death

ಬೆಂಕಿ ಅವಘಡ… ➤ ಐವರು ಮಕ್ಕಳು ಮತ್ತು ಪೋಷಕರು ಮೃತ್ಯು

(ನ್ಯೂಸ್ ಕಡಬ) newskadaba.com ಇಸ್ತಾನ್‌ಬುಲ್, ಫೆ.18.   ಕಳೆದ ವಾರ ಸಂಭವಿಸಿದ ಭೂಕಂಪದಿಂದ ಬದುಕುಳಿದ ನಂತರ ಟರ್ಕಿಯ ಮನೆಯೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಐವರು ಸಿರಿಯಾದ ಮಕ್ಕಳು ಮತ್ತು ಅವರ ಪೋಷಕರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸಿರಿಯನ್ ಕುಟುಂಬವು ಫೆಬ್ರುವರಿ 6ರ ಕಂಪನದಿಂದ ತೀವ್ರವಾಗಿ ಹಾನಿಗೊಳಗಾದ ಆಗ್ನೇಯ ಟರ್ಕಿಶ್ ನಗರವಾದ ನೂರ್ಡಗಿಯಿಂದ ಕೊನ್ಯಾದ ಪ್ರದೇಶಕ್ಕೆ ಸ್ಥಳಾಂತರಗೊಂಡಿತ್ತು.  

ಬೆಂಕಿ ಅವಘಡ… ➤ ಐವರು ಮಕ್ಕಳು ಮತ್ತು ಪೋಷಕರು ಮೃತ್ಯು Read More »

ಅಂತರ್ರಾಷ್ಟ್ರೀಯ ನ್ಯೂಸ್

ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನ

(ನ್ಯೂಸ್ ಕಡಬ) newskadaba.com ನವದೆಹಲಿ, ಫೆ.18 :  ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನರಾಗಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಸಾಮಾಜಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ತೀವ್ರ ಎದೆನೋವಿನಿಂದ ಬಳಲಿ ಕುಸಿದು ಬಿದ್ದರು. ತಕ್ಷಣ ಅವರನ್ನು ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಗೆ ಕಳುಹಿಸಲಾಯಿತು, ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.  

ಹೃದಯಾಘಾತದಿಂದ ನಟ ಶಾನವಾಜ್ ಪ್ರಧಾನ್ ನಿಧನ Read More »

ರಾಷ್ಟ್ರೀಯ ನ್ಯೂಸ್

ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಯಾದಗಿರಿ, ಫೆ.18. ಯಾದಗಿರಿ ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹುರಸಗುಂಡಗಿ ಗ್ರಾಮದಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ವಿಷ ಸೇವಿಸಿ ಸುವರ್ಣ (20) ಹಾಗೂ ಈಶಪ್ಪ (22) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಹಾಗೂ ಈಶಪ್ಪ ಕಳೆದ 5-6 ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. 2 ವರ್ಷದ ಹಿಂದೆ ಸುವರ್ಣಳನ್ನು ಬೇರೆ ಯುವಕನ ಜೊತೆಗೆ ವಿವಾಹ ಮಾಡಿದ್ದರು. ಬಳಿಕ

ಬೆಳ್ಳಂಬೆಳಗ್ಗೆ ವಿಷ ಸೇವಿಸಿ ಪ್ರೇಮಿಗಳು ಆತ್ಮಹತ್ಯೆ Read More »

ಕರ್ನಾಟಕ

ಅರಣ್ಯದಲ್ಲಿ ಆಕಸ್ಮಿಕ ಕಾಡ್ಗಿಚ್ಚು ಪ್ರಕರಣ ➤ಗಂಭೀರ ಗಾಯಗೊಂಡ ಸಿಬ್ಬಂದಿಯೋರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಹಾಸನ, ಫೆ.18.  ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದ ಕಾಡ್ಗಿಚ್ಚಿಗೆ ಸಿಲುಕಿ ಬೆಂದು ಹೋಗಿದ್ದ ಫಾರೆಸ್ಟ್ ಗಾರ್ಡ್ ಮೃತಪಟ್ಟಿದ್ದಾರೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರಾತ್ರಿ ಚಿಕಿತ್ಸೆ ಫಲಿಸದೆ ಫಾರೆಸ್ಟ್ ಗಾರ್ಡ್ ಸುಂದರೇಶ್ ಕೊನೆಯುಸಿರೆಳೆದಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ ಘಟ್ಟದಲ್ಲಿ ಕಾಡುಮನೆ ಎಸ್ಟೇಟ್ ಬಳಿ ಕಾಡ್ಗಿಚ್ಚು ಕಾಣಿಸಿಕೊಂಡಿತ್ತು. ಬೆಂಕಿ ನಂದಿಸಲು ಡಿಆರ್​ಎಫ್​ಒ ಮಂಜುನಾಥ್ ನೇತೃತ್ವದಲ್ಲಿ 6 ಮಂದಿ ಅರಣ್ಯ ಇಲಾಖೆ ಸಿಬ್ಬಂದಿ ಹೋಗಿದ್ದರು. ಘಟನೆಯಲ್ಲಿ ಅರಣ್ಯ ಅಧಿಕಾರಿ, ಸಿಬ್ಬಂದಿ ಗಂಭೀರ ಗಾಯಗೊಂಡಿದ್ದರು ಸುಂದರೇಶ್

ಅರಣ್ಯದಲ್ಲಿ ಆಕಸ್ಮಿಕ ಕಾಡ್ಗಿಚ್ಚು ಪ್ರಕರಣ ➤ಗಂಭೀರ ಗಾಯಗೊಂಡ ಸಿಬ್ಬಂದಿಯೋರ್ವ ಮೃತ್ಯು Read More »

ಕರ್ನಾಟಕ

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!!

(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಫೆ.18. ಮಧ್ಯಪ್ರದೇಶದಲ್ಲಿ ಶಿವರಾತ್ರಿ ಅಂಗವಾಗಿ ರುದ್ರಾಕ್ಷಿ ವಿತರಿಸಲು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾದ ಪರಿಣಾಮ ಅಸ್ವಸ್ಥಗೊಂಡು ಓರ್ವ ಮಹಿಳೆ ಹಾಗೂ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ನಡೆದಿದೆ. ಮಧ್ಯಪ್ರದೇಶದ ಶೆಹೋರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಕುಬರೇಶ್ವರ್ ಧಾಮ್ ನಲ್ಲಿ ಪಂಡಿತ್ ಪ್ರದೀಪ್ ಮಿಶ್ರಾ ರುದ್ರಾಕ್ಷಿ ವಿತರಣೆಯನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಎರಡು ಲಕ್ಷ ಜನರು ಆಗಮಿಸಬಹುದೆಂಬ ನಿರೀಕ್ಷೆಯಿದ್ದು ಆದರೆ ಇದನ್ನು ಮೀರಿ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು.

ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು     ➤ ಓರ್ವ ಮಹಿಳೆ ಮತ್ತು ಕಂದಮ್ಮ ಮೃತ್ಯು…!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಎದೆಹಾಲು ಕುಡಿಯುವಾಗ ಅಸ್ವಸ್ಥಗೊಂಡು ಮಗು ಮೃತ್ಯು!!

(ನ್ಯೂಸ್ ಕಡಬ) newskadaba.com ಬದಿಯಡ್ಕ, ಫೆ.18.  ಎದೆಹಾಲು ಕುಡಿಯುವಾಗ ಉಸಿರುಕಟ್ಟಿ 25 ದಿನದ ಮಗು ಮೃತಪಟ್ಟಿರುವ ಘಟನೆ ಉಕ್ಕಿನಡ್ಕದಲ್ಲಿ ಸಂಭವಿಸಿದೆ. ಅಬ್ದುಲ್‌ ರಹ್ಮಾನ್‌-ತಾಹಿರಾ ದಂಪತಿಯ 25 ದಿನದ ಮಗು ಮೃತಪಟ್ಟಿದೆ. ಮಗುವಿಗೆ ಎದೆ ಹಾಲು ಉಣಿಸುತ್ತಿದ್ದಾಗ ಮಗು ಅಸ್ವಸ್ಥಗೊಂಡಿದೆ‌.ಕೂಡಲೇ ಮಗುವನ್ನು ಬದಿಯಡ್ಕ ಸರಕಾರಿ ಆಸ್ಪತ್ರೆಗೆ ಕರೆ ತರಲಾಗಿದೆ.ಆದರೆ ಮಗು  ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದೆ‌. ಈ ಕುರಿತು ಬದಿಯಡ್ಕ ಠಾಣೆಯಲ್ಲಿ ಕೆಸ್ ದಾಖಲಾಗಿದೆ.    

ಎದೆಹಾಲು ಕುಡಿಯುವಾಗ ಅಸ್ವಸ್ಥಗೊಂಡು ಮಗು ಮೃತ್ಯು!! Read More »

ಕರ್ನಾಟಕ

ಕೋಳಿ ಕುಕ್ಕಿ ಮೃತಪಟ್ಟ ಮಾಲೀಕ!!

(ನ್ಯೂಸ್ ಕಡಬ) newskadaba.com ಐರ್ಲೆಂಡ್, ಫೆ.17. ಕ್ರಾಸ್ ಎಂಬ ವ್ಯಕ್ತಿ ತನ್ನ ಮನೆಯಲ್ಲಿ ಕೋಳಿ ಸಾಕಿದ್ದ.ಆದರೆ ಸಾಕಿದ್ದ ಕೋಳಿಯೇ ಅವನನ್ನೇ ಕುಕ್ಕಿ ಕೊಂದಿದೆ. ಈ ಘಟನೆ ಐರ್ಲೆಂಡ್ ನಲ್ಲಿ ಸಂಭವಿಸಿದೆ. ಈ ಕೋಳಿ ಬ್ರಹ್ಮ ತಳಿಯಾಗಿದ್ದು, ಬಹಳ ಆಕ್ರಮಣಕಾರಿ ಪ್ರವೃತಿಯನ್ನು ಹೊಂದಿದ್ದು .ಮನೆಯ ಮಾಲೀಕ ಕ್ರಾಸ್ ನ ಬೆನ್ನತ್ತಿ ಈ ಕೋಳಿ ಕಾಲಲ್ಲಿ  ರಕ್ತಸ್ರಾವ ಆಗುವಂತೆ ಕುಕ್ಕಿದೆ. ಬಳಿಕ ದಾಳಿಯಲ್ಲಿ ಗಾಯಗೊಂಡ ಕ್ರಾಸ್ ರಕ್ತದ ಮಡುವಿನಲ್ಲಿ ಬಿದ್ದಿದ್ದಾನೆ. ಬಳಿಕ ಆತನನ್ನ ಆಸ್ಪತ್ರೆಗೆ ದಾಖಲಿಸಿದರೂ,ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ.

ಕೋಳಿ ಕುಕ್ಕಿ ಮೃತಪಟ್ಟ ಮಾಲೀಕ!! Read More »

ಅಂತರ್ರಾಷ್ಟ್ರೀಯ ನ್ಯೂಸ್

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ!

(ನ್ಯೂಸ್ ಕಡಬ) newskadaba.com ಕಠ್ಮಂಡು, ಫೆ.17. ಕಳೆದ ತಿಂಗಳು ನೇಪಾಳದಲ್ಲಿ ನಡೆದ ಯೇತಿ ಏರ್‌ ಲೈನ್ಸ್ ವಿಮಾನ ಪತನಕ್ಕೆ ಮಾನವ ದೋಷವೇ ಕಾರಣ ಎಂದು ತನಿಖಾಧಿಕಾರಿಗಳು ಶಂಕಿಸಿದ್ದಾರೆ. ಜನವರಿ 15 ರಂದು ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಟೇಕ್ ಆಫ್ ಆದ ನಂತರ ಯೇತಿ ಏರ್‌ಲೈನ್ಸ್ ಫ್ಲೈಟ್ 691, ರೆಸಾರ್ಟ್ ಸಿಟಿ ಪೊಖರಾದಲ್ಲಿನ ಹೊಸ ವಿಮಾನ ನಿಲ್ದಾಣದ ನಡುವಿನ ಸೇಟಿ ನದಿಯ ಕಮರಿಯಲ್ಲಿ ಅಪಘಾತಕ್ಕೀಡಾಯಿತು. ವಿಮಾನ ಪತನಗೊಂಡಾಗ ಅದರಲ್ಲಿ ನಾಲ್ಕು ಸಿಬ್ಬಂದಿ ಸೇರಿದಂತೆ 72 ಜನರಿದ್ದರು,

ಮಾನವ ದೋಷವೇ ಪೋಖರಾ ವಿಮಾನ ದುರಂತಕ್ಕೆ ಕಾರಣ! Read More »

ಅಂತರ್ರಾಷ್ಟ್ರೀಯ ನ್ಯೂಸ್

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !!

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.17. ಅಜ್ಮೀರ್‌ ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿಯೋರ್ವರು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟ ಘಟನೆ ಪುಣೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೀಖ್ ಅಲ್ ಮದೀನಿ ಎಂದು ಗುರುತಿಸಲಾಗಿದೆ. ಸಂಸ್ಥೆಯ ಸ್ನೇಹಿತರ ಜತೆ ಮೊನ್ನೆ ಅಜ್ಮೀರ್ ಪ್ರವಾಸಕ್ಕೆಂದು ಹೋಗಿದ್ದ ಅವರಿಗೆ ಪುಣೆಯಲ್ಲಿ ಉಸಿರಾಟದ ಸಮಸ್ಯೆ ಉಂಟಾಗಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾಗಿ ಎನ್ನಲಾಗಿದೆ.  

ಪ್ರವಾಸಕ್ಕೆಂದು ಹೋಗಿದ್ದ ಸುಳ್ಯದ ವಿದ್ಯಾರ್ಥಿ ಪುಣೆಯಲ್ಲಿ ಮೃತ್ಯು !! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.17. ಆಕಾಶಭವನದ ಆನಂದನಗರ ಸರ್ಕಲ್ ಸಮೀಪ ಇರುವ ಭಂಡಾರಿ ಟವರ್ಸ್ ಕಟ್ಟಡದ ಎದುರು ರಸ್ತೆ ದಾಟುತ್ತಿದ್ದ ವೃದ್ದೆಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ. ಮೃತರಾದವರನ್ನು ಆಕಾಶಭವನ ನಿವಾಸಿ ಶ್ರೀಮತಿ ಗೀತಾ (74 ವರ್ಷ) ಎಂದು ಗುರುತಿಸಲಾಗಿದೆ. ಬಸ್ಸು ಚಾಲಕ ವನೀಶ್ ಎಂಬಾತ ನಿರ್ಲಕ್ಷ್ಯತನ ಹಾಗೂ ಅಜಾಗರೂಕತೆಯಿಂದ ಆಕಾಶಭವನ ಮುಖ್ಯ ರಸ್ತೆಯಲ್ಲಿ 4ನೇ ಮೈಲು ಕಡೆಯಿಂದ ಆನಂದನಗರ ಸರ್ಕಲ್ ಕಡೆಗೆ ರಸ್ತೆಯಲ್ಲಿ ಹಂಪ್ಸ್ ಇರುವ ಜಾಗದಲ್ಲಿ ಅಪಾಯಕಾರಿ ರೀತಿಯಲ್ಲಿ ಚಲಾಯಿಸಿಕೊಂಡು ಬಂದು ರಸ್ತೆ

ಮಂಗಳೂರು: ವೃದ್ದೆಯೋರ್ವರಿಗೆ ಬಸ್ ಢಿಕ್ಕಿ     ➤ ವೃದ್ದೆ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top