death

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಸುಳ್ಯ, ಜ.27. ಮಹಿಳೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅಜ್ಜಾವರ ಗ್ರಾಮದ ಪಡ್ಡಂಬೈಲು ಸಮೀಪದ ನಾಂಗುಳಿ ಎಂಬಲ್ಲಿ ಸಂಭವಿಸಿದೆ. ಶರತ್ ಎಂಬವರ ಪತ್ನಿ ಮಲ್ಲಿಕಾ(26) ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿರುವ ಮಹಿಳೆ ಎನ್ನಲಾಗಿದೆ. ಮೃತ ಮಹಿಳೆ ಮಲ್ಲಿಕಾ ಅವರು ಕೆ.ವಿ.ಜಿ. ಆಯುರ್ವೇದಿಕ್ ನಲ್ಲಿ ಉದ್ಯೋಗಿಯಾಗಿದ್ದರು. ರಜೆ ಹಿನ್ನಲೆ ಮಲ್ಲಿಕಾ ಮನೆಯಲ್ಲಿದ್ದರು. ಸಂಜೆ ವೇಳೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ತಿಳಿದು ಬಂದಿದೆ. ಶವವನ್ನು ಸುಳ್ಯ ಸರಕಾರಿ […]

ಸುಳ್ಯ: ನೇಣು ಬಿಗಿದು ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.26. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತ ವಾಹನ ಸವಾರೆಯನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ. ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಓರ್ವ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದ ನೌಕರ ಕುಸಿದು ಬಿದ್ದು ಮೃತ್ಯು..!

(ನ್ಯೂಸ್ ಕಡಬ)newskadaba.com  ಸಿಂಧನೂರು, ಜ.26. ನಗರದ ತಾಲೂಕು ಕ್ರೀಡಾಂಗಣದಲ್ಲಿ 74ನೇ ಗಣರಾಜ್ಯೋತ್ಸವದ ವೇಳೆ ಕೋಲಾಟ ಆಡುತ್ತಿದ್ದ ನೌಕರ ಸ್ಥಳದಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಸ್ಥಳೀಯ ಸರಕಾರಿ ಆಸ್ಪತ್ರೆಯ ನೌಕರ ಮಹಾಂತೇಶ ಪೂಜಾರ್ (40) ಮೃತ ಎಂದು ಗುರುತಿಸಲಾಗಿದೆ. ಗರಡು ಗಮನ ಕೀರ್ತನೆಗೆ ತಂಡದೊಟ್ಟಿಗೆ ಕೋಲಾಟದಲ್ಲಿ ನಿರತರಾಗಿದ್ದಾಗ ದಿಢೀರ್ ಮೈದಾನದಲ್ಲೇ ಕುಸಿದು ಬಿದ್ದರು. ತಕ್ಷಣವೇ ಅವರನ್ನು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್, ನಗರಸಭೆಯ ಕಾರಿನಲ್ಲಿ ಆಸ್ಪತ್ರೆಗೆ ಕರೆ ತಂದರು. ಆಸ್ಪತ್ರೆಗೆ ಕರೆ ತರುವ ಮುನ್ನವೇ ಹೃದಯಾಘಾತದಿಂದ

ಗಣರಾಜ್ಯೋತ್ಸವ ಸಂಭ್ರಮದಲ್ಲಿದ್ದ ನೌಕರ ಕುಸಿದು ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.26. ಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್‌ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೃಷ್ಣ ಸಫಲಿಗ ಎಂದು ಗುರುತಿಸಲಾಗಿದ್ದು, ಮೃತರು ತಮ್ಮ ಮಾಲೀಕತ್ವದ ವ್ಯಾನ್ ಅನ್ನು ಟ್ಯಾಕ್ಸಿಯಾಗಿ ಬಳಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ತಡರಾತ್ರಿ ವಾಹನದಲ್ಲಿ ಕುಳಿತು ತನ್ನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡಿದ್ದಾರೆ. ತನ್ನ ಸೋದರನ ಮನೆಯಲ್ಲಿ ನಡೆದ ‘ಮೆಹೆಂದಿ’ ಕಾರ್ಯಕ್ರಮದಿಂದ ವಾಪಸಾಗುತ್ತಿದ್ದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದಕ್ಕೆ

ಮಂಗಳೂರು: ವ್ಯಾನ್‌ನಲ್ಲಿಯೇ ಬೆಂಕಿ ಹಚ್ಚಿಕೊಂಡು ವ್ಯಕ್ತಿ ಮೃತ್ಯು Read More »

ಕರಾವಳಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಬೀಚ್‌ನಲ್ಲಿ ಮುಳುಗಿ ಇಬ್ಬರು ಭಾರತೀಯರ ಮೃತ್ಯು

(ನ್ಯೂಸ್ ಕಡಬ)newskadaba.com ನ್ಯೂಜಿಲಾಂಡ್, ಜ.25. ನ್ಯೂಜಿಲೆಂಡ್‌ನ ಪಿಹಾ ಬೀಚ್‌ನಲ್ಲಿ ಈಜುತ್ತಿದ್ದ ಸಂದರ್ಭದಲ್ಲಿ ಮುಳುಗಿ ಇಬ್ಬರು ಭಾರತೀಯರು ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. ‘ಮೃತರನ್ನು ಸೌರಿನ್‌ ನಯನ್‌ಕುಮಾರ್‌ ಪಟೇಲ್ (28) ಮತ್ತು ಅನ್ಶೌಲ್‌ ಶಾ (31) ಎಂದು ಗುರುತಿಸಲಾಗಿದೆ. ಇವರು ಗುಜರಾತ್‌ನ ಅಹಮದಾಬಾದ್‌ ಮೂಲದವರಾಗಿದ್ದು, ಆಕ್ಲೆಂಡ್‌ನಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು’ ಎಂದು ವರದಿ ಮಾಡಿದೆ. ಎಲೆಕ್ಟ್ರಾನಿಕ್‌ ಎಂಜಿನಿಯರ್‌ ಆಗಿದ್ದ ಪಟೇಲ್ ಕಳೆದ ವರ್ಷ ಆಗಸ್ಟ್‌ನಲ್ಲಿ ನ್ಯೂಜಿಲೆಂಡ್‌ಗೆ ತೆರಳಿದ್ದರು. ಶಾ, ಅನಿಲ ಕೇಂದ್ರದಲ್ಲಿ ಕ್ಯಾಷಿಯರ್‌ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.

ಬೀಚ್‌ನಲ್ಲಿ ಮುಳುಗಿ ಇಬ್ಬರು ಭಾರತೀಯರ ಮೃತ್ಯು Read More »

ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತರು ಎಂದು ಗುರುತಿಸಲಾಗಿದೆ. ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ ಕರಾವಳಿಯ ಯೋಧ ಭೋಪಾಲ್ ನಲ್ಲಿ ಮೃತ್ಯು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಭೋಪಾಲ್ ನಲ್ಲಿ ಸಶಸ್ತ್ರ ಸೀಮಾ ಬಲ್ ನಲ್ಲಿ ಕರ್ತವ್ಯದಲ್ಲಿದ್ದ ಕರಾವಳಿ ಮೂಲದ ಯೋಧರೊಬ್ಬರು ಹೃದಯಾಘಾತಕ್ಕೆ ಬಲಿಯಾದ ಘಟನೆ ವರದಿಯಾಗಿದೆ. ಮಂಗಳೂರಿನ ಶಕ್ತಿನಗರ ನಿವಾಸಿ ಯೋಧ ಮುರಲೀಧರ ರೈ(37) ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಪಾರ್ಥಿವ ಶರೀರವನ್ನು ಹುಟ್ಟೂರಿಗೆ ತರಲಾಗಿದೆ. ಮಧ್ಯಪ್ರದೇಶದ ಭೋಪಾಲದಲ್ಲಿ ಕರ್ತವ್ಯದಲ್ಲಿದ್ದು, ಮಲಗಿದ್ದಾಗಲ್ಲೇ ಹೃದಯಾಘಾತದಿಂದ ಮುರಲೀಧರ ರೈ ಸಾವನ್ನಪ್ಪಿದ್ದರು. ಅವರ ಪಾರ್ಥಿವ ಶರೀರವನ್ನು ಮಂಗಳೂರು ವಿಮಾನ ನಿಲ್ದಾಣಕ್ಕೆ ತರಲಾಗಿದ್ದು ನಿಲ್ದಾಣ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ ಸರ್ಕಾರದ ವತಿಯಿಂದ ಗೌರವ ಸಲ್ಲಿಸಲಾಗಿದೆ.

ಹೃದಯಾಘಾತದಿಂದ ಕರಾವಳಿಯ ಯೋಧ ಭೋಪಾಲ್ ನಲ್ಲಿ ಮೃತ್ಯು Read More »

ಕರಾವಳಿ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ)newskadaba.com  ದಾವಣಗೆರೆ. ಜ.24. ಲಾರಿ ಚಕ್ರಕ್ಕೆ ಬೈಕ್ ಸವಾರ ಸಿಲುಕಿ ಮೃತಪಟ್ಟಿರುವ ಘಟನೆ ಹರಪನಹಳ್ಳಿಯ ಗೌಳೆರಹಟ್ಟಿ ಕ್ರಾಸ್ ಬಳಿ ನಡೆದಿದೆ. ತಾಲ್ಲೂಕಿನ ಹಿರೇಮೆಗಳಗೆರೆ ಗ್ರಾಮದ ರಮೇಶ್ (30) ಮೃತ ಯುವಕ. ರಮೇಶ್ ಉಚ್ಚಂಗಿದುರ್ಗದಿಂದ ಹಿರೇಮೆಗಳಗೆರೆ ಕಡೆಗೆ ಹೋಗುತ್ತಿರುವಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಅನಂತರ ಸವಾರ ಲಾರಿಯ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ನೂರಾರು ಸಾರ್ವಜನಿಕರು ಘಟನಾ ಸ್ಥಳಕ್ಕೆ ಆಗಮಿಸಿದ್ದರು. ಘಟನೆ ಸ್ಥಳಕ್ಕೆ ಅರಸೀಕೆರೆ ಸಬ್ ಇನ್‌ಸ್ಪೆಕ್ಟರ್‌ ಎ. ಕಿರಣ್ ಕುಮಾರ್ ಭೇಟಿ

ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಈಜಲು ನೀರಿಗಿಳಿದ ಯುವಕ ನಾಪತ್ತೆ

(ನ್ಯೂಸ್ ಕಡಬ)newskadaba.com  ಸಾಗರ, ಜ.24. ಕೆರೆಗೆ ಈಜಲು ಹೋದ ಯುವಕನೋರ್ವ ನಾಪತ್ತೆಯಾದ ಘಟನೆ ಭೀಮನಕೋಣೆ ಕೆರೆಯಲ್ಲಿ ನಡೆದಿರುವುದಾಗಿ ವರದಿಯಾಗಿದೆ. ಸಾಗರ ಪಟ್ಟಣದ ಯಶ್ವಂತ್ (22) ನಾಪತ್ತೆಯಾದ ಯುವಕ. ಯಶ್ವಂತ್ ತನ್ನ ಸ್ನೇಹಿತರೊಂದಿಗೆ ಭೀಮನಕೋಣೆ ಕೆರೆಗೆ ಹೋಗಿದ್ದರು. ಈ ವೇಳೆ ಯಶ್ವಂತ್, ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಇಳಿದಿದ್ದಾನೆ.ಆದರೆ ಆತನಿಗೆ ಈಜು ಬರುತ್ತಿರಲಿಲ್ಲ ಎನ್ನಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಭೇಟಿ ನೀಡಿ ಶೋಧ ಕಾರ್ಯ ನಡೆಸುತ್ತಿದ್ದಾರೆ.  

ಈಜಲು ನೀರಿಗಿಳಿದ ಯುವಕ ನಾಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top