death

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಳ್ಯ, ಮಾ. 24. ಸುಳ್ಯ ತಾಲೂಕಿನ ಕಲ್ಮಕಾರು ಗ್ರಾಮದ ಯುವಕನೋರ್ವ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಲ್ಮಕಾರು ಗ್ರಾಮದ ಮೆಂಟೆಕಜೆ ತೇಜಕುಮಾರ್ ರವರ ಪುತ್ರ ಲೋಕೇಶ(22) ಎಂದು ಗುರುತಿಸಲಾಗಿದೆ. ಈತ ಚಿಕ್ಕಮಗಳೂರುನಲ್ಲಿ ಜಿಯೋ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದು, ತನ್ನ ರೂಮಿನಲ್ಲಿ ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ.  

ಸುಳ್ಯದ ಯುವಕ ಚಿಕ್ಕಮಗಳೂರಿನಲ್ಲಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..!

(ನ್ಯೂಸ್ ಕಡಬ)newskadaba.com ಮ‌ಡಿಕೇರಿ, ಮಾ.23. ಉಂಗುರ ನುಂಗಿ 8 ತಿಂಗಳ ಮಗು ಮೃತಪಟ್ಟಿರುವ ಘಟನೆ ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಕರಡಿಗೋಡು ಗ್ರಾಮದಲ್ಲಿ ನಡೆದಿದೆ. ಮುನೀರ್ ಎಂಬವರ ಮಗು ಮನೆಯಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ಉಂಗುರ ನುಂಗಿದ್ದು, ತಕ್ಷಣ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಮಗುವನ್ನು ದಾಖಲಿಸಿದರೂ ಉಸಿರಾಟದ ಸಮಸ್ಯೆಯಿಂದಾಗಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮೂಲಕ ಉಂಗುರವನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಾ ಉಂಗುರ ನುಂಗಿದ 8 ತಿಂಗಳ ಮಗು ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಮಾ.23. ಪೊಲೀಸ್ ವಸತಿ ಗೃಹದಲ್ಲಿ ಡಿಎಆರ್ ಕಾನ್ಸ್’ಟೇಬಲ್ ಒಬ್ಬರ ಮೃತದೇಹ ಕೊಲೆಗೈದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬಳ್ಳಾರಿಯಲ್ಲಿ ನಡೆದಿದೆ. ಮೃತ ಕಾನ್ಸ್ ಟೇಬಲ್’ರನ್ನು ಜಾಫರ್ ಎಂದು ಗುರುತಿಸಲಾಗಿದೆ. ಪೊಲೀಸ್ ವಸತಿ ಗೃಹದಲ್ಲಿ ಗಂಭೀರವಾಗಿ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಬಿದ್ದಿದ್ದ ಜಾಫರ್ ಅವರನ್ನು ವಿಮ್ಸ್’ಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಾಫರ್ ಮೃತಪಟ್ಟಿದ್ದಾನೆ.

ವಸತಿ ಗೃಹದಲ್ಲೇ ಪೊಲೀಸ್ ಕಾನ್ಸ್’ಟೇಬಲ್ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಮಾ. 23. KSRTC ಬಸ್- ಬೈಕ್ ಗೆ ಢಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಮೃತರನ್ನು ಶ್ರೀಧರ್ (28) ದಯಾನಂದ (30) ಎಂದು ಗುರುತಿಸಲಾಗಿದೆ. ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.

ಬೈಕ್ ಮತ್ತು KSRTC ಬಸ್ ನಡುವೆ ಅಪಘಾತ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ಕಲಬುರಗಿ, ಮಾ. 23. ಸ್ಕೂಟಿಯಲ್ಲಿ ತೆರಳುತ್ತಿದ್ದ ಸಾಮಾಜಿಕ ಕಾರ್ಯಕರ್ತೆಯೊಬ್ಬರನ್ನು ಕಾರಿನಿಂದ ಡಿಕ್ಕಿ ಹೊಡೆಸಿ, ಬಳಿಕ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮೃತ ಸಾಮಾಜಿಕ ಕಾರ್ಯಕರ್ತೆಯನ್ನು ಕಲಬುರಗಿ ನಗರದ ಜಂಜಂ ಕಾಲೋನಿ ನಿವಾಸಿ ಮುಜತ್ ಸುಲ್ತಾನ್(35) ಎಂದು ಗುರುತಿಸಲಾಗಿದೆ. ಮುಜತ್ ಸುಲ್ತಾನ್ ರನ್ನು ವಸೀಂ ಶೇಖ್, ನದೀಮ್, ಅಜೀಮ್ ಶೇಖ್ ಮತ್ತು ನದೀಮ್ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ತಲೆಗೆ ಕಲ್ಲು ಎತ್ತಿಹಾಕಿ ಸಾಮಾಜಿಕ ಕಾರ್ಯಕರ್ತೆಯ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

(ನ್ಯೂಸ್ ಕಡಬ)newskadaba.com ಚನ್ನರಾಯಪಟ್ಟಣ, ಮಾ.23. ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳ ಜೈನ ಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ(73) ವಿಧಿವಶರಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ವಾಮೀಜಿಯವರು ಕಳೆದ 4 ತಿಂಗಳಿನಿಂದ ಅನಾರೋಗ್ಯಕ್ಕೀಡಾಗಿದ್ದು ಶ್ರವಣಬೆಳಗೊಳದ ಮಠದಲ್ಲಿಯೇ ಅವರಿಗೆ ಶುಶ್ರೂಷೆ ಮಾಡಲಾಗುತ್ತಿತ್ತು ಎನ್ನಲಾಗಿತ್ತು. ಬಿಪಿ, ಶುಗರ್ ಏರುಪೇರಿನಿಂದ ಅಸ್ವಸ್ಥಗೊಂಡು ಸ್ವಾಮೀಜಿ ಕೆಳಗೆ ಬಿದ್ದಿದ್ದು ತಕ್ಷಣ ಅವರನ್ನು ಮಠದಲ್ಲೇ ವೈದ್ಯರು ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಅಂಬುಲೆನ್ಸ್‌ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  

ಶ್ರವಣಬೆಳಗೊಳದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ Read More »

ಕರ್ನಾಟಕ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಮಾ.22. ವಿದ್ಯಾರ್ಥಿಯೋರ್ವ ಸೀಮೆಎಣ್ಣೆ ಸೇವಿಸಿ ಆಸ್ಪತ್ರೆಗೆ ದಾಖಲಾಗಿ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ನೈಮರ್ಮುಲಾ ತನ್ಸಿಯುಲ್ ಇಸ್ಲಾಂ ಹೈಯರ್ ಸೆಕೆಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿ ಉಮರ್ ಅಫ್ರಾಬುದ್ದೀನ್ (15) ಪೆರುಂಬಳ ಚಾಳ ಜೆಟ್ಟಿ ಅಶ್ರಫ್ ಹಾಗೂ ಫಾಮಿನಿಯಾ ದಂಪತಿಯ ಪುತ್ರ  ಮೃತಪಟ್ಟ ವಿದ್ಯಾರ್ಥಿ. ಹಲವು ದಿನಗಳಿಂದ ತೀವ್ರ ಅಸ್ವಸ್ಥನಾಗಿದ್ದ ಉಮರ್ ಅಫ್ರಾಬುದ್ದೀನ್ ಸೀಮೆಎಣ್ಣೆ ಸೇವಿಸಿದ್ದಾಗಿ ಪತ್ತೆಯಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾದರು. ಪರೀಕ್ಷೆಯಲ್ಲಿ ನಾಲ್ಕು ವಿಷಯಗಳಲ್ಲಿ ಕಷ್ಟ

ಮಂಗಳೂರು: ಸೀಮೆಎಣ್ಣೆ ಸೇವಿಸಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Death, deadbody, Waterfall

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ

(ನ್ಯೂಸ್ ಕಡಬ)newskadaba.com ಗದಗ, ಮಾ.22. ತಾಯಿಯ ಅನೈತಿಕ ಸಂಬಂಧಕ್ಕೆ ಮಗಳು ಕೊಲೆಯಾಗಿರುವ ಆರೋಪ ಗದಗ ಜಿಲ್ಲೆಯಲ್ಲಿ ಕೇಳಿಬಂದಿದೆ. ಮುಂಡರಗಿ ಪಟ್ಟಣದಲ್ಲಿ ಪರೀಕ್ಷೆ ಬರೆದು ಬಂದ ಅಪ್ರಾಪ್ತ ಬಾಲಕಿಯನ್ನು ಮೆಹಬೂಬ್ ಸಾಬ್ ಬಾಣದ ಎನ್ನುವಾತ ಕೊಲೆ ಮಾಡಿದ್ದಾನೆ. ಇದಕ್ಕೆ ಬಾಲಕಿ ವಿರೋಧ ವ್ಯಕ್ತಪಡಿಸಿದ್ದಳು ಅದ್ಕೆ ಕೋಪಗೊಂಡ ಮೆಹಬೂಬ್ ಸಾಬ್‌ ಅವಳ ಕತ್ತು ಹಿಸುಕಿ, ಉಸಿರು ಗಟ್ಟಿಸಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ. ಸದ್ಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆ ನಡೆಸ್ತಿದ್ದಾರೆ.

ತಾಯಿಯ ಅನೈತಿಕ ಸಂಬಂಧಕ್ಕೆ 10ನೇ ತರಗತಿ ಮಗಳು ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ವೇಗವಾಗಿ‌ ಬಂದ ಆಂಬ್ಯುಲೆನ್ಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಮೃತರನ್ನು ಮೈಸೂರಿನ ಪ್ರಕಾಶ್ ಹಾಗೂ ಬನಶಂಕರಿ ಮೂಲದ ನಾಗೇಂದ್ರ ಎಂದು ಗುರುತಿಸಲಾಗಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ವೇಗವಾಗಿ ಬಂದ ಅಂಬುಲೆನ್ಸ್ ಢಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಪ್ರಕಾಶ್, ನಾಗೇಂದ್ರ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ.  

ಚಾಲಕನ ನಿಯಂತ್ರಣ ತಪ್ಪಿ ಆ್ಯಂಬುಲೆನ್ಸ್ ಢಿಕ್ಕಿ ➤ ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…!

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.22. ಮನೆ ಮುಂದೆ ನಿಲ್ಲಿಸಿದ್ದ ಕಾರು ಪಾರ್ಕಿಂಗ್ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆಗೈದ ಘಟನೆ ಜಿಲ್ಲೆಯ ಹೊಸಕೋಟೆ ತಾಲೂಕಿನ ಮೇಡಿ ಮಲ್ಲಸಂದ್ರ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವಕನ್ನು ಇಸ್ಮಾಯಿಲ್ ಖಾನ್ ಎಂದು ಗುರುತಿಸಲಾಗಿದೆ. ಕೆಲಸ ಮುಗಿಸಿಕೊಂಡು ಕಾರಿನಲ್ಲಿ ಬಂದಿದ್ದ ಇಸ್ಮಾಯಿಲ್ ಮನೆ ಮುಂದಿರುವ ಖಾಲಿ ಜಾಗದಲ್ಲಿ ಕಾರನ್ನು ನಿಲ್ಲಿಸಿದ್ದಾರೆ. ಈ ವೇಳೆ ಕಾರು ನಿಲ್ಲಿಸಿದಕ್ಕೆ ಎದುರು ಮನೆಯ ಸೈಯದ್ ಅಕಿಲ್ ಶಾ ಕುಟುಂಬಸ್ಥರು ಕ್ಯಾತೆ ತೆಗೆದಿದ್ದು,

ಕಾರು ಪಾರ್ಕಿಂಗ್ ವಿಚಾರದಲ್ಲಿ ಎರಡು ಕುಟುಂಬಗಳ ನಡುವೆ ಗಲಾಟೆ ➤ ಯುವಕನ ಬರ್ಬರ ಹತ್ಯೆ…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top