death

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದರ ಹಗ್ಗ ತುಂಡಾದ ಪರಿಣಾಮ ಸಮುದ್ರದ ನಡುವೆ ಕಲ್ಲೊಂದಕ್ಕೆ ಬಡಿದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಮೊಗವೀರಪಟ್ಣ ಸಮೀಪದ ಆಳ ಸಮುದ್ರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ತಿರುವನಂತಪುರ ನಿವಾಸಿ ಮೊಗವೀರಪಟ್ಣದಲ್ಲಿ ನೆಲೆಸಿದ್ದ ಮೈಕಲ್ (60) ಎಂದು ಗುರುತಿಸಲಾಗಿದೆ. ಮೃತರು, ಮಹಮ್ಮದ ಕಲಂದರ್ ಷಾ ಮಾಲಕತ್ವದ ನಾಡದೋಣಿಯಲ್ಲಿ ಮೈಕಲ್ ಸೇರಿದಂತೆ ಮೀನುಗಾರಿಕೆಗೆ ತೆರಳಿ, ಸಮುದ್ರದ ಮದ್ಯದಲ್ಲಿ ಬಂಡೆಯೊಂದರ ಸಮೀಪ ಮೀನು ಹಿಡಿಯಲು ಬಲೆ ಬೀಸಿ ದೋಣಿಯಲ್ಲಿ ಕುಳಿತಿದ್ದರು. ಈ ಸಂದರ್ಭದಲ್ಲಿ […]

ಬಂಡೆಕಲ್ಲಿಗೆ ದೋಣಿ ಬಡಿದು ಮೀನುಗಾರನ ದಾರುಣ ಅಂತ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಜ. 13.  ಮೀನುಗಾರಿಕೆಯ ವೇಳೆ ಮೀನಿಗೆ ಹಾಕಿದ್ದ ಬಲೆ ಎಳೆಯುವ ಸಂದರ್ಭ ಸಮುದ್ರಕ್ಕೆ ಜಾರಿ ಬಿದ್ದು, ಮೀನುಗಾರರೊಬ್ಬರು ಮೃತಪಟ್ಟ ಘಟನೆ ಉಳ್ಳಾಲ ಸಮುದ್ರದಿಂದ ಕೆಲವು ಮಾರು ದೂರದಲ್ಲಿ ನಡೆದಿದೆ. ಮೃತ ಮೀನುಗಾರನನ್ನು ಮೊಗವೀರಪಟ್ಣ ನಿವಾಸಿ ತುಳಸೀರಾಮ್ (62) ಎಂದು ಗುರುತಿಸಲಾಗಿದೆ. ಮೊಗವೀರಪಟ್ಣ ನಿವಾಸಿ ಕಿರನ್ ಪುತ್ರನ್ ಎಂಬವರಿಗೆ ಸೇರಿದ್ದ ‘ವಾಸವಿ’ ಪರ್ಸಿನ್ ಎಂಬ ಬೋಟ್‍ನಲ್ಲಿ ತುಳಸಿರಾಮ್ ಸೇರಿದಂತೆ 30 ಜನ ಮೀನುಗಾರರು ಮೀನುಗಾರಿಕೆಗೆ ತೆರಳಿದ್ದರು. ಸಮುದ್ರ ಮದ್ಯದಲ್ಲಿ ಬಲೆ ಹಾಕಿ ಮಲಗಿದ್ದ ಮೀನುಗಾರರು

ಮೀನಿನ ಬಲೆ ಎಳೆಯುವಾಗ ದುರಂತ – ಆಯತಪ್ಪಿ ಸಮುದ್ರಕ್ಕೆ ಬಿದ್ದು ಮೀನುಗಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 11. ಮಂಜೇಶ್ವರ ಹೊಸಂಗಡಿ ಬಳಿಯ ಕೊಪ್ಪಳ ಕಜೆಯಲ್ಲಿರುವ ನದಿಯಲ್ಲಿ ಅಪರಿಚಿತ ಯುವಕನೋರ್ವನ ಮೃತದೇಹ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಮೃತದೇಹವನ್ನು ಗಮನಿಸಿದ ಪರಿಸರ ವಾಸಿಗಳು ಗಮನಿಸಿ ಮಂಜೇಶ್ವರ ಠಾಣಾ ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಹಜರು ನಡೆಸಿದ್ದಾರೆ. ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ವಾರಿಸುದಾರರು ಇದ್ದಲ್ಲಿ. ಮಂಜೇಶ್ವರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಕಾಸರಗೋಡು: ಅಪರಿಚಿತ ಯುವಕನ ಮೃತದೇಹ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ನೋಯ್ಡಾ, ಜ. 10. ಇತ್ತೀಚಿನ ದಿನಗಳಲ್ಲಿ ಹೃದಯಾಘಾತದಿಂದ ಯುವಕರು ಮೃತಪಡುತ್ತಿರುವ ವರದಿಗಳು ಹೆಚ್ಚೆಚ್ಚು ಕೇಳಿ ಬರುತ್ತಿದೆ. ಅದೇ ರೀತಿ ಕ್ರಿಕೆಟ್ ಮ್ಯಾಚ್ ಆಡುತ್ತಿದ್ದ ವ್ಯಕ್ತಿಯೊಬ್ಬ ಹಠಾತ್ ಹೃದಯಾಘಾತವಾಗಿ ಕುಸಿದುಬಿದ್ದು, ಮೃತಪಟ್ಟ ಘಟನೆ ನೋಯ್ಡಾದ ಥಾನಾ ಎಕ್ಸ್ ಪ್ರೆಸ್ ವೇ ಪ್ರದೇಶದ ಸೆಕ್ಟರ್ -135 ರಲ್ಲಿ ಬೆಳಕಿಗೆ ಬಂದಿದೆ. ಮೃತ ವ್ಯಕ್ತಿ ಕ್ರಿಕೆಟ್ ಆಡುತ್ತಿದ್ದ ವೇಳೆ ರನ್‌ ತೆಗೆಯಲೆಂದು ಓಡುತ್ತಿದ್ದ ವೇಳೆ ಹಠಾತ್ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಆಟಗಾರರು ತಕ್ಷಣವೇ

ಕ್ರಿಕೆಟ್ ಆಡುತ್ತಿದ್ದ ವೇಳೆ ಹೃದಯಾಘಾತ- ವ್ಯಕ್ತಿ ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂಬಳೆ, ಜ. 10. ತಾಯಿಯ ಎದೆ ಹಾಲು ಗಂಟಲಲ್ಲಿ ಸಿಲುಕಿ ಮೂರು ತಿಂಗಳು ಮಗುವೊಂದು ಮೃತಪಟ್ಟ ಘಟನೆ ಬಂಬ್ರಾಣದಲ್ಲಿ ನಡೆದಿದೆ. ಮೃತ ಮಗುವನ್ನು ಮೂಲತಃ ಈಶ್ವರಮಂಗಲ ನಿವಾಸಿ, ಪ್ರಸ್ತುತ ಬಂಬ್ರಾಣದಲ್ಲಿ ನೆಲೆಸಿದ್ದ ಅಬ್ದುಲ್ ಅಝೀಝ್ ಹಾಗೂ ಖದೀಜಾ ದಂಪತಿಯ ಪುತ್ರಿ, ಮೂರು ತಿಂಗಳ ಅಯಿಶಾ ಮೆಹ್ರಾ ಎಂದು ಗುರುತಿಸಲಾಗಿದೆ. ಮಲಗಿಕೊಂಡು ಎದೆಹಾಲು ಕುಡಿಯುತ್ತಿದ್ದ ಮಗು ರಾತ್ರಿ ಎಷ್ಟೇ ಹೊತ್ತಾದರೂ ಎಚ್ಚರಗೊಳ್ಳದೆ ಇದ್ದಾ ಗ ಕುಂಬಳೆಯ ಖಾಸಗಿ ಆಸ್ಪತ್ರೆ ಗೆ ಕರೆದುಕೊಂಡು ಹೋಗಿದ್ದು ,

ಎದೆಹಾಲು ಗಂಟಲಲ್ಲಿ ಸಿಲುಕಿ 3 ತಿಂಗಳ ಮಗು ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಯುವಕನೋರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಮೃತ ಯುವಕನನ್ನು ಕಾಸರಗೋಡು ವರ್ಕಾಡಿ, ಧರ್ಮನಗರದ ನಿವಾಸಿ ಸಮೀರ್(26) ಎಂದು ಗುರುತಿಸಲಾಗಿದೆ. ವಿಶನ್ ಆಪ್ಟಿಕಲ್ಸ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಈತ ಸುಳ್ಯದಲ್ಲಿ ರೂಮ್ ಮಾಡಿಕೊಂಡು ವಾಸವಾಗಿದ್ದು, ಡಿ. 31 ರಂದು ರಜೆ ಇದ್ದ ಹಿನ್ನೆಲೆ ಬಟ್ಟೆ ತೊಳೆಯಲು ಮತ್ತು ಸ್ನಾನಕ್ಕೆಂದು ಇತರ ಇಬ್ಬರು ಯುವಕರ ಜೊತೆ ನದಿಗೆ ಬಂದಿದ್ದರು. ಈ ಸಂದರ್ಭ ಸಮೀರ್

ಸುಳ್ಯ: ಸ್ನಾನಕ್ಕೆ ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ

(ನ್ಯೂಸ್ ಕಡಬ) newskadaba.com ಹೈದರಾಬಾದ್, ನ. 24. ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಪ್ರಯಾಣಿಕರೊಬ್ಬರು ಮೃತಪಟ್ಟಿರುವ ಘಟನೆ ಜೆಡ್ಡಾದಿಂದ ಹೈದರಾಬಾದ್ ಗೆ ಆಗಮಿಸುತ್ತಿದ್ದ ಇಂಡಿಗೋ ವಿಮಾನದಲ್ಲಿ ಸಂಭವಿಸಿದೆ. ಪ್ರಯಾಣಿಕ ಮೃತಪಟ್ಟ ಹಿನ್ನೆಲೆ ಇಂಡಿಗೋ ವಿಮಾನವನ್ನು ಕರಾಚಿಯಲ್ಲಿ ತುರ್ತು ಭೂಸ್ಪರ್ಶ ಮಾಡಲಾಯಿತು. ಪ್ರಯಾಣಿಕನಿಗೆ ಸೂಕ್ತ ಚಿಕಿತ್ಸೆ ನೀಡಿದರೂ ಆತ ಬದುಕುಳಿಯಲಿಲ್ಲ. ಇಂಡಿಗೋ ಅಧಿಕಾರಿಗಳು ಮೃತನ ಕುಟುಂಬಕ್ಕೆ ಮಾಹಿತಿ ನೀಡಿರುವುದಾಗಿ ಮೂಲಗಳಿಂದ ತಿಳಿದುಬಂದಿದೆ. ವೈದ್ಯಕೀಯ ತುರ್ತು ಪರಿಸ್ಥಿತಿ ಕಾರಣಕ್ಕೆ ವಿಮಾನವನ್ನು ಕರಾಚಿಯಲ್ಲಿ ಸುದೀರ್ಘ ಕಾಲ ತುರ್ತು ಭೂಸ್ಪರ್ಶ ಮಾಡಲಾಗಿದೆ. ಪ್ರಯಾಣಿಕ ಮೃತಪಟ್ಟಿದ್ದು

ಸಂಚರಿಸುತ್ತಿದ್ದ ವಿಮಾನದಲ್ಲೇ ಪ್ರಯಾಣಿಕ ನಿಧನ – ತುರ್ತು ಭೂಸ್ಪರ್ಶ ಮಾಡಿದ ಇಂಡಿಗೋ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..!

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ನ. 23. ರೈಲಿಗೆ ಸಿಲುಕಿ ರೈಲ್ವೇ ಸ್ಟೇಷನ್ ಮಾಸ್ಟರ್ ಓರ್ವರು ಮೃತಪಟ್ಟಿರುವ ಘಟನೆ ಶಿವಮೊಗ್ಗ ತಾಲ್ಲೂಕಿನ ಕುಂಸಿಯಲ್ಲಿ ನಡೆದಿದೆ. ಮೃತರನ್ನು ಬಿಹಾರ ಮೂಲದ, ಆನಂದಪುರ ರೈಲ್ವೆ ನಿಲ್ದಾಣದ ಸ್ಟೇಷನ್ ಮಾಸ್ಟರ್ ಅರುಣ್‍ಕುಮಾರ್ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ ಬೆಂಗಳೂರಿನಿಂದ ರೈಲಿನಲ್ಲಿ ಆಗಮಿಸಿದ ಅವರು ಕುಮ್ಸಿ ನಿಲ್ದಾಣದಲ್ಲಿ ಇಳಿದಿದ್ದರು. ಈ ಸಂಬಂಧ ಶಿವಮೊಗ್ಗ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ರೈಲಿಗೆ ಸಿಲುಕಿ ಸ್ಟೇಷನ್ ಮಾಸ್ಟರ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಕೋಟ, ನ. 22. ಆಟವಾಡುತ್ತಿದ್ದ ವೇಳೆ ಗೆಸ್ಟ್ ಹೌಸ್ ನ ಗೇಟೊಂದು ಮೈಮೇಲೆ ಬಿದ್ದು ಮಗು ದಾರುಣವಾಗಿ ಮೃತಪಟ್ಟಿರುವ ಘಟನೆ ಕೋಟದ ಕೋಟತಟ್ಟು ಪಡುಕರೆಯಲ್ಲಿ ಮಂಗಳವಾರದಂದು ಸಂಜೆ ನಡೆದಿದೆ. ಮೃತ ಮಗುವನ್ನು ಸ್ಥಳೀಯ ನಿವಾಸಿಯಾಗಿರುವ ಸುಧೀರ್‌ ಮೊಗವೀರ ಹಾಗೂ ಶಾರದ ದಂಪತಿಗಳ ಅವರ ಏಕೈಕ ಪುತ್ರ, ಮೂರು ವರ್ಷದ ಸುಶಾಂತ್‌ ಎಂದು ಗುರುತಿಸಲಾಗಿದೆ. ಮನೆಯ ಸಮೀಪವಿರುವ ಗೆಸ್ಟ್‌ ಹೌಸ್‌ನ ಗೇಟಿನ ಬಳಿ ಮಗು ಆಟವಾಡುತ್ತಿದ್ದಾಗ ಸ್ಲೈಡಿಂಗ್ ಗೇಟ್‌ ಕಳಚಿ ಮೈಮೇಲೆ ಬಿದ್ದಿದೆ. ಆಸ್ಪತ್ರೆಗೆ

ಗೇಟ್‌ ಕಳಚಿ ಬಿದ್ದು 3 ವರ್ಷದ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಅ. 13. ಕಾರು ಢಿಕ್ಕಿ ಹೊಡೆದು ಪಾದಚಾರಿ ಯುವತಿಯೋರ್ವಳು ಮೃತಪಟ್ಟ ಘಟನೆ ಗುರುವಾರ ರಾತ್ರಿ ರಾಷ್ಟ್ರೀಯ ಹೆದ್ದಾರಿ 75 ರ ಕಲ್ಲಡ್ಕ ಸಮೀಪದ ದಾಸಕೋಡಿ ಎಂಬಲ್ಲಿ ನಡೆದಿದೆ. ಮೃತ ಯುವತಿಯನ್ನು ವೀರಕಂಭ ಗ್ರಾಮದ ಬಾಯಿಲ ನಿವಾಸಿ ಶೇಖರ ಪೂಜಾರಿ ಅವರ ಪುತ್ರಿ ಪಾವನ ಎಂದು ಗುರುತಿಸಲಾಗಿದೆ. ಮಂಗಳೂರಿನ ಖಾಸಗಿ ಮೆಡಿಕಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದ ಪಾವನ, ಗುರುವಾರದಂದು ಸಂಜೆ ಕೆಲಸ ಬಿಟ್ಟು ಮಂಗಳೂರಿನಿಂದ ಬಸ್ ಮೂಲಕ ಊರಿಗೆ ತೆರಳಿದ್ದಳು. ಯುವತಿ

ಕಾರು ಢಿಕ್ಕಿಯಾಗಿ ಪಾದಚಾರಿ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top