death

ಭೂಕಂಪನಕ್ಕೆ ನಲುಗಿದ ಟರ್ಕಿ, ಸಿರಿಯಾ; ➤‌ಮೃತರ ಸಂಖ್ಯೆ 24,000ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಇಸ್ತಾನ್‌ಬುಲ್‌, ಫೆ.11. ಶತಮಾನದ ಭೀಕರ ಭೂಕಂಪಕ್ಕೆ ನಡುಗಿಹೋದ ಟರ್ಕಿ ಮತ್ತು ಸಿರಿಯಾದಲ್ಲಿ ಮೃತರ ಸಂಖ್ಯೆ 24 ಸಾವಿರ ಗಡಿ ದಾಟಿದೆ. ಅವಶೇಷಗಳಡಿಯಿಂದ ಹೆಣಗಳ ಕೊಳೆತ ವಾಸನೆ ಬರುತ್ತಿದ್ದು, ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದೆ. ಪರಿಸ್ಥಿತಿ ನಿಯಂತ್ರಿಸಲು ಟರ್ಕಿ ಹಾಗೂ ಸಿರಿಯಾ ಸರಕಾರಗಳು ಹರಸಾಹಸಪಡುತ್ತಿವೆ ಎಂದು ವರದಿಯಾಗಿದೆ.  

ಭೂಕಂಪನಕ್ಕೆ ನಲುಗಿದ ಟರ್ಕಿ, ಸಿರಿಯಾ; ➤‌ಮೃತರ ಸಂಖ್ಯೆ 24,000ಕ್ಕೆ ಏರಿಕೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು!

(ನ್ಯೂಸ್ ಕಡಬ) newskadaba.com ಇಡುಕ್ಕಿ, ಫೆ.11..  ಬಹುಕಾಲದಿಂದ ತಿನ್ನದಿದ್ದ ಆಹಾರವೊಂದನ್ನು ದಿಢೀರ್ ತಿಂದ ಕಾರಣ ಯುವತಿಯೊಬ್ಬಳಿಗೆ ಫುಡ್ ಅಲರ್ಜಿ ಉಂಟಾಗಿ ಆಕೆ ಮೃತಪಟ್ಟ ಘಟನೆ ಕೇರಳದ ಇಡುಕ್ಕಿ ಜಿಲ್ಲೆಯ ತೋಡಪುಳದಲ್ಲಿ ನಡೆದಿದೆ. ಪರೋಟ ತಿಂದ ಬಳಿಕ ಫುಡ್​ ಅಲರ್ಜಿಯಿಂದಾಗಿ ಪಿಯು ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ತೋಡಪುಳ ಸಮೀಪದ ವಾಜತೊಪ್ಪುವಿನ ನಿವಾಸಿ ನಯನಮರಿಯಾ (16) ಮೃತ ವಿದ್ಯಾರ್ಥಿನಿ. ವಾಜತೊಪ್ಪುವಿನ ಸೆಂಟ್​ ಜಾರ್ಜ್​ ಹೈಯರ್​ ಸೆಕೆಂಡರಿ ಸ್ಕೂಲ್​ನಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದಳು. ಮೈದಾ ಮತ್ತು ಗೋಧಿಯಿಂದ ಮಾಡಿದ ಆಹಾರಗಳನ್ನು ಸೇವಿಸಿದಾಗಲೆಲ್ಲ ನಯನಾಗೆ

ಪರೋಟಾ ತಿಂದು, ಕೇರಳದ ವಿದ್ಯಾರ್ಥಿನಿ ಮೃತ್ಯು! Read More »

ರಾಷ್ಟ್ರೀಯ ನ್ಯೂಸ್

ಮಗನ ಹುಟ್ಟು ಹಬ್ಬದ ದಿನದಂದೇ ತಂದೆ ಮೃತ್ಯು

(ನ್ಯೂಸ್ ಕಡಬ)newskadaba.com.ಮಂಡ್ಯ, ಫೆ.11. ಮಗನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಮಾಡಲು ಕೇಕ್​ ತರಲು ಹೋದ ವ್ಯಕ್ತಿಯ ತಲೆ ಮೇಲೆ ಮರ ಬಿದ್ದು ದುರಂತ ಸಾವನ್ನಪ್ಪಿದ್ದಾರೆ. ಈ ಘಟನೆ ಮಂಡ್ಯ ನಗರದ ತಾವರಗೆರೆಯ ಚಲುವಯ್ಯ ಪಾರ್ಕ್ ಬಳಿ ನಡೆದಿದೆ. ಉದಯ್ ಕುಮಾರ್ ಮೃತ ದುರ್ವೈವಿ. ಪುತ್ರ ದಿಕ್ಷಿತ್ ನ 7ನೇ ವರ್ಷದ ಹುಟ್ಟು ಹಬ್ಬವಿತ್ತು. ಈ ಹಿನ್ನೆಲೆಯಲ್ಲಿ ಉದಯ್ ಕುಮಾರ್, ಬೈಕ್​ನಲ್ಲಿ ಪತ್ನಿ ಧನಲಕ್ಷ್ಮೀ ಜೊತೆ ಕೇಕ್​ ತರಲು ಹೋಗಿದ್ದಾರೆ. ಆದರೆ, ದಾರಿ  ಮಧ್ಯ ಚಲುವಯ್ಯ ಪಾರ್ಕ್ ಬಳಿ ಬರುತ್ತಿದ್ದಂತೆ

ಮಗನ ಹುಟ್ಟು ಹಬ್ಬದ ದಿನದಂದೇ ತಂದೆ ಮೃತ್ಯು Read More »

ಕರ್ನಾಟಕ

ಮಾಜಿ ಸಚಿವ ಟಿ. ಜಾನ್ ವಿಧಿವಶ​

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ.10.  ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ಟಿ. ಜಾನ್ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.ಜಾನ್​ ಅವರಿಗೆ 92 ವರ್ಷ ವಯಸ್ಸಾಗಿತ್ತು. ಎಸ್‌ ಎಂ ಕೃಷ್ಣ ಸಂಪುಟದಲ್ಲಿ ಸಚಿವರಾಗಿದ್ದರು. ಅಬಕಾರಿ ಉದ್ಯಮದಲ್ಲಿ ಹೆಸರು ಮಾಡಿದ್ದರು. ಮೂಲತಃ ಕೇರಳದವರಾದ ಟಿ.ಜಾನ್ ವರು  ಉದ್ಯಮದಲ್ಲಿ ತೊಡಗಿಕೊಂಡು ಹಂತ ಹಂತವಾಗಿ ಸಿರಿವಂತಿಕೆ ಪಡೆದುಕೊಂಡಿದ್ದರು. ಶಿಕ್ಷಣ ಸಂಸ್ಥೆಗಳು. ರೆಸಾರ್ಟ್ ಗಳನ್ನೂ ಕೂಡ ಜಾನ್ ಆರಂಭಿಸಿ ಯಶಸ್ಸು ಗಳಿಸಿದ್ದರು. ಕಷ್ಟ ಹೇಳಿಕೊಂಡು ಯಾರೇ ಬಂದರು ಸಹಾಯಹಸ್ತ ಚಾಚುತ್ತಿದ್ದ

ಮಾಜಿ ಸಚಿವ ಟಿ. ಜಾನ್ ವಿಧಿವಶ​ Read More »

ಕರ್ನಾಟಕ

  ಟರ್ಕಿ-ಸಿರಿಯಾದಲ್ಲಿ ಭೀಕರ ಭೂಕಂಪ ದುರಂತ ➤ ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಹ್ರಾಮನ್ಮರಸ್, ಫೆ.10. ಟರ್ಕಿ ಮತ್ತು ಸಿರಿಯಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಬದುಕುಳಿದವರನ್ನು ಹುಡುಕಲು ರಕ್ಷಣಾ ಕಾರ್ಯಕರ್ತರು ಕೊನೆಯ ಹಂತದ ಕಾರ್ಯಾಚರಣೆ ನಡೆಸುತ್ತಿದ್ದಾರೆ, ಅವಶೇಷಗಳಡಿ ಸಿಲುಕಿರುವ ಅನೇಕರ ಗುರುತು ಕೂಡ ಸಿಗದಂತಹ ಸ್ಥಿತಿ ಉಂಟಾಗಿದೆ. ಟರ್ಕಿಯ ಅಧ್ಯಕ್ಷರು ಇದನ್ನು “ಶತಮಾನದ ದುರಂತ” ಎಂದು ಕರೆದಿದ್ದು ಎರಡೂ ದೇಶಗಳಲ್ಲಿ ಸಂಭವಿಸಿದ ಭೂಕಂಪದಲ್ಲಿ ಇದುವರೆಗೆ ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆಯಾಗಿದೆ. ಅವಶೇಷಗಳು, ಕಟ್ಟಡಗಳ ಅವಶೇಷಗಳು, ಲೋಹ, ಪುಡಿಮಾಡಿದ ಕಾಂಕ್ರೀಟ್ ಮತ್ತು ತಂತಿಗಳು ಎಲ್ಲೆಡೆ ಕಂಡುಬರುತ್ತಿವೆ. ಅಡಿಯಾಮಾನ್‌ನಲ್ಲಿ, ಕಟ್ಟಡದ 

  ಟರ್ಕಿ-ಸಿರಿಯಾದಲ್ಲಿ ಭೀಕರ ಭೂಕಂಪ ದುರಂತ ➤ ಮೃತಪಟ್ಟವರ ಸಂಖ್ಯೆ 21 ಸಾವಿರಕ್ಕೆ ಏರಿಕೆ Read More »

ಕರಾವಳಿ

ಟ್ಯಾಂಕ್ ಗೆ ಬಿದ್ದು ಬಾಲಕಿ ಮೃತ್ಯು

(ನ್ಯೂಸ್ ಕಡಬ)newskadaba.com ಔರದ್,ಫೆ.09. ಪಟ್ಟಣದ ಶಿಕ್ಷಕರ ಕಾಲೊನಿಯ ಅಂಗನವಾಡಿ ಕೇಂದ್ರದ ಬಳಿಯಿರುವ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಬಿದ್ದು ಬಾಲಕಿ ಸ್ಫೂರ್ತಿ (3) ಮೃತಪಟ್ಟಿದ್ದಾಳೆ. ಕೂಲಿಕಾರ್ಮಿಕ ಜೀವನ್ ಮತ್ತು ಶಿಲ್ಪಾ ದಂಪತಿ ತಮ್ಮ ಮೂವರು ಪುತ್ರಿಯರಾದ ಸಲೋಮಿ (4), ಸ್ಫೂರ್ತಿ (3) ಮತ್ತು ಸೃಷ್ಟಿ(1.5)  ಈ ಮೂವರು ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದರು.ಮನೆಗೆ ಕರೆ ತರಲು ಶಿಲ್ಪಾ ಹೋದಾಗ, ಸ್ಫೂರ್ತಿ ಕಾಣಿಸಲಿಲ್ಲ. ಆಕೆಯ ಶವ ಸೆಪ್ಟಿಕ್ ಟ್ಯಾಂಕ್‍ನಲ್ಲಿ ಸಿಕ್ಕಿತು’ ಎಂದು ಪೋಲಿಸರು ತಿಳಿಸಿದ್ದಾರೆ. ‘ಅಂಗನವಾಡಿ ಕಟ್ಟಡ ನಿರ್ಮಿಸಲು ಮಾಡಿದ್ದ ಸೆಪ್ಟಿಕ್

ಟ್ಯಾಂಕ್ ಗೆ ಬಿದ್ದು ಬಾಲಕಿ ಮೃತ್ಯು Read More »

ಕರ್ನಾಟಕ

ಟ್ರ್ಯಾಕ್ಟರ್​ನಿಂದ ಬಿದ್ದು ಯೋಧ ಮೃತ್ಯು

(ನ್ಯೂಸ್ ಕಡಬ)newskadaba.com ಧಾರವಾಡ,ಫೆ.09.  ರಜೆಯ ನಿಮಿತ ತಮ್ಮ ಊರಿಗೆ ಬಂದಿದ್ದ ಸೈನಿಕ ಟ್ರ್ಯಾಕ್ಟರ್ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಧಾರವಾಡ ತಾಲೂಕಿನ ಗರಗ-ಲೋಕೂರ ಕ್ರಾಸ್‌ನಲ್ಲಿ ನಡೆದಿದೆ. ನಾಗಪ್ಪ ಉದ್ಮೀಶಿ (27) ಮೃತ ಸೈನಿಕ. ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದವರು ಎಂದು ಗುರುತಿಸಲಾಗಿದೆ. ಗ್ರಾಮಸ್ಥರೊಂದಿಗೆ ಗರಗ ಮಡಿವಾಳೇಶ್ವರ ಜಾತ್ರೆ ಬಂದಿದ್ದು, ಬಳಿಕ ಜಾತ್ರೆ ಮುಗಿಸಿಕೊಂಡು ವಾಪಸ್ಸ್​ ಮರಳುತ್ತಿದ್ದಾಗ ಟ್ರ್ಯಾಕ್ಟರ್‌ನಿಂದ ಕೆಳಗೆ ಬಿದ್ದು ತಲೆಗೆ ಪೆಟ್ಟಾಗಿ ದುರ್ಘಟನೆ ನಡೆದಿದೆ. ಗರಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ದಾಖಲಾಗಿದೆ ಎಂದು ತಿಳಿದಿದ್ದೆ.    

ಟ್ರ್ಯಾಕ್ಟರ್​ನಿಂದ ಬಿದ್ದು ಯೋಧ ಮೃತ್ಯು Read More »

ಕರ್ನಾಟಕ

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಕಿನಾಡ, ಫೆ.09.  ಇಲ್ಲಿಯ  ಸಮೀಪದ ಹಳ್ಳಿಯೊಂದರ ಖಾದ್ಯ ತೈಲ ಕಾರ್ಖಾನೆಯ ಏಳು ಮಂದಿ ಕಾರ್ಮಿಕರು ತೈಲ ಟ್ಯಾಂಕ್ ಅನ್ನು ಸ್ವಚ್ಛಗೊಳಿಸಲು ಇಳಿದಾಗ ಉಸಿರುಗಟ್ಟಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿರಾಗಂಪೇಟೆಯಲ್ಲಿ ಬೆಳಗ್ಗೆ 7 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.ಮೃತರು ಪೆದ್ದಾಪುರಂ ಮಂಡಲದ ಪಾಡೇರು ಮತ್ತು ಪುಲಿಮೇರು ಮೂಲದವರು ಎಂದು ವರದಿಯಾಗಿದೆ.     

ಕಾರ್ಖಾನೆಯಲ್ಲಿ ಆಯಿಲ್ ಟ್ಯಾಂಕ್ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ 7 ಮಂದಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು,ಫೆ.08. ವೇತನ ನೀಡದ್ದಕ್ಕೆ ಖಿನ್ನತೆಗೊಳಗಾಗಿ ನೇಣು ಬಿಗಿದುಕೊಂಡು ಮೃತಪಟ್ಟಿದ್ದ ವ್ಯಕ್ತಿಯ ಮೃತದೇಹವನ್ನು ಯಾರಿಗೂ ತಿಳಿಯದಂತೆ ಸಮಾಧಿ ಮಾಡಿ ಸಾಕ್ಷ್ಯ ನಾಶ ಮಾಡಿದ್ದ ಇಬ್ಬರು ಆರೋಪಿಗಳನ್ನು ಕಾಡುಗೋಡಿ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ. ಪಶ್ಚಿಮ ಬಂಗಾಳ ಮೂಲದ ಮೊಹಮ್ಮದ್ ರಂಜಾನ್ (40) ಮತ್ತು ರಸೆಲ್ (24) ಬಂಧಿತ ವ್ಯಕ್ತಿಯಾಗಿದ್ದಾರೆ. ಕೆಲದಿನಗಳ ಹಿಂದೆ ಸೀಗೇಹಳ್ಳಿ ಹೆಚ್.ಪಿ.ಪೆಟ್ರೋಲ್ ಬಂಕ್ ಹಿಂಭಾಗದ ಕಾರ್ಮಿಕರ ಶೆಟ್ ನಲ್ಲಿ ಪಶ್ಚಿಮ ಬಂಗಾಳ ಮೂಲಕ ಎಂ.ಡಿ.ರಸೂಲ್ ಹವಾಲ್ದಾರ್ (30) ಆತ್ಮಹತ್ಯೆ ಮಾಡಿಕೊಂಡಿದ್ದ. ಆರೋಪಿಗಳು ಈ ವಿಚಾರವನ್ನು ಯಾರಿಗೂ

 ವೇತನ  ನೀಡದ್ದಕ್ಕೆ ಮನನೊಂದು ವ್ಯಕ್ತಿ ಆತ್ಮಹತ್ಯೆ ➤ ರಹಸ್ಯವಾಗಿ ಶವ ಹೂತಿದ್ದ ಇಬ್ಬರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಲ  ಭಾದೆ     ➤  ಪೊಲೀಸ್ ಸಿಬ್ಬಂದಿ  ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಉತ್ತರ ಕನ್ನಡ, ಫೆ.07. ಹೊನ್ನಾವರ ತಾಲೂಕಿನ ಕಾಸರಕೋಡ ಸಮೀಪ ಇಕೋ ಬೀಚ್ ಬಳಿ ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಮೃತ ಪೊಲೀಸ್ ಸಿಬ್ಬಂದಿಯನ್ನು ರಾಮ ನಾಗೇಶ ಗೌಡ(32) ಎಂದು ಗುರುತಿಸಲಾಗಿದೆ. ಮೃತರು ಕುಮಟಾ ತಾಲೂಕಿನ ನಾಡುಮಾಸ್ಕೇರಿ ಮೂಲದವರಾಗಿದ್ದು, 2017ರ ಸಾಲಿನಲ್ಲಿ ಪೊಲೀಸ್ ಇಲಾಖೆಯಲ್ಲಿ ಸೇವೆ ಪ್ರಾರಂಭಿಸಿದ್ದರು ಎಂದು  ವರದಿ ತಿಳಿಸಿದೆ.    

ಸಾಲ  ಭಾದೆ     ➤  ಪೊಲೀಸ್ ಸಿಬ್ಬಂದಿ  ಆತ್ಮಹತ್ಯೆ Read More »

ಕರ್ನಾಟಕ
Scroll to Top