ-ಮಗ ದಾರುಣ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು     

(ನ್ಯೂಸ್ ಕಡಬ)newskadaba.com ಕೇರಳ, ಜು.22. ನಿಫಾ ಸೋಂಕು ತಗುಲಿದ್ದ 14 ವರ್ಷದ ಬಾಲಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ ಎಂದು ವರದಿಯಾಗಿದ್ದು, ಈ ಬಗ್ಗೆ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ಪ್ರತಿಕ್ರಿಯೆ ನೀಡಿದ್ದು, ನಿಫಾ ಸೋಂಕು ತಗುಲಿದ್ದ ಬಾಲಕ ಇಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ಬಾಲಕನಿಗೆ ನಿಫಾ ವೈರಸ್ ಇರುವುದು ದೃಢಪಡಿಸಿತ್ತು. ಬಾಲಕನನ್ನು ವೆಂಟಿಲೇಟರ್‌ನಲ್ಲಿಡಲಾಗಿತ್ತು. ಅಂತರಾಷ್ಟ್ರೀಯ ಪ್ರೋಟೋಕಾಲ್ ಪ್ರಕಾರ ಆತನ ಅಂತ್ಯಕ್ರಿಯೆ ನಡೆಯಲಿದೆ. ಜಿಲ್ಲಾಧಿಕಾರಿಗಳು ಬಾಲಕನ ಪೋಷಕರು ಮತ್ತು ಕುಟುಂಬದೊಂದಿಗೆ ಚರ್ಚೆ ನಡೆಸಿದ ಬಳಿಕ ಅಂತ್ಯಕ್ರಿಯೆಯ ಕುರಿತು ನಿರ್ಧಾರ

ಕೇರಳ: ನಿಫಾ ವೈರಸ್ ತಗಲಿದ್ದ ಬಾಲಕನೋರ್ವ ಮೃತ್ಯು      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.!

(ನ್ಯೂಸ್ ಕಡಬ)newskadaba.com ಬಳ್ಳಾರಿ, ಜು.20. ರಾಜ್ಯಾದ್ಯಂತ ಡೆಂಘೀ ಹಾವಳಿ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಲೆ ಇದೆ ಎನ್ನಲಾಗಿದೆ. ಇದೀಗ, ಮಹಾಮಾರಿ ಡೆಂಗ್ಯೂ ಗೆ ರಾಜ್ಯದಲ್ಲಿ ಮತ್ತೋರ್ವ ಯುವತಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 9 ಕ್ಕೆ ಏರಿಕೆಯಾಗಿದೆ. ಮೃತ ಯುವತಿಯನ್ನು ರೇಖಾ (19) ಎಂದು ಗುರುತಿಸಲಾಗಿದ್ದು,  ತೀವ್ರ ಜ್ವರ ಕಾಣಿಸಿಕೊಂಡ ಪರಿಣಾಮ ಬಳ್ಳಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಯಿತು. ಯುವತಿಗೆ ಶಂಕಿತ ಡೆಂಗ್ಯೂ ಜ್ವರವಿತ್ತು. ಈ ಬಗ್ಗೆ ಅಧಿಕೃತ ಮಾಹಿತಿ ನಿರೀಕ್ಷಿಸಲಾಗಿದೆ.  

ರಾಜ್ಯದ್ಯಂತ ಹೆಚ್ಚಾದ ಡೆಂಘಿ ಹಾವಳಿ ಮತ್ತೋರ್ವ ಯುವತಿ ಬಲಿ.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.11. ರೈಲು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಎಡಮಂಗಲ ರೈಲು ನಿಲ್ದಾಣ ಸಮೀಪ ಶನಿವಾರ ಸಂಜೆ ನಡೆದಿದೆ. ಮೃತ ವ್ಯಕ್ತಿಯನ್ನು ಎಡಮಂಗಲ ಗ್ರಾಮದ ಡೆಕ್ಕಳ ನಿವಾಸಿ ಮಹಾಲಿಂಗ ನಾಯ್ಕ್(60) ಎಂದು ಗುರುತಿಸಲಾಗಿದೆ. ಶನಿವಾರ ಸಂಜೆ ವೇಳೆಗೆ ರೈಲ್ವೇ ಹಳಿಯಲ್ಲಿ ಮಹಾಲಿಂಗ ನಾಯ್ಕರು ನಡೆದುಕೊಂಡು ಹೋಗುತ್ತಿದ್ದ ವೇಳೆ ರೈಲು ಢಿಕ್ಕಿಯಾಗಿರಬಹುದೆಂದು ಶಂಕಿಸಲಾಗಿದೆ.

ಕಡಬ: ರೈಲು ಢಿಕ್ಕಿ ಹೊಡೆದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

(ನ್ಯೂಸ್‌ ಕಡಬ) newskadaba ಕಲಬುರಗಿ, ಮಾ.09: ಬಾಲಕಿಯರ ಹಾಸ್ಟಲ್​ನಲ್ಲಿ 10ನೇ ತರಗತಿ ವಿದ್ಯಾರ್ಥಿನಿ ಓರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಘಟನೆ ಚಿತ್ತಾಪುರ ತಾ| ಕರದಾಳ ಗ್ರಾಮದ ವಸತಿ ಶಾಲೆಯಲ್ಲಿ ನಡೆದಿದೆ. ಚಿತ್ತಾಪುರ ತಾ| ಗ್ರಾಮವೊಂದರ ಎಸ್​ಎಸ್​ಎಲ್​ಸಿ ಓದುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್​ನಲ್ಲಿ ಇದ್ದುಕೊಂಡು ಶಾಲೆಗೆ ಹೋಗುತ್ತಿದ್ದಳು. ಆದರೆ ಹಾಸ್ಟೆಲ್​ನಲ್ಲಿ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ ಆಗಿರುವುದು ಹಲವು ಅನುಮಾನಗಳನ್ನ ಹುಟ್ಟು ಹಾಕಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಘಟನೆ ಸಂಬಂಧ ಹಾಸ್ಟೆಲ್

ಹಾಸ್ಟೆಲ್​ನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ Read More »

ಕರ್ನಾಟಕ

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ

(ನ್ಯೂಸ್‌ ಕಡಬ) newskadaba ಮೈಸೂರು, ಮಾ.09: ಕಾಂಗ್ರೆಸ್​ನ ಮಾಜಿ ಶಾಸಕ ವಾಸು (72) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ವಾಸು ಅವರು ಮೈಸೂರಿನ ಖಾಸಗಿ ಆಸ್ಪತ್ರೆ ದಾಖಲಾಗಿದ್ದರು. ಇಂದು (ಮಾ.09) ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರಿಗೆ ಮಕ್ಕಳಾದ ಕವೀಶ್​, ಅವೀಶ್​ ಹಾಗೂ ರಿತೇಷ್​ ಇದ್ದಾರೆ. ಗಾಯತ್ರಿಪುರಂ ವಾರ್ಡ್​​ ನಗರ ಪಾಲಿಕೆ ಸದಸ್ಯರಾಗಿ ಆಯ್ಕೆಗೊಂಡು ನಂತರ ಮೇಯರ್​​ ಆಗಿ ಆಯ್ಕೆಗೊಂಡಿದ್ದರು. ಇದರಿಂದ ವಾಸು ಅವರು ಮೇಯರ್ ವಾಸು ಎಂದೇ ಪ್ರಖ್ಯಾತರಾಗಿದ್ದರು. ಚಾಮರಾಜ ಕ್ಷೇತ್ರದಲ್ಲಿ ನಾಲ್ಕು ಬಾರಿ ಕಾಂಗ್ರೆಸ್​

ಕಾಂಗ್ರೆಸ್​ನ ಮಾಜಿ ಶಾಸಕ ವಾಸು ನಿಧನ Read More »

ಕರ್ನಾಟಕ

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com  ಉಳ್ಳಾಲ, ಮಾ. 01. ಹೃದಯಾಘಾತದಿಂದಾಗಿ ಪತ್ನಿ ಮೃತಪಟ್ಟ ಸುದ್ದಿ ತಿಳಿದ ಕೆಲವೇ ನಿಮಿಷಗಳಲ್ಲಿ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮಚಾವಡಿಯಲ್ಲಿ ನಡೆದಿದ್ದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತಪಟ್ಟ ಮಹಿಳೆ ಗ್ರಾಮಚಾವಡಿ ನಿವಾಸಿ ಮೀನಾಕ್ಷಿ ಪೂಜಾರಿ(59) ಹಾಗೂ ಪತಿ ಶೇಷಪ್ಪ ಪೂಜಾರಿ(63) ಎದು ಗುರುತಿಸಲಾಗಿದೆ. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೀನಾಕ್ಷಿಯವರು, ಮನೆಯಲ್ಲಿದ್ದುಕೊಂಡೇ ಚಿಕಿತ್ಸೆ ಪಡೆಯುತ್ತಿದ್ದು, ಮಂಗಳವಾರದಂದು ರಾತ್ರಿ ಮೀನಾಕ್ಷಿ ಆವರಿಗೆ ಎದೆನೋವು ಕಾಣಿಸಿಕೊಂಡಿತ್ತು.

ಹೃದಯಾಘಾತದಿಂದ ಪತ್ನಿ ಮೃತ್ಯು- ನೊಂದ ಪತಿ ಕೀಟನಾಶಕ ಸೇವಿಸಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 27. ಮನೆಯ ಕಟ್ಟಡದ ಎರಡನೇ ಮಹಡಿಯಲ್ಲಿ ಪೈಂಟಿಂಗ್ ಕೊಡುತ್ತಿದ್ದ ಯುವಕ ಏಣಿಯ ಜೊತೆಯಲ್ಲೇ ಆಯತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಶಕ್ತಿನಗರದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ಕುಡುಪು ಕೊಂಚಾಡಿ ನಿವಾಸಿ ಮೋಹಿತ್ ಪೂಜಾರಿ(26) ಎಂದು ಗುರುತಿಸಲಾಗಿದೆ. ಮೋಹಿತ್ ಪೂಜಾರಿ ಅವರು ಮಂಗಳೂರಿನ ಮನೆಯೊಂದರಲ್ಲಿ 15 ದಿನಗಳಿಂದ ಪೈಂಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಏಣಿ ಜಾರಿದ ಪರಿಣಾಮ ಮೋಹಿತ್ ಹೊರಭಾಗದ ರಸ್ತೆಗೆ ಎಸೆಯಲ್ಪಟ್ಟಿದ್ದು, ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ

ಪೈಂಟಿಂಗ್ ಮಾಡುತ್ತಿದ್ದ ವೇಳೆ ಜಾರಿ ಬಿದ್ದು ಯುವಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top