death

30 ಕೋಟಿ ಆಸ್ತಿ ಇದ್ದರೂ ಹೆತ್ತವರಿಗೆ ಊಟ ಹಾಕದ ಮಗ   ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ..!

(ನ್ಯೂಸ್ ಕಡಬ)Newskadaba.com ಬೆಂಗಳೂರು, ಏ.01 ಮಗನ ಬಳಿ 30 ಕೋಟಿ ರೂ. ಆಸ್ತಿ ಇದೆ. ಆದರೆ ನಮಗೆ ಎರಡು ಹೊತ್ತು ಊಟ ಕೂಡ ಸರಿಯಾಗಿ ಕೊಡುತ್ತಿಲ್ಲ, ಎಂದು ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ ಮಾಡಿಕೊಂಡ ಅಮಾನವೀಯ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದೆ.   ಚಕ್ರಿ ದಾದಿ ಬಳಿಯ ಬಾಂದ್ರಿಯ ಶಿವ ಕಾಲೋನಿ ನಿವಾಸಿಗಳಾದ ಜಗದೀಶ್ ಚಂದ್ರ ಆರ್ಯಾ (78) ಮತ್ತು ಭಾಗ್ಲಿ ದೇವಿ (77) ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು.ಮಾತ್ರೆ ನುಂಗಿ ಆತ್ಮಹತ್ಯೆ ಮಾಡಿಕೊಳ್ಳುವ […]

30 ಕೋಟಿ ಆಸ್ತಿ ಇದ್ದರೂ ಹೆತ್ತವರಿಗೆ ಊಟ ಹಾಕದ ಮಗ   ➤ ಡೆತ್ ನೋಟ್ ಬರೆದಿಟ್ಟು ದಂಪತಿ ಆತ್ಮಹತ್ಯೆ..! Read More »

ರಾಷ್ಟ್ರೀಯ ನ್ಯೂಸ್

ಆಕಸ್ಮಿಕ ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ)newskadaba.com ಕಾರ್ಕಳ, ಏ.01. ಮುಂಬೈಯಲ್ಲಿ ಹೋಟೆಲ್ ಉದ್ಯಮಿಯಾಗಿದ್ದ ಮುಂಡ್ಕೂರು ಗ್ರಾಮದ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿ ನಿವಾಸಿ ರಮೇಶ್ ಸಪಳಿಗ (68) ವರ್ಷ ಎಂಬವರ ಮೃತದೇಹ ಮುಂಡ್ಕೂರು ಶಾಂಭವಿ ಹೊಳೆಯಲ್ಲಿ ಪತ್ತೆಯಾಗಿದೆ ಎಂದು ವರದಿ ತಿಳಿಸಿದೆ. ವಿಪರೀತ ಮಧ್ಯಪಾನದ ಚಟ ಹೊಂದಿದ್ದ ರಮೇಶ್ ಸಪಳಿಗ ಕೆಲವು ಸಮಯದ ಹಿಂದೆ ಸಹೋದರ ಅನಾರೋಗ್ಯದ ಪೀಡಿತರಾದ ಹಿನ್ನಲೆ ಊರಿಗೆ ಬಂದವರು ವಾಪಸು ಹೋಗಿರಲಿಲ್ಲ. ಮಧ್ಯಪಾನ ಮಾಡಲೆಂದು ಮನೆಯಿಂದ ಹೋದವರು ವಾಪಸ್ ಮನೆಗೆ ಬಂದಿರಲಿಲ್ಲ ಎನ್ನಲಾಗಿದೆ.  

ಆಕಸ್ಮಿಕ ಕಾಲುಜಾರಿ ಹೊಳೆಗೆ ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಏ.01. ಗ್ಯಾಸ್‌ ಸೋರಿಕೆಯಾಗಿ ನಡೆದ ಅಗ್ನಿ ಅವಘಡದಲ್ಲಿ ಏಳು ಮಂದಿ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಸಮೀಪದ ಮೇಡಹಳ್ಳಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ಶೆಡ್ ಮನೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬಿಹಾರ ಮತ್ತು ಉತ್ತರಪ್ರದೇಶದಿಂದ ಬಂದಿದ್ದ 7 ಮಂದಿ ಶೆಡ್‌ ನಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಡ್ಯಾಮೇಜ್ ಆಗಿದ್ದ ಪೈಪ್‌ ನಿಂದ ಎಲ್‌ಪಿಜಿ ಗ್ಯಾಸ್ ಸೋರಿಕೆಯಾಗಿ ಅಗ್ನಿ ಅನಾಹುತ ನಡೆದಿದ್ದು ಅವಘಡ ಸಂಭವಿಸಿದ ದಿನ ಬೆಳಿಗ್ಗೆ 3.55 ರ ಸುಮಾರಿಗೆ

LPG ಗ್ಯಾಸ್‌ ಸೋರಿಕೆಯಾಗಿ ಭೀಕರ ಅಗ್ನಿ ದುರಂತ ➤ ಏಳು ಮಂದಿ ಕಾರ್ಮಿಕರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿ ಆತ್ಮಹತ್ಯೆ..!!

(ನ್ಯೂಸ್ ಕಡಬ)Newskadaba.com ಮಂಡ್ಯ,ಮಾ.31 ಕೌಟುಂಬಿಕ ಕಲಹಕ್ಕೆ ಮನನೊಂದು ಆತ್ಮಹತ್ಯೆಗೆ ಶರಣಾದ ದಂಪತಿ. ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ  ಈ ಘಟನೆ ನಡೆದಿದೆ.ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ವಿಷಯ ತಿಳಿದು ಮನೆಗೆ ಬಂದ ಪತಿ ಮನೆ ಪಕ್ಕದ ಜಮೀನಿಗೆ ತೆರಳಿ ನೇಣಿಗೆ ಕೊರಳೊಡ್ಡಿದ್ದಾರೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಮೃತ ದಂಪತಿಗೆ 7 ಹಾಗೂ 5 ವರ್ಷದ ಮಕ್ಕಳಿದ್ದರು. ತಂದೆ-ತಾಯಿ ಆತ್ಮಹತ್ಯೆಯಿಂದ ಮಕ್ಕಳಿಬ್ಬರು ಅನಾಥರಾಗಿದ್ದಾರೆ. ಸದ್ಯ ಸ್ಥಳಕ್ಕೆ

ಕೌಟುಂಬಿಕ ಕಲಹಕ್ಕೆ ಮನನೊಂದು ದಂಪತಿ ಆತ್ಮಹತ್ಯೆ..!! Read More »

ಕರಾವಳಿ

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ  

(ನ್ಯೂಸ್ ಕಡಬ)newskadaba.com ತೆಲಂಗಾಣ​, ಮಾ.31. ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ನೊಂದು ಸಾವಿನ ಹಾದಿ ಹಿಡಿದಿರುವ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ವರದಿಯಾಗಿದೆ. ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ ಎಂದು ಗುರುತಿಸಲಾಗಿದೆ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳಾಗಿದ್ದು,  ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು ಎನ್ನಲಾಗಿದೆ.  

ಕ್ಷುಲ್ಲಕ ಕಾರಣಕ್ಕೆ ಯುವತಿ ಆತ್ಮಹತ್ಯೆ   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್, ಮಾ.31. ಇಂದೋರ್‌ನ ದೇವಾಲಯವೊಂದರಲ್ಲಿ ಕಡಿದಾದ ಬಾವಿಗೆ ಬಿದ್ದು ಕನಿಷ್ಠ 13 ಜನರು ಮೃತಪಟ್ಟು, ಅವರಲ್ಲಿ ಹೆಚ್ಚಿನವರು ಮಹಿಳೆಯರು ಎಂದು ತಿಳಿದುಬಂದಿದೆ. ಅಲ್ಲದೆ ಓರ್ವ ಅಪ್ರಾಪ್ತೆ ನಾಪತ್ತೆಯಾಗಿದ್ದಾಳೆ ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ. 13 ಮಂದಿಯಲ್ಲಿ 10 ಮಂದಿ ಮಹಿಳೆಯರು, ಇನ್ನೂ ಕೆಲವರು ನಾಪತ್ತೆಯಾಗಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಎನ್‌ಡಿಆರ್‌ಎಫ್ ತಂಡ 13 ಮೃತ ದೇಹಗಳನ್ನು ಬಾವಿಯಿಂದ ಹೊರತೆಗೆದಿದೆ.  

ದೇವಸ್ಥಾನದ ಮೆಟ್ಟಿಲು ಬಾವಿ ಕುಸಿದು 13 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ 6 ಮಂದಿ ಉಸಿರುಗಟ್ಟಿ ಮೃತ್ಯು   

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ.31. ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಒಂದೇ ಕುಟುಂಬದ ಆರು ಮಂದಿ ಸೊಳ್ಳೆ ಕಾಯಿಲ್‌ನಿಂದ ಬಿಡುಗಡೆಯಾದ ವಿಷಕಾರಿ ಹೊಗೆಯಿಂದ ಉಸಿರುಗಟ್ಟಿ ಮೃತಪಟ್ಟ ಘಟನೆ ನಡೆದಿದೆ. ಸೊಳ್ಳೆ ಕಾಟದಿಂದ ತಪ್ಪಿಸಿಕೊಳ್ಳಲೆಂದು ಇಡೀ ರಾತ್ರಿ ಸೊಳ್ಳೆ ಕಾಯಿಲ್‌ ಹಚ್ಚಿಕೊಂಡಿದ್ದರು ಎನ್ನಲಾಗಿದೆ. ರಾತ್ರಿ ವೇಳೆ ಸೊಳ್ಳೆ ಕಾಯಿಲ್ ಮನೆಯೊಳಗಿನ ಹಾಸಿಗೆಯ ಮೇಲೆ ಬಿದ್ದಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ವಿಷಕಾರಿ ಹೊಗೆಯು ಬಲಿಪಶುಗಳು ಪ್ರಜ್ಞೆಯನ್ನು ಕಳೆದುಕೊಳ್ಳುವಂತೆ ಮಾಡಿದ್ದು, ಬಳಿಕ ಉಸಿರುಗಟ್ಟಿ ಮೃತಪಟ್ಟಿದ್ದಾರೆ.  

ವಿಷಕಾರಿ ಹೊಗೆಯಿಂದ ಒಂದೇ ಕುಟುಂಬದ 6 ಮಂದಿ ಉಸಿರುಗಟ್ಟಿ ಮೃತ್ಯು    Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು

(ನ್ಯೂಸ್ ಕಡಬ)newskadaba.com  ಕಾಸರಗೋಡು, ಮಾ.31. ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಉಂಟಾದ ಅಪಘಾತದಲ್ಲಿ ಇಬ್ಬರು ಮೃತಪಟ್ಟ ದಾರುಣ ಘಟನೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ ಎಂದು ವರದಿ ತಿಳಿಸಿದೆ. ನೀಲೇಶ್ವರ ಚಾಯೋತ್ ನ ದೀಪಕ್ (33) ಮತ್ತು ಕನ್ನಾಟಿಪಾರೆಯ ಶೋಭಿತ್ (27) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದೀಪಕ್ ಖಾಸಗಿ ಬಸ್ಸಿನ ಚಾಲಕರಾಗಿದ್ದರು. ಶೋಭಿತ್ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದರು. ಸ್ನೇಹಿತರಾಗಿದ್ದ ಇವರು ರಾತ್ರಿ ಮನೆಗೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ ಎನ್ನಲಾಗಿದೆ.  

ಕಾಸರಗೋಡು: ಬೈಕ್ ಮತ್ತು ಟ್ಯಾಂಕರ್ ಲಾರಿ ನಡುವೆ ಅಪಘಾತ ➤ ಇಬ್ಬರು ಸವಾರರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು 

(ನ್ಯೂಸ್ ಕಡಬ)newskadaba.com ಕಿನ್ನಿಗೋಳಿ, ಮಾ.31. ಕಿನ್ನಿಗೋಳಿಯ ಪಕ್ಷಿಕೆರೆ ಎಂಬಲ್ಲಿ ಬಾಲಕನೋರ್ವ ತೀವ್ರ ಜ್ವರದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಪಕ್ಷಿಕೆರೆ ಜುಮಾ‌ ಮಸೀದಿ ಬಳಿಯ ನಿವಾಸಿ ಇಸ್ಮಾಯೀಲ್ ಅವರ ಪುತ್ರ 10ನೇ ತರಗತಿ ವಿದ್ಯಾರ್ಥಿ ಹಿಲಾಲ್(16 )ಮೃತ ಬಾಲಕ ಎಂದು ಗುರುತಿಸಲಾಗಿದೆ. ಹಿಲಾಲ್ ಗೆ ಕೆಲದಿನಗಳ ಹಿಂದೆ ಜ್ವರ ಕಾಣಿಸಿಕೊಂಡಿದ್ದು, ಆತನನ್ನು ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯುನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.    

10 ನೇ ತರಗತಿ ವಿದ್ಯಾರ್ಥಿ ತೀವ್ರ ಜ್ವರದಿಂದ ಮೃತ್ಯು  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top