death

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.28. ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ವಗ್ಗ ಸಮೀಪದ ಬಾಂಬಿಲ ಎಂಬಲ್ಲಿ ಕಾರು ಡಿಕ್ಕಿ ಹೊಡೆದು ಬೈಕ್ ಸವಾರನೊರ್ವ ಮೃತಪಟ್ಟು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಂದು ನಡೆದಿದೆ. ಅಮ್ಟಾಡಿ ನಿವಾಸಿ ಸಂದೀಪ್ ಲೋಬೊ ಮೃತಪಟ್ಟ ಯುವಕನಾಗಿದ್ದು, ಈತನ ಜೊತೆ ಕೆಲಸ ಮಾಡುವ ನೆರೆಯ ಮನೆಯ ಆಕಾಶ್ ಎಂಬಾತನಿಗೆ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಎ‌.ಜೆ.ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಇವರಿಬ್ಬರು ವೆಲ್ಡಿಂಗ್ ಕೆಲಸ ಮಾಡುವ ಕಾರ್ಮಿಕರಾಗಿದ್ದು, ಬಿ.ಸಿ ರೋಡಿನಿಂದ […]

ಬಂಟ್ವಾಳ: ಕಾರು ಢಿಕ್ಕಿ – ಬೈಕ್ ಸವಾರ ಮೃತ್ಯು ➤ ಸಹಸವಾರ ಗಂಭೀರ Read More »

ಕರಾವಳಿ

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.27 ಪರೀಕ್ಷೆಯಲ್ಲಿ ಫೇಲ್ ಆಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಸುದ್ದಿ ತಿಳಿದು ಫೇಲ್ ಆಗಿದ್ದ ಆಕೆಯ ಗೆಳತಿ ಕೂಡ ವಿಷ ಸೇವಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಕಳಸ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯು ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಎಸ್.ಕೆ.ಮೇಗಲ್ ಗ್ರಾಮದ ಸ್ಪರ್ಶ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ವಿಷಯ ತಿಳಿದ ಆಕೆಯ ಗೆಳತಿ ಜಾಂಬಳೆ ಗ್ರಾಮದ ದೀಕ್ಷಿತಾ ಕೂಡ ವಿಷ ಸೇವಿಸಿದ್ದಾಳೆ. ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಸ್ಪರ್ಶ

ಪರೀಕ್ಷೆಯಲ್ಲಿ ಫೇಲ್ ಆದ ಕಾರಣ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.! ➤ ಸುದ್ದಿ ತಿಳಿದು ವಿಷ ಸೇವಿಸಿದ ಆಕೆಯ ಗೆಳತಿ.! Read More »

ಕರ್ನಾಟಕ

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ

(ನ್ಯೂಸ್ ಕಡಬ)newskadaba.com  ಬ್ರಹ್ಮಾವರ, ಏ.27. ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಯಡ್ತಾಡಿ ಗ್ರಾಮದ ಮಹಾತ್ಮಾ ಗಾಂಧಿ ಪ್ರೌಢ ಶಾಲೆಯ ಹತ್ತಿರ ನಡೆದಿದೆ ಎಂದು ತಿಳಿದುಬಂದಿದೆ. ಮೃತರನ್ನು ಹೈಕಾಡಿಯ ಮುಹಮ್ಮದ್ ಸಫ್ರಾನ್ ಎ.ಕೆ.(27) ಎಂದು ಗುರುತಿಸಲಾಗಿದೆ. ಸ್ಕೂಟರ್ ಸವಾರ ಭುಜಂಗ ಶೆಟ್ಟಿ (68) ಎಂಬವರು ತೀವ್ರವಾಗಿ ಗಾಯಗೊಂಡು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  

ಬ್ರಹ್ಮಾವರ: ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ➤ ಓರ್ವ ಮೃತ್ಯು, ಮತ್ತೋರ್ವ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.27 ಬೆಂಗಳೂರಿನ ಜೆಸಿ ರಸ್ತೆ ಭರತ್ ಸರ್ಕಲ್ ಬಳಿ ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತಪಟ್ಟಿದ್ದಾನೆ. ಜೆಪಿ ರಸ್ತೆ ಭರತ್ ಸರ್ಕಲ್ ಸಮೀಪದ ಕಮರ್ಷಿಯಲ್ ಬಿಲ್ಡಿಂಗ್ ನಲ್ಲಿ ಘಟನೆ ನಡೆದಿದೆ.ಸಂಜಯ್ ಆಟೋಮೊಬೈಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಉತ್ತರ ಪ್ರದೇಶದ ವಿಕಾಸ್(23) ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಆರು ತಿಂಗಳ ಹಿಂದೆ ಬೆಂಗಳೂರಿಗೆ ಕೆಲಸಕ್ಕೆ ಬಂದಿದ್ದ ವಿಕಾಸ್ ಸಾವಿನ ವಿಚಾರವನ್ನು ಪೊಲೀಸರು ಪೋಷಕರಿಗೆ ತಿಳಿಸಿದ್ದಾರೆ. ಮೃತ ದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸ್ಥಳಾಂತರ ಮಾಡಲಾಗಿದೆ. ಕಲಾಸಿಪಾಳ್ಯ

ಲಿಫ್ಟ್ ನಲ್ಲಿ ಸಿಲುಕಿ ಯುವಕ ಮೃತ್ಯು..! Read More »

ಕರ್ನಾಟಕ

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ..! ➤ ನವಜೋಡಿ  ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)Newskadaba.com,ಏ.26 ನಿಶ್ಚಿತಾರ್ಥ ನೆರವೇರಿ ಮದುವೆಗೆ ಇನ್ನು 15 ದಿನ ಬಾಕಿ ಇರುವಾಗಲೇ ಅಪಘಾತದಲ್ಲಿ ನವಜೋಡಿಯೊಂದು ದುರಂತ ಸಾವಿಗೀಡಾಗಿರುವ ಘಟನೆ ಆಂಧ್ರಪ್ರದೇಶದ ರಾಜಮಂಡ್ರಿಯಲ್ಲಿ ನಡೆದಿದೆ.ಮೃತರನ್ನು ಮನೆಪಲ್ಲಿ ರಾಜ್​ಕುಮಾರ್​ (25) ಮತ್ತು ಮಲಿರೆಡ್ಡಿ ದುರ್ಗಾಭವಾನಿ (18) ಎಂದು ಗುರುತಿಸಲಾಗಿದೆ. ರಾಜಮಂಡ್ರಿಯ ಕೊವ್ವೂರು ಬಳಿ ಹಿಂದಿನಿಂದ ಬಂದ ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ನವಜೋಡಿ ದುರಂತ ಸಾವಿಗೀಡಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹಗಳನ್ನು ರಾಜಮಂಡ್ರಿ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.  

ಲಾರಿಯೊಂದು ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ..! ➤ ನವಜೋಡಿ  ಸ್ಥಳದಲ್ಲೇ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.! 

(ನ್ಯೂಸ್ ಕಡಬ)Newskadaba.com ವಿಜಯಪುರ,ಏ.26 ವಿವಾಹಿತೆ ಮಹಿಳೆಯೊಬ್ಬರು ನೇಣಿಗೆ ಶರಣಾಗುವ ಮುನ್ನ ಮೊಬೈಲ್ ವಿಡಿಯೋ ಆನ್ ಮಾಡಿ ಲೈವ್ ಸೊಸೈಡ್ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಉಪ್ಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಸುಹಾನ್ ಸೋನಾರ್ (21) ಆತ್ಮಹತ್ಯೆಗೆ ಶರಣಾದ ವಿವಾಹಿತೆ ಮಹಿಳೆ. ಈಕೆ ನೇಣಿಗೆ ಶರಣಾಗುವ ಮುನ್ನ ಪ್ರಿಯಕರನ ಬ್ಲ್ಯಾಕ್ಮೇಲ್​ಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದಾಳೆ. ಹೌದು ನನ್ನೊಂದಿಗಿರುವ ಫೋಟೋ ನಿನ್ನ ಗಂಡನಿಗೆ ತೋರಿಸುತ್ತೇನೆ ಎಂದು ಪ್ರಿಯಕರ ಅಲ್ತಾಫ್ ಸುಲೆಮಾನ್ ಬ್ಲ್ಯಾಕ್ಮೇಲ್ ಮಾಡಿದ್ದಾನೆ. ಮರ್ಯಾದೆಗೆ ಹೆದರಿ ಸುಹಾನಾ ಲೈವ್ ವಿಡಿಯೋ

ಪ್ರಿಯಕರನ ಬ್ಲ್ಯಾಕ್‌ಮೇಲ್‌ಗೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.!  Read More »

ಕರ್ನಾಟಕ
Death, deadbody, Waterfall

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ

(ನ್ಯೂಸ್ ಕಡಬ)newskadaba.com ಕೊಪ್ಪಳ, ಏ.26. ಕುಷ್ಟಗಿ ತಾಲೂಕಿನ ಶಾಡಲಗೇರಿ ಗ್ರಾಮದಲ್ಲಿ ಸಿಡಿಲಾರ್ಭಟಕ್ಕೆ 65 ವರ್ಷದ ಮಹಿಳೆ ಸೇರಿದಂತೆ 6 ಕುರಿಗಳು ಬಲಿಯಾಗಿರುವ ಘಟನೆ ವರದಿಯಾಗಿದೆ. ಸಿಡಿಲಿನ ಆಘಾತಕ್ಕೆ ಮೂವರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಭಾರಿ ಬಿರುಗಾಳಿಯೊಂದಿಗೆ ಸಿಡಿಲಿನ ಆರ್ಭಟ ಶುರುವಾಗಿದ್ದು, ಸಿಡಿಲಿನ ಆಘಾತಕ್ಕೆ ಹೊಲದಲ್ಲಿದ್ದ ಶಾಂತಮ್ಮ ದುರಗಪ್ಪ ಕಮತರ (65) ಸ್ಥಳದಲ್ಲೇ ಮೃತರಾಗಿದ್ದಾರೆ. ಪಕೀರಸಾಬ್ ನೈನಾಪೂರ, ರಮಜಾನಬೀ ನೈನಾಪೂರ, ಶಿವು ಆರಿ (28) ಗಾಯಗೊಂಡಿದ್ದು ಹನುಮನಾಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಡಿಲಾರ್ಭಟಕ್ಕೆ ಮಹಿಳೆ ಸೇರಿದಂತೆ 6 ಕುರಿಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಿಯಾದ್ ನಲ್ಲಿ ಕಾರು ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.25. ರಿಯಾದ್ ನಲ್ಲಿ ನಡೆದ ಕಾರು ಅಪಘಾತದಲ್ಲಿ ಕೇರಳ ಮಲಪ್ಪುರಂ ನಿವಾಸಿ ತಾಯಿ ಮಗು ಮೃತಪಟ್ಟ ಘಟನೆ ನಡೆದಿದೆ. ಮಲಪ್ಪುರಂ ಕೊಡಕ್ಕಾಡ್ ಮೊಹ್ಮದ್ ರಪೀ ಅವರ ಪತ್ನಿ ಮೊಹ್ಸಿನಾ ಹಾಗೂ ಮಲಪ್ಪುರಂ ಮುಂಡಿಯಂಕಾವ್ ನ ಇಶಾನ್ ಮತ್ತು ಫಾತಿಮಾ ರೂಬಿ ದಂಪತಿಯ ಪುತ್ರಿ ಸೈಷಾ ಮೃತರು ಎಂದು ಗುರುತಿಸಲಾಗಿದೆ.  

ರಿಯಾದ್ ನಲ್ಲಿ ಕಾರು ಅಪಘಾತ ➤ ಮಗು ಸೇರಿ ಇಬ್ಬರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮೊಬೈಲ್‌ ಫೋನ್ ಬಳಸುತ್ತಿರುವ ವೇಳೆ ಮೊಬೈಲ್‌ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಕೇರಳದ ತ್ರಿಶೂರ್‌ನಲ್ಲಿ ನಡೆದಿದೆ. ಆದಿತ್ಯಶ್ರೀ ಮೊಬೈಲ್‌ ಸ್ಟೋಟಕ್ಕೆ ಮೃತಳಾದ ಬಾಲಕಿ ಎಂದು ತಿಳಿದುಬಂದಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದು, ಸಾವಿನ ಕುರಿತು ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.        

ಮೊಬೈಲ್ ಫೋನ್ ಬಳಸುತ್ತಿರುವ ವೇಳೆ ಸ್ಟೋಟಗೊಂಡು ಎಂಟು ವರ್ಷದ ಬಾಲಕಿ ಮೃತ್ಯು.! Read More »

ಕರ್ನಾಟಕ

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.!

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.25 ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಡಿ. ಬಿ. ಇನಾಮಾದಾರ್ ನಿಧನ ಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಬೆಳಗಾವಿ ಜಿಲ್ಲೆಯ ಕಾಂಗ್ರೆಸ್ ನಾಯಕನನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ದಾನಪ್ಪಗೌಡ ಬಸವನಗೌಡ ಇನಾಮಾದಾರ್ (73) ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶ್ವಾಸಕೋಶ ಮತ್ತು ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.    

ಹಿರಿಯ ಕಾಂಗ್ರೆಸ್ ನಾಯಕ ಡಿ. ಬಿ. ಇನಾಮಾದಾರ್ ನಿಧನ.! Read More »

ಕರ್ನಾಟಕ
Scroll to Top