death

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ)newskadaba.com ನೋಯ್ಡ, ಮೇ.22. ಗ್ರೇಟರ್ ನೋಯ್ಡಾದಿಂದ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ 8ನೇ ತರಗತಿಯ ವಿದ್ಯಾರ್ಥಿಯು ಶಾಲೆಯಿಂದ ಮನೆಗೆ ಹೋಗುವಾಗ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಗೌತಂಬುದ್ ಜಿಲ್ಲೆಯಲ್ಲಿ ನಡೆದಿದೆ. 15 ವರ್ಷದ ರೋಹಿತ್ ಸಿಂಗ್ ಪ್ರಜ್ಞೆ ತಪ್ಪಿ ಬಿದ್ದಾಗ ಶಿಕ್ಷಕರು ಆತನಿಗೆ ಸಹಾಯ ಮಾಡಲು ಪ್ರಯತ್ನಿಸಿದರು. ಶಿಕ್ಷಕರು ಬಾಲಕನಿಗೆ ಆಸ್ಪತ್ರೆಗೆ ಕರೆದೊಯ್ದ ನಂತರ ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಘೋಷಿಸಿದರು.  

8ನೇ ತರಗತಿಯ ಬಾಲಕ ಹೃದಯಾಘಾತದಿಂದ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾವು ಕಡಿದು 27 ವರ್ಷದ ಯುವಕ ಮೃತ್ಯು..!

(ನ್ಯೂಸ್ ಕಡಬ)newskadaba.com ಧಾರವಾಡ, ಮೇ.22. ವಿಷಪೂರಿತ ಹಾವು ಕಡಿತದಿಂದಾಗಿ 27 ವರ್ಷದ ಯುವಕನೋರ್ವ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ. ಶ್ರಿರಾಮನಗರ ನಿವಾಸಿ ಚೇತನ್ (27) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ. ವಿಷಕಾರಿ ಹಾವೊಂದು ಶ್ರಿರಾಮನಗರದ ತುಳಜಾ ಭವಾನಿ ದೇವಸ್ಥಾನದ ಬಳಿ ಹೋಗುತ್ತಿತ್ತು. ಇದನ್ನು ಕಂಡ ಚೇತನ್ ಹಾವನ್ನು ಹಿಡಿಯುವ ಸಲುವಾಗಿ ಅದರ ಸಮೀಪ ಹೋಗಿದ್ದಾರೆ. ಈ ವೇಳೆ ಚೇತನ್ ಗೆ ಹಾವು ಕಚ್ಚಿದೆ. ಧಾರವಾಡ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹಾವು ಕಚ್ಚಿದ

ಹಾವು ಕಡಿದು 27 ವರ್ಷದ ಯುವಕ ಮೃತ್ಯು..! Read More »

ಕರ್ನಾಟಕ

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ

(ನ್ಯೂಸ್ ಕಡಬ)newskadaba.com ತುಮಕೂರು, ಮೇ.22. ಯುವಕನನ್ನು ಚೂರಿಯಿಂದ ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ತುಮಕೂರು ಹೊರವಲಯದಲ್ಲಿರುವ ಯಲ್ಲಾಪುರದ ಅಂಗಡಿಯೊಂದರಲ್ಲಿ ಬೆಳಕಿಗೆ ಬಂದಿದೆ. ಚಿಕ್ಕಮಗಳೂರು ಮೂಲದ ಜಾಕೀರ್ ಇಸ್ಮಾಯಿಲ್ (36) ಎಂಬವರು ಕೊಲೆಯಾಗಿದ್ದಾರೆ. ಜಾಕೀರ್ ಇಬ್ಬರು ಮಕ್ಕಳೊಂದಿಗೆ ಯಲ್ಲಾಪುರದ ಗಣೇಶ ದೇವಸ್ಥಾನದ ಬಳಿ ವಾಸವಿದ್ದರು.2 ತಿಂಗಳ ಹಿಂದೆ ನೂತನ ಟೈಲ್ಸ್‌ನ ಅಂಗಡಿಯನ್ನು ಯಲ್ಲಾಪುರದಲ್ಲಿ ತೆರೆದಿದ್ದನು. ಅಂಗಡಿಯಲ್ಲಿ ಕಾರ್ಯನಿರ್ವಹಿಸುವ ವೇಳೆ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ಬಗ್ಗೆ ವರದಿಯಾಗಿದೆ.

ಯುವಕನನ್ನು ಚೂರಿಯಿಂದ ಇರಿದು ಬರ್ಬರವಾಗಿ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮೇ.22. ಮಾಜಿ ಶಾಸಕ, ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ. ಉಡುಪಿ ಬಡಗುಪೇಟೆ ನಿವಾಸಿಯಾಗಿದ್ದ ಸಭಾಪತಿ ಅವರು ಜಿಲ್ಲೆಯ ರಾಜಕೀಯ ಕ್ಷೇತ್ರದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದರು. 1952 ರಲ್ಲಿ ಹುಟ್ಟಿದ ಅವರು, 1994 ರಲ್ಲಿ ಕರ್ನಾಟಕ ಕಾಂಗ್ರೆಸ್ ಪಕ್ಷದಿಂದ(ಕೆಸಿಪಿ) ಚುನಾಯಿತರಾಗಿ ವಿಧಾನಸಭೆ ಪ್ರವೇಶಿಸಿದ್ದರು. ಆ ಬಳಿಕ ಕೆಸಿಪಿ ಕಾಂಗ್ರೆಸ್ ನೊಂದಿಗೆ ವಿಲೀನಗೊಂಡಿತ್ತು. 1999ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದು ಶಾಸಕ ಆಗಿ ಮರು ಆಯ್ಕೆಯಾಗಿದ್ದರು. ಅನಂತರ ಜಿಲ್ಲೆಯ ರಾಜಕಾರಣದಲ್ಲಿ ಸಕ್ರಿಯರಾಗಿ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ‌ ನಿಧನ Read More »

ಕರಾವಳಿ

ಹುಟ್ಟುಹಬ್ಬದ ದಿನದಂದೇ ಹೃದಯಘಾತದಿಂದ ಬಾಲಕ ಮೃತ್ಯು.!

(ನ್ಯೂಸ್ ಕಡಬ)newskadaba.com ತೆಲಂಗಾಣ,ಮೇ.22 ಹುಟ್ಟುಹಬ್ಬದ ದಿನದಂದೇ ಹದಿನಾರು ವರ್ಷದ ಬಾಲಕನೊಬ್ಬ ಹೃದಯಘಾತದಿಂದ ಮೃತಪಟ್ಟಿದ್ದು, ಮಗನ ಹುಟ್ಟುಹಬ್ಬದ ಆಚರಣೆಯಲ್ಲಿ ಸಂಭ್ರಮಿಸಬೇಕಿದ್ದ ಕುಟುಂಬ ಸದಸ್ಯರು ಶೋಕದ ಮಡುವಿನಲ್ಲಿ ಮೃತದೇಹದ ಪಕ್ಕ ಕೇಕ್ ಕತ್ತರಿಸಿರುವ ಹೃದಯವಿದ್ರಾವಕ ಘಟನೆ ತೆಲಂಗಾಣದಲ್ಲಿ ನಡೆದಿದೆ. ಆಸೀಫಾಬಾದ್ ಜಿಲ್ಲೆಯ ಬಾಬಾಪುರದ ಸಚಿನ್ ಎಂಬ ಬಾಲಕ ಶುಕ್ರವಾರದಂದು ಹದಿನಾರನೇ ವಸಂತಕ್ಕೆ ಕಾಲಿಟ್ಟಿದ್ದು, ಇದರ ಅದ್ದೂರಿ ಆಚರಣೆಗಾಗಿ ಕುಟುಂಬ ಸದಸ್ಯರು ದೊಡ್ಡ ಕೇಕ್ ತಂದು ಸಕಲ ವ್ಯವಸ್ಥೆಯನ್ನು ಮಾಡಿಕೊಂಡಿದ್ದರು.ಇದರ ಮಧ್ಯೆ ಮನೆಯಿಂದ ಹೊರ ಹೋಗಿದ್ದ ಸಚಿನ್ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು,

ಹುಟ್ಟುಹಬ್ಬದ ದಿನದಂದೇ ಹೃದಯಘಾತದಿಂದ ಬಾಲಕ ಮೃತ್ಯು.! Read More »

ರಾಷ್ಟ್ರೀಯ ನ್ಯೂಸ್

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.!

(ನ್ಯೂಸ್ ಕಡಬ)newskadaba.com ನವದೆಹಲಿ,ಮೇ.20 ಕಾಲೇಜು ಆವರಣದಲ್ಲೇ ವಿದ್ಯಾರ್ಥಿಯೊಬ್ಬ ತನ್ನ ಸ್ನೇಹಿತೆಯನ್ನೇ ಅಪ್ಪಿ, ಆಕೆಗೇ ಗುಂಡಿಟ್ಟು ಹತ್ಯೆಗೈದು, ಬಳಿಕ ತಾನೂ ಗುಂಡುಹಾರಿಸಿಕೊಂಡು ಮೃತ ಪಟ್ಟಿ ರುವ ಘಟನೆ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ. ನೋಯ್ಡಾದ ಶಿವನಾಡರ್‌ ವಿ.ವಿ. ಆವರಣದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸಮಾಜ ಶಾಸ್ತ್ರ ವಿಭಾಗದ ವಿದ್ಯಾರ್ಥಿಯಾಗಿದ್ದ ಅನುಜ್‌ ಎಂಬಾತ ತನ್ನದೇ ತರಗತಿಯ ವಿದ್ಯಾ ರ್ಥಿನಿ ಜತೆಗೆ ಆಪ್ತವಾಗಿದ್ದ. ಯಾವುದೋ ವಿಚಾರಕ್ಕಾಗಿ ಮನಸ್ತಾಪವಾಗಿ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಆಕೆಯನ್ನು ಅಪ್ಪಿಕೊಂಡ

ಕಾಲೇಜು ಆವರಣದಲ್ಲಿ ಸ್ನೇಹಿತೆಯನ್ನು ಗುಂಡಿಟ್ಟು ಕೊಂದ ಸ್ನೇಹಿತ.! Read More »

ರಾಷ್ಟ್ರೀಯ ನ್ಯೂಸ್

ಪೆಟ್ರೋಲ್ ಬಂಕ್​ನಲ್ಲಿ ಅಗ್ನಿ ದುರಂತ➤ಯವತಿ ಮೃತ್ಯು

(ನ್ಯೂಸ್ ಕಡಬ)newskadaba.com ತುಮಕೂರು,ಮೇ.20 ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಬಡವನಹಳ್ಳಿಯ ಪೆಟ್ರೋಲ್ ಬಂಕ್​ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಯುವತಿ ಸಾವನ್ನಪ್ಪಿದ್ದಾರೆ. ಶಿರಾ ತಾಲ್ಲೂಕಿನ ಜವನಹಳ್ಳಿ ಗ್ರಾಮದ ನಿವಾಸಿ ಭವ್ಯಾಗೌಡ ಮೃತ ಯುವತಿ. ಭವ್ಯಾ ಗೌಡ ತಮ್ಮ ಸ್ಕೂಟರ್​ಗೆ ಬಡವನಹಳ್ಳಿಯ ಬಂಕ್​ನಲ್ಲಿ ಪೆಟ್ರೋಲ್ ಹಾಕಿಸಲು ಬಂದಿದ್ದರು. ಸ್ಕೂಟರ್ ಇಂಜಿನ್ ಬಿಸಿಯಾಗಿದ್ದರಿಂದ ಪೆಟ್ರೋಲ್ ಹಾಕಿಸುವ ವೇಳೆ ಬೆಂಕಿ ಹತ್ತಿಕೊಂಡಿದೆ. ಕೂಡಲೇ ಹತ್ತಿಕೊಂಡ ಬೆಂಕಿ ಭವ್ಯಾಗೌಡರನ್ನು ಆವರಿಸಿಕೊಂಡಿದೆ. ಕೂಡಲೇ ಬಂಕ್ ಸಿಬ್ಬಂದಿ ಬೆಂಕಿ ನಂದಿಸಿ ಭವ್ಯಾ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಆದ್ರೆ

ಪೆಟ್ರೋಲ್ ಬಂಕ್​ನಲ್ಲಿ ಅಗ್ನಿ ದುರಂತ➤ಯವತಿ ಮೃತ್ಯು Read More »

ಕರ್ನಾಟಕ

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ

(ನ್ಯೂಸ್ ಕಡಬ)newskadaba.com ಕೊಚ್ಚಿ, ಮೇ.20. ತನ್ನನ್ನು ಮದುವೆಯಾಗುವಂತೆ ವಿವಾಹಿತ ಮೇಕಪ್ ಆರ್ಟಿಸ್ಟ್‌ ವೊಬ್ಬಳನ್ನು‌ ವಿವಾಹಿತ ಪ್ರಿಯಕರ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಕೇರಳದ ಕಾಸರಗೋಡಿನ ಕನ್ಹಂಗಾಡ್ನಲ್ಲಿರುವ ಲಾಡ್ಜ್ ವೊಂದರಲ್ಲಿ ನಡೆದಿದೆ. ಉದ್ಮಾ ಪಂಚಾಯಿತಿಯ ಮುಕ್ಕುನೋಥ್ ನಿವಾಸಿ ಪಿ.ಬಿ. ದೇವಿಕಾ (34) ಕೊಲೆಯಾದ ಮಹಿಳೆ ಎಂದು ಗುರುತಿಸಲಾಗಿದೆ. ಹಂತಕ ಪ್ರಿಯಕರ ಸತೀಶ್ (36) ಕೊಲೆ ಮಾಡಿದ ಬಳಿಕ ಲಾಡ್ಜ್ ರೂಮ್ ಲಾಕ್ ಮಾಡಿ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ ಎಂದು ವರದಿ ತಿಳಿಸಿದೆ.  

ಮದುವೆಯಾಗುವಂತೆ ಒತ್ತಾಯಿಸಿದ ಮೇಕಪ್ ಆರ್ಟಿಸ್ಟ್ ಪ್ರಿಯಕರನಿಂದಲೇ ಕೊಲೆ Read More »

ರಾಷ್ಟ್ರೀಯ ನ್ಯೂಸ್

ತಂದೆ-ಮಗನ ಹೊಡೆದಾಟ..! ➤ ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ಳಾರೆ, ಮೇ.20. ತ೦ದೆ – ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಅಮರಮುಡ್ಡೂರು ಗ್ರಾಮದ ಕುಕ್ಕುಜಡ್ಕದಲ್ಲಿ ಕಳೆದ ಒಂದು ವಾರದ ಹಿಂದೆ ಘಟನೆ ನಡೆದಿದ್ದು ಕಿಟ್ಟು ಹಾಗೂ ಮಗ ಹರ್ಷಿತ್‌ ಹೊಡೆದಾಟ ನಡೆಸಿಕೊಂಡಿದ್ದರು. ಹಳೆಯ ದ್ವೇಷದ ಕಾರಣದಿಂದ ಕಿಟ್ಟುರವರ ಮೊದಲನೆ ಹೆ೦ಡತಿಯ ಮಗ ಹರ್ಷಿತ್‌ ಎಂಬಾತ ಮನೆಗೆ ಬ೦ದು ಅಡಿಕೆ ಮರದಸಲಾಕೆಯಿಂದ ತಂದೆಗೆ ಹೊಡೆದಿದ್ದ . ಗಾಯಗೊಂಡಿದ್ದ ಕಿಟ್ಟುರವರನ್ನು ಆಂಬ್ಯುಲೆನ್ಸ್‌ ಮೂಲಕ ಸುಳ್ಯ ಸರಕಾರಿ ಆಸ್ಪತ್ರೆಗೆ

ತಂದೆ-ಮಗನ ಹೊಡೆದಾಟ..! ➤ ಗಾಯಾಳು ತಂದೆ ಚಿಕಿತ್ಸೆ ಫಲಿಸದೆ ಮೃತ್ಯು Read More »

ಕರಾವಳಿ

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಕಡಬ, ಮೇ.20. ಕುಲ್ಕುಂದ ನಿವಾಸಿಯೊಬ್ಬರು ಕಡಬದ ಹಳೆ ಪ್ರವಾಸಿ ಮಂದಿರದ ಬಳಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಸುಬ್ರಹ್ಮಣ್ಯ ಗ್ರಾಮದ ಕುಲ್ಕುಂದ ಕಾಲೋನಿ ನಿವಾಸಿ ನರಸಿಂಹ(60)ಮೃತಪಟ್ಟವರರು ಎಂದು ಗುರುತಿಸಲಾಗಿದೆ. ಐನೆಕಿದು ಸೊಸೈಟಿಯಲ್ಲಿ ಗುಮಾಸ್ತರಾಗಿದ್ದ ಇವರು ಪಾರ್ಶ್ವವಾಯು ಪೀಡಿತರಾಗಿ ಮನೆಯಲ್ಲೇ ಇದ್ದರು. ಮೂರ್ಛೆ ರೋಗದ ಮಾತ್ರೆಯನ್ನು ಸೇವಿಸುತ್ತಿದ್ದರು. ಇದರ ಜೊತೆಗೆ ಕುಡಿತದ ಚಟವನ್ನು ಹೊಂದಿದ್ದರು ಎನ್ನಲಾಗಿದೆ.

ಕಡಬ: ಪ್ರವಾಸಿ ಮಂದಿರದ ಬಳಿ ಸುಬ್ರಹ್ಮಣ್ಯ ನಿವಾಸಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ
Scroll to Top