death

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು(54) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆ ಯಲ್ಲಿ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ತಲುಪಿ ಮುಂದಿನ ಕ್ರಮ ತೆಗೆದು ಕೊಂಡಿದ್ದಾರೆ. ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದೆ. ಕೃತ್ಯಕ್ಕೆ ಕಾರಣ ತಿಳಿದು ಬಂದಿಲ್ಲ.  

ಕಾಸರಗೋಡು: ವಾಸ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಏ.13. KSRTC ಬಸ್ ಬೈಕ್ ಗೆ ಢಿಕ್ಕಿಯಾದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ನಡೆದಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್ (30) ಮೃತಪಟ್ಟಿದ್ದಾನೆ. ಖಾಸಗಿ ಕಂಪೆನಿಯೊಂದರಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಬಡಕುಟುಂಬದ ಯುವಕನಾಗಿದ್ದು, ವೃತ್ತಿ ಮುಗಿಸಿ ಮನೆಗೆ ವಾಪಾಸು ಬೈಕಿನಲ್ಲಿ ಹೋಗುವ ವೇಳೆ ಅಪಘಾತ ಸಂಭವಿಸಿದೆ. ಬಿ.ಸಿರೋಡು ಕಡೆಯಿಂದ ಧರ್ಮಸ್ಥಳ ಹೆದ್ದಾರಿಯಲ್ಲಿ ಶ್ರೇಯಸ್ ಸರಪಾಡಿ ಮನೆಗೆ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಧರ್ಮಸ್ಥಳ

ಬಂಟ್ವಾಳ: KSRTC ಬಸ್ ಮತ್ತು ಬೈಕ್ ಢಿಕ್ಕಿ ➤ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಏ.13. ಕಣಜದ ಹುಳುಗಳ ದಾಳಿಯಿಂದ ಪೈಂಟಿಂಗ್ ಕಾರ್ಮಿಕರೋರ್ವರು ಮೃತಪಟ್ಟ ದಾರುಣ ಘಟನೆ ಚಿತ್ತಾರಿಕಾಲ್ ನಲ್ಲಿ ನಡೆದಿದೆ. ಚಿತ್ತಾರಿಕಾಲ್ ಕಂಬಲ್ಲೂರಿನ ಬಿಟೋ ಜೋಸೆಫ್ (35) ಮೃತಪಟ್ಟವರು. ಸಂಬಂಧಿಕ ರೋರ್ವರ ಮನೆಯಲ್ಲಿ ಈ ಘಟನೆ ನಡೆದಿದೆ. ಪೈಂಟಿಂಗ್ ಕೆಲಸದ ಸಂದರ್ಭದಲ್ಲಿ ಜೋಸೆ ಫ್ ರವರ ಮೇಲೆ ಕಣಜದ ಹುಳುಗಳು ದಾಳಿ ನಡೆಸಿದ್ದು, ಮನೆಯವರು ಹಾಗೂ ಪರಿಸರವಾಸಿಗಳು ಪರಿಯಾರಂ ನ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ.

ಕಾಸರಗೋಡು: ಕಣಜದ ಹುಳು ದಾಳಿ ➤ ಕಾರ್ಮಿಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಪುತ್ತೂರು, ಏ.12. ವಿವಾಹಿತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಟ್ಟಂಪಾಡಿ ಗುಮ್ಮಟಗದ್ದೆ ಎಂಬಲ್ಲಿ ವರದಿಯಾಗಿದೆ. ಗುಮ್ಮಟಗದ್ದೆಯ ನಿವಾಸಿ ಬಾಲಕೃಷ್ಣ ಎಂಬವರ ಪುತ್ರಿ ಪುಣ್ಯಶ್ರೀ(32)ಮೃತ ಯುವತಿ. ಪುಣ್ಯಶ್ರೀಯನ್ನು ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ಉದ್ದದಪಳಿಕೆ ನಿವಾಸಿ ಪುರುಶೋತ್ತಮ ಎಂಬವರಿಗೆ ವಿವಾಹ ಮಾಡಿಕೊಡಲಾಗಿತ್ತು. ಪುಣ್ಯಶ್ರೀ ಕಳೆದ ಕೆಲ ದಿನಗಳ ಹಿಂದೆ ಬೆಳ್ತಂಗಡಿಯ ಪತಿಯ ಮನೆಯಿಂದ ತನ್ನ ತವರು ಮನೆಯಾದ ಗುಮ್ಮಟಗದ್ದೆಗೆ ಆಗಮಿಸಿದ್ದರು ಎನ್ನಲಾಗಿದೆ. ಎ.10ರಂದು ತನ್ನ ಪತಿಗೆ ವೀಡಿಯೋ ಕಾಲ್ ಮಾಡಿ ಮಾತನಾಡಿದ್ದರು. ಅಲ್ಲದೆ

ಪುತ್ತೂರು: ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com. ಸೌದಿ ಅರೇಬಿಯಾ, ಏ.12. ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ ನಾಸರ್ ಮತ್ತು ಖದೀಜಾ ದಂಪತಿಯ ಪುತ್ರ ಅಬ್ದುಲ್ ರಹಮಾನ್ (9) ಮೃತರು.  ಅಬ್ದುಲ್ರಹ್ಮಾನ್ ತನ್ನ ತಾಯಿ, ಸಹೋದರ ಮತ್ತು ಸಹೋದರಿಯೊಂದಿಗೆ ಉಮ್ರಾ ಮಾಡಲು ತೆರಳಿದ್ದರು. ಬಾಲಕನ ತಂದೆ ಮಕ್ಕಾದಲ್ಲಿದ್ದರು. ಉಮ್ರಾ ಮುಗಿಸಿ ತನ್ನ ಕೊಠಡಿಯಲ್ಲಿ

ಉಮ್ರಾ ಯಾತ್ರೆಗೆ ತೆರಳಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಮಂಗಳೂರಿನ ಯುವತಿ ಥಾಯ್ಲೆಂಡ್ ನಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಏ.12. ಥಾಯ್ಲೆಂಡ್‌ ನಲ್ಲಿ ಅವಘಡದಲ್ಲಿ ಮಂಗಳೂರು ಬೇಕಿಂಗ್ ಕಂಪನಿ ರೆಸ್ಟೋರಂಟ್ ಒಡತಿ ಮೃತಪಟ್ಟ ಬಗ್ಗೆ ವರದಿಯಾಗಿದೆ. ಮಂಗಳೂರು ಗೋರಿಗುಡ್ಡೆ ಹಿಲ್ ಸ್ಟೀಕ್ ಅಪಾರ್ಟ್‌ಮೆಂಟ್ ನಲ್ಲಿ ವಾಸವಾಗಿದ್ದ ಓಷಿನ್ ಪಿರೇರಾ (28) ಮೃತಪಟ್ಟ ಯುವತಿ ಎಂದು ತಿಳಿದುಬಂದಿದೆ. ಇವರು ಎರಡು ದಿನಗಳ ಹಿಂದೆಯಷ್ಟೇ ಥಾಯ್ಲೆಂಡ್‌ಗೆ ತೆರಳಿದ್ದರು ಎನ್ನಲಾಗಿದೆ. ಅಲ್ಲಿ ಸ್ಕ್ಯೂಬಾ ಡೈವಿಂಗ್ ಮಾಡುವಾಗ ಅವಘಡದಲ್ಲಿ ಮೃತಪಟ್ಟಿದ್ದಾರೆ.

ಮಂಗಳೂರಿನ ಯುವತಿ ಥಾಯ್ಲೆಂಡ್ ನಲ್ಲಿ ಮೃತ್ಯು Read More »

ಕರಾವಳಿ

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಮುಂಬೈ, ಏ.11. ಪೋಷಕರು ಮೊಬೈಲ್ ಕಸಿದು ಕೊಂಡರೆಂಬ ಕ್ಷುಲಕ ಕಾರಣಕ್ಕೆ 15 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬಯಿಯ ಪಶ್ಚಿಮ ಉಪನಗರದ ಅಲ್ವಾನಿ ಪ್ರದೇಶದಲ್ಲಿ ನಡೆದಿದೆ. ಬಾಲಕಿ ಹೆಚ್ಚು ಮೊಬೈಲ್‌ ಬಳಸುತ್ತಿದ್ದು, ಇದರಿಂದ ಬಾಲಕಿಗೆ ಪೋಷಕರು ಬುದ್ದಿ ಮಾತನ್ನು ಹೇಳಿದ್ದರು. ಆದರೂ, ಬಾಲಕಿ ಇದನ್ನು ಕೇಳದ ಕಾರಣ ಪೋಷಕರು ಬಾಲಕಿಯಿಂದ ಮೊಬೈಲ್‌ ಕಸಿದುಕೊಂಡಿದ್ದಾರೆ. ಇದೇ ಕಾರಣದಿಂದ ಬಾಲಕಿ 7 ಅಂತಸ್ತಿನ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮೊಬೈಲ್ ಕಸಿದುಕೊಂಡ ಪೋಷಕರು..! ➤ 7ನೇ ಅಂತಸ್ತಿನಿಂದ ಜಿಗಿದು ಬಾಲಕಿ ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಏ.11. ಬೈಕ್ ಢಿಕ್ಕಿ ಹೊಡೆದು ಓರ್ವ ಮೃತಪಟ್ಟು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಗುರುವಾಯನಕೆರೆ ಶಕ್ತಿನಗರದ ಸರ್ಕಲ್ ಬಳಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಶಕ್ತಿನಗರ ಸರ್ಕಲ್ ಬಳಿ ರಾತ್ರಿ ಬೈಕ್ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿದ್ದ ಸವಾರರ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ. ಇವರ ಗುರುತು ಪತ್ತೆಗಾಗಿ ಬೆಳ್ತಂಗಡಿ ಸಂಚಾರಿ ಪೊಲೀಸರು ಪ್ರಯತ್ನಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ

ಬೆಳ್ತಂಗಡಿ: ರಸ್ತೆ ಅಪಘಾತ..! ➤ ಓರ್ವ ಸವಾರ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು

(ನ್ಯೂಸ್ ಕಡಬ)newskadaba.com ಅಸ್ಸಾಂ, ಏ.11. ವಿಷಕಾರಿ ಅಣಬೆ ಸೇವಿಸಿ ಎರಡು ವರ್ಷದ ಮಗು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ಈ ದುರ್ಘಟನೆ ಮೆರಪಾನಿ ಪ್ರದೇಶದಲ್ಲಿ ನಡೆದಿದ್ದು, ಒಟ್ಟು ಐದು ಕುಟುಂಬಗಳ ಸದಸ್ಯರು ಏಪ್ರಿಲ್ 2 ರಂದು ಅಣಬೆಯನ್ನು ಸೇವಿಸಿದ್ದರು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ವಿಷಕಾರಿ ಅಣಬೆ ಸೇವಿಸಿ ಒಂದೇ ಕುಟುಂಬದ ಮೂವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.10. ಯುವಕನೋರ್ವನನ್ನು ಬಿಯರ್ ಬಾಟಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಉತ್ತರಹಳ್ಳಿಯ ಬಾರ್ ವೊಂದರಲ್ಲಿ ನಡೆದಿದೆ. ಸುಬ್ರಹ್ಮಣ್ಯಪುರದ ರೌಡಿಶೀಟರ್ ಶಿವರಾಜ್ ನನ್ನು ಹತ್ಯೆ ಮಾಡಲಾಗಿದೆ. ಬಿಯರ್ ಬಾಟಲಿನಿಂದ ತಲೆಗೆ ಹೊಡೆದು ಮತ್ತೊಬ್ಬ ರೌಡಿಶೀಟರ್ ಮಂಜ ಕೊಲೆ ಮಾಡಿದ್ದಾನೆ.

ಬಿಯರ್ ಬಾಟಲಿ & ಕಲ್ಲಿನಿಂದ ಹೊಡೆದು ಯುವಕನ ಕೊಲೆ Read More »

ಕರ್ನಾಟಕ
Scroll to Top