death

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಕುಷ್ಟಗಿ, ಮೇ.29. ಕಾರು ಹಾಗೂ ಲಾರಿಯ ನಡುವೆ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಷ್ಟಗಿ ತಾಲೂಕಿನ ಗುಡಿ ಕಲಕೇರಿ ಸಾಮಾಜಿಕ ಅರಣ್ಯ ವಲಯದ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ‌ ನಡೆದಿದೆ‌. ಮೃತರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ ಕಾಂಬಳೆ, ಅಕ್ಷಯ, ಶಿವಶರಣ, ಜಯಶ್ರೀ ಹಾಗೂ ಮಕ್ಕಳಾದ ರಾಕಿ, ರಶ್ಮಿಕಾ ಎಂದು ಗುರುತಿಸಲಾಗಿದೆ.  

ಕಾರು & ಲಾರಿ ನಡುವೆ ಭೀಕರ ಅಪಘಾತ ➤ 6 ಮಂದಿ ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೈಂದೂರು, ಮೇ.29. ಯುವತಿಯೋರ್ವಳು ನಿರುದ್ಯೋಗದಿಂದ ಮನನೊಂದು ಡೆತ್‌ ನೋಟ್‌ ಬರೆದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಎಂಬಲ್ಲಿ ಸಂಭವಿಸಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ

(ನ್ಯೂಸ್ ಕಡಬ)newskadaba.com ಮಣಿಪುರ, ಮೇ.29. ಕೆಲ ದಿನಗಳಿಂದ ತಣ್ಣಗಿದ್ದ ಈಶಾನ್ಯ ರಾಜ್ಯ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ ಎಂದು ವರದಿ ತಿಳಿಸಿದೆ. ಬಹುಸಂಖ್ಯಾತ ಹಿಂದೂ ಮೀಟಿ ಸಮುದಾಯದವರನ್ನು ಗುರಿಯಾಗಿಸಿ ಕುಕಿ ಉಗ್ರರು ನಡೆಸಿದ ದಾಳಿಗೆ ಇಬ್ಬರು ಬಲಿಯಾಗಿದ್ದು, 20ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಜೊತೆಗೆ ಉಗ್ರರು 80ಕ್ಕೂ ಹೆಚ್ಚು ಮನೆಗಳಿಗೆ ಬೆಂಕಿ ಹಚ್ಚಿದ್ದು, ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳಕ್ಕೆ ಸೇನೆಯ ಹೆಚ್ಚುವರಿ ಪಡೆಯನ್ನು ರವಾನಿಸಲಾಗಿದೆ. ಸೇನಾ ಮುಖ್ಯಸ್ಥ ನರವಣೆ ಪರಿಸ್ಥಿತಿಯ ಅಧ್ಯಯನಕ್ಕೆ ರಾಜ್ಯಕ್ಕೆ

ಮತ್ತೇ ಭುಗಿಲೆದ್ದ ಹಿಂಸಾಚಾರ..! ➤ 40 ಕ್ಕೂ ಹೆಚ್ಚು ಉಗ್ರರ ಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾರ್ಕಳ, ಮೇ.27. ಜೋಕಾಲಿ ಆಟದಲ್ಲಿ ನಿರತರಾಗಿದ್ದಾಗ ಕುತ್ತಿಗೆ ಸೀರೆ ಸುತ್ತಿಕೊಂಡ ಪರಿಣಾಮ ಬಾಲಕಿಯೊಬ್ಬಳು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೆಮ್ಮಣ್ಣು ಅಂತೊಟ್ಟು ಎಂಬಲ್ಲಿ ಸಂಭವಿಸಿದೆ. ಅಂತೊಟ್ಟು ನಿವಾಸಿ ಪಿರ್ಯಾದಿ ಲಕ್ಷ್ಮಣ್ ಪೂಜಾರಿ ಎಂಬವರ ಮಗಳು ಮಾನ್ವಿ ( 9) ಮೃತ ಬಾಲಕಿ ಎಂದು ಗುರುತಿಸಲಾಗಿದೆ. ಮನೆಯ ಬಳಿ ನೆರೆಕರೆಯ ದೀಕ್ಷಾ ಎಂಬಾಕೆಯ ಜೊತೆ ಸೀರೆಯನ್ನು ಕಟ್ಟಿ ಜೋಕಾಲಿ ಆಟ ಆಡುವಾಗ ಆಕಸ್ಮಿಕವಾಗಿ ಜೋಕಾಲಿಗೆ ಕಟ್ಟಿದ ಸೀರೆ ಆಕೆಯ ಕುತ್ತಿಗೆಗೆ

ಕಾರ್ಕಳ: ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಸೀರೆ ಸಿಲುಕಿ ಬಾಲಕಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ರಾಯಚೂರು,ಮೇ.27 ವಿವಾಹಿತೆ ಮೇಲೆ ನಾಲ್ವರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ರಾಯಚೂರಿನಲ್ಲಿ ನಡೆದಿದೆ.ಕ್ಯಾಂಪಿನ ಹೊರವಲಯದಲ್ಲಿ 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ದುಷ್ಕರ್ಮಿಗಳು. ವಿರೋಧ ವ್ಯಕ್ತಪಡಿಸಿದ ಮಹಿಳೆ ಮೇಲೆ ತೀವ್ರವಾಗಿ ಹಲ್ಲೆ ನಡೆಸಿ,ಆರೋಪಿಗಳು ಪರಾರಿಯಾಗಿದ್ದಾರೆ. ಅಸ್ವಸ್ಥರಾಗಿದ್ದ ಮಹಿಳೆಯನ್ನು ಗಮನಿಸಿದ ಜನ ಪೊಲೀಸರಿಗೆ ಮಾಹಿತಿ ನೀಡಿ,ಬಳಿಕ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.ಸಿಂಧನೂರು ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ

ವಿವಾಹಿತೆ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ ದುಷ್ಕರ್ಮಿಗಳು.!➤ಪ್ರಕರಣ ದಾಖಲು Read More »

ಕರ್ನಾಟಕ

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ

(ನ್ಯೂಸ್ ಕಡಬ)newskadaba.com ಉತ್ತರ ಪ್ರದೇಶ,ಮೇ.26  ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, 28 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಆಶಿಶ್ (11) ಎಂದು ಗುರುತಿಸಲಾಗಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಕಸ್ನಾ ಪೊಲೀಸ್ ಠಾಣಾ ವ್ಯಾಪ್ತಿಯ ಲಾಡ್‌ಪುರ ಗ್ರಾಮದ ಬಳಿಯ ಈಸ್ಟರ್ನ್ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇಯಲ್ಲಿ ಈ ಘಟನೆ ನಡೆದಿದೆ.ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು

ಬಸ್ ಮತ್ತು ಟ್ರಕ್ ನಡುವೆ ಭೀಕರ ಅಪಘಾತ.! ➤ ಓರ್ವ ಮೃತ್ಯು, 28 ಮಂದಿಗೆ ಗಾಯ Read More »

ರಾಷ್ಟ್ರೀಯ ನ್ಯೂಸ್

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ, ಮೇ.26. ಬೈಕ್ ಗೆ ಟಿಪ್ಪರ್ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಅತ್ತೆ ಹಾಗೂ ಅಳಿಯ ಸ್ಥಳದಲ್ಲೇ ಮೃತಪಟ್ಟಿರುವಂತಹ ಘಟನೆ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಮುದ್ನಾಳ ಗ್ರಾಮದ ಶರಣಮ್ಮ ಕಂಬಳಿ, ನಾಗೇಶ್ ಶಿವಪುರ ಮೃತರು ಎಂದು ಗುರುತಿಸಲಾಗಿದೆ. ಇಬ್ಬರು ಮಕ್ಕಳಿಗೆ ಗಂಭೀರ ಗಾಯವಾಗಿದ್ದು, ಮುದ್ದೇಬಿಹಾಳ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಮುದ್ದೇಬಿಹಾಳದಿಂದ ಮುದ್ನಾಳ ಗ್ರಾಮಕ್ಕೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಟಿಪ್ಪರ್ ವಾಹನ ಸಮೇತ ಚಾಲಕ ಪರಾರಿಯಾಗಿದ್ದು, ಬೆನ್ನಟ್ಟಿ

ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಮೇ.26. ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಧರ್ಮಸ್ಥಳ ಘಟಕದ ಚಾಲಕ ಗೋಳಿತೊಟ್ಟು ನಿವಾಸಿ ಅಶೋಕ್‌ ಕುಮಾರ್‌(37) ಮೃತರು ಎಂದು ಗುರುತಿಸಲಾಗಿದೆ. ಇವರು KSRTC ಚಾಲಕರಾಗಿದ್ದರು ಎನ್ನಲಾಗಿದೆ.  

ಬೆಳ್ತಂಗಡಿ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮೇ. 26. ಯುವತಿಯೋರ್ವಳು ಮನೆಯಲ್ಲಿ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಅಡೂರಿನಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಅಡೂರು ಚಾಮಕೊಚ್ಚಿ ಅನ್ನಪ್ಪಾಡಿಯ ಮುದ್ದ ನಾಯ್ಕ್ ರವರ ಪುತ್ರಿ ದಿವ್ಯಾ (26) ಮೃತಪಟ್ಟವರು ಎನ್ನಲಾಗಿದೆ. ದಿವ್ಯಾ ಬಂದಡ್ಕದ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್ ಟೆಕ್ನಿಷಿಯನ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಯುವತಿಯೋರ್ವಳು ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು‌.!➤ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.26  ನಗರದ ಲಗ್ಗೆರೆ ಬಳಿಯ ಚೌಡೇಶ್ವರಿನಗರದಲ್ಲಿ ರವಿಕುಮಾರ್ ಅಲಿಯಾಸ್ ಮತ್ತಿ ರವಿ (38) ಎಂಬುವವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ.ಸ್ಥಳೀಯ ನಿವಾಸಿ ರವಿ, ಕಾಂಗ್ರೆಸ್ ಪಕ್ಷದ ಕಾರ್ಯಕರ್ತ. ಕಾಂಗ್ರೆಸ್ ಪಕ್ಷದ ಮುಖಂಡರೂ ಆಗಿರುವ ಫೈನಾನ್ಶಿಯರ್ ಕೃಷ್ಣಮೂರ್ತಿ ಅವರ ಜನ್ಮದಿನವಿತ್ತು. ಸ್ನೇಹಿತರು ರಾತ್ರಿ ಏರ್ಪಡಿಸಿದ್ದ ಪಾರ್ಟಿಯಲ್ಲಿ ರವಿ ಪಾಲ್ಗೊಂಡಿದ್ದರು. ಊಟದ ಸಮಯದಲ್ಲಿ ಎರಡು ಗುಂಪಿನ ನಡುವೆ ಗಲಾಟೆ ಆಗಿತ್ತು. ಪರಸ್ಪರ ವೈಷಮ್ಯ ಬೆಳೆದಿತ್ತು.’ನಂತರ ಮಾರಕಾಸ್ತ್ರಗಳಿಂದ ಹೊಡೆದು ರವಿ ಅವರನ್ನು ಕೊಂದು ಆರೋಪಿಗಳು ಪರಾರಿಯಾಗಿದ್ದಾರೆ.ಪತ್ನಿ ನೀಡಿರುವ ದೂರು

ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ದುಷ್ಕರ್ಮಿಗಳು‌.!➤ಪ್ರಕರಣ ದಾಖಲು Read More »

ಕರ್ನಾಟಕ
Scroll to Top