death

ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತ್ನಿಯನ್ನು ತಡೆದ ಪತಿ..! ➤ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)Newskadaba.com ಹೊಸದಿಲ್ಲಿ,ಏ.29 ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತಿ ತಡೆದದ್ದಕ್ಕೆ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಧ್ಯಪ್ರದೇಶದ ಇಂಧೋರ್‌ನಲ್ಲಿ ಬೆಳಕಿಗೆ ಬಂದಿದೆ.ಇಂಧೋರ್‌ನ ಸ್ಕೀಂ ನಂ. 51 ಪ್ರದೇಶದಲ್ಲಿ ಈ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಸಬ್‌ಇನ್‌ಸ್ಪೆಕ್ಟರ್ ಉಮಾಶಂಕರ್ ಯಾದವ್ ಹೇಳಿದ್ದಾರೆ. “ಮಹಿಳೆ ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ತಡೆದ ಕಾರಣಕ್ಕೆ ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಪತಿ ಹೇಳಿಕೆ ನೀಡಿದ್ದಾರೆ.ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಎಲ್ಲ ಆಯಾಮಗಳಿಂದ ತನಿಖೆ ನಡೆಯುತ್ತಿದೆ” ಎಂದು ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.      

ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತ್ನಿಯನ್ನು ತಡೆದ ಪತಿ..! ➤ಫ್ಯಾನ್‌ಗೆ ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಮ್ಯಾನ್ ಹೋಲ್ ಗೆ ಬಿದ್ದು ಬಾಲಕಿ ಮೃತ್ಯು   ➤ಜಿಎಚ್‌ಎಂಸಿ ಸಿಬ್ಬಂದಿಯ ವಿರುದ್ಧ ಸ್ಥಳೀಯರ ಆಕ್ರೋಶ.!

(ನ್ಯೂಸ್ ಕಡಬ)Newskadaba.com ಸಿಕಂದರಾಬಾದ್,ಏ.29 ಜಿಎಚ್‌ಎಂಸಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಬಾಲಕಿ ಮೌನಿಕಾ ಮ್ಯಾನ್‌ಹೋಲ್‌ಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಸಿಕಂದರಾಬಾದ್ ವ್ಯಾಪ್ತಿಯ ಕಲಾಸಿಗುಡದಲ್ಲಿ ನಡೆದಿದೆ. ಮೌನಿಕಾ ಸ್ಥಳೀಯ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದಾಳೆ.ಮುಂಜಾನೆ ಹಾಲಿನ ಪ್ಯಾಕೆಟ್‌ಗಾಗಿ ಹೊರಗೆ ಹೋದ ಮೌನಿಕಾ ನಾಪತ್ತೆಯಾಗಿದ್ದಾಳೆ. ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದು, ಇದನ್ನು ಗಮನಿಸದೆ ಬಾಲಕಿ ಗುಂಡಿಗೆ ಬಿದ್ದಿದ್ದಾಳೆ.ಮೌನಿಕಾ ನಾಪತ್ತೆಯಾಗುತ್ತಿದ್ದಂತೆ ಹುಡುಕಾಟ ಆರಂಭಿಸಿದರು. ಡಿಆರ್‌ಎಫ್ ಸಿಬ್ಬಂದಿ ಮೌನಿಕಾ ಮೃತದೇಹವನ್ನು ಪಾರ್ಕ್‌ಲೈನ್‌ನಲ್ಲಿ ಪತ್ತೆ ಮಾಡಿದ್ದಾರೆ. ಮಗುವಿನ ಸಾವಿಗೆ ಕಾರಣ ಜಿಎಚ್‌ಎಂಸಿ ಸಿಬ್ಬಂದಿ ನಿರ್ಲಕ್ಷ್ಯವೇ ಕಾರಣ

ಮ್ಯಾನ್ ಹೋಲ್ ಗೆ ಬಿದ್ದು ಬಾಲಕಿ ಮೃತ್ಯು   ➤ಜಿಎಚ್‌ಎಂಸಿ ಸಿಬ್ಬಂದಿಯ ವಿರುದ್ಧ ಸ್ಥಳೀಯರ ಆಕ್ರೋಶ.! Read More »

ರಾಷ್ಟ್ರೀಯ ನ್ಯೂಸ್

ಹಾಡಹಗಲೇ ನಡುರಸ್ತೆಯಲ್ಲಿ ಬಿಜೆಪಿ ಮುಖಂಡನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..!

(ನ್ಯೂಸ್ ಕಡಬ)Newskadaba.com ಚೆನ್ನೈ,ಏ.29 ತಮಿಳುನಾಡಿನ ಬಿಜೆಪಿ ಮುಖಂಡನೊಬ್ನನನ್ನು ನಡುರಸ್ತೆಯಲ್ಲೇ ಅಪರಿಚಿತ ಗ್ಯಾಂಗ್​ವೊಂದು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಕೊಂದಿದ್ದಾರೆ. ಈ ಘಟನೆ ಚೆನ್ನೈ ಹೊರವಲಯದ ಪೂನಮಲ್ಲೆ ಬಳಿಯ ನಸರತ್​ಪೇಟೈ ಬಳಿ ನಡೆದಿದೆ.ಕೊಲೆಯಾದವರನ್ನು ಪಿಪಿಜಿ ಶಂಕರ್ (46) ಪೆರಂಬದೂರಿನ ವರಪುರಂನವರು. ಅವರು ವರಪುರಂ ಪಂಚಾಯತ್ ಕೌನ್ಸಿಲ್ ಅಧ್ಯಕ್ಷರಾಗಿ ಮತ್ತು ಬಿಜೆಪಿಯ ಎಸ್ಸಿ ಮತ್ತು ಎಸ್ಟಿ ವಿಭಾಗದ ರಾಜ್ಯ ಖಜಾಂಚಿಯಾಗಿ ಸೇವೆ ಸಲ್ಲಿಸುತ್ತಿದ್ದರು ಎಂದು ತಿಳಿದುಬಂದಿದೆ. ಈತನ ಮೇಲೂ ಹಲವು ಕ್ರಿಮಿನಲ್ ಪ್ರಕರಣಗಳಿದ್ದವು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.    

ಹಾಡಹಗಲೇ ನಡುರಸ್ತೆಯಲ್ಲಿ ಬಿಜೆಪಿ ಮುಖಂಡನನ್ನು ಅಟ್ಟಾಡಿಸಿ ಕೊಂದ ದುಷ್ಕರ್ಮಿಗಳು..! Read More »

ರಾಷ್ಟ್ರೀಯ ನ್ಯೂಸ್

ಬಿಸಿಲಿಗೆ ಅಸ್ವಸ್ಥಗೊಂಡು ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಳ್ಳಾರಿ, ಏ.29. ಮತದಾನ ಜಾಗೃತಿ ಜಾಥಾದಲ್ಲಿ ಭಾಗವಹಿಸಿದ್ದ ಜಿಲ್ಲಾ ಸಾಂಕ್ರಾಮಿಕ ರೋಗ ನಿಯಂತ್ರಣಾ ವಿಭಾಗದ ಡಿ ಗ್ರೂ‍ಪ್‌ ಸಿಬ್ಬಂದಿ ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ಸಿರುಗುಪ್ಪದ ನಿವಾಸಿ ರತ್ನ(31) ಪ್ರತಿನಿತ್ಯ ಬಳ್ಳಾರಿಗೆ ಬಂದು ಹೋಗುತ್ತಿದ್ದರು. ಜಿಲ್ಲಾಡಳಿತ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ನಗರದಲ್ಲಿ ಏರ್ಪಡಿಸಿದ್ದ ಜಾಥಾದಲ್ಲಿ ಭಾಗವಹಿಸಿದ್ದರು. ಜಾಥಾದಿಂದ ಹಿಂತಿರುಗಿದ ಬಳಿಕ ಅವರಿಗೆ ಅಪಸ್ಮಾರ ಕಾಣಿಸಿಕೊಂಡಿತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.  

ಬಿಸಿಲಿಗೆ ಅಸ್ವಸ್ಥಗೊಂಡು ಯುವತಿ ಮೃತ್ಯು Read More »

ಕರ್ನಾಟಕ

ಬೆಳ್ತಂಗಡಿ: 9ನೇ ತರಗತಿಯ ಬಾಲಕ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಚಿತ್ರದುರ್ಗದಲ್ಲಿ 9ನೇ ತರಗತಿ‌ ಓದುತ್ತಿದ್ದ ಬಾಲಕ ಶಿವಪ್ರಸಾದ್(15) ಆತ್ಮಹತ್ಯೆ ಮಾಡಿಕೊಂಡ ಬಾಲಕ ಎಂದು ಗುರುತಿಸಲಾಗಿದೆ. ‌ಶಿವಪ್ರಸಾದ್ ಶಾಲೆಗೆ ರಜೆ ಹಿನ್ನೆಲೆ ದೊಡ್ಡಮ್ಮ ಮಂಜುಳ ಎಂಬವರ ಬೆಳ್ತಂಗಡಿಯ ಮನೆಗೆ ಬಂದಿದ್ದರು. ಮಂಜುಳಾ ಅವರು ಬೆಳ್ತಂಗಡಿಯ ಶಿಕ್ಷಣ ಇಲಾಖೆಯ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಅವರು ತಾಲೂಕು ಪಂಚಾಯತ್ ಪಕ್ಕದ ಸರಕಾರಿ ಕ್ವಾಟ್ರಸ್ ನಲ್ಲಿ ವಾಸವಿದ್ದರು. ಇಂದು‌ ಮಂಜುಳ ಕೆಲಸಕ್ಕೆ ಹೋಗಿದ್ದರು. ಅವರ

ಬೆಳ್ತಂಗಡಿ: 9ನೇ ತರಗತಿಯ ಬಾಲಕ ಆತ್ಮಹತ್ಯೆ Read More »

ಕರಾವಳಿ

ತಾವೇ ಸಾಕಿದ ಗೂಳಿಯ ದಾಳಿಗೆ ಪತಿ ಮೃತ್ಯು, ಪತ್ನಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)Newskadaba.com ಕೊಟ್ಟಾಯಂ,ಏ.29 ಗೂಳಿಯನ್ನು ಮೇಯಿಸಲು ಹೊಲಕ್ಕೆ ಹೋದಾಗ ತನ್ನದೇ ಗೂಳಿಯ ದಾಳಿಯಿಂದ ವ್ಯಕ್ತಿಯೊಬ್ಬ ದುರಂತ ಸಾವಿಗೀಡಾಗಿರುವ ಆತಂಕಕಾರಿ ಘಟನೆ ಕೇರಳದ ಕೊಟ್ಟಾಯಂ ಜಿಲ್ಲೆಯ ಪೊಂಕುನ್ನಂ ಚಮಂಪತಲ್​ನಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ರೆಜಿ ಜಾರ್ಜ್​ (60) ಎಂದು ಗುರುತಿಸಲಾಗಿದೆ.ಆತನ ಪತ್ನಿ ಡಾರ್ಲಿ (52) ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಪಲಾದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.    

ತಾವೇ ಸಾಕಿದ ಗೂಳಿಯ ದಾಳಿಗೆ ಪತಿ ಮೃತ್ಯು, ಪತ್ನಿಗೆ ಗಂಭೀರ ಗಾಯ..! Read More »

ರಾಷ್ಟ್ರೀಯ ನ್ಯೂಸ್

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.29 ಕಾಲೇಜಿನಲ್ಲಿ ಎರಡು ಗುಂಪುಗಳ ನಡುವೆ ನಡೆದ ಗಲಾಟೆಯಲ್ಲಿ ಓರ್ವ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.ಬೆಂಗಳೂರಿನ ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಾ ರೇವಾ ಕಾಲೇಜಿನಲ್ಲಿ ಕಾಲೇಜು ಫೆಸ್ಟ್ ವೇಳೆ ಗಲಾಟೆ ನಡೆದಿದ್ದು, ಈ ವೇಳೆ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗುಜರಾತ್ ಮೂಲದ ಭಾಸ್ಕರ್ ಜೆಟ್ಟಿ (22) ಮೃತ ವಿದ್ಯಾರ್ಥಿ ರೇವಾ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಓದುತ್ತಿದ್ದು, ಕಾಲೇಜು ಪೆಸ್ಟ್ ವೇಳೆ ಎರಡು ಗುಂಪುಗಳ

ಮೆಕ್ಯಾನಿಕಲ್ ವಿದ್ಯಾರ್ಥಿಯ ಬರ್ಬರ ಹತ್ಯೆ..!  ➤ಆರೋಪಿಗಳ ವಿರುದ್ಧ  ಪ್ರಕರಣ ದಾಖಲು..! Read More »

ಕರ್ನಾಟಕ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಉಡುಪಿ, ಏ.29. ಉಡುಪಿ ಮುಖ್ಯ ರಸ್ತೆಯ ಬೈಲೂರು ಕೆಳ ಪೇಟೆಯಲ್ಲಿ ಎರಡು ಬೈಕ್’ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು, ಮೂರು ಮಂದಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಯರ್ಲಪ್ಪಡಿ ಕಾಂತರಗೋಳಿ ನಿವಾಸಿ ರಮೇಶ ಆಚಾರ್ಯ ಮೃತಪಟ್ಟ ದುರ್ದೇವಿಯಾಗಿದ್ದಾರೆ. ರಮೇಶ ಆಚಾರ್ಯ ಪತ್ನಿ ಶಕುಂತಲಾ ಆಚಾರ್ಯ ಹಾಗೂ ಜಾರ್ಕಳ ನಿವಾಸಿಗಳಾದ ಸುಧೀರ್ ಹಾಗೂ ಡೇವಿಡ್ ಗಂಭೀರ ಗಾಯಗೊಂಡು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಮೇಶ ಆಚಾರ್ಯ ದಂಪತಿಗಳು ಬೈಕ್ ನಲ್ಲಿ ರಸ್ತೆ ದಾಟುತ್ತಿದ್ದಾಗ ಉಡುಪಿಯಿಂದ

ಉಡುಪಿ: ಬೈಕ್ ಗಳ ನಡುವೆ ಅಪಘಾತ ➤ ಮೂವರಿಗೆ ಗಂಭೀರ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.29. ಖಾಸಗಿ ಕಾಲೇಜೊಂದರಲ್ಲಿ ನೀಟ್ ಓದಲು ಬಂದಿದ್ದ ವಿದ್ಯಾರ್ಥಿನಿಯೊಬ್ಬಳು  ಕಡಿಮೆ ಅಂಕ ಬಂದಿದ್ದರಿಂದ ನೊಂದು ಆತ್ಮಹತ್ಯೆಗೆ ಮಾಡಿಕೊಂಡ ನಡೆದಿದೆ.  ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ನಿವಾಸಿಯಾದ  ಉಮೆ ಉಜ್ಮಾ.ಎಸ್  (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ  ಎಂದು ಗುರುತಿಸಲಾಗಿದೆ. ಬೆಳ್ತಂಗಡಿಯ ಕುವೆಟ್ಟು ಸಮೀಪದ ಖಾಸಗಿ ಕಾಲೇಜಿನಲ್ಲಿ ಮೆಡಿಕಲ್ ಕೋರ್ಸ್‌ ಪ್ರವೇಶ ಪಡೆಯಲು ಲಾಂಗ್ ಟರ್ಮ್ ನೀಟ್ ಓದುತ್ತಿದ್ದು, ಇಲ್ಲಿಯ ಕಾಲೇಜು ಹಾಸ್ಟೆಲ್ ನಲ್ಲಿ ವಾಸವಾಗಿದ್ದಳು. ಏ.28ರಂದು ಉಮೆ ತನ್ನ ಕೊಠಡಿಯಿಂದ ಹೊರಗೆ  ಹೋಗಿ ಕಟ್ಟಡದ ಮೇಲಿನಿಂದ ಜಿಗಿದಿದ್ದಾಳೆ.

ಬೆಳ್ತಂಗಡಿ: ಕ್ಷುಲ್ಲಕ ಕಾರಣಕ್ಕೆ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ

(ನ್ಯೂಸ್ ಕಡಬ)Newskadaba.com ದೆಹಲಿ,ಏ.28 ಪತ್ನಿಯನ್ನು ಕೊಂದು ತುಂಡರಿಸಿದ ಆರೋಪದ ಮೇಲೆ ವ್ಯಕ್ತಿಯನ್ನು ಇಲ್ಲಿನ ಮನೇಸರ್‌ನಿಂದ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾನೇಸರ್‌ನ ಹಳ್ಳಿಯೊಂದರಲ್ಲಿ ಮಹಿಳೆಯ ಅರ್ಧ ಸುಟ್ಟ ಮುಂಡ ಪತ್ತೆಯಾಗಿದ್ದು, ಆಕೆಯನ್ನು ಬೇರೆಡೆ ಕೊಲೆ ಮಾಡಲಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ.ಮಹಿಳೆಯ ತಲೆ ಕಾಣೆಯಾಗಿದ್ದು, ಆಕೆಯ ಕೈಗಳನ್ನು ಕತ್ತರಿಸಲಾಗಿದೆ. ಆರೋಪಿ ಜಿತೇಂದರ್‌ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ಹಂಚಿಕೊಳ್ಳಲಾಗುವುದು ಎಂದು ಗುರುಗ್ರಾಮ್ ಪೊಲೀಸ್ ಆಯುಕ್ತ ಕಲಾ ರಾಮಚಂದ್ರನ್ ಹೇಳಿದ್ದಾರೆ.ಆರೋಪಿ ಜಿತೇಂದರ್ ಗಾಂಧಿನಗರದ ನಿವಾಸಿಯಾಗಿದ್ದು, ಮನೇಸರ್ ಪ್ರದೇಶದಲ್ಲಿ ಬಾಡಿಗೆಗೆ ವಾಸಿಸುತ್ತಿದ್ದರು.

ಪತ್ನಿಯನ್ನು ಕೊಂದು ದೇಹವನ್ನು ತುಂಡರಿಸಿ ಬೆಂಕಿ ಹಚ್ಚಿದ ಪತಿ.!  ➤ಆರೋಪಿ ಬಂಧನ Read More »

ರಾಷ್ಟ್ರೀಯ ನ್ಯೂಸ್
Scroll to Top