death

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಮಾ. 09. ಸೊಪ್ಪು ತಿಂದ ಎರಡು ಹಸು ಹಾಗೂ ಮೂರು ಕರುಗಳು ಅಸೌಖ್ಯಕ್ಕೀಡಾಗಿ ಗಂಭೀರ ಸ್ಥಿತಿ ತಲುಪಿದ್ದು, ಇದರಲ್ಲಿ ಒಂದು ಹಸು ಸಾವನ್ನಪ್ಪಿದ ಘಟನೆ ಸೋಮೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಂಡೋಳಿ ಎಂಬಲ್ಲಿ ಸಂಭವಿಸಿದೆ. ಕೃಷಿಕ ಸಂಜೀವ ಪೂಜಾರಿ ಎಂಬವರು ಮಾ. 08ರಂದು ಮಧ್ಯಾಹ್ನ ಕರಿ ಬಸ್ರಿ ತಳಿಯ ಸೊಪ್ಪನ್ನು ಜಾನುವಾರುಗಳಿಗೆ ಮಲಗಲು ಬೆಡ್ಡಿಂಗ್ ಗೆಂದು ಹಾಕಲಾಗಿತ್ತು. ಆದರೆ ಅದನ್ನೆಲ್ಲ ತಿಂದ ಹಸುಗಳು ನಂತರ ಅಸ್ವಸ್ಥಗೊಂಡಿದೆ. ಸಂಜೆ ನಂತರ ಹಸುಗಳು ಕೆಲವು […]

ಉಳ್ಳಾಲ: ಸೊಪ್ಪು ತಿಂದು ನಾಲ್ಕು ಜಾನುವಾರು ಅಸ್ವಸ್ತ- ಒಂದು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಲಿವುಡ್ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್  ವಿಧಿವಶ

(ನ್ಯೂಸ್ ಕಡಬ)newskadaba.com  ನವದೆಹಲಿ, ಮಾ.09. ಬಾಲಿವುಡ್‌ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್(66) ಮುಂಬೈನಲ್ಲಿ ನಿಧನರಾದರು ಎಂದು ವರದಿ ತಿಳಿಸಿದೆ. ಸತೀಶ್ ಕೌಶಿಕ್ ನಿಧನವನ್ನು ಹಿರಿಯ ನಟ ಅನುಪಮ್ ಖೇರ್ ಟ್ವಿಟರ್‌ನಲ್ಲಿ ಖಚಿತಪಡಿಸಿದ್ದಾರೆ. ನಟ, ಹಾಸ್ಯನಟ, ಚಿತ್ರಕಥೆಗಾರ, ನಿರ್ದೇಶಕ ಮತ್ತು ನಿರ್ಮಾಪಕರಾಗಿ ಖ್ಯಾತಿಗಳಿಸಿದ್ದ ಅವರು ಗುರುಗ್ರಾಮ್‌ ನಲ್ಲಿ ಆಪ್ತರೊಬ್ಬರನ್ನು ಭೇಟಿಯಾಗಲು ತೆರಳುತ್ತಿದ್ದಾಗ ಅವರ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.  

ಬಾಲಿವುಡ್ ಹಿರಿಯ ನಟ ಮತ್ತು ನಿರ್ದೇಶಕ ಸತೀಶ್ ಕೌಶಿಕ್  ವಿಧಿವಶ Read More »

ರಾಷ್ಟ್ರೀಯ ನ್ಯೂಸ್
Death, deadbody, Waterfall

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಮಾ. 08. ತಟ್ಟೆ ತೊಳೆಯುವ ವಿಚಾರದಲ್ಲಿ ನಡೆದ ಗಲಾಟೆ ತಾರಕಕ್ಕೇರಿ ಬಳಿಕ ಅದು ಕೊಲೆಯಲ್ಲಿ ಅಂತ್ಯಗೊಂಡ ಘಟನೆ ಬಜ್ಪೆ ಪೊಲೀಸ್ ಠಾಣೆ ವ್ಯಾಪ್ತಿಯ ಮರವೂರು ಗ್ರಾಮದ ಪೋಸ್ಟಲ್ ಗಾರ್ಡ್ ಸೈಟ್ ನಡೆದಿದೆ. ಕೊಲೆಯಾದವರನ್ನು ಕೂಲಿ ಕಾರ್ಮಿಕ, ಉತ್ತರ ಭಾರತ ಮೂಲದ ಸಂಜಯ್ ಎಂದು ಗುರುತಿಸಲಾಗಿದೆ. ಸಂಜಯ್ ಮತ್ತು ಸೋಹಾನ್ ಯಾದವ್ ಎಂಬವರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದಿದ್ದು, ಸೋಹನ್ ಯಾದವ್ ಸಂಜಯ್‌ ನನ್ನು ಬಲವಾಗಿ ಹಿಂದಕ್ಕೆ ತಳ್ಳಿದ್ದ. ಕೆಳಗೆ ಬಿದ್ದ

ಮಂಗಳೂರು: ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ➤ ಕೊಲೆಯಲ್ಲಿ ಅಂತ್ಯ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com  ಪಡುಬಿದ್ರಿ, ಮಾ.07. ಮೂಲ್ಕಿ ಸೇತುವೆ ಮೇಲೆ ಟ್ಯಾಂಕರ್ – ಸ್ಕೂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮೃತಪಟ್ಟಿರುವ ಘಟನೆ ಮಂಗಳವಾರ ಮಧ್ಯಾಹ್ನ ನಡೆದಿದೆ. ಮೃತರನ್ನು ತೀರ್ಥಹಳ್ಳಿ ಕೋಳಿಕಾಲು ಗುಡ್ಡೆ ನಿವಾಸಿ, ದಂಪತಿ ಅಕ್ಬರ್ ಪಾಶ(61) ಹಾಗೂ ಖತೀಜಾಬಿ(46) ಎಂದು ಗುರುತಿಸಲಾಗಿದೆ. ದಂಪತಿ ಮಂಗಳೂರಿನ ಪಾಸ್ ಪೋರ್ಟ್ ಕಚೇರಿಗೆ ತಮಗಾಗಿ ಪಾಸ್ ಪೋರ್ಟ್ ಮಾಡಿಸಲೆಂದು ಹೊರಟಿದ್ದರು ಎಂದು ತಿಳಿದುಬಂದಿದೆ.  

ಪಡುಬಿದ್ರಿ: ಟ್ಯಾಂಕರ್ ಮತ್ತು ಸ್ಕೂಟರ್‌ ನಡುವೆ ಅಪಘಾತ   ➤  ಇಬ್ಬರು ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು

(ನ್ಯೂಸ್ ಕಡಬ)newskadaba.com ರಾಯಚೂರು, ಮಾ.07. ಶಾರ್ಟ್ ಸರ್ಕ್ಯೂಟ್ ನಿಂದ ಎಸಿ ಸ್ಫೋಟಗೊಂಡ ಹಿನ್ನೆಲೆ ತಾಯಿ ಮತ್ತು ಇಬ್ಬರು ಮಕ್ಕಳು ಮೃತಪಟ್ಟ ಘಟನೆ ರಾಯಚೂರು ತಾಲೂಕಿನ ಶಕ್ತಿ ನಗರದಲ್ಲಿ ನಡೆದಿದೆ. ತಾಯಿ ರಂಜಿತಾ(33), ಮಕ್ಕಳಾದ ಮೃದಲ್(13), ತಾರುಣ್ಯ(5) ಮೃತರಾಗಿದ್ದು, ಮೂಲತಃ ಮಂಡ್ಯ ನಿವಾಸಿಗಳು ಎಂದು ಗುರುತಿಸಲಾಗಿದೆ. ಸಿದ್ದಲಿಂಗಯ್ಯ ಸ್ವಾಮಿ ಪತ್ನಿ ಮತ್ತು ಮಕ್ಕಳನ್ನು ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ಶಕ್ತಿನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

AC ಸ್ಫೋಟಗೊಂಡು ತಾಯಿ, ಇಬ್ಬರು ಮಕ್ಕಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು

(ನ್ಯೂಸ್ ಕಡಬ)newskadaba.com ಸುರತ್ಕಲ್, ಮಾ.07. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯವ ಎನ್ಐಟಿಕೆ ಟೊಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ಯುವಕನನ್ನು ಮಡಿಕೇರಿ ಸೋಮವಾರಪೇಟೆ ಬಿಟಿ ಕಟ್ಟೆಯ ನಿವಾಸಿ ಶಶಾಂಕ್(21) ಎಂದು ತಿಳಿದು ಬಂದಿದೆ. ಸುರತ್ಕಲ್ ಟೋಲ್ ಗೇಟ್ ಬಳಿ ಬೈಕ್ ಅಪಘಾತಕ್ಕೀಡಾಗಿದ್ದು, ಬೈಕ್ ನ ಹಿಂಬದಿ ಸವಾರರಾಗಿ ತೆರಳಿತ್ತಿದ್ದ ಇವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸುರತ್ಕಲ್: ಬೈಕ್ ಅಪಘಾತ..! ➤ ಹಿಂಬದಿ ಸವಾರ ರಸ್ತೆಗೆ ಎಸೆಯಲ್ಪಟ್ಟು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ

(ನ್ಯೂಸ್ ಕಡಬ)newskadaba.com ಬೆಂಗಳೂರು, ಮಾ.06. ಸಿಲಿಂಡರ್ ಸ್ಫೋಟಗೊಂಡು 13 ವರ್ಷದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಹೆಬ್ಬಾಳ ಸಮೀಪದ ಗುಡ್ಡದಹಳ್ಳಿಯಲ್ಲಿ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ. ಆರನೇ ತರಗತಿಯಲ್ಲಿ ಓದುತಿದ್ದ ಮಹೇಶ್(13) ಮೃತಪಟ್ಟ ಬಾಲಕ ಎಂದು ತಿಳಿದುಬಂದಿದೆ. ಸಿಲಿಂಡರ್ ಫಿಲ್ಲಿಂಗ್ ಅಂಗಡಿಯಲ್ಲಿ ಘಟನೆ ನಡೆದಿದ್ದು, ಅಂಗಡಿ ಪಕ್ಕದಲ್ಲಿ ಬಾಲಕ ಮಹೇಶ್ ನಿಂತಿದ್ದ. ಸ್ಫೋಟದ ತೀವ್ರತೆಗೆ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.  

ಸಿಲಿಂಡರ್ ಸ್ಫೋಟ..!     ➤  ಛಿದ್ರವಾಗಿ ಹೋಯ್ತು ಬಾಲಕನ ದೇಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ 

(ನ್ಯೂಸ್ ಕಡಬ)newskadaba.com ನವದೆಹಲಿ, ಮಾ,06. ಅಪರಿಚಿತ ಬಂದೂಕುಧಾರಿಗಳಿಂದ ಭಾರತಕ್ಕೆ ಬೇಕಾಗಿದ್ದ 4 ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಇದರಿಂದ ಪಾಕ್ ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರಲ್ಲಿ ನಡುಕ ಶುರುವಾಗಿದೆ. ಸೈಯದ್ ನೂರ್ ಶಲೋಬರ್, ಸೈಯದ್ ಖಾಲಿದ್ ರಜಾ, ಐಜಾಜ್ ಅಹ್ಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಮತ್ತು ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಎಂಬ ಉಗ್ರರು ಹತ್ಯೆಯಾಗಿದ್ದಾರೆ.  

ಅಪರಿಚಿತ ಬಂದೂಕುಧಾರಿಗಳಿಂದ 4 ಭಯೋತ್ಪಾದಕರ ಹತ್ಯೆ  Read More »

ರಾಷ್ಟ್ರೀಯ ನ್ಯೂಸ್

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ

(ನ್ಯೂಸ್ ಕಡಬ)newskadaba.com ಮಹಾರಾಷ್ಟ್ರ, ಮಾ.06. ಟೆಂಪೋ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಲಾತೂರ್‌ನಲ್ಲಿ ನಡೆದಿದೆ. ಎಲ್ಲಾ ಆರು ಜನರು ಒಂದೇ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ವೇಗವಾಗಿ ಬಂದ ಟೆಂಪೋ ಬೈಕ್‌ ಗೆ ಡಿಕ್ಕಿ ಹೊಡೆದಿದೆ. ಅಪಘಾತದ ವೇಳೆ ಟೆಂಪೋ ಕೂಡ ಪಲ್ಟಿಯಾಗಿದ್ದು, ಒಂಬತ್ತು ಕುರಿಗಳು ಸಾವನ್ನಪ್ಪಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

ಒಂದೇ ಬೈಕ್‌ ನಲ್ಲಿ 6 ಮಂದಿ ತೆರಳುತ್ತಿದ್ದಾಗ ಢಿಕ್ಕಿ ಹೊಡೆದ ಟೆಂಪೋ !       ➤ ನಾಲ್ವರು ದುರ್ಮರಣ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com.ಕೊಡಗು, ಮಾ 4.  ಹೈದರಾಬಾದ್, ಮಾ 04 ಕಾಲೇಜಿನಲ್ಲಿ ಊಟ ಮುಗಿಸಿ, ಮೊದಲ ತರಗತಿಯನ್ನು ಮುಗಿಸಿ ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಮೃತಪಟ್ಟ ಘಟನೆ ನಡೆದಿದೆ. ತೆಲಂಗಾಣದ ಗುಂಡ್ಲಾ ಪೋಚಂಪಲ್ಲಿಯಲ್ಲಿರುವ ಎಂಆರ್ ಇಂಜಿನಿಯರಿಂಗ್ ಕಾಲೇಜಿನ ಪ್ರಥಮ ವರ್ಷದ ಇಂಜಿನಿಯರ್‌ ವಿದ್ಯಾರ್ಥಿ ಸಚಿನ್‌ (18) ಮೃತ ದುರ್ದೈವಿ. ಸ್ನೇಹಿತನೊಟ್ಟಿಗೆ ಕಾಲೇಜಿನ ಆವರಣದಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಸಚಿನ್‌ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು,

➤ ಕಾಲೇಜು ಆವರಣದಲ್ಲಿ ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top