death

Death, deadbody, Waterfall

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು

(ನ್ಯೂಸ್ ಕಡಬ)newskadaba.com ಹುಬ್ಬಳ್ಳಿ, ಏ.07. ನಿರ್ಮಾಣ ಹಂತದ ಮನೆಯೊಂದರ ಗೇಟ್ ಬಿದ್ದು 7 ವರ್ಷದ ಬಾಲಕ ಮೃತಪಟ್ಟ ಘಟನೆ ನಗರದ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮನೆಯೊಂದರ ಸಮೀಪ ಬಾಲಕ ಆಟವಾಡುತ್ತಿದ್ದಾಗ ಗೇಟ್ ಬಾಲಕನ ಮೈಮೇಲೆ ಬಿದ್ದಿದೆ. ಗಾಯಾಳು ಬಾಲಕನನ್ನು ಆಸ್ಪತ್ರೆಗೆ ದಾಖಲಿಸುವ ಮುನ್ನವೇ ಆತ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ.  

ಬಾಲಕನ ಮೈಮೇಲೆ ಬಿದ್ದ ಮನೆ ಗೇಟ್..! ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ)newskadaba.com ನೆಲ್ಯಾಡಿ, ಏ.07. ಹೊಟ್ಟೆ ನೋವಿನಿಂದ ಬಳಲಿ ಆಸ್ಪತ್ರೆಗೆ ದಾಖಲಾದ ನೆರೆಕರೆಯ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು, ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ.  

ನೆಲ್ಯಾಡಿ: ಹೊಟ್ಟೆ ನೋವಿನಿಂದ ಬಳಲಿ ಯುವತಿಯರಿಬ್ಬರು ಮೃತ್ಯು ➤ ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು

(ನ್ಯೂಸ್ ಕಡಬ)newskadaba.com ಸೌದಿ ಅರೇಬಿಯಾ, ಏ.07. ಉಮ್ರಾಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾಗಿ ಮಕ್ಕಳು ಸೇರಿದಂತೆ ಐವರು ಭಾರತೀಯರು ಮೃತಪಟ್ಡಿರುವ ಬಗ್ಗೆ ವರದಿಯಾಗಿದೆ. ಸೌದಿ ಅರೇಬಿಯಾದ ರಿಯಾದ್ ನಿಂದ ಉಮ್ರಾ ಯಾತ್ರೆಗೆ ಹೊರಟಿದ್ದ ಭಾರತೀಯ ಮೂಲದ ತಂಡ ಪ್ರಯಾಣಿಸುತ್ತಿದ್ದ ಕಾರು ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎನ್ನಲಾಗಿದೆ.  

ಉಮ್ರಾ ಯಾತ್ರಾರ್ಥಿಗಳು ತೆರಳುತ್ತಿದ್ದ ಕಾರು ಅಪಘಾತ ➤ ಐವರು ಭಾರತೀಯರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಘಾಝಿಯಾಬಾದ್, ಏ.07. ಮೂತ್ರಪಿಂಡದ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯ ವೇಳೆ 30 ವರ್ಷದ ಯುವಕ ಮೃತಪಟ್ಟ ಹಿನ್ನೆಲೆಯಲ್ಲಿ ಶಾಲಿಮಾರ್ ಗಾರ್ಡನ್ ಪ್ರದೇಶದಲ್ಲಿನ ಸ್ಪರ್ಶ್ ಆಸ್ಪತ್ರೆಯನ್ನು ಅಧಿಕಾರಿಗಳು ಸೀಲ್ ಮಾಡಿದ್ದು ವೈದ್ಯರನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಆಸ್ಪತ್ರೆ ನಡೆಸುತ್ತಿರುವ ದಾಖಲೆಗಳು ಹಾಗೂ ವೈದ್ಯರ ವೈದ್ಯಕೀಯ ಪದವಿಯ ಸಿಂಧುತ್ವವನ್ನು ಪರಿಶೀಲಿಸಲು ನಾಲ್ವರು ವೈದ್ಯರ ಸಮಿತಿಯನ್ನು ರಚಿಸಲಾಗಿದೆ.  

ಕಿಡ್ನಿಯಲ್ಲಿನ ಕಲ್ಲನ್ನು ತೆಗೆಯುವ ಬದಲು ಕಿಡ್ನಿಯನ್ನೇ ತಗೆದ ವೈದ್ಯರು ➤ ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ)newskadaba.com ಕುಂದಾಪುರ, ಏ.06. ರಸ್ತೆ ದಾಟುತಿದ್ದ ಪಾದಚಾರಿಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಅವರು ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟ ಘಟನೆ ಕುಂದಾಪುರ ತಾಲೂಕಿನ ವಡೇರಹೋಬಲಿ ಗ್ರಾಮದ ನೆಹರೂ ಮೈದಾನದ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ ದಾಟುತಿದ್ದ ಅವರಿಗೆ ಕುಂದಾಪುರದಿಂದ ಉಡುಪಿಯತ್ತ ವೇಗವಾಗಿ ಸಾಗುತಿದ್ದ ಬೈಕ್ ಡಿಕ್ಕಿ ಹೊಡೆದಿತ್ತು. ಇದರಿಂದ ರಸ್ತೆಗೆ ಎಸೆಯಲ್ಪಟ್ಟು ತಲೆ, ಹೊಟ್ಟೆಗೆ ಗಂಭೀರವಾಗಿ ಗಾಯಗೊಂಡ ಹೊನ್ನೂರು ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮೃತಪಟ್ಟಿದ್ದರು ಎನ್ನಲಾಗಿದೆ.

ಕುಂದಾಪುರ: ರಸ್ತೆ ದಾಟುತ್ತಿದ್ದ ಪಾದಚಾರಿಗೆ ಬೈಕ್ ಢಿಕ್ಕಿ ➤ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ನಡೆದ ದುರಂತ..!!   ➤  ಮರೈನ್ ಕಮಾಂಡೋ ಮೃತ್ಯು

(ನ್ಯೂಸ್ ಕಡಬ)Newskadaba.com ಪಶ್ಚಿಮ ಬಂಗಾಳ,ಏ.06 ಪಶ್ಚಿಮ ಬಂಗಾಳದಲ್ಲಿ ಭಾರತೀಯ ನೌಕಾಪಡೆಯ ವಿಶೇಷ ಪಡೆಗಳ ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ಮರೈನ್ ಕಮಾಂಡೋ ಒಬ್ಬರು ಪ್ರಾಣ ಕಳೆದುಕೊಂಡಿದ್ದಾರೆ. ಮೃತನನ್ನು ಆಂಧ್ರಪ್ರದೇಶದ ನಿವಾಸಿ  ಚಂದ್ರಕ ಗೋವಿಂದ್(31) ಎಂದು ಗುರುತಿಸಲಾಗಿದೆ. ಅವರ ಪ್ಯಾರಾಚೂಟ್ ತೆರೆಯದ ಕಾರಣ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.              

ಪ್ಯಾರಾ-ಜಂಪ್ ವ್ಯಾಯಾಮದ ವೇಳೆ ನಡೆದ ದುರಂತ..!!   ➤  ಮರೈನ್ ಕಮಾಂಡೋ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

* ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ   ➤ಹೊಟ್ಟೆಯಲ್ಲೇ ಮಗು ಮೃತ್ಯು.!!

(ನ್ಯೂಸ್ ಕಡಬ)Newskadaba.com ಗದಗ,ಏ.06   ಹೆರಿಗೆ ವೇಳೆ ವೈದ್ಯರ ನಿರ್ಲಕ್ಷದಿಂದ ಮಗು ಮೃತ್ಯು.  ಜಿಮ್ಸ್ ಆಸ್ಪತ್ರೆಯಲ್ಲಿ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಹೊಡೆದಿದ್ದು, ಮಗು ಹೊಟ್ಟೆಯಲ್ಲೇ ಸಾವಿಗೀಡಾಗಿದೆ ಎಂದೂ ಹೇಳಲಾಗಿದೆ. ಗದಗ ಜಿಮ್ಸ್​ ಆಸ್ಪತ್ರೆಯಲ್ಲಿ ಈ ಪ್ರಕರಣ ನಡೆದಿದೆ. ಹೆರಿಗೆಗೆ ಎಂದು ಬಂದಿದ್ದ ಮಹಿಳೆಯನ್ನು ಹೆರಿಗೆಗೆ ಒಳಪಡಿಸದೆ ವಿಳಂಬ ಮಾಡಲಾಗಿದೆ ಎನ್ನಲಾಗಿದೆ. ಮಾತ್ರವಲ್ಲ, ಹೆರಿಗೆ ಮಾಡಿಸದೆ ಗರ್ಭಿಣಿಯ ಕಪಾಳಕ್ಕೆ ವೈದ್ಯೆ ಬಾರಿಸಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.   .              

* ಹೆರಿಗೆ ವೇಳೆ ವೈದ್ಯರ ನಿರ್ಲಕ್ಷ   ➤ಹೊಟ್ಟೆಯಲ್ಲೇ ಮಗು ಮೃತ್ಯು.!! Read More »

ಕರ್ನಾಟಕ

10 ವರ್ಷಗಳ ಅನೈತಿಕ ಸಂಬಂಧ   ➤ಕೊಲೆಯಲ್ಲಿ ಅಂತ್ಯ.!!

(ನ್ಯೂಸ್ ಕಡಬ)Newskadaba.com ಚಿಕ್ಕಮಗಳೂರು,ಏ.06  ಆಕೆ ಮದುವೆಯಾಗಿದ್ದರೂ ಗಂಡನಿಂದ ದೂರವಾಗಿ ಇನ್ನೊಬ್ಬನ ಜತೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದಳು. ಸಂಬಂಧ ಅದೆಷ್ಟೇ ಗಟ್ಟಿಯಾಗಿದ್ರೂ ಅನೈತಿಕವಾಗಿದ್ರೆ,‌ ಅಂತ್ಯವಾಗೋದು ದುರಂತದಲ್ಲೇ ಎಂಬುದಕ್ಕೆ ಈ ಘಟನೆ ತಾಜಾ ಉದಾಹರಣೆಯಾಗಿದೆ. ಆನೇಕಲ್ ತಾಲೂಕಿನ ಹೆಬ್ಬಗೋಡಿ ವ್ಯಾಪ್ತಿಯ ಸಿಂಗೇನ ಅಗ್ರಹಾರ ನಿರ್ಜನ ಪ್ರದೇಶದಲ್ಲಿ ಮಹಿಳೆಯ ಸುಟ್ಟ ದೇಹವೊಂದು ಕೆಲ ದಿನಗಳ ಹಿಂದೆ ಪತ್ತೆಯಾಗಿತ್ತು.‌ ಮಹಿಳೆಯೊಬ್ಬಳ ಹುಡುಕಾಟದಲ್ಲಿದ್ದ ಹೆಬ್ಬಗೋಡಿ ಪೊಲೀಸರು ಈ ದೇಹ ಅವಳದ್ದೇನಾ ಅಂತ ಅವಳ ಸಂಬಂಧಿಕರಿಗೆ ಕರೆದುಕೊಂಡು ಬಂದಾಗ ಪೊಲೀಸರಿಗೆ ಇದ್ದ ಶಂಕೆ ನಿಜವಾಯಿತು.  

10 ವರ್ಷಗಳ ಅನೈತಿಕ ಸಂಬಂಧ   ➤ಕೊಲೆಯಲ್ಲಿ ಅಂತ್ಯ.!! Read More »

ಕರ್ನಾಟಕ

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಚೆನ್ನೈ, ಏ.06. ದಾರುಣ ಘಟನೆಯೊಂದರಲ್ಲಿ ಐವರು ಚೆನ್ನೈನ ದೇವಸ್ಥಾನದ ಬಳಿಯ ಸಾರ್ವಜನಿಕ ಕಲ್ಯಾಣಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ನಂಗನಲ್ಲೂರಿನ ಧರ್ಮಲಿಂಗೇಶ್ವರ ದೇವಸ್ಥಾನದ ಭಕ್ತರು ಪಂಗುನಿ ಆಚರಣೆಯ ಅಂಗವಾಗಿ ಧಾರ್ಮಿಕ ಕ್ರಿಯೆಗಳಿಗಾಗಿ ತೊಟ್ಟಿಯಲ್ಲಿ ಜಮಾಯಿಸಿದಾಗ ಬೆಳಿಗ್ಗೆ 10.30 ರ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ‘ಮೊದಲಿಗೆ ಒಬ್ಬರು ಜಾರಿಬಿದ್ದರು, ಮತ್ತು ನಂತರ ಅವರನ್ನು ರಕ್ಷಿಸಲು ಪ್ರಯತ್ನಿಸಿದವರೂ ನೀರಿನಲ್ಲಿ ಮುಳುಗಿದರು. ಪೊಲೀಸರ ಪ್ರಕಾರ, ಎಲ್ಲಾ ಐದು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ವಿಷಯದ ಬಗ್ಗೆ

ಪುಣ್ಯಸ್ನಾನಕ್ಕೆ ಕಲ್ಯಾಣಿಗಿಳಿದ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!  

(ನ್ಯೂಸ್ ಕಡಬ)Newskadaba.com ಬೆಂಗಳೂರು,ಏ.05 ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ(80) ಅವರು ಅನಾರೋಗ್ಯದಿಂದ ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಸ್ರೋದ ಈ ಮಾಜಿ ರಾಕೆಟ್ ವಿಜ್ಞಾನಿ, ಸಿ.ಆರ್. ಸತ್ಯ. ಇಸ್ರೋದ ರಾಕೆಟ್ ಮೈಲುಗಲ್ಲು ಇಡುವ ಆರಂಭದಲ್ಲಿ ಬೆನ್ನೆಲುಬಾಗಿದ್ದ ಇವರಿಗೆ ಅಣು ತಜ್ಞ ಡಾ. ರಾಜರಾಮಣ್ಣ ಅವರು ಮಾರ್ಗದರ್ಶಕರಾಗಿದ್ದರು. 50 ವರ್ಷಗಳಿಗೂ ಹೆಚ್ಚು ಕಾಲ ಬಾಹ್ಯಾಕಾಶ ರಂಗದಲ್ಲಿ ಅಮೋಘ ಸೇವೆ ಸಲ್ಲಿಸಿದ್ದರು.        

ಅನಾರೋಗ್ಯದಿಂದ ಇಸ್ರೋದ ಮಾಜಿ ರಾಕೆಟ್ ವಿಜ್ಞಾನಿ ಸಿ.ಆರ್.ಸತ್ಯ ವಿಧಿವಶ..!!   Read More »

ಕರ್ನಾಟಕ
Scroll to Top