death

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ. 01. ಸ್ಕೂಟರ್ ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮಹಿಳೆಯೋರ್ವರು ಮೃತಪಟ್ಟ ಘಟನೆ ತಾಲೂಕಿನ ಮರ್ಧಾಳ ಸಮೀಪದ ನೆಕ್ಕಿತ್ತಡ್ಕ ಎಂಬಲ್ಲಿ ಇಂದು ರಾತ್ರಿ ನಡೆದಿದೆ. ಮೃತ ಮಹಿಳೆಯನ್ನು ಮರ್ಧಾಳ ನಿವಾಸಿ ದಿವಂಗತ ಅಬೂಬಕ್ಕರ್ ಎಂಬವರ ಪತ್ನಿ ಅವ್ವಮ್ಮ ಎಂದು ಗುರುತಿಸಲಾಗಿದೆ. ಅವರು ಇಂದು ರಾತ್ರಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಸ್ಕೂಟರ್ ಢಿಕ್ಕಿ ಹೊಡೆದಿದೆ. ಪರಿಣಾಮ ಗಂಭೀರ ಗಾಯಗೊಂಡ ಮಹಿಳೆಯನ್ನು ಕಡಬ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ […]

ಕಡಬ: ದ್ವಿಚಕ್ರ ವಾಹನ ಢಿಕ್ಕಿ- ಪಾದಚಾರಿ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 26. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲು ಕುಟಂಬಸ್ಥರು ತೀರ್ಮಾನಿಸಲಾಗಿದ್ದು, ಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಮಧ್ಯಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. ಕರ್ನಾಟಕ ಪ್ರಬಲ ಲಿಂಗಾಯಿತ ಸಮುದಾಯದ ನಾಯಕರಾಗಿದ್ದ ವೀರೇಂದ್ರ ಪಾಟೀಲ್ ಅವರು 1989

ಮಾಜಿ ಸಿಎಂ ವೀರೇಂದ್ರ ಪಾಟೀಲರ ಪತ್ನಿ ಶಾರದಾ ಪಾಟೀಲ ನಿಧನ Read More »

ಕರ್ನಾಟಕ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಹೆಬ್ರಿ, ಸೆ. 25. ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಬೇಳಂಜೆ ಗ್ರಾಮದ ಈಶ್ವರನಗರ ಎಂಬಲ್ಲಿ ನಡೆದಿದೆ. ಮೃತರನ್ನು ವಿಷ್ಣುಮೂರ್ತಿ(48) ಎಂದು ಗುರುತಿಸಲಾಗಿದೆ. ಬೈಕಿನಿಂದ ಬಿದ್ದು ಗಾಯಗೊಂಡಿದ್ದ ಇವರು, ಸ್ನಾನ ಮಾಡಲು ಮನೆಯ ಅಂಗಳದಲ್ಲಿನ ಆವರಣವಿಲ್ಲದ ಬಾವಿಯ ಬಳಿ ಹೋಗಿದ್ದರು. ಅಲ್ಲಿ ಪಂಪ್‌ ನಲ್ಲಿ ನೀರು ಬಾರದ ಹಿನ್ನೆಲೆ ಬಾವಿಯೊಳಗೆ ಇದ್ದ ಫುಟ್ ಬಾಲ್ ಎತ್ತಿ ನೋಡಲು ಹೋಗಿದ್ದು, ಈ ವೇಳೆ ಅವರು ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ

ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ

(ನ್ಯೂಸ್ ಕಡಬ) newskadaba.com ಮಧ್ಯಪ್ರದೇಶ, ಸೆ. 25. ಕಾರೊಂದು ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಸಂಭವಿಸಿದೆ. ಢಿಕ್ಕಿಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ

ಮರಕ್ಕೆ ಕಾರು ಢಿಕ್ಕಿ- ಐವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತ- ಎಎಸ್ಐ ವಿಧಿವಶ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಸೆ. 24. ಹೃದಯಘಾತದಿಂದ ಪೊಲೀಸ್‌ ಅಧಿಕಾರಿಯೋರ್ವರು ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ಕಳಸ ಠಾಣೆಯ ಎಎಸ್‌ಐ ಜಿ.ಕೆ ಮುರಳೀಧರ್ ಎಂದು ಗುರುತಿಸಲಾಗಿದೆ. ಜಿ.ಕೆ ಮುರಳೀಧರ್ ಅವರು ಕರ್ತವ್ಯ ಮುಗಿಸಿ ಮನೆಯಲ್ಲಿದ್ದು, ಬೆಳಗ್ಗಿನ ಜಾವ ಎದೆನೋವು ಕಾಣಿಸಿಕೊಂಡಿದೆ. ಕುಟುಂಬಸ್ಥರು ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಕಳಸದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಜಿ.ಕೆ ಮುರಳೀಧರ್ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಹೃದಯಾಘಾತ- ಎಎಸ್ಐ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 24. ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಪುಟ್ಟ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಮಿತ್ತೂರಿನಲ್ಲಿ ಭಾನುವಾರದಂದು ನಡೆದಿದೆ. ಮೃತ ಬಾಲಕಿಯನ್ನು ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ಗುರುತಿಸಲಾಗಿದೆ. ಪುತ್ತೂರಿನ ಮುರ ಎಂಬಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ವಿದ್ಯಾರ್ಥಿನಿಯಾಗಿದ್ದ ಈಕೆ ಅನಾರೋಗ್ಯದಿಂದ ಇದ್ದು ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಭಾನುವಾರದಂದು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಹೃದಯ ಸಂಬಂಧಿ ಕಾಯಿಲೆ- ನಾಲ್ಕರ ಪುಟ್ಟ ಬಾಲಕಿ ನಿಧನ..! Read More »

ಕರಾವಳಿ, ಕ್ರೈಮ್ ನ್ಯೂಸ್

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ, ಸೆ. 22. ಯಕ್ಷಗಾನ ಯುವ ವೇಷಧಾರಿ ಹೆರಂಜಾಲು ರಾಜೇಂದ್ರ ಗಾಣಿಗ ಅವರು ಅಲ್ಪಕಾಲದ ಅಸೌಖ್ಯದಿಂದ ಗುರುವಾರದಂದು ಮಣಿಪಾಲದ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಎರಡೂವರೆ ದಶಕಗಳ ಕಾಲ ವಿವಿಧ ಮೇಳಗಳಲ್ಲಿ ವೇಷಧಾರಿಯಾಗಿದ್ದ ರಾಜೇಂದ್ರ ಗಾಣಿಗ ಅವರು, ಮಾರಣಕಟ್ಟೆ, ಹಾಲಾಡಿ, ಸೌಕೂರು ಹಾಗೂ ನೀಲಾವರ ಮೇಳಗಳಲ್ಲಿ ಹಾಗೂ ಸುಮಾರು ಹತ್ತು ವರ್ಷಗಳ ಕಾಲ ಮಂದಾರ್ತಿ ಮೇಳದಲ್ಲಿ ಪುರುಷ ವೇಷಧಾರಿಯಾಗಿ ಕಲಾ ಸೇವೆ ಮಾಡಿದ್ದರು. ಅವಿವಾಹಿತರಾಗಿದ್ದ ರಾಜೇಂದ್ರ ಗಾಣಿಗ ತಾಯಿ ಹಾಗೂ ಅಪಾರ ಸಂಖ್ಯೆಯ

ಯುವ ಯಕ್ಷಗಾನ ವೇಷಧಾರಿ ರಾಜೇಂದ್ರ ಗಾಣಿಗ ವಿಧಿವಶ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಸೆ. 21. ಹಾಲಿನ ಟ್ಯಾಂಕರ್ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ ಮೆಡಿಕಲ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿ ಮೃತಪಟ್ಟ ಘಟನೆ ಬುಧವಾರದಂದು ಕಾಟಕೇರಿ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಉಡುಪಿ ಮೂಲದ ವಿಜೇಶ್ ಎಂದು ಗುರುತಿಸಲಾಗಿದೆ. ವಿಜೇಶ್ ಮತ್ತು ಶಿವಾನಂದ್ ಎಂಬವರು ಉಡುಪಿಯಿಂದ ಮಡಿಕೇರಿಗೆ ಬೈಕ್‍ನಲ್ಲಿ ತೆರಳುತ್ತಿದ್ದ ವೇಳೆ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಬಹು ಚಕ್ರದ ಹಾಲಿನ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿದೆ. ಪರಿಣಾಮ ಬೈಕ್ ಸವಾರ

ರಸ್ತೆ ಅಪಘಾತ- ಉಡುಪಿ ಮೂಲದ ವೈದ್ಯಕೀಯ ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..!

(ನ್ಯೂಸ್ ಕಡಬ) newskadaba.com ಬಾಗಲಕೋಟೆ, ಸೆ. 18. ಎಗ್‌ರೈಸ್‌ ಹಾಗೂ ಚಿಕನ್ ಕಬಾಬ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಯುವಕನೋರ್ವ ಚಾಕುವಿನಿಂದ ಇರಿದು ಹತ್ಯೆಗೈದಿರುವ ದಾರುಣ ಘಟನೆ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಅಮೀನಗಡ ಪಟ್ಟಣದಲ್ಲಿ ನಡೆದಿದೆ. ಹತ್ಯೆಯಾದವನನ್ನು ಗೈಬುಸಾಬ್ ಮುಲ್ಲಾ (34) ಎಂದು ಗುರುತಿಸಲಾಗಿದೆ. ಮುಸ್ತಾಕ್ ಜಂಗಿ  (20) ಕೊಲೆ ಆರೋಪಿ. ಕೃತ್ಯ ನಡೆಸಿ ನಾಪತ್ತೆಯಾಗಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಗಲಕೋಟೆ ಜಿಲ್ಲೆಯ ಅಮೀನಗಡ ಬಸ್ ನಿಲ್ದಾಣದ ಬಳಿ ಎಗ್‌ರೈಸ್‌ ಅಂಗಡಿ ಇಟ್ಟುಕೊಂಡಿದ್ದ ಗೈಬುಸಾಬ್

ಎಗ್ ರೈಸ್ ಇಲ್ಲ ಎಂದಿದ್ದಕ್ಕೆ ಅಂಗಡಿ ಮಾಲೀಕನನ್ನೇ ಮುಗಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ

(ನ್ಯೂಸ್ ಕಡಬ) newskadaba.com ಸುರತ್ಕಲ್‌, ಸೆ. 18. ಇಲ್ಲಿನ ಮಲ್ಲಮಾರ್‌ ಬೀಚ್ ಗೆ ವಿಹಾರಕ್ಕೆಂದು ಬಂದಿದ್ದ ಮೂವರ ಪೈಕಿ ಒರ್ವ ಸಮುದ್ರಪಾಲಾಗಿದ್ದು ಇಬ್ಬರನ್ನು ಸ್ಥಳೀಯರು ರಕ್ಷಿಸಿದ ಘಟನೆ ರವಿವಾರದಂದು ಸಂಜೆ ನಡೆದಿದೆ. ಸಮುದ್ರಪಾಲಾದ ವ್ಯಕ್ತಿಯನ್ನು ಬಾಗಲಕೋಟೆ ನಿವಾಸಿ ಮಹಂತೇಶ್‌(29) ಎಂದು ಗುರುತಿಸಲಾಗಿದೆ. ಈತ ಅಕ್ಕ ಸಾವಿತ್ರಿಗೆ ಕೆಲಸಕ್ಕೆ ಹೋಗುವುದಾಗಿ ಹೇಳಿ ಸ್ನೇಹಿತರ ಜೊತೆಗೆ ವಿಹಾರಕ್ಕೆ ಬಂದಿದ್ದ ಎನ್ನಲಾಗಿದೆ. ಮಹಂತೇಶ್‌ ನನ್ನು ರಕ್ಷಿಸಿ ಹಿಂದೆ ಎಳೆದು ತರುತ್ತಿದ್ದಾಗ ಮತ್ತೆ ಅಲೆಯ ಹೊಡೆತಕ್ಕೆ ಸಿಲುಕಿ ಮುಳುಗಿ ನಾಪತ್ತೆಯಾಗಿದ್ದಾನೆ. ಈ ಕುರಿತು

ವಿಹಾರಕ್ಕೆಂದು ಬಂದಿದ್ದ ಯುವಕ ಸಮುದ್ರ ಪಾಲು- ಇಬ್ಬರ ರಕ್ಷಣೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top