death

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.28. ಕಾಪಿಕಾಡ್‌ನ ಅಪಾರ್ಟ್‌ಮೆಂಟ್‌ ಒಂದರಲ್ಲಿ ಪತಿಯೊಬ್ಬ ಹಾಸಿಗೆ ಹಿಡಿದಿದ್ದ ತನ್ನ ಪತ್ನಿಯನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಶೈಲಜಾ (64) ಮತ್ತು ನಿವೃತ್ತ ಕೆನರಾ ಬ್ಯಾಂಕ್ ಮ್ಯಾನೇಜರ್ ದಿನೇಶ್ ರಾವ್ (65) ಎಂದು ಗುರುತಿಸಲಾಗಿದೆ. ಶೈಲಜಾ ಅವರು ಅನಾರೋಗ್ಯ ಹಿನ್ನೆಲೆಯಲ್ಲಿ ಹಾಸಿಗೆ ಹಿಡಿದಿದ್ದು, ಇವರನ್ನು ನೋಡಿಕೊಳ್ಳಲು ಹೋಮ್ ನರ್ಸ್ ಬಂದು ಹೋಗುತ್ತಿದ್ದರು. ದಿನೇಶ್ ಪತ್ನಿಯನ್ನು ಕೊಂದು ಹೆಂಡತಿ ಮೃತಪಟ್ಟಿರುವ ಪಕ್ಕದ ಕೋಣೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. […]

ಮಂಗಳೂರು: ಹಾಸಿಗೆ ಹಿಡಿದಿದ್ದ ಪತ್ನಿಯನ್ನು ಕೊಲೆಗೈದು ಪತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು

(ನ್ಯೂಸ್ ಕಡಬ)newskadaba.com ಜಾರ್ಖಂಡ್‌, ಜ.28. ಖಾಸಗಿ ನರ್ಸಿಂಗ್ ಹೋಂವೊಂದರಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ವೈದ್ಯ ದಂಪತಿ ಸೇರಿದಂತೆ ಕನಿಷ್ಠ ಐವರು ಮೃತಪಟ್ಟ ಘಟನೆ ಜಾರ್ಖಂಡ್‌ನಲ್ಲಿ ನಡೆದಿದೆ. ಸಂಸ್ಥೆಯ ಮಾಲಕ ಡಾ. ವಿಕಾಸ್ ಹಜ್ರಾ, ಅವರ ಪತ್ನಿ ಡಾ. ಪ್ರೇಮಾ ಹಜ್ರಾ, ಮಾಲಕರ ಸೋದರಳಿಯ ಸೋಹನ್ ಖಮಾರಿ ಮತ್ತು ಮನೆಯ ಸಹಾಯಕಿ ತಾರಾದೇವಿ ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಮೃತಪಟ್ಟ ಇನ್ನೋರ್ವ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಜಾರ್ಖಂಡ್‌ನ ಧನ್‌ಬಾದ್‌ನ ಬ್ಯಾಂಕ್ ಮೋರ್ ಪ್ರದೇಶದಲ್ಲಿರುವ ಖಾಸಗಿ ನರ್ಸಿಂಗ್ ಹೋಂನ ಸ್ಟೋರ್ ರೂಮ್‌ನಲ್ಲಿ

ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ    ➤ ಐವರು ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು

(ನ್ಯೂಸ್ ಕಡಬ)newskadaba.com ಕುಂದಾಪುರ, ಜ.28. ಬಸ್ ಫೂಟ್ ಬೋರ್ಡ್ ಮೇಲೆ ನಿಂತು ಕಾಲೇಜಿಗೆ ತೆರಳುತ್ತಿದ್ದ ವಿದ್ಯಾರ್ಥಿಯೋರ್ವ ಕೆಳಗೆ ಇಳಿಯುವ ಸಂದರ್ಭದಲ್ಲಿ ಆಯತಪ್ಪಿ ಖಾಸಗಿ ಬಸ್ ನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಧಾರುಣವಾಗಿ ಮೃತಪಟ್ಟ ಘಟನೆ ಹೆಮ್ಮಾಡಿಯಲ್ಲಿ ನಡೆದಿದೆ. ಹೆಮ್ಮಾಡಿ ಸಮೀಪದ‌ ಕಟ್ ಬೇಲ್ತೂರು ನಿವಾಸಿ, ಕೋಟೇಶ್ವರ ಕಾಗೇರಿ ಕಾಲೇಜಿನ ಅಂತಿಮ ವರ್ಷದ ಬಿಕಾಂ ವಿದ್ಯಾರ್ಥಿ ಸುದೀಪ್ (20) ಮೃತ ದುರ್ದೈವಿ. ಸಾಗರದಿಂದ ಕುಂದಾಪುರಕ್ಕೆ ತೆರಳುವ ಖಾಸಗಿ ಬಸ್ ನಲ್ಲಿ ಸುದೀಪ್ ಸಂಚರಿಸುತ್ತಿದ್ದಾಗ ಈ ಅವಘಡ ನಡೆದಿದೆ. ಹೆಮ್ಮಾಡಿ

ಕುಂದಾಪುರ: ಬಸ್ ಹರಿದು ವಿದ್ಯಾರ್ಥಿಯೋರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು.

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು     

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.27. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತರನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು      Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.27. ನಾಪತ್ತೆಯಾಗಿದ್ದ ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾದ ಘಟನೆ ಪಲ್ಲಿಕೆರೆ ಪೂಚೆಕ್ಕಾಡ್ ಬಳಿ ನಡೆದಿದೆ. ಮುಹಮ್ಮದ್ ಶಹೀಮ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರನಾಗಿದ್ದ. ಶಹೀಮ್ ಶಾಲೆಯಿಂದ ಬೇಗನೇ‌ ಬಂದಿದ್ದ. ಆದರೆ ಮನೆಗೆ ತೆರಳಿಲ್ಲ. ಸಂಜೆ ಶಾಲಾ ಸಮಯ‌ ಕಳೆದರೂ‌ ಮಗು ಮನೆಗೆ ಬರದಿದ್ದಾಗ ಪೋಷಕರು ವಿಚಾರಿಸಿದ್ದಾರೆ.ಈ ವೇಳೆ‌ ಶಹೀಮ್‌ ಶಾಲೆಯಿಂದ ಮಧ್ಯಾಹ್ನ‌ ತೆರಳಿರುವ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.27. ಮದ್ಯಪಾನ ಮಾಡಲು ಹಣ ನೀಡದ ಕಾರಣಕ್ಕೆ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರದಲ್ಲಿ ನಡೆದಿದೆ. ವಿಟ್ಟಲ (48) ಆತ್ಮಹತ್ಯೆಗೈದ ವ್ಯಕ್ತಿ ಎಂದು ಗುರುತಿಸಲಾಗಿದೆ. ಗೋವಾದಲ್ಲಿ ಹೊಟೇಲ್ ನಡೆಸುತ್ತಿರುವ ಚಂದಮ್ಮ ಶೆಟ್ಟಿ ಸಳ್ವಾಡಿ ಅವರ ಪುತ್ರನ ಹೊಟೇಲ್‌ನಲ್ಲಿ ವಿಟ್ಟಲ ಕೆಲಸ ಮಾಡಿಕೊಂಡಿದ್ದ. ಬಳಿಕ ಚಂದಮ್ಮ ಶೆಟ್ಟಿ ಅವರನ್ನು ನೋಡಿಕೊಳ್ಳಲೆಂದ ವಿಟ್ಟಲನನ್ನು ಮನೆಯಲ್ಲಿ ಇರುವಂತೆ ಹೇಳಲಾಗಿತ್ತು. ಆದರೆ ಕಳೆದ ಐದು ವರ್ಷಗಳಿಂದ ವಿಟ್ಟಲ ಕುಡಿತದ ಚಟ ಹೊಂದಿದ್ದ. ಮದ್ಯಪಾನ ಮಾಡಲು ಹಣ

ಕುಂದಾಪುರ: ಮದ್ಯಪಾನಕ್ಕೆ ಹಣ ನೀಡದಕ್ಕೆ ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ

ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಹಾವಿನಿಂದ ಕಚ್ಚಿಸಿಕೊಂಡು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಹೈದರಾಬಾದ್​, ಜ.27. ಹಾವಿನ ಜೊತೆ ಸೆಲ್ಫಿ ತೆಗೆಯುವಾಗ ಹಾವು ಕಡಿದು ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಮೃತನನ್ನು ಮಣಿಕಂಠ ರೆಡ್ಡಿ (32) ಎಂದು ಗುರುತಿಸಲಾಗಿದೆ. ಮಣಿಕಂಠ ಅವರ ಅಂಗಡಿಗೆ ಹಾವಾಡಿಗನೊಬ್ಬ ಬಂದಿದ್ದಾನೆ. ಈ ವೇಳೆ ತನ್ನ ಬಳಿ ಅನೇಕ ಹಾವುಗಳಿವೆ ಮತ್ತು ಅವು ಯಾರಿಗೂ ಹಾನಿ ಮಾಡುವುದಿಲ್ಲ ಎಂದು ಹೇಳಿದ್ದಾನೆ. ಹಾವಾಡಿಗ ಹೇಳಿದ ಮಾತನ್ನು ನಂಬಿದ ಮಣಿಕಂಠ ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾನೆ. ಹಾವಾಡಿಗ ತಕ್ಷಣವೇ

ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಹಾವಿನಿಂದ ಕಚ್ಚಿಸಿಕೊಂಡು ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪೊಲೀಸ್ ವಾಹನ ಢಿಕ್ಕಿ-ಅಮೆರಿಕಾದಲ್ಲಿ ಭಾರತ ಮೂಲದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಅಮೆರಿಕಾ, ಜ.27. ಸಿಯಾಟಲ್ ಪೊಲೀಸ್ ಗಸ್ತು ವಾಹನ ಢಿಕ್ಕಿ ಹೊಡೆದು ಭಾರತ ಮೂಲದ 23 ವರ್ಷದ ಯುವತಿ ಮೃತಪಟ್ಟ ಘಟನೆ ಅಮೆರಿಕದ ಸೌತ್ ಲೇಕ್ ಯೂನಿಯನ್‌ನಲ್ಲಿ ನಡೆದಿದೆ. ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಜಾಹ್ನವಿ ಕಂದುಲಾ ಮೃತ ಯುವತಿ ಎನ್ನಲಾಗಿದೆ. ಈಕೆ ಈಶಾನ್ಯ ವಿಶ್ವವಿದ್ಯಾಲಯದ ಕ್ಯಾಂಪಸ್‌ನ ವಿದ್ಯಾರ್ಥಿನಿಯಾಗಿದ್ದಳು ಎಂದು ವರದಿಯಾಗಿದೆ. ಸಂತ್ರಸ್ತೆ ಗಂಭೀರ ಗಾಯಗೊಂಡಿದ್ದಳು. ಕೂಡಲೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.  

ಪೊಲೀಸ್ ವಾಹನ ಢಿಕ್ಕಿ-ಅಮೆರಿಕಾದಲ್ಲಿ ಭಾರತ ಮೂಲದ ಯುವತಿ ಮೃತ್ಯು Read More »

ರಾಷ್ಟ್ರೀಯ ನ್ಯೂಸ್
Scroll to Top