death

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.30 ಬ್ಯಾಟರಾಯನಪುರ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಎರಡು ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿದ್ದು, ಪಿ. ವೆಂಕಟೇಶ್ (62) ಎಂಬುವವರು ಮೃತಪಟ್ಟಿದ್ದಾರೆ. ದೀಪಾಂಜಲಿನಗರ ಮೆಟ್ರೊ ನಿಲ್ದಾಣ ಬಳಿ ಇರುವ ಮೇಲ್ಸೇತುವೆಯಲ್ಲಿ ಎದುರಿಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ವೆಂಕಟೇಶ್ ಅವರ ವಾಹನ ಡಿಕ್ಕಿ ಹೊಡೆದಿತ್ತು. ವಾಹನ ಸಮೇತ ಉರುಳಿಬಿದ್ದಿದ್ದ ವೆಂಕಟೇಶ್ ಅವರ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗಾಗಿ ಅವರನ್ನು ನಿಮ್ಹಾನ್ಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆಸ್ಪತ್ರೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.ಅಪಘಾತ ಸಂಬಂಧ ಪ್ರಕರಣ […]

ದ್ವಿಚಕ್ರ ವಾಹನಗಳ ನಡುವೆ ಭೀಕರ ಅಪಘಾತ ➤ ಸವಾರ ಮೃತ್ಯು Read More »

ಕರ್ನಾಟಕ

ಅಕಾಲಿಕ ಗಾಳಿ, ಆಲಿಕಲ್ಲು ಮಳೆಗೆ ವ್ಯಾಪಕ ಹಾನಿ.!➤9 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಅಹ್ಮದಾಬಾದ್,ಮೇ.30 ಅಕಾಲಿಕ ಗಾಳಿ ಮತ್ತು ಆಲಿಕಲ್ಲು ಮಳೆ ಗುಜರಾತ್ ಮತ್ತು ರಾಜಸ್ಥಾನದಲ್ಲಿ ವ್ಯಾಪಕ ಹಾನಿಯನ್ನು ಉಂಟು ಮಾಡಿದ್ದು, ವಿವಿಧ ಮಳೆ ಸಂಬಂಧಿ ಅನಾಹುತಗಳಿಂದ ಒಂಬತ್ತು ಮಂದಿ ಮೃತಪಟ್ಟಿದ್ದಾರೆ ಎಂದು ಗುಜರಾತ್ ಸರ್ಕಾರ ಪ್ರಕಟಿಸಿದೆ. ಅಹ್ಮದಾಬಾದ್ ಸೇರಿದಂತೆ ಗುಜರಾತ್‌ನ ವಿವಿಧ ಭಾಗಗಳಲ್ಲಿ ರಭಸದ ಗಾಳಿ ಮುಂದುವರಿದಿದೆ. ಇದುವರೆಗೆ ರಾಜ್ಯದಲ್ಲಿ 34.7 ಮಿಲಿಮೀಟರ್ ಮಳೆ ಬಿದ್ದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.      

ಅಕಾಲಿಕ ಗಾಳಿ, ಆಲಿಕಲ್ಲು ಮಳೆಗೆ ವ್ಯಾಪಕ ಹಾನಿ.!➤9 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಸಂಪ್‌ನಲ್ಲಿ ಉದ್ಯಮಿ ಪುತ್ರನ ಮೃತದೇಹ ಪತ್ತೆ.!

(ನ್ಯೂಸ್ ಕಡಬ)newskadaba.com ಮೈಸೂರು,ಮೇ.29 ಉದ್ಯಮಿಯೊಬ್ಬರ ಪುತ್ರನ ಶವ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ನಿರ್ಮಾಣ ಹಂತದ ಕಟ್ಟಡದ ಸಂಪ್ನಲ್ಲಿ ಪತ್ತೆಯಾಗಿದೆ.ಮೃತರನ್ನು ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಇಂಜಿನಿಯರಿಂಗ್ ವರ್ಕ್ಸ್ ಮಾಲೀಕ ಕೆ.ಎಂ. ಚೆರಿಯನ್ ಅವರ ಪುತ್ರ ಕ್ರಿಸ್ಟೋ ಚೆರಿಯನ್ (35) ಎಂದು ಗುರುತಿಸಲಾಗಿದೆ. ಮಾಹಿತಿ ತಿಳಿದ ಪೊಲೀಸರು ಶ್ವಾನದಳ, ವಿಧಿವಿಜ್ಞಾನ ತಜ್ಞರ ತಂಡದ ಜೊತೆಗೆ ಸ್ಥಳಕ್ಕೆ ಧಾವಿಸಿದ್ದು, ಮೃತದೇಹವನ್ನು ಹೊರತೆಗೆದಿದ್ದಾರೆ. ಪೋಷಕರು ನೀಡಿದ ದೂರಿನ ಮೇರೆಗೆ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಆರಂಭಿಸಿದ್ದಾರೆ.  

ಸಂಪ್‌ನಲ್ಲಿ ಉದ್ಯಮಿ ಪುತ್ರನ ಮೃತದೇಹ ಪತ್ತೆ.! Read More »

ಕರ್ನಾಟಕ

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ

(ನ್ಯೂಸ್ ಕಡಬ)newskadaba.com ನವದೆಹಲಿ, ಮೇ.29 ,ದೆಹಲಿಯ ರೋಹಿಣಿಯಲ್ಲಿ ಜನ ಸಂದಣಿ ಪ್ರದೇಶದಲ್ಲಿ 16 ವರ್ಷದ ಬಾಲಕಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆ ಮಾಡಿದ್ದಾನೆ ಎಂದು ತಿಳಿದು ಬಂದಿದೆ. ರೋಹಿಣಿಯ ಶಹಬಾದ್ ಡೈರಿ ಪ್ರದೇಶದಲ್ಲಿ ಇಬ್ಬರ ನಡುವೆ ನಡೆದ ಜಗಳದ ನಂತರ ಯುವಕ, ಯುವತಿಗೆ ಹಲವು ಬಾರಿ ಇರಿದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಬಾಲಕಿಯನ್ನು ಬರ್ಬರವಾಗಿ ಕೊಲೆ ಮಾಡಿದ ಯುವಕ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕೊಪ್ಪಳ, ಮೇ.29. ಲಾರಿ ಮತ್ತು ಕಾರು ನಡುವೆ ಅಪಘಾತ ಉಂಟಾಗಿದ್ದು, ಸ್ಥಳದಲ್ಲಿಯೇ ಆರು ಮಂದಿ ಮೃತಪಟ್ಟ ಘಟನೆ ನಡೆದಿದೆ. ಕಾರಿನ ಟೈರ್​ ಸ್ಫೋಟಗೊಂಡು ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ ಮತ್ತು ರಶ್ಮಿಕಾ ಮೃತರು ಎಂದು ಗುರುತಿಸಿದ್ದಾರೆ. ಕುಷ್ಟಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ.  

ಲಾರಿ ಮತ್ತು ಕಾರು ನಡುವೆ ಅಪಘಾತ ➤ 6 ಮಂದಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಮೇ, 29. ನಸುಕಿನ ವೇಳೆ ಗುವಾಹಟಿಯ ಜಲುಕ್ಬರಿ ಪ್ರದೇಶದಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಅಸ್ಸಾಂ ಎಂಜಿನಿಯರಿಂಗ್ ಕಾಲೇಜಿನ (ಎಇಸಿ) ಕನಿಷ್ಠ ಏಳು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. 01 ಜಿಸಿ 8829 ನೋಂದಣಿ ಸಂಖ್ಯೆಯ ಸ್ಕಾರ್ಪಿಯೋ ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಅನ್ನು ದಾಟಿ ಜಲುಕ್ಬರಿ ಫ್ಲೈಓವರ್ ರಸ್ತೆಯ ಎದುರು ಲೇನ್‌ನಲ್ಲಿ ಬೊಲೆರೋ ಡಿಐ ಪಿಕಪ್ ವ್ಯಾನ್‌ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಮೂಲಗಳು ತಿಳಿಸಿವೆ.  

ನಿಯಂತ್ರಣ ತಪ್ಪಿ ಡಿವೈಡರ್ ಗೆ ಢಿಕ್ಕಿ ಹೊಡೆದ ಕಾರು ➤ ಏಳು ವಿದ್ಯಾರ್ಥಿಗಳು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು.!

(ನ್ಯೂಸ್ ಕಡಬ)newskadaba.comಚಿಕ್ಕಮಗಳೂರು,ಮೇ.29 ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕುಂಟಿನಮಡು ಗ್ರಾಮದ ಕೆರೆಯಲ್ಲಿ ಆಕಸ್ಮಿಕವಾಗಿ ನೀರಿಗೆ ಬಿದ್ದು ಒಂದೇ ಕುಟುಂಬದ ಇಬ್ಬರು ಬಾಲಕರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಸಹೋದರರ ಮಕ್ಕಳಾಗಿರುವ ಯಶವಂತ(10), ರೋಹಿತ್(6) ಮೃತಪಟ್ಟವರು.ಸಮೀಪದ ಕೆರೆ ಬಳಿ ಹೋಗಿದ್ದ ಬಾಲಕರು ಆಯತಪ್ಪಿ ಬಿದ್ದು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮಕ್ಕಳ ಮೃತದೇಹ ಕಂಡು ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.  

ಕೆರೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು.! Read More »

ಕರ್ನಾಟಕ

ಪ್ರೇಮ ಕೂಪಕ್ಕೆ ಸಿಕ್ಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ.!➤ಗರ್ಭಿಣಿ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com ಲಕ್ನೋ,ಮೇ.29 ಪ್ರೇಮ ಕೂಪಕ್ಕೆ ಸಿಕ್ಕಿಬಿದ್ದು ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹೇರುತ್ತಿದ್ದ ಗರ್ಭಿಣಿ ಮಹಿಳೆಯ ಸಾವಿಗೆ ಕಾರಣರಾದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.ಲಖಿಂಪುರ ಖೇರಿ ನಿವಾಸಿ ಸೀಮಾ ಗೌತಮ್ (24) ಮೃತ ಮಹಿಳೆ. ಈಕೆ ಲಖಿಂಪುರ ಖೇರಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಆಕೆಯನ್ನು ಆರೋಪಿಗಳಾದ ನಾವೇದ್ ಮತ್ತು ಫರ್ಹಾನ್ ಕರೆತಂದಿದ್ದರು. ಆಕೆ ಮೃತಪಟ್ಟಿರುವ ಸುದ್ದಿ ತಿಳಿದು ಆರೋಪಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸೀಮಾಗೆ ವಿಷಪ್ರಾಶನ ಮಾಡಲಾಗಿದೆ ಎಂದು ಆಕೆಯ ಸಹೋದರ ಆರೋಪಿಸಿದ್ದಾರೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಕಾಯ್ದೆ ಮತ್ತು ಉತ್ತರ

ಪ್ರೇಮ ಕೂಪಕ್ಕೆ ಸಿಕ್ಕಿ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ.!➤ಗರ್ಭಿಣಿ ಮಹಿಳೆ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ರೈಲಿನಡಿ ಸಿಲುಕಿ ಮೃತಪಟ್ಟ ಕಾರ್ಮಿಕ.!

(ನ್ಯೂಸ್ ಕಡಬ)newskadaba.com ರಾಯಚೂರು,ಮೇ.29 ರಾಯಚೂರಿನಲ್ಲಿ ಭೀಕರ ಘಟನೆಯೊಂದು ನಡೆದಿದ್ದು, ರೈಲು ಅಪಘಾತ ಸಂಭವಿಸಿ ವ್ಯಕ್ತಿಯ ರುಂಡ ಮುಂಡ ಬೇರ್ಪಟ್ಟ ಭೀಕರ ಘಟನೆ ನಡೆದಿದೆ.ಮೃತನನ್ನು ನಾಗರಾಜ್ (32) ಎಂದು ಗುರುತಿಸಲಾಗಿದೆ. ರಾಯಚೂರಿನ ಶಕ್ತಿನಗರದ ಆರ್ ಟಿ ಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದೆ. ಕಲ್ಲಿದ್ದಲ್ಲು ಸ್ಯಾಂಪಲ್ ತೆಗೆಯುವ ಕೆಲಸ ಮಾಡುತ್ತಿದ್ದ ಇವರು ಆಕಸ್ಮಿಕವಾಗಿ ರೈಲಿನಡಿಗೆ ಸಿಲುಕಿದ್ದಾರೆ ಎನ್ನಲಾಗಿದೆ. ರೈಲು ಕುತ್ತಿಗೆ ಮೇಲೆ ಹರಿದ ಪರಿಣಾಮ ರುಂಡ ಹಾಗೂ ಮುಂಡ ಬೇರ್ಪಟ್ಟು ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ರೈಲಿನಡಿ ಸಿಲುಕಿ ಮೃತಪಟ್ಟ ಕಾರ್ಮಿಕ.! Read More »

ಕರ್ನಾಟಕ

ಹಾವು ಕಚ್ಚಿ 18 ತಿಂಗಳ ಮಗು ಮೃತ್ಯು.!

(ನ್ಯೂಸ್ ಕಡಬ)newskadaba.com ತಮಿಳುನಾಡು,ಮೇ.29  ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಸರಿಯಾದ ರಸ್ತೆ ಸೌಕರ್ಯ ಇಲ್ಲದ ಕಾರಣ ಹಾವು ಕಡಿತಕ್ಕೆ ತುತ್ತಾಗಿ 18 ತಿಂಗಳ ಮಗು ಮೃತಪಟ್ಟಿರುವ ಘಟನೆ ನಡೆದಿದೆ. 18 ತಿಂಗಳ ಅಂಬೆಗಾಲಿಡುವ ತನುಷ್ಕಾ ತನ್ನ ಪೋಷಕರೊಂದಿಗೆ ತನ್ನ ನಿವಾಸದ ಹೊರಗೆ ಮಲಗಿದ್ದಾಗ ಹಾವು ಕಚ್ಚಿದೆ. ಏನೋ ಗಂಭೀರವಾಗಿದೆ ಎಂದು ತಿಳಿದ ನಂತರ, ಮಗುವನ್ನು ತಂದೆ ವಿಜಿ ಮತ್ತು ತಾಯಿ ಪ್ರಿಯಾ ಆನೈಕಟ್ಟು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದರು.ಆದರೆ ಸರಿಯಾದ ರಸ್ತೆ ಸೌಕರ್ಯ ಇಲ್ಲದ ಕಾರಣ ಆಸ್ಪತ್ರೆಗೆ ತಲುಪುವಾಗಲೇ ಮಗು ಮೃತಪಟ್ಟಿದೆ

ಹಾವು ಕಚ್ಚಿ 18 ತಿಂಗಳ ಮಗು ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್
Scroll to Top