death

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ

(ನ್ಯೂಸ್ ಕಡಬ)newskadaba.com ಉಡುಪಿ, ಮಾ.29. ಕೋಟ ಡಾ. ಶಿವರಾಮ ಕಾರಂತ ಅಧ್ಯಯನ ಕೇಂದ್ರದ ಅಧ್ಯಕ್ಷೆಯಾಗಿದ್ದ ಮಾಲಿನಿ ಮಲ್ಯ ಬೆಂಗಳೂರು ಆಸ್ಪತ್ರೆಯಲ್ಲಿ ಅಸೌಖ್ಯದಿಂದ ನಿಧನರಾಗಿದ್ದಾರೆ. ದೀರ್ಘ ಕಾಲದಿಂದಲೂ ಪಾರ್ಕಿನ್ಸನ್ ರೋಗದಿಂದ ಬಳಲುತ್ತಿದ್ದ ಅವರನ್ನು ಸಾಲಿಗ್ರಾಮದಿಂದ ಇತ್ತೀಚಿಗಷ್ಟೆ ಬೆಂಗಳೂರಿಗೆ ಕರೆದುಕೊಂಡು ಹೋಗಲಾಗಿತ್ತು. ಸಾಲಿಗ್ರಾಮದಲ್ಲಿ ಕಾರಂತ ಸ್ಮೃತಿ ಭವನ ನಿರ್ಮಿಸಿ ಕಾರಂತ ಕಾರ್ಯಕ್ರಮ ಆಯೋಜನೆ‌ ಮಾಡುತ್ತಿದ್ದರು.  

ಉಡುಪಿ: ಶಿವರಾಮ ಕಾರಂತರ ಆಪ್ತ ಸಹಾಯಕಿ ಮಾಲಿನಿ ಮಲ್ಯ ನಿಧನ Read More »

ಕರಾವಳಿ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ

(ನ್ಯೂಸ್ ಕಡಬ)newskadaba.com ಕೋಲಾರ, ಮಾ.29. ಎಂಟು ವರ್ಷದ ಮಗನನ್ನು ಪಾಪಿ ತಂದೆಯೊಬ್ಬ ಚೂರಿಯಿಂದ ಇರಿದು ಕೊಲೆ ಮಾಡಿರುವ ಹೃದಯವಿದ್ರಾಹಕ ಘಟನೆ ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿಯಲ್ಲಿ ನಡೆದಿದೆ. ಎಂಟು ವರ್ಷದ ಬಾಲಕ ಭುವನ್‌ ತೇಜ್‌ ಅಪ್ಪನ ಕೈಯಿಂದ ಕೊಲೆಯಾದ ಮಗ.ಸುಬ್ರಮಣಿ ನಂಗಲಿ ಎಂಬಾತ ಮಗನಿಗೆ ಕೊಲೆ ಮಾಡಿದ್ದಾನೆ‌. ಆರೋಪಿ ಸುಬ್ರಮಣಿ ಈ‌ ಮೊದಲು ತನ್ನ ಪತ್ನಿಯನ್ನು ಕೊಂದು ಜೈಲು ಪಾಲಾಗಿದ್ದ ಎನ್ನಲಾಗಿದ್ದು, ಭುವನ್‌ತೇಜ್‌ ಕೋಲಾರದ ನಂಗಲಿ ಗ್ರಾಮದ ಎಸ್‌ಬಿಐ ಬ್ಯಾಂಕ್ ಹಿಂಭಾಗದಲ್ಲಿರುವ ಮನೆಯಲ್ಲಿ ಅಜ್ಜಿ ಜೊತೆ

8 ವರ್ಷದ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ತಂದೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ.29. ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಉಂಟಾದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಹೊಸಂಗಡಿಯಲ್ಲಿ ನಡೆದಿದೆ. ಮಂಜೇಶ್ವರ ಕುಂಜತ್ತೂರಿನ ಆದಿಲ್ ಮೃತಪಟ್ಟವನು ಎಂದು ತಿಳಿದುಬಂದಿದೆ. ಜೊತೆಯಲ್ಲಿದ್ದ ಇನ್ನೋರ್ವ ವಿದ್ಯಾರ್ಥಿ ಗಾಯಗೊಂಡಿದ್ದಾನೆ. ಆದಿಲ್ ಕುಂಬಳೆಯ ಮಹಾತ್ಮ ಕಾಲೇಜಿನ ವಿದ್ಯಾರ್ಥಿಯಾಗಿದ್ದ. ಪರೀಕ್ಷೆ ಬರೆದು ಮರಳುತ್ತಿದ್ದಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದು, ಆದಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣವನ್ನುದಾಖಲಿಸಿಕೊಂಡಿದ್ದಾರೆ.  

ಕಾಸರಗೋಡು: ಲಾರಿ-ಬೈಕ್ ಢಿಕ್ಕಿ..!     ➤ ಪರೀಕ್ಷೆ ಬರೆದು ಹಿಂತಿರುಗುತ್ತಿದ್ದ ವಿದ್ಯಾರ್ಥಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Death, deadbody, Waterfall

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಕಾರ್ಕಳ, ಮಾ.29. ತಾಯಿಯ ಅಕಾಲಿಕ ನಿಧನದ ಸುದ್ದಿ ತಿಳಿದು ಮಗಳು ಮನೆ ಸಮೀಪದ ಕೆರೆಯೊಂದಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಈದು ನೂರಾಲ್ ಬೆಟ್ಟು ಕಜೆ ಎಂಬಲ್ಲಿ ಸಂಭವಿಸಿದೆ. ಅನಾರೋಗ್ಯಕ್ಕೆ ತುತ್ತಾಗಿದ್ದ ಭಾಗಿ(65) ಎಂಬವರು ಸುಮಾರು 10 ವೇಳೆಯಲ್ಲಿ ಮನೆಯಲ್ಲಿ ಮೃತಪಟ್ಟಿದ್ದರು. ಈ ನಡುವೆ ಭಾಗಿಯ ಮಗಳು ರೇಖಾ(25) ಎಂಬಾಕೆ ಎಂದಿನಂತೆ ನಾರಾವಿಯ ಫ್ಯಾನ್ಸಿ ಅಂಗಡಿಯ ಕೆಲಸಕ್ಕೆಂದು ಹೊರಟು ಹೋಗಿದ್ದ ಆಕೆಗೆ ಪರಿಚಯಸ್ಥರೊಬ್ಬರ ಕರೆ ಮಾಡಿ ತಾಯಿಗೆ ಸೌಖ್ಯವಿಲ್ಲ ಮನೆಗೆ ಬಾ ಎಂದು ಎಂದಿದ್ದರು.  

ಕಾರ್ಕಳ: ತಾಯಿಯ ಅಕಾಲಿಕ ಸುದ್ದಿ ತಿಳಿದ ಮಗಳು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.29. ಸೌದಿ ಅರೇಬಿಯಾದ ಜುಬೈಲ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕರಾವಳಿಯ ಯುವಕ ಮೃತಪಟ್ಟಿದ್ದಾರೆ. ಮೃತರನ್ನು ಮಂಗಳೂರು ತಾಲೂಕು ಮಲ್ಲೂರಿನ ನಿವಾಸಿ, ಪಲ್ಲಿಬೆಟ್ಟು ಸುಲೈಮಾನ್‌(35) ಎಂದು ಗುರುತಿಸಲಾಗಿದೆ. ಇವರು ರಸ್ತೆ ದಾಟುತ್ತಿದ್ದ ವೇಳೆ ಕಾರು ಢಿಕ್ಕಿಯಾಗಿದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸುಲೈಮಾನ್‌ ಜುಬೈಲ್ ನ ಲುಮಿನಾಸ್ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು.  

ಮಂಗಳೂರು: ಸೌದಿಯಲ್ಲಿ ಅಪಘಾತ ಕರಾವಳಿಯ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.29. ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ‌. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ ಪ್ರಕಾಶ್ ನಾಯ್ಕ್ ಕೆ.(54) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ವ್ಯಕ್ರಿಯೋರ್ವರ ಮನೆಯಲ್ಲಿ ಕಾಯಿ ಕೀಳುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದಿದ್ದು, ಕೂಡಲೇ ಅವರನ್ನು ಬಳಿಕ ವಿಟ್ಲದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದಾಗ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎಂದು ಮೃತರ

ವಿಟ್ಲ: ತೆಂಗಿನ ಮರದಿಂದ ಬಿದ್ದ ವ್ಯಕ್ತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ

(ನ್ಯೂಸ್ ಕಡಬ)newskadaba.com ಸೌದಿ, ಮಾ.28. ಸೌದಿ ಅರೇಬಿಯಾದಲ್ಲಿ ಹಜ್ ಯಾತಾರ್ಥಿಗಳನ್ನು ಪವಿತ್ರ ಮೆಕ್ಕಾ ನಗರಕ್ಕೆ ಕರೆದೊಯ್ಯುತ್ತಿದ್ದ ಬಸ್, ಸೇತುವೆಯೊಂದಕ್ಕೆ ಢಿಕ್ಕಿ ಹೊಡೆದು ಬೆಂಕಿ ಹೊತ್ತುಕೊಂಡ ಪರಿಣಾಮ 20 ಮಂದಿ ಸಜೀವ ದಹನಗೊಂಡಿದ್ದಾರೆ. ಸಂಭವಿಸಿದ ಈ ಭೀಕರ ಅಪಘಾತದಲ್ಲಿ 2 ಡಜನ್‌ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಸೌದಿ ಸರ್ಕಾರಿ ಮಾಧ್ಯಮ ವರದಿ ಮಾಡಿದೆ.  

ಸೌದಿ ಅರೇಬಿಯಾದಲ್ಲಿ ಬಸ್ ಅಪಘಾತ     ➤ 20 ಮಂದಿ ಹಜ್ ಯಾತ್ರಿಕರ ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು

(ನ್ಯೂಸ್ ಕಡಬ)newskadaba.com ಭೋಪಾಲ್‌, ಮಾ.28. ಕಳೆದ ವರ್ಷ ನಮೀಬಿಯಾದಿಂದ ತರಲಾದ 8 ಚೀತಾಗಳ ಪೈಕಿ ಒಂದು ಹೆಣ್ಣು ಚೀತಾ ಮೃತಪಟ್ಟಿದೆ. ಮೃತ ಚೀತಾ ‘ಸಾಶಾ’ ಕಳೆದ ಜನವರಿಯಿಂದಲೂ ಮೂತ್ರಪಿಂಡಕ್ಕೆ ಸಂಬಂಧಿತ ಸೋಂಕಿನಿಂದ ಬಳಲುತ್ತಿತ್ತು. ಅಂದಿನಿಂದಲೂ ಚೀತಾವನ್ನು ತೀವ್ರ ವೈದ್ಯಕೀಯ ನಿಗಾದಲ್ಲಿ ಇಡಲಾಗಿತ್ತು. ಉಳಿದ ಚೀತಾಗಳು ಆರೋಗ್ಯವಾಗಿವೆ ಎಂದು ಕುನೊ ರಾಷ್ಟ್ರೀಯ ಅಭಯಾರಣ್ಯವು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.

ನಮೀಬಿಯಾದಿಂದ ತರಲಾಗಿದ್ದ ಹೆಣ್ಣು ಚೀತಾ ‘ಸಾಶಾ’ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ

(ನ್ಯೂಸ್ ಕಡಬ)newskadaba.com ಕಾಸರಗೋಡು, ಮಾ. 28. ಆರು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕರೋರ್ವರ ಮೃತದೇಹ ಕಾಸರಗೋಡು ನಗರದ ಖಾಸಗಿ ಆಸ್ಪತ್ರೆ ಪರಿಸರದ ಬಾವಿಯಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಾನ್ಯ ಜ್ಞಾನೋದಯ ಅನುದಾನಿತ ಶಾಲೆಯ ಶಿಕ್ಷಕ, ಮಟ್ಟನ್ನೂರಿನ ಟಿ.ವಿ. ಪ್ರದೀಪ್ ಕುಮಾರ್(51) ಮೃತ ಪಟ್ಟವರು ಎಂದು ಗುರುತಿಸಲಾಗಿದೆ. ದುರ್ವಾಸನೆ ಉಂಟಾದ ಹಿನ್ನಲೆಯಲ್ಲಿ ಪರಿ ಸರವಾಸಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕಾಗಮಿಸಿದ ಪೊಲೀಸರು ಬಾವಿಯಲ್ಲಿ ಗಮನಿಸಿದಾಗ ಮೃತದೇಹ ಪತ್ತೆಯಾಗಿದೆ. ಕೊನೆಗೆ ತನಿಖೆ ನಡೆಸಿದಾಗ ಅದು ದಿನಗಳ ಹಿಂದೆ ನಾಪತ್ತೆಯಾಗಿದ್ದ ಶಿಕ್ಷಕ

ಕಾಸರಗೋಡು: ನಾಪತ್ತೆಯಾಗಿದ್ದ ಶಿಕ್ಷಕ ಬಾವಿಯಲ್ಲಿ ಶವವಾಗಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಮಾ.28. ಸಜೀಪಪಡು ಗ್ರಾಮದ ಸೇನರಬೆಟ್ಟು ನಿವಾಸಿ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದ್ದು, ಮಹಿಳೆಯ ಸಾವಿನ ಬಗ್ಗೆ ಆಕೆಯ ಪತಿ ಸಂಶಯ ವ್ಯಕ್ತಪಡಿಸಿ, ಆತ್ಮಹತ್ಯೆಗೆ ಪ್ರೇರಣೆ ನೀಡಿದ ವ್ಯಕ್ತಿಯ ವಿರುದ್ದ ನಿಷ್ಪಕ್ಷಪಾತ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲಿಸ್ ವರಿಷ್ಠಾಧಿಕಾರಿಯವರಿಗೆ ಮನವಿಯ ಮೂಲಕ ಆಗ್ರಹಿಸಿದ್ದಾರೆ. ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆ ನಡೆದ ಸಂದರ್ಭ ಮಹಿಳೆಯ ಕಿವಿಯಲ್ಲಿ ಇಯರ್ ಪೋನ್ ಇದ್ದು ಆಕೆಯ ಮೊಬೈಲ್ ಪೋನ್

ಬಂಟ್ವಾಳ: ಸಜಿಪ ಮೂಲದ ಮಹಿಳೆ ಆತ್ಮಹತ್ಯೆ ➤ ಸಾವಿನ ಬಗ್ಗೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top