death

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜು.04. ಕಾರು ಹಾಗೂ ಖಾಸಗಿ ಬಸ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಓರ್ವ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಸಮೀಪದ ಸಕ್ರೆಬೈಲು ಎಂಬಲ್ಲಿ ಮಂಗಳವಾರದಂದು ನಡೆದಿದೆ. ಮೃತ ವ್ಯಕ್ತಿಯನ್ನು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ಕುಪ್ಪೆಪದವು ಕಲ್ಲಾಡಿ ನಿವಾಸಿ ಅಶ್ರಫ್ ಎಂದು ಗುರುತಿಸಲಾಗಿದೆ. ಅಶ್ರಫ್ ತನ್ನ ಸಂಬಂಧಿಗಳ ಜೊತೆಗೆ ಶಿವಮೊಗ್ಗಕ್ಕೆ ತೆರಳಿ ಊರಿಗೆ ಹಿಂತಿರುಗುತ್ತಿದ್ದ ವೇಳೆ ಇವರು ಸಂಚರಿಸುತ್ತಿದ್ದ ಕಾರು ಹಾಗೂ ತೀರ್ಥಹಳ್ಳಿಯಿಂದ […]

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ಮಂಗಳೂರಿನ ವ್ಯಕ್ತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಮಡಿಕೇರಿ, ಜು. 04. ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮುಂಬೈ ಮೂಲದ ಮಹಿಳೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಸುಂಟಿಕೊಪ್ಪದ ಗದ್ದೆಹಳ್ಳದ ಬಳಿ ನಡೆದಿದೆ. ಮೃತ ಮಹಿಳೆಯನ್ನು ಅಂಧೇರಿ ವೆಸ್ಟ್ ಮುಂಬೈ ನಿವಾಸಿ ಸೀಮಾ (50) ಎಂದು ಗುರುತಿಸಲಾಗಿದೆ. ಇವರ ಪತಿ ಸುಧೀರ ಚಂದಾಲಿಯಾ (53) ಹಾಗೂ ಕಾರು ಚಾಲಕ ಉಡುಪಿ ಜಿಲ್ಲೆಯ ಕುಂಜಿಬೆಟ್ಟು ಗ್ರಾಮದ ನಿವಾಸಿ ಮೊಹಮ್ಮದ್ ರಫೀಕ್ (28) ಎಂಬವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು

ಮಡಿಕೇರಿಯಲ್ಲಿ ಕಾರು ಅಪಘಾತ ➤ ಮುಂಬೈ ಮೂಲದ ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಜು. 04. ಹಾಡಹಗಲೇ ರೌಡಿಶೀಟರ್ ಓರ್ವನನ್ನು ರಸ್ತೆಯಲ್ಲಿ ಅಟ್ಟಾಡಿಸಿ ಕೊಲೆ ಮಾಡಿರುವ ಘಟನೆ ಚನ್ನರಾಯಪಟ್ಟಣದ ಧನಲಕ್ಷ್ಮಿ ಚಿತ್ರ ಮಂದಿರದ ಎದುರು ಮಂಗಳವಾರದಂದು ಸಂಜೆ ವರದಿಯಾಗಿದೆ. ಹತ್ಯೆಗೀಡಾದವರನ್ನು ಮಾಸ್ತಿಗೌಡ ಅಲಿಯಾಸ್ ಕೃಷ್ಣ (30) ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳು, ಕೃಷ್ಣನನ್ನು ಬೆನ್ನಟ್ಟಿ, ಆತ ಓಡಲು ಪ್ರಾರಂಭಿಸುತ್ತಿದ್ದಂತೆಯೇ ನಡುರಸ್ತೆಯಲ್ಲಿ ಅಟ್ಟಾಡಿಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿದ್ದಾರೆ ಎಂದು ಹೇಳಲಾಗಿದೆ. ಘಟನೆಯಿಂದ ಕೃಷ್ಣನ ತಲೆ ಸೇರಿದಂತೆ ದೇಹದ ವಿವಿಧ ಭಾಗಳಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ

ಹಾಸನ: ಹಾಡಹಗಲೇ ರೌಡಿಶೀಟರ್ ನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು 

(ನ್ಯೂಸ್ ಕಡಬ)newskadaba.ಉಪ್ಪಿನಂಗಡಿ, ಜು. 4. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಎಂಟು ತಿಂಗಳ ಮಗು ಮೃತಪಟ್ಟಿರುವ ಘಟನೆ ಉಪ್ಪಿನಂಗಡಿಯ ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಸಂತ್ಯಡ್ಕ ನಿವಾಸಿಗಳಾದ ಶ್ರೀಧರ ನಾಯ್ಕಹಾಗೂ ಚಿತ್ರಾ ದಂಪತಿಯ ಎಂಟು ತಿಂಗಳ ಮಗು ಜೀವಿತ್ ತೀವ್ರ ಜ್ವರದ ಕಾರಣ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಜುಲೈ 1 ರಂದು ಮಗು ಮೃತಪಟ್ಟಿದೆ.ಜುಲೈ 2 ರಂದು ಚಿತ್ರಾ ತನ್ನ ಮಗುವಿನ ಮರಣದ ಕುರಿತು ಸಂಶಯ ವ್ಯಕ್ತಪಡಿಸಿ ತನ್ನ ಗಂಡನ ಮೇಲೆ

ತೀರ್ವ ಜ್ವರದಿಂದ ಎಂಟು ತಿಂಗಳ ಮಗು ಮೃತ್ಯು ➤ ಪತಿ ವಿರುದ್ದ ದೂರು ದಾಖಲು  Read More »

ಕರಾವಳಿ, ಕರ್ನಾಟಕ

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 04. ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಲ್ಲಿನ ಬೀಡಿನಗುಡ್ಡೆಯ ನಾಗಬನ ಸಮೀಪ ನಡೆದಿದೆ. ಮೃತರನ್ನು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ನಿವಾಸಿ ಸೋಮಪ್ಪ ರಾಠೋಡ್ ಎಂದು ಗುರುತಿಸಲಾಗಿದೆ. ಸ್ಥಳೀಯರು ಸೇರಿ ಮೃತದೇಹವನ್ನು ಹೊರತೆಗೆದಿದ್ದು, ಸಾಮಾಜಿಕ ಕಾರ್ಯಕರ್ತ ನಿತ್ಯಾನಂದ ಒಳಕಾಡು ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ಸಾಗಿಸುವಲ್ಲಿ ಸಹಕರಿಸಿದ್ದಾರೆ. ಈ ಕುರಿತು ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು!

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜು. 03. ಬೆಂಗಳೂರಿಗೆ ರೈಲಿನಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವರು ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾಸನದಲ್ಲಿ ನಡೆದಿದೆ. ಮೃತರನ್ನು ಬಂಟ್ವಾಳ ಬೈಪಾಸ್ ನಿವಾಸಿ ಜನಾರ್ದನ ಕುಲಾಲ್ ಎಂದು ಗುರುತಿಸಲಾಗಿದೆ.ಇವರು ತಮ್ಮ ಕುಟುಂಬದೊಂದಿಗೆ ಭಾನುವಾರ ಸಂಜೆಯ ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ಹಾಸನ ತಲುಪುತ್ತಿದ್ದಂತೆ ಅನಾರೋಗ್ಯ ಕಾಣಿಸಿಕೊಂಡಿದ್ದು, ತಕ್ಷಣ ಅವರನ್ನು ರೈಲು ನಿಲ್ದಾಣದಿಂದ ಹಾಸನ ಆಸ್ಪತ್ರೆಗೆ ಸಾಗಿಸಲಾಗಿದ್ದು ವೈದ್ಯರು ಪರೀಕ್ಷಿಸಿ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ರೈಲಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ವ್ಯಕ್ತಿ ಹೃದಯಾಘಾತದಿಂದ ಮೃತ್ಯು! Read More »

ಕರ್ನಾಟಕ

ವಿಟ್ಲ: ಆಟೋರಿಕ್ಷಾ ಪಲ್ಟಿ

➤ ಚಾಲಕ ಮೃತ್ಯು (ನ್ಯೂಸ್ ಕಡಬ) newskadaba.com ವಿಟ್ಲ, ಜೂ. 27. ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಮಾಣಿಲ ತಿರುವಿನಲ್ಲಿ ನಡೆದಿದೆ. ಮೃತ ಆಟೋ ಚಾಲಕನನ್ನು ಸುಬ್ರಹ್ಮಣ್ಯ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ನಿನ್ನೆ ರಾತ್ರಿ ಮಾಣಿಲ ಬಾವಲಿಮೂಲೆಗೆ ಬರುತ್ತಿದ್ದ ವೇಳೆ ಆಟೋ ರಿಕ್ಷಾ ಪಲ್ಟಿಯಾಗಿದ್ದು, ಗಂಭೀರ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆನ್ನಲಾಗಿದೆ. ರಿಕ್ಷಾದಲ್ಲಿದ್ದ ಇನ್ನೋರ್ವ ವ್ಯಕ್ತಿಗೆ ಅಲ್ಪಸ್ವಲ್ಪ ಗಾಯವಾಗಿದೆ ಎಂದು ತಿಳಿದು ಬಂದಿದೆ.ಈ

ವಿಟ್ಲ: ಆಟೋರಿಕ್ಷಾ ಪಲ್ಟಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಹೃದಯಾಘಾತ- ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ, ಜೂ. 26. ಹೃದಯಾಘಾತದಿಂದ ಯುವಕನೋರ್ವ ಮೃತಪಟ್ಟ ಘಟನೆ‌ ಸುಳ್ಯ ತಾಲೂಕಿನ ಕರಿಕ್ಕಳ ಎಂಬಲ್ಲಿಂದ ವರದಿಯಾಗಿದೆ. ಮೃತ ಯುವಕನನ್ನು ಪಂಬೆತ್ತಾಡಿ ಗ್ರಾಮದ ಕರಿಕ್ಕಳ ದಿ.ತಮ್ಮಯ್ಯ ಗೌಡರ ಪುತ್ರ ಭಾಸ್ಕರ ಗೌಡ ಎಂದು ಗುರುತಿಸಲಾಗಿದೆ. ಇವರು ಭಾನುವಾರದಂದು ರಾತ್ರಿ10 ಗಂಟೆ ವೇಳೆಗೆ ಮನೆಯಲ್ಲಿ ತೀವ್ರ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸುಳ್ಯ: ಹೃದಯಾಘಾತ- ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ಶಾಕ್- ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 26. ವಿದ್ಯುತ್‌ ತಗುಲಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಸಾಕ್ಷಿ ಅಹುಜಾ ಎಂದು ಗುರುತಿಸಲಾಗಿದೆ. ಇವರು ಭೋಪಾಲ್‌ಗೆ ಹೋಗಲೆಂದು ತನ್ನ ಸಹೋದರಿ ಮತ್ತು ಮೂವರು ಮಕ್ಕಳೊಂದಿಗೆ ನವದೆಹಲಿ ರೈಲು ನಿಲ್ದಾಣಕ್ಕೆ ಬಂದಿದ್ದು, ಈ ವೇಳೆ ಮಳೆ ಬರುತ್ತಿದ್ದರಿಂದ ಆಧಾರವಾಗಿ ವಿದ್ಯುತ್‌ ಕಂಬವನ್ನು ಹಿಡಿದಿದ್ದರು. ಈ ವೇಳೆ ಕಂಬದಿಂದ ಸಾಕ್ಷಿ ಅವರಿಗೆ ವಿದ್ಯುತ್‌ ಪ್ರವಹಿಸಿದೆ. ತಕ್ಷಣವೇ ಸ್ಥಳೀಯರು ಕೂಡಲೇ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರೂ ಅದಾಗಲೇ ಸಾಕ್ಷಿ ಮೃತಪಟ್ಟಿದ್ದರು

ವಿದ್ಯುತ್ ಶಾಕ್- ಮಹಿಳೆ ಮೃತ್ಯು Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು

(ನ್ಯೂಸ್ ಕಡಬ) newskadaba.com ಕಾಸರಗೋಡು, ಜೂ. 25. ಕಂಟೈನರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಪಾದಾಚಾರಿ ವೃದ್ದರೋರ್ವರು ಮೃತಪಟ್ಟ ಘಟನೆ ಬಂದ್ಯೋಡಿನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಮೃತರನ್ನು ಬಂಬ್ರಾಣ ದ ಮೊಯಿದಿನ್ ಕುಂಞ (78) ಎಂದು ಗುರುತಿಸಲಾಗಿದೆ. ಇವರು ಝೀಬ್ರಾ ಲೈನ್ ಮೂಲಕ ರಸ್ತೆ ದಾಟಲೆಂದು ನಿಂತಿದ್ದಾಗ ಅತೀ ವೇಗದಿಂದ ಬಂದ ಕಂಟೈನರ್ ಲಾರಿ ಡಿಕ್ಕಿ ಹೊಡೆದಿದ್ದು, ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಕುಂಬಳೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಕಂಟೇನರ್ ಢಿಕ್ಕಿ ➤ ವೃದ್ದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top