death

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ತೋಟದ ಕೆಲಸಕ್ಕೆಂದು ತೆರಳಿದ ಯುವಕನೋರ್ವ ವಿದ್ಯುತ್ ಶಾಕ್ ಹೊಡೆದು ಮೃತಪಟ್ಟ ಘಟನೆ ಮೆಲ್ಕಾರ್ ಸಮೀಪದ ಆಲಂಪಾಡಿ ಎಂಬಲ್ಲಿ ಇಂದು ಸಂಭವಿಸಿದೆ. ಮೃತ ಯುವಕನನ್ನು ಬೋಳಿಯಾರು ನಿವಾಸಿ ಇಬ್ರಾಹೀಮ್ ರವರ ಮಗ ಶಾಫಿ (29) ಎಂದು ಗುರುತಿಸಲಾಗಿದೆ. ಶಾಫಿ ಇಂದು ಬೆಳಿಗ್ಗೆ ಆಲಂಪಾಡಿಯಲ್ಲಿ ಅಡಿಕೆ ತೆಗೆಯಲೆಂದು ಹೋಗಿದ್ದು, ಈ ಸಂದರ್ಭ ಅವರ ಕೈಯಲ್ಲಿದ್ದ ಅಡಿಕೆ ತೆಗೆಯುವ ದೋಟಿ ಸರ್ವಿಸ್ ವಯರ್ ಗೆ ತಾಗಿ ಕರೆಂಟ್ ಶಾಕ್ ಹೊಡೆದು, ಶಾಫಿ ಸ್ಥಳದಲ್ಲೇ […]

ಬಿ.ಸಿ.ರೋಡ್: ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 09. ಸೌದಿ ಅರೇಬಿಯಾದಲ್ಲಿ ವೃತ್ತಿಯಲ್ಲಿದ್ದ ಮಾಣಿ ಸಮೀಪದ ಸೂರಿಕುಮೇರು ನಿವಾಸಿ ದಿವಂಗತ ಅಬೂಬಕರ್ ರವರ ಪುತ್ರ ಅಬ್ದುಲ್ ರಝಾಕ್ ಎಂಬವರು ಹೃದಯಾಘಾತದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಕಳೆದ 15 ವರ್ಷಗಳಿಂದ ಸೌದಿ ಅರೇಬಿಯಾದ ಅಲ್ ಕೋಬರ್ ನಲ್ಲಿ ವೃತ್ತಿಯಲ್ಲಿದ್ದ ಅವರು ರಜೆಯಲ್ಲಿ ಮನೆಗೆ ಬಂದು 3 ತಿಂಗಳ ಹಿಂದೆಯಷ್ಟೇ ಮರಳಿ ವಿದೇಶಕ್ಕೆ ತರಳಿದ್ದರು ಎಂದು ಹೇಳಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರ ಸಹಿತ ಅಪಾರ ಸಂಖ್ಯೆಯ ಬಂಧುಗಳನ್ನು ಅಗಲಿದ್ದಾರೆ.

ಹೃದಯಾಘಾತ- ಬಂಟ್ವಾಳ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ನಿಧನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 08. ನಗರ ಪೊಲೀಸ್ ಠಾಣೆಯಲ್ಲಿ ಈ ಹಿಂದೆ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸಿದ್ದ, ಪ್ರಸ್ತುತ ಚಿತ್ರದುರ್ಗದಲ್ಲಿ ಪೊಲೀಸ್ ನಿರೀಕ್ಷಕರಾಗಿರುವ ಲಿಂಗರಾಜು ಎಂಬವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಅವರು ಇತ್ತೀಚೆಗೆ ಬೆಂಗಳೂರಿಗೆ ವರ್ಗಾವಣೆಗೊಂಡಿದ್ದು, ಆದರೆ ಅಲ್ಲಿ ಕರ್ತವ್ಯಕ್ಕೆ ಹಾಜರಾಗುವ ಮುನ್ನವೇ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಪೊಲೀಸ್ ನಿರೀಕ್ಷಕ ಲಿಂಗರಾಜು ಹೃದಯಾಘಾತದಿಂದ ನಿಧನ Read More »

ಕರಾವಳಿ

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadba.com ಪಡುಬಿದ್ರಿ, ಜೂ. 08. ಮೀನಿನ ಕಂಟೇನರ್ ಮತ್ತು ಸರಕು ಲಾರಿಯ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಉಚ್ಚಿಲ ಮೂಲದ ವ್ಯಕ್ತಿ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ವಿಜಯವಾಡ-ಗುಂಟೂರು ರಾಷ್ಟ್ರೀಯ ಹೆದ್ದಾರಿ ಟೋಲ್‌ಗೇಟ್‌ ಬಳಿ ನಡೆದಿದೆ. ಗಾಯಾಳುವನ್ನು ಮೀನಿನ ಲಾರಿಯ ಚಾಲಕ ಉಚ್ಚಿಲ ಬಡಾ ಗ್ರಾಮದ ಭಾಸ್ಕರ ನಗರದ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಸರಕು ಲಾರಿಯ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಘಟನೆಯ ಸಂಪೂರ್ಣ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಆಂಧ್ರ ಪ್ರದೇಶದಲ್ಲಿ ಅಪಘಾತ ➤ ಉಡುಪಿಯ ವ್ಯಕ್ತಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ

(ನ್ಯೂಸ್ ಕಡಬ) newskadaba.com ಕೇರಳ, ಜೂ. 08. ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದ ಹಿನ್ನೆಲೆ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ತನ್ನ ಮಗಳನ್ನೇ ಕೊಡಲಿಯಿಂದ ಕಡಿದು ಹತ್ಯೆ ಮಾಡಿರುವ ಘಟನೆ ಕೇರಳದ ಆಲಪ್ಪುಳದಲ್ಲಿ ನಡೆದಿದೆ. ಹತ್ಯೆಗೊಳಗಾದ ಬಾಲಕಿಯನ್ನು ನಕ್ಷತ್ರಾ ಎಂದು ಗುರುತಿಸಲಾಗಿದೆ. ಆರೋಪಿ ಶ್ರೀ ಮಹೇಶನ ಪತ್ನಿಯು ನಾಲ್ಕು ವರ್ಷಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದು, ಆ ಬಳಿಕ ಖಿನ್ನತೆಯಿಂದ ಬಳಲುತ್ತಿದ್ದ ಈತ ಚಿಕಿತ್ಸೆ ಪಡೆಯುತ್ತಿದ್ದನು. ಇದೀಗ ಮಹೇಶ್ ತನ್ನ ಮಗಳು ನಕ್ಷತ್ರಾಳನ್ನು ಬುಧವಾರದಂದು ರಾತ್ರಿ ಸುಮಾರು 8 ಗಂಟೆಯ

ಕೊಡಲಿಯಿಂದ ಕಡಿದು ಮಗಳನ್ನೇ ಕೊಂದ ತಂದೆ Read More »

ಕ್ರೈಮ್ ನ್ಯೂಸ್

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು

(ನ್ಯೂಸ್ ಕಡಬ)newskadba.com ಒಡಿಶಾ, ಜೂ  08 . ಕಾರ್ಮಿಕರ ಮೇಲೆ ಗೂಡ್ಸ್ ರೈಲು ಹರಿದು ಆರು ಮಂದಿ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಒಡಿಶಾದ ಜಜ್ಪುರ ಜಿಲ್ಲೆಯಲ್ಲಿ ನಡೆದಿದೆ. ಜಜ್ಪುರ ಕಿಯೋಂಜರ್ ರೈಲು ನಿಲ್ದಾಣದಲ್ಲಿ ಭಾರಿ ಮಳೆ ಸುರಿಯುತ್ತಿದ್ದ ವೇಳೆ ಕಾರ್ಮಿಕರು ಗೂಡ್ಸ್ ರೈಲಿನ ಕೆಳಗೆ ಆಶ್ರಯ ಪಡೆದಿದ್ದರು. ಈ ವೇಳೆ ರೈಲು ಚಲಿಸಲು ಆರಂಭಿಸಿದೆ.ಇನ್ನು ಗಾಯಗೊಂಡ ಕಾರ್ಮಿಕರನ್ನು ಕಟಕ್ ಎಸ್ ಸಿಬಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು

ಕಾರ್ಮಿಕರ ಮೇಲೆ ಹರಿದ ಗೂಡ್ಸ್ ರೈಲು ➤6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 08. ಯುವತಿಯೋರ್ವಳು ಗೃಹ ಪ್ರವೇಶಗೈದ ಐದೇ ದಿನಕ್ಕೆ ಮನೆ ಕೋಣೆಯೊಳಗೆ 24 ಪುಟಗಳ ಡೆತ್ ನೋಟ್ ಬರೆದಿಟ್ಟು ನೇಣುಬಿಗಿದು ಆತ್ಮಹತ್ಯೆಗೈದ ಘಟನೆ ಕುಂಪಲ ಚಿತ್ರಾಂಜಲಿ ನಗರದಲ್ಲಿ ನಡೆದಿದೆ. ಆತ್ಮಹತ್ಯೆಗೈದ ಯುವತಿಯನ್ನು ಫರಂಗಿಪೇಟೆ ಮೂಲದ ಸದ್ಯ ಕುಂಪಲ ಚಿತ್ರಾಂಜಲಿ ನಗರದ ನಿವಾಸಿ ಅಶ್ವಿನಿ ಬಂಗೇರ (25)ಎಂದು ಗುರುತಿಸಲಾಗಿದೆ. ಈಕೆ ನಿನ್ನೆ ರಾತ್ರಿ ತನ್ನ‌ ಸ್ನೇಹಿತೆ ಜೊತೆ ಚಾಟ್ ಮಾಡಿದ್ದಾಳೆ ಎನ್ನಲಾಗಿದ್ದು, ಸ್ನೇಹಿತೆ ಬೆಳಿಗ್ಗೆ ಬಂದು ಕೋಣೆಯ ಬಾಗಿಲು ಒಡೆದು ನೋಡಿದಾಗ ಅಶ್ವಿನಿ

ಮಂಗಳೂರು: ಡೆತ್ ನೋಟ್ ಬರೆದಿಟ್ಟು ಯುವತಿ ಆತ್ಮ ಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು ಜೂ. 08. ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ತಾವರೆಕೆರೆಯಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕೃಷ್ಣೇಗೌಡ ಹಾಗೂ ರಾಧಾ ದಂಪತಿಯ ಪುತ್ರಿ ಎಂಇಎಸ್ ಶಾಲೆಯ ವಿದ್ಯಾರ್ಥಿ ಲಿಸ್ಮಿತಾ ಎಂದು ಗುರುತಿಸಲಾಗಿದೆ. ಈಕೆ ಶಾಲೆಯಿಂದ ಮನೆಗೆ ವಾಪಸ್ ಆಗಿ ಬಸ್‌ನಿಂದ ಇಳಿಯುತ್ತಿದ್ದ ವೇಳೆ ಬಸ್ ಬಾಲಕಿ ಮೇಲೆ ಹರಿದಿದೆ. ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಲಿಸ್ಮಿತಾಳನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಆಕೆ ಮೃತಪಟ್ಟಿದ್ದು, ಮಗು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

ಬಸ್ ಹರಿದು ಶಾಲಾ ವಿದ್ಯಾರ್ಥಿನಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 08. ಮೃತದೇಹ ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಒಂದು ನಿಂತಿದ್ದ ಲಾರಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ಇಬ್ಬರು ಗಾಯಗೊಂಡ ಘಟನೆ ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ. ಮೃತಪಟ್ಟವರನ್ನು ಆಂಬ್ಯುಲೆನ್ಸ್ ನಲ್ಲಿದ್ದ ಕನಕಮಣಿ(72), ಆಕಾಶ್ (17) ಮತ್ತು ಚಾಲಕ ಎಂದು ಗುರುತಿಸಲಾಗಿದೆ. ಅಹ್ಮದಾಬಾದ್​ನಿಂದ ತಮಿಳುನಾಡಿನ ತಿರುನಾಳವೇಲಿಗೆ ಹೋಗುತ್ತಿದ್ದ ಆಂಬ್ಯುಲೆನ್ಸ್, ಚಿತ್ರದುರ್ಗದ ಮಲ್ಲಾಪುರ ಗ್ರಾಮದ ಬಳಿ ಲಾರಿಗೆ ಡಿಕ್ಕಿ ಹೊಡೆದು, ಈ ದುರ್ಘಟನೆ ಸಂಭವಿಸಿದೆ. ಗಾಯಗೊಂಡವರನ್ನ ಜಿಲ್ಲಾಸ್ಪತ್ರೆಗೆ

ಮೃತದೇಹಗಳನ್ನು ಸಾಗಿಸುತ್ತಿದ್ದ ಆಂಬ್ಯುಲೆನ್ಸ್ ಪಲ್ಟಿ ➤ ಮೂವರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top