death

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜೂ . 17 . ಬಿಸಿಲಿನ ತೀವ್ರತೆಯಿಂದ ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಾಗಿದ್ದ 34 ಮಂದಿ ಮೃತಪಟ್ಟ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಏರುತ್ತಿದ್ದು, ತೀವ್ರ ಶಾಖದಿಂದ ಜನ ತತ್ತರಿಸುತ್ತಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮೃತಪಟ್ಟವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು ಎಂದು ಮುಖ್ಯ ವೈದ್ಯಾಧಿಕಾರಿ ಡಾ.ಜಯಂತ್ ಕುಮಾರ್ ಮಾಹಿತಿ ನೀಡಿದ್ದಾರೆ.ಎರಡು ದಿನದಲ್ಲಿ 34 ಮಂದಿ ಸಾವನ್ನಪ್ಪಿದ್ದು, ಜೂ.15ರಂದು 23 ಮಂದಿ ಹಾಗೂ ಜೂ.16ರಂದು 11 […]

ಬಿಸಿಲಿನ ತೀವ್ರತೆಗೆ 34 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪೆಂಡಾಲ್ ಕುಸಿದು ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com ಗಂಗಾವತಿ, ಜೂ. 16. ಗಂಗಾವತಿ ತಾಲೂಕಿನ ಮುಸ್ಟೂರು ಕ್ಯಾಂಪ್ ನಲ್ಲಿ ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಅಡುಗೆ ತಯಾರಿಸುತ್ತಿದ್ದ ಮಹಿಳೆಯ ಮೇಲೆ ಪೆಂಡಾಲ್ ಬಿದ್ದು ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ನಡೆದಿದೆ. ಮೃತ ಮಹಿಳೆಯನ್ನು ಅಂಜಿನಮ್ಮ( 51) ಎಂದು ಗುರುತಿಸಲಾಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಭಕ್ತರಿಗೆ ಊಟದ ವ್ಯವಸ್ಥೆ ಮಾಡಲೆಂದು ವೇದಿಕೆಯ ಪಕ್ಕದಲ್ಲಿ ನಿರ್ಮಿಸಲಾಗಿದ್ದ ಪೆಂಡಾಲ್ ಬಿರುಗಾಳಿಗೆ ಹಾರಿ ಕೆಳಗೆ ಬಿದ್ದ ಪರಿಣಾಮ ಅಡುಗೆ ಕಾರ್ಯದಲ್ಲಿ ನಿರತರಾಗಿದ್ದ ಮಹಿಳೆ ಮೃತಪಟ್ಟಿದ್ದಾರೆ. ಇನ್ನು ಶಾಮೀದಾಬೀ(48)

ಪೆಂಡಾಲ್ ಕುಸಿದು ಮಹಿಳೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಜೂ. 16. ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ಓರ್ವ ವಿದ್ಯಾರ್ಥಿ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ತಾಲೂಕಿನ ಕಿರೇಸೂರ ಗ್ರಾಮದಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ (9) ಎಂದು ಗುರುತಿಸಲಾಗಿದೆ. ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗವಿ ಎಂಬಾತ ಗಾಯಗೊಂಡಿದ್ದು ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಳಗ್ಗೆ ಶಾಲೆಗೆ ಬಂದ ಮಕ್ಕಳು ನಿರ್ಮಾಣ ಹಂತದ ಶಾಲಾ ಕೊಠಡಿ ಬಳಿ ಆಟವಾಡುತ್ತಿದ್ದರು. ಈ

ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ

(ನ್ಯೂಸ್ ಕಡಬ)newskadaba.com ಮುಂಬೈ, ಜೂ . 15 . ಯುವಕನೊಬ್ಬ ರೀಲ್ಸ್​ ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ಘಟನೆ ಮುಂಬೈ ಬಳಿ ನಡೆದಿದೆ. ಮೃತನನ್ನು ಬಿಲಾಲ್ ಸೋಹಿಲ್ ಶೇಖ್ (18) ಎಂದು ಗುರುತಿಸಲಾಗಿದೆ, ಈತ  ಚೋಲೆ ಪ್ರದೇಶದಲ್ಲಿ ನೀರು ಸರಬರಾಜು ಮಾಡುವ ಬ್ರಿಟಿಷ್ ಪಂಪ್​ ಹೌಸ್​ಗೆ ಬಿದ್ದು ಪ್ರಾಣ ಕಳೆದುಕೊಂಡಿದ್ದಾನೆ . ಬ್ರಿಟಿಷ್​ ಪಂಪ್​ ಹೌಸ್​ಗೆ ಜನಸಾಮಾನ್ಯರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಈ ಪ್ರದೇಶದಲ್ಲಿ ಪ್ರತಿದಿನ ಸಾಯಂಕಾಲ ವಾಯುವಿಹಾರಕ್ಕೆ ಬರಲು ಅವಕಾಶವಿದೆ. ಇದೇ ನೆಪದಲ್ಲಿ  ಬಂದ ಬಿಲಾಲ್​ ಹಾಗೂ

ರೀಲ್ಸ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಯುವಕ Read More »

ರಾಷ್ಟ್ರೀಯ ನ್ಯೂಸ್

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು

(ನ್ಯೂಸ್ ಕಡಬ) newskadaba.com ಕೋಟ, ಜೂ. 15. ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಮೃತಪಟ್ಟ ಘಟನೆ ರಾ.ಹೆ.66ರ ಸಾಸ್ತಾನದ ಮಧುರಾ ಹೋಟಲ್ ಸಮೀಪ ನಡೆದಿದೆ. ಮೃತರನ್ನು ರಮೇಶ್ ಎಂದು ಗುರುತಿಸಲಾಗಿದೆ. ಇವರು ಸಾಸ್ತಾನ ಕೋಡಿ ರಸ್ತೆಯ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದು, ಹೋಟೆಲ್ ನಿಂದ ಊಟ ಪಾರ್ಸೆಲ್ ಪಡೆದು ರಸ್ತೆಬದಿ ನಡೆದುಕೊಂಡು ಬರುತ್ತಿದ್ದಾಗ ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಜೀಪು ಢಿಕ್ಕಿ ಹೊಡೆದಿದೆ. ಪರಿಣಾಮ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ರಮೇಶ್ ರನ್ನು ಆಸ್ಪತ್ರೆಗೆ ದಾಖಲಿಸುವ

ಉಡುಪಿ: ಪಾದಚಾರಿಗೆ ಜೀಪು ಢಿಕ್ಕಿ- ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಚನ್ನಪಟ್ಟಣ ಜೂ.15. ಟಿಂಬರ್‌ ಲಾರಿಗೆ ಹಿಂಬದಿಯಿಂದ ಹೊಂಡಸಿಟಿ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟು,  ಮೂವರು ಗಾಯಗೊಂಡಿರುವ ಘಟನೆ ದೇವರಹೊಸಹಳ್ಳಿ ಗ್ರಾಮದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ಸಂಭವಿಸಿದೆ. ಮೃತರನ್ನು ಕಾರಿನ ಚಾಲಕ ಕೃಷ್ಣಮೂರ್ತಿ (57), ನಿಧಿ (13), ನಿಶಾ(20) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಯಲಹಂಕದ ವಿದ್ಯಾರಣ್ಯಪುರ ಮೂಲದ ಶ್ರೀನಿವಾಸ್‌ಮೂರ್ತಿ ಕುಟುಂಬದವರು ಮದುವೆಗೆಂದು ಮೈಸೂರಿನ ಎಚ್‌.ಡಿ.ಕೋಟೆಗೆ ತೆರಳಿ, ಮದುವೆ ಮುಗಿಸಿಕೊಂಡು ವಾಪಸ್‌ ಬೆಂಗಳೂರಿಗೆ ಹಿಂದಿರುಗುತಿದ್ದ ವೇಳೆ ಈ ದುರ್ಘಟನೆ ನಡೆದಿದೆ. .    

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೈವೇನಲ್ಲಿ ಭೀಕರ ಅಪಘಾತ ➤ ಮೂವರ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ರಾಯಚೂರು, ಜೂ. 14. ಜೆಸಿಬಿ ಹರಿದು ಜಮೀನಿನಲ್ಲಿ ಮಲಗಿದ್ದ ಮೂವರು ಮೃತಪಟ್ಟ ದಾರುಣ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಛತ್ತೀಸ್ ಗಢ ಮೂಲದ ವಿಷ್ಣು, ಶಿವರಾಂ ಹಾಗೂ ಬಲರಾಮ ಎಂದು ಗುರುತಿಸಲಾಗಿದೆ. ಇವರು ರಾತ್ರಿ ವೇಳೆ ಬೋರ್ ವೆಲ್ ಕೊರೆದು ಬಳಿಕ ಜಮೀನಿನಲ್ಲಿಯೇ ಮಲಗಿದ್ದರು. ಈ ಸಂದರ್ಭ ಬಂದ ಜೆಸಿಬಿಯು ಮೂವರ ಮೇಲೆ ಹರಿದಿದ್ದು, ಪರಿಣಾಮ ಮೂವರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ದೇವದುರ್ಗ

ಜಮೀನಿನಲ್ಲಿ ಮಲಗಿದ್ದವರ ಮೇಲೆ ಹರಿದ ಜೆಸಿಬಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು 

(ನ್ಯೂಸ್ ಕಡಬ)newskadaba.com ಹಾವೇರಿ .ಜೂ.12. ಶಕ್ತಿ ಯೋಜನೆ ಜಾರಿಗೆ ಬಂದ ಮಾರನೇ ದಿನವೇ ಬಸ್‌ ಫುಲ್‌ರಶ್‌ ಆಗಿ ಬಾಗಿಲ ಬಳಿ ನಿಂತಿದ್ದ ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು  ಹಾವೇರಿ ಜಿಲ್ಲೆಯ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದ ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್‌ನಲ್ಲಿ ಜನ ತುಂಬಿದ್ದ ಕಾರಣ ವಿದ್ಯಾರ್ಥಿನಿ ಬಸ್ ಬಾಗಿಲ ಬಳಿ ನಿಂತಿದ್ದಳು. ಈ ವೇಳೆ ಬಸ್ ಟರ್ನ್ ಆಗುವಾಗ ವಿದ್ಯಾರ್ಥಿನಿ ಮೇಲೆ ಹೆಚ್ಚಿನ ಜನರು ಭಾರ ಹಾಕಿದ್ದರಿಂದ ಬಾಲಕಿ

ಉಚಿತ ಪ್ರಯಾಣದ ಬೆನ್ನಲ್ಲೆ ತುಂಬಿದ ಬಸ್  ➤ ಬಾಗಿಲ ಬಳಿ ನಿಂತದ್ದ ವಿದ್ಯಾರ್ಥಿನಿ ಆಯತಪ್ಪಿ ಬಿದ್ದು ಮೃತ್ಯು  Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕೊಪ್ಪಳ, ಜೂ. 13. ನಿಂತಿದ್ದ ಲಾರಿಗೆ ಕಾರೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮೃತರನ್ನು ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಕೋಳೂರು ತಾಂಡಾದ ಚಾಲಕ ಪ್ರವೀಣ್ ಕುಮಾರ್ ಭೋಜಪ್ಪ ಚೌಹಾಣ್, ಲೇಬಗೇರಿಯ ಸುರೇಶ್ ಈರಸಂಗಪ್ಪ ಹಂಡೆವಜೀರ ಹಾಗೂ ಗೌರಮ್ಮ ಹನುಮಗೌಡ ಹಂಡೆವಜೀರ ಎಂದು ಗುರುತಿಸಲಾಗಿದೆ. ದಾವಣಗೆರೆಯಿಂದ ಮರಳಿ ಸ್ವಗ್ರಾಮಕ್ಕೆ ಅತಿ ವೇಗದಲ್ಲಿ ತೆರಳುತ್ತಿದ್ದ ಕಾರು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದು ಈ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು

(ನ್ಯೂಸ್ ಕಡಬ) newskadaba.com ಮುಂಬೈ, ಜೂ. 13. ಎಷ್ಟೇ ಎಚ್ಚರಿಸಿದರೂ ಕ್ಯಾರೇ ಎನ್ನದೇ ಸುಮದ್ರಕ್ಕಿಳಿದಿದ್ದ ಮೂವರ ಪೈಕಿ ಓರ್ವ ಮೃತಪಟ್ಟು, ಇನ್ನಿಬ್ಬರು ಸಮುದ್ರಕ್ಕೆ ಇಳಿದು ನಾಪತ್ತೆಯಾಗಿರುವ ಘಟನೆ ಮುಂಬೈನ ಜುಹು ಬೀಚ್ ನಲ್ಲಿ ನಡೆದಿದೆ. 12 ರಿಂದ 16 ವರ್ಷ ವಯಸ್ಸಿನ ಐದು ಹುಡುಗರ ಗುಂಪೊಂದು, ಜೀವರಕ್ಷಕ ದಳದವರ ಎಚ್ಚರಿಕೆಗೆ ಮಣಿಯದೇ ಸಮುದ್ರಕ್ಕಿಳಿದು, ನಂತರ ದಡದಿಂದ ಸುಮಾರು ಅರ್ಧ ಕಿಲೋಮೀಟರ್ ದೂರದಲ್ಲಿ ನಾಪತ್ತೆಯಾಗಿದ್ದರು. ಈ ಪೈಕಿ  ಇಬ್ಬರು ಬಾಲಕರನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದು, ಓರ್ವ ಆಸ್ಪತ್ರೆಗೆ ಕರೆತಂದ

ಎಚ್ಚರಿಕೆಗೆ ಕ್ಯಾರೇ ಎನ್ನದೇ ಸಮುದ್ರಕ್ಕೆ ಇಳಿದ ಬಾಲಕ-ನೀರುಪಾಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top