death

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..!

(ನ್ಯೂಸ್ ಕಡಬ)newskadaba.com ಬೆಂಗಳೂರು,ಮೇ.19 ಪ್ರಿಯಕರನೊಂದಿಗೆ ಸಂಚು ರೂಪಿಸಿ ಗಂಡನನ್ನು ಉಸಿಗಟ್ಟಿಸಿ ಕೊಂದು ಆತ್ಮಹತ್ಯೆಯ ಕಥೆ ಕಟ್ಟಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣಾ ಪೊಲೀಸರು ಬಂಧಿಸಿದ್ದಾರೆ‌.ಅನಿತಾ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆನಂದ್​ ಕೊಲೆಯಾದವರು.ಮರಣೋತ್ತರ ಪರೀಕ್ಷೆಯಲ್ಲಿ ಸತ್ಯ ಬಯಲು. ಎರಡು ತಿಂಗಳ ಹಿಂದೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯ ಮನೆಯೊಂದರ ಬಾತ್ ರೂಮಿನಲ್ಲಿ ಚಾಕುವಿನಿಂದ ಕೈ ಕೊಯ್ದುಕೊಂಡ ಸ್ಥಿತಿಯಲ್ಲಿ ಆನಂದ್ ಅವರ ಶವ ಪತ್ತೆಯಾಗಿತ್ತು. ಶವವನ್ನ ಪರಿಶೀಲಿಸಿದ್ದ ಕಾಡುಗೋಡಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮರಣೋತ್ತರ […]

ಪ್ರಿಯಕರನ ಸಹಾಯದಿಂದ ಪತಿಯನ್ನು ಉಸಿಗಟ್ಟಿಸಿ ಕೊಂದ ಪತ್ನಿ..! Read More »

ಕರ್ನಾಟಕ

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ವಿಜಯಪುರ,ಮೇ.19 ಕಟ್ಟಿಗೆ ಸಾಗಣೆ ಮಾಡುತ್ತಿದ್ದ ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿ, ಕ್ರೂಸರ್ ನಲ್ಲಿದ್ದ ಇಬ್ಬರು ಸಾವಿಗೀಡಾದ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಬಳಿ ನಡೆದಿದೆ. ಟ್ರ್ಯಾಕ್ಟರ್ ಡಿಕ್ಕಿ ಬಳಿಕ ಮರಕ್ಕೆ ಕ್ರೂಸರ್ ಡಿಕ್ಕಿಯಾಗಿದೆ. ಕ್ರೂಸರ್ ನಲ್ಲಿದ್ದ ರೇವಣಸಿದ್ದ ಜಾತಗೊಂಡ (14) ಅಮಸಿದ್ದ ಬಂಡೆ (27) ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಯಲ್ಲಮ್ಮ ದೇವರ ದರ್ಶನ ಮಾಡಿಕೊಂಡು ವಾಪಸ್ ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.ಹೊರ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಟ್ರ್ಯಾಕ್ಟರ್ ಹಾಗೂ ಕ್ರೂಸರ್ ಮಧ್ಯೆ ಮುಖಾಮುಖಿ ಡಿಕ್ಕಿ..!➤ಇಬ್ಬರು ಮೃತ್ಯು Read More »

ಕರ್ನಾಟಕ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್

(ನ್ಯೂಸ್ ಕಡಬ)newskadaba.com ಯಾದಗಿರಿ,ಮೇ.19 ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪ್ರತ್ಯೇಕವಾಗಿದ್ದ ಕುಟುಂಬ.ಮಕ್ಕಳ ಮದುವೆ ವಿಚಾರವಾಗಿ ಗಂಡ ಹೆಂಡತಿಯ ನಡುವೆ ಜಗಳ ಶುರುವಾಗಿ ಕೊಲೆಯಲ್ಲಿ ಅಂತ್ಯವಾಗಿದೆ.ದೋರನಹಳ್ಳಿ ಗ್ರಾಮದ ಲಕ್ಷ್ಮೀ (32) ಕೊಲೆಯಾದ ಮಹಿಳೆ. ಲಕ್ಷ್ಮೀ ಮತ್ತು ನಿಂಗಪ್ಪ ದಂಪತಿ ನಡುವೆ ಎರಡು ವರ್ಷದಿಂದ ಕೌಟುಂಬಿಕ ಕಲಹವಿದ್ದ ಹಿನ್ನೆಲೆಯಲ್ಲಿ ದಂಪತಿ ಬೇರೆ ಬೇರೆ ವಾಸವಾಗಿದ್ದರು. ಮಕ್ಕಳನ್ನು ಪತ್ನಿ ಮದುವೆ ಮಾಡಲು ಮುಂದಾಗಿದ್ದಾಳೆಂದು ತಿಳಿದ ಪತಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ ಎಂದು ಎಸ್‌ಪಿ ಡಾ.ಸಿ.ಬಿ.ವೇದಮೂರ್ತಿ ತಿಳಿಸಿದ್ದಾರೆ. ಸ್ಥಳಕ್ಕೆ ಶಹಾಪುರ ಪೊಲೀಸರು ಆಗಮಿಸಿ

ಪತ್ನಿಯ ಕತ್ತು ಹಿಸುಕಿ ಕೊಂದ ಪತಿ..!➤ಆರೋಪಿ ಆರೆಸ್ಟ್ Read More »

ಕರ್ನಾಟಕ

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.!

(ನ್ಯೂಸ್ ಕಡಬ)newskadaba.com ಮಂಡ್ಯ,ಮೇ.19 ಪಟಾಕಿ ಮದ್ದು ಸೇವಿಸಿ ಬಾಲಕ ಮೃತಪಟ್ಟ ಘಟನೆ ಹಲಗೂರು ಸಮೀಪದ ಧನಗೂರು ಗ್ರಾಮದಲ್ಲಿ ನಡೆದಿದೆ. ಮಹಮ್ಮದ್ ಅಯುಬ್ ಎಂಬುವವರ ಫಾರಂ ಹೌಸ್ ನಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿರುವ ಕಮಲನಾಥ್ ಅವರ ಪುತ್ರ ಸೂರಜ್ ಮೃತಪಟ್ಟ ಬಾಲಕ. ಜಮೀನಿನಲ್ಲಿ ಕೋತಿಗಳ ಹಾವಳಿ ತಡೆಯಲು ಪಟಾಕಿ ಸಿಡಿಸಲಾಗಿತ್ತು. ಪಟಾಕಿಯಲ್ಲಿ ಬಳಕೆ ಮಾಡಿದ್ದ ಮದ್ದು ತೋಟದಲ್ಲಿ ಇದ್ದು, ಆಟವಾಡಲು ಹೋಗಿದ್ದ ಬಾಲಕ ಮದ್ದು ಸೇವಿಸಿ ಅಸ್ವಸ್ಥಗೊಂಡಿದ್ದಾನೆ. ಕೂಡಲೇ ಆತನನ್ನು ಮಳವಳ್ಳಿ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ

ಪಟಾಕಿ ಮದ್ದು ಸೇವಿಸಿ ಬಾಲಕ ಮೃತ್ಯು.! Read More »

ಕರ್ನಾಟಕ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು

(ನ್ಯೂಸ್ ಕಡಬ)newskadaba.com ಬೆಳಗಾವಿ,ಮೇ.19 ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ನಡೆದಿದೆ.ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ.ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಂತಕರ ಶೋಧ ಕಾರ್ಯ ಮುಂದುವರಿಸಿದ್ದಾರೆ. ಮಾರೀಹಾಳ

ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನ ಬರ್ಬರ ಹತ್ಯೆ.!➤ ಪ್ರಕರಣ ದಾಖಲು Read More »

ಕರ್ನಾಟಕ

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು

(ನ್ಯೂಸ್ ಕಡಬ) newskadaba.com. ಸುಳ್ಯ, ಮೇ.18. ಜಿ.ಪಂ. ಮಾಜಿ ಸದಸ್ಯ, ಬಿಜೆಪಿ ಮುಖಂಡ ನವೀನ್ ಕುಮಾರ್ ರೈ ಮೇನಾಲ ರವರು ಆಕಸ್ಮಿಕವಾಗಿ  ಹೊಳೆ ನೀರಿಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತುದಿಯಡ್ಕ ಬಳಿ ಅವರು ಪಯಸ್ವಿನಿ ನದಿಗೆ ತನ್ನ ತೋಟಕ್ಕೆ ಬೇಕಾದ ನೀರು ಸರಬರಾಜು ಮಾಡಲು ಅಳವಡಿಸಿದ್ದ ಪಂಪ್‌ನ ಪುಟ್ ವಾಲ್ ರಿಪೇರಿಗೆಂದು ಇಳಿದಿದ್ದ ಸಂದರ್ಭ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಪಂಚಾಯತ್ ಸದಸ್ಯರಾಗಿದ್ದ ಸಂದರ್ಭದಲ್ಲಿ ತನ್ನ ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ನಡೆಸಿದ್ದ ನವೀನ್ ಕುಮಾರ್

ಸುಳ್ಯ; ಜಿ.ಪಂ. ಮಾಜಿ ಸದಸ್ಯ ನವೀನ್ ರೈ ಆಕಸ್ಮಿಕವಾಗಿ ಹೊಳೆಗೆ ಬಿದ್ದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿ ಹಾಗೂ ಮಕ್ಕಳ ಮೇಲೆ ಚಾಕು ಇರಿತ.!➤ ಬಳಿಕ ಪತಿ ನೇಣಿಗೆ ಶರಣು

(ನ್ಯೂಸ್ ಕಡಬ)newskadaba.com ದೆಹಲಿ,ಮೇ.18 ಮೆಟ್ರೋ ರೈಲು ನಿಗಮ (ಡಿಎಂಆರ್‌ಸಿ) ನ ಉದ್ಯೋಗಿಯಾಗಿದ್ದ 43 ವರ್ಷದ ವ್ಯಕ್ತಿಯೊಬ್ಬರು, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಇರಿದು, ತಾವೂ ನೇಣಿಗೆ ಶರಣಾಗಿರುವ ಘಟನೆ, ಶಹದಾರಾದಲ್ಲಿರುವ ಜ್ಯೋತಿ ಕಾಲೋನಿಯಲ್ಲಿ ನಡೆದಿದೆ.ಸುಶೀಲ್ ಕುಮಾರ್ ಎನ್ನುವವರು ನೇಣಿಗೆ ಶರಣಾಗಿರುವ ದುರ್ದೈವಿ. ಈ ಘಟನೆಯಲ್ಲಿ ಪತ್ನಿ ಅನುರಾಧಾ (40), ಪುತ್ರಿ ಅದಿತಿ (6) ಮೃತಪಟ್ಟಿದ್ದಾರೆ. ಅದೃಷ್ಟವಶಾತ್ 13 ವರ್ಷದ ಪುತ್ರ ಬದುಕುಳಿದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.ದೆಹಲಿಯ ಪೂರ್ವ ವಿನೋದ ನಗರ ಡಿಪೋದಲ್ಲಿ ಸುಶೀಲ್ ಕುಮಾರ್ ನಿರ್ವಹಣಾ ಮೇಲ್ವಿಚಾರಕರಾಗಿ

ಪತ್ನಿ ಹಾಗೂ ಮಕ್ಕಳ ಮೇಲೆ ಚಾಕು ಇರಿತ.!➤ ಬಳಿಕ ಪತಿ ನೇಣಿಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ಗುಂಡು ಹಾರಿಸಿ ಯುವಕನನ್ನು ಹತ್ಯೆಗೈದ ದುಷ್ಕರ್ಮಿಗಳು.!

(ನ್ಯೂಸ್ ಕಡಬ)newskadaba.com ದೆಹಲಿ,ಮೇ.18 ದೆಹಲಿಯ ಜಾಮಾ ಮಸೀದಿ ಬಳಿ ದುಷ್ಕರ್ಮಿಗಳು ಗುಂಡು ಹಾರಿಸಿ ಯುವಕನನ್ನು ಹತ್ಯೆ ಮಾಡಿದ್ದಾರೆ. ಮೃತಪಟ್ಟವರನ್ನು ಚಾವ್ರಿ ಬಜಾರ್ ನಿವಾಸಿ ಸಮೀರ್ ಎಂದು ಗುರುತಿಸಲಾಗಿದೆ. ಸಮೀರ್ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಿದ್ದರು, ಕೆಲವು ಕಿಡಿಗೇಡಿಗಳು ಹೋಟೆಲ್ ಮಾಲೀಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಜಗಳದ ವೇಳೆ ಸಮೀರ್ ಮಧ್ಯ ಪ್ರವೇಶಿಸಿದ್ದರು, ಆದರೆ ದುಷ್ಕರ್ಮಿಗಳು ಅಲ್ಲಿಯೇ ಗುಂಡು ಹಾರಿಸಲು ಶುರು ಮಾಡಿದ್ದರು. ದುಷ್ಕರ್ಮಿಗಳು ನಡೆಸಿದ ಗುಂಡಿನ ದಾಳಿಯಲ್ಲಿ ಸಮೀರ್ ತಲೆಗೆ ಗುಂಡು ತಗುಲಿತ್ತು. ಗಾಯಗೊಂಡಿದ್ದ ಸಮೀರ್​ನನ್ನು ಜಯಪ್ರಕಾಶ್

ಗುಂಡು ಹಾರಿಸಿ ಯುವಕನನ್ನು ಹತ್ಯೆಗೈದ ದುಷ್ಕರ್ಮಿಗಳು.! Read More »

ರಾಷ್ಟ್ರೀಯ ನ್ಯೂಸ್

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18 ನಿಶ್ಚಿತಾರ್ಥದ ಹಿಂದಿನ ದಿನ ತನ್ನ ಸಂಗಾತಿಯನ್ನು ವ್ಯಕ್ತಿಯೊಬ್ಬ ಗುಂಡು ಹಾರಿಸಿ ಹತ್ಯೆ ಮಾಡಿದ್ದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರೋ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.ಪೊಲೀಸರ ಪ್ರಕಾರ ದಸ್ತೋಯ್ ಗ್ರಾಮದ ಆರೋಪಿ ಸೋನು ಪ್ರಜಾಪತಿ ಡೈರಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಆತ ಫೂಲ್‌ಗರ್ಹಿಯಲ್ಲಿರುವ ನೀತು ಪ್ರಜಾಪತಿ ಮನೆಗೆ ನುಗ್ಗಿ ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಈ ವೇಳೆ ಸಂತ್ರಸ್ತೆಯ ಕುಟುಂಬವು ಅವನನ್ನು ಹಿಡಿಯಲು ಪ್ರಯತ್ನಿಸಿತು. ಆದರೆ ಅವನು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದನು. ನಂತರ ಅವನು ಫ್ಯಾನ್‌ಗೆ ನೇಣು

ನಿಶ್ಚಿತಾರ್ಥದ ಹಿಂದಿನ ದಿನ ಗುಂಡು ಹಾರಿಸಿ ಪ್ರೇಯಸಿಯನ್ನು ಹತ್ಯೆಗೈದ ಪ್ರಿಯಕರ.! Read More »

ರಾಷ್ಟ್ರೀಯ ನ್ಯೂಸ್

ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ➤ವಿಷ ಸೇವಿಸಿ ವರ ಮೃತ್ಯು, ವಧು ಸ್ಥಿತಿ ಗಂಭೀರ

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ,ಮೇ.18  ಮಧ್ಯಪ್ರದೇಶದ ಇಂದೋರ್ ನಗರದಲ್ಲಿ ತಮ್ಮ ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ ನಡೆದಿದೆ. ಈ ವೇಳೆ, ಇಬ್ಬರೂ ವಿಷ ಸೇವಿಸಿದ್ದು, 21 ವರ್ಷದ ವರ ಸಾವನ್ನಪ್ಪಿದರೆ, ವಧು ಸ್ಥಿತಿ ಗಂಭೀರವಾಗಿದೆ. ವಿಷ ಸೇವಿಸಿದ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ, ದುರಾದೃಷ್ಟವಶಾತ್‌ ಆಸ್ಪತ್ರೆಯಲ್ಲಿ ವರ ಮೃತಪಟ್ಟಿದ್ದಾನೆ. ವಧು ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಹಾಯಕ ಸಬ್ ಇನ್ಸ್‌ಪೆಕ್ಟರ್ (ಎಎಸ್‌ಐ) ರಂಜಾನ್ ಖಾನ್, ಕನಾಡಿಯಾ ಪ್ರದೇಶದ ಆರ್ಯ

ವಿವಾಹ ಸಮಾರಂಭದ ವೇಳೆ ವಧು-ವರನ ನಡುವೆ ವಾಗ್ವಾದ➤ವಿಷ ಸೇವಿಸಿ ವರ ಮೃತ್ಯು, ವಧು ಸ್ಥಿತಿ ಗಂಭೀರ Read More »

ರಾಷ್ಟ್ರೀಯ ನ್ಯೂಸ್
Scroll to Top